ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.
ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ದರೋಡೆಗೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ
Nelamangala gold shop firing: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದಂಗಡಿ ಮಾಲೀಕನ ಮೇಲೆ ದರೋಡೆಕೋರ ಗ್ಯಾಂಗ್ ಫೈರಿಂಗ್ ಮಾಡಿ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿ ನಡೆದಿದೆ. ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
- Manjunatha HV
- Updated on: Aug 6, 2026
- 4:38 pm
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ತಾಲೂಕಿನ ಪ್ರಸಿದ್ಧ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಮಂಗವೊಂದು ಪ್ರವಾಸಿಗರ ಮೊಬೈಲ್ ಕಸಿದುಕೊಂಡು ಸುಮಾರು ಒಂದು ಗಂಟೆ ಕಾಲ ಸತಾಯಿಸಿದ ಕುತೂಹಲಕಾರಿ ಘಟನೆ ನಡೆದಿದೆ. ಶಿವಗಂಗೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಯುವತಿಯೊಬ್ಬರ ಕೈಯಲ್ಲಿದ್ದ ಮೊಬೈಲ್ ಅನ್ನು ಸಡನ್ ಆಗಿ ಕಸಿದುಕೊಂಡ ಮಂಗ, ಸೀದಾ ದೇವಾಲಯದ ಗೋಪುರದ ಶಿಖರ ಏರಿ ಕುಳಿತುಕೊಂಡಿದೆ. ಮೊಬೈಲ್ ವಾಪಸ್ ಪಡೆಯಲು ಜೊತೆಯಲ್ಲಿದ್ದ ಯುವಕರು ಹರಸಾಹಸ ಪಟ್ಟಿದ್ದಾರೆ. ಒಂದು ಗಂಟೆಯ ನಂತರ ಕೊನೆಗೂ ಮಂಗ ಮೊಬೈಲ್ ಅನ್ನು ಕೆಳಗೆ ಹಾಕಿದ್ದು, ಫೋನ್ ಕೈಸೇರಿದ ಖುಷಿಯಲ್ಲಿದ್ದ ಯುವತಿಗೆ ಮೊಬೈಲ್ಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದನ್ನು ನೋಡಿ ಕೊಂಚ ಬೇಸರವೂ ಉಂಟಾಗಿದೆ.
- Manjunatha HV
- Updated on: Aug 3, 2026
- 11:15 pm
ನೆಲಮಂಗಲದಲ್ಲಿ ನೈತಿಕ ಪೊಲೀಸ್ ಗಿರಿ! ಹಿಂದೂ ಯುವಕನ ಮೇಲೆ ಹಲ್ಲೆ; ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ
Nelamangala Moral Policing: ಮುಸ್ಲಿಂ ಯುವತಿ ಜೊತೆ ಓಡಾಡಿದ್ದಕ್ಕೆ ಹಿಂದೂ ಯುವಕ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಆ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲಕ್ಕೂರಿನಲ್ಲಿ ಘಟನೆ ನಡೆದಿದೆ. ಸದ್ಯ ಯುವತಿ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
- Manjunatha HV
- Updated on: Aug 3, 2026
- 11:17 pm
ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು: ತಾಯಿ ಕಣ್ಣೆದುರೇ ಉಸಿರು ಚೆಲ್ಲಿದ ಕಂದಮ್ಮ
Nelamangala Tragedy: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಸನಪುರ ಬಳಿ ಶಾಲಾ ಬಸ್ ಹರಿದು 4 ವರ್ಷದ ಕಂದಮ್ಮ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾಳೆ. ಕಿಡ್ಸ್ ಇಂಟರ್ನ್ಯಾಷನಲ್ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಬಳಿಕ ವಾಹನ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ.
- Manjunatha HV
- Updated on: Aug 3, 2026
- 11:19 pm