ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಏರುತ್ತಲೇ ಇದೆ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯ ವೆಚ್ಚ: ಕೇಂದ್ರದ ನಿರ್ಧಾರದತ್ತ ಎಲ್ಲರ ಚಿತ್ತ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ನೈರುತ್ಯ ರೈಲ್ವೆಯು 17,147 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತ್ರತ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಮೊದಲು ಅಂದಾಜಿಸಿದ್ದಕ್ಕಿಂತ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ಈ ಯೋಜನೆಯಿಂದ ಪಶ್ಚಿಮ ಘಟ್ಟದ ಪರಿಸರ ಮತ್ತು ವನ್ಯಜೀವಿಗಳಿಗೆ ಅಪಾಯವಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
- Narasimha Murti Pyati
- Updated on: Apr 13, 2025
- 2:03 pm
ಅಕಾಲಿಕ ಮಳೆಯಿಂದ ಧಾರವಾಡದ ಮಾವು ಬೆಳೆಗಾರರಿಗೆ ಅಪಾರ ನಷ್ಟ; ಸಂಕಷ್ಟದಲ್ಲಿ ರೈತರು
ಧಾರವಾಡದಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾವಿನ ಕಾಯಿಗಳು ಮತ್ತು ಗಿಡಗಳ ಟೊಂಗೆಗಳು ಹಾನಿಗೊಳಗಾಗಿವೆ. ಈ ಹಿಂದೆ ಹೂವು ಉದುರಿ ಹೋಗಿದ್ದರಿಂದಲೇ ರೈತರು ಆತಂಕದಲ್ಲಿದ್ದರು. ಈಗಿನ ಹಾನಿಯಿಂದಾಗಿ ಅವರ ಆರ್ಥಿಕ ಸ್ಥಿತಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ವರ್ಷಗಳಿಂದ ಮಾವು ಬೆಳೆಯನ್ನು ಅವಲಂಬಿಸಿರುವ ರೈತರು ಇದರಿಂದ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ.
- Narasimha Murti Pyati
- Updated on: Apr 12, 2025
- 9:13 pm
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಬೇಸತ್ತ ಮಹಿಳೆಯರು, ಅಂಗಡಿಗಳ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ನಾಲ್ಕೈದು ಅಂಗಡಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿವೆ ಎಂದು ಆರೋಪಿಸಿ, ಅಬಕಾರಿ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಮದ್ಯದಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
- Narasimha Murti Pyati
- Updated on: Apr 1, 2025
- 5:00 pm
ಯತ್ನಾಳ್ ಉಚ್ಛಾಟನೆಗೆ ಯಡಿಯೂರಪ್ಪ ಕಾರಣ, ಬಿಜೆಪಿಯಲ್ಲಿನ ಪಂಚಮಸಾಲಿ ನಾಯಕರು ಪಕ್ಷದಿಂದ ಹೊರಬನ್ನಿ: ಸ್ವಾಮೀಜಿ
ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯನ್ನು ಲಿಂಗಾಯತ ಪಂಚಮಸಾಲಿ ಸಮಾಜ ಖಂಡಿಸಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಈ ಉಚ್ಚಾಟನೆಯನ್ನು ಖಂಡಿಸಿದ್ದಾರೆ. ಈ ನಿರ್ಧಾರಕ್ಕೆ ಪಂಚಮಸಾಲಿ ಸಮುದಾಯದ ಅಸಮಾಧಾನ ವ್ಯಕ್ತಪಡಿಸಿದೆ. ಬಿಜೆಪಿಯ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆದ್ದಾರೆ.
- Narasimha Murti Pyati
- Updated on: Mar 26, 2025
- 10:24 pm
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು.
- Narasimha Murti Pyati
- Updated on: Mar 22, 2025
- 7:36 pm
ಮಾರ್ಚ್ 22 ವಿಶ್ವ ಜಲ ದಿನ: ‘ನಮ್ಮ ಊರು ನಮ್ಮ ಕೆರೆ’ ಯೋಜನೆಯ ಯಶೋಗಾಥೆ
ಧಾರವಾಡ ಜಿಲ್ಲೆಯಲ್ಲಿ ‘ನಮ್ಮ ಊರು ನಮ್ಮ ಕೆರೆ’ ಯೋಜನೆ ಮೂಲಕ ಕೆರೆಗಳ ಅಭಿವೃದ್ಧಿ ಮಾಡಲಾಗಿದ್ದು, ಬೇಸಿಗೆಯಲ್ಲೂ ನೀರಿನ ಸಮಸ್ಯೆ ಕಡಿಮೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 23 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ರೈತರು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ನಿವಾರಣೆಯಾಗಿದೆ.
- Narasimha Murti Pyati
- Updated on: Mar 22, 2025
- 7:28 pm
ಕರ್ನಾಟಕದಲ್ಲಿ ಮತ್ತೆ ಮುನ್ನೆಲೆಗೆ ಬಂದ ಚಿನ್ನ ಗಣಿಗಾರಿಕೆ: ಮಂಗಳಗಟ್ಟಿ ರೈತರಲ್ಲಿ ಆತಂಕ
ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಚಿನ್ನದ ನಿಕ್ಷೇಪ ಇದೆ ಎನ್ನಲಾಗಿದೆ. ಹೀಗಾಗಿ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಹಲವು ವರ್ಷಗಳಿಂದ ಮಣ್ಣಿನ ಪರೀಕ್ಷೆ ನಡೆದಿದ್ದರೂ, ಗಣಿಗಾರಿಕೆಗೆ ಅನುಮತಿ ಸಿಕ್ಕಿಲ್ಲ. ಮತ್ತೆ ಮಂಗಳಗಟ್ಟಿಗೆ ಮೈನಿಂಗ್ನವರು ಬರಬಹುದು ಅನ್ನೋ ಆತಂಕ ರೈತರನ್ನು ಕಾಡುತ್ತಿದೆ. ಸರ್ಕಾರದಿಂದ ಸ್ಪಷ್ಟ ನಿಲುವು ಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ.
- Narasimha Murti Pyati
- Updated on: Mar 20, 2025
- 4:12 pm
ಹಳದಿ ಕಲ್ಲಂಗಡಿ ಬೆಳೆದು ಗಮನ ಸೆಳೆದ ಧಾರವಾಡದ ಯುವ ರೈತ: ಲಾಭದಾಯಕವಾಯ್ತು ಹೊಸ ಚಿಂತನೆ
ಧಾರವಾಡದ ಕುರುಬಗಟ್ಟಿಯ ಯುವ ರೈತ ಹಳದಿ ಕಲ್ಲಂಗಡಿಯನ್ನು ಬೆಳೆಯುವ ಮೂಲಕ ಯಶಸ್ವಿಯಾಗಿದ್ದಾರೆ. ಹನಿ ನೀರಾವರಿಯಿಂದ ಉತ್ತಮ ಇಳುವರಿ ಪಡೆದಿದ್ದು, ಕೆಂಪು ಕಲ್ಲಂಗಡಿಗಿಂತ ಹೆಚ್ಚಿನ ಲಾಭ ಗಳಿಸಿದ್ದಾರೆ. ಹಳದಿ ಕಲ್ಲಂಗಡಿ ಸಿಹಿಯಾಗಿದ್ದು, ಆರೋಗ್ಯಕರ ಗುಣಗಳನ್ನು ಹೊಂದಿದೆ. ಹಳದಿ ಕಲ್ಲಂಗಡಿ ಬೆಳೆದು ಯಶಸ್ವಿಯಾಗುವ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ.
- Narasimha Murti Pyati
- Updated on: Mar 17, 2025
- 6:00 pm
ವಿದ್ಯಾ ವಾಚಸ್ಪತಿ, ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ
ಖ್ಯಾತ ಕನ್ನಡ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಮಾರ್ಚ್ 14 ರಂದು ನಿಧನರಾದರು. ಕವಿ, ಕಥೆಗಾರ, ಪ್ರಬಂಧಕಾರ, ಅನುವಾದಕರಾಗಿ ಅವರು ಅಪಾರ ಸಾಧನೆ ಮಾಡಿದ್ದಾರೆ. ಕನ್ನಡಕ್ಕೆ ಅನೇಕ ಕೃತಿಗಳನ್ನು ಅನುವಾದಿಸಿ, ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ.
- Narasimha Murti Pyati
- Updated on: Mar 15, 2025
- 8:01 am
ಧಾರವಾಡಲ್ಲಿವೆ ಪ್ಲಾಸ್ಟಿಕ್ ಮುಕ್ತ ಗ್ರಾಮಗಳು: ಕ್ಯಾನ್ಸರ್ ತಡೆಗೆ ಒಂದು ದಿಟ್ಟ ಹೆಜ್ಜೆ
ಧಾರವಾಡ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಮೂಲಕ ಕ್ಯಾನ್ಸರ್ ತಡೆಗಟ್ಟುವ ಪ್ರಯತ್ನ ಯಶಸ್ವಿಯಾಗಿದೆ. ಪ್ಲಾಸ್ಟಿಕ್ ಮುಕ್ತ ಗ್ರಾಮಗಳ ಅಭಿಯಾನದಿಂದ ಮಂಗಳಗಟ್ಟಿ ಮತ್ತು ಬೇಲೂರು ಗ್ರಾಮಗಳು ಮಾದರಿಯಾಗಿವೆ. ಸ್ವಸಹಾಯ ಸಂಘಗಳ ಮಹಿಳೆಯರು ಕಸ ಸಂಗ್ರಹ ಮತ್ತು ವಿಂಗಡನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮತ್ತು ಮಾರಾಟ ಮಾಡುವ ಮೂಲಕ ಆದಾಯವನ್ನೂ ಗಳಿಸಲಾಗುತ್ತಿದೆ.
- Narasimha Murti Pyati
- Updated on: Mar 13, 2025
- 4:46 pm
ಜಾನಪದ ಉಡುಗೆ ತೊಡುಗೆ ಸ್ಪರ್ಧೆ: ಸೀರೆಯಲ್ಲಿ ಮಿಂಚಿದ ವಿದ್ಯಾರ್ಥಿನಿಯರು
ಧಾರವಾಡದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಜಾನಪದ ಉತ್ಸವದ ಭಾಗವಾಗಿ ವಿವಿಧ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಸಂಭ್ರಮಿಸಿದರು. ವಿಭಿನ್ನ ಸಮುದಾಯಗಳ ವೇಷಭೂಷಣ, ನೃತ್ಯ ಮತ್ತು ಆಹಾರ ಪದಾರ್ಥಗಳನ್ನು ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಕೃತಿಯನ್ನು ಆಚರಿಸಲು ಮತ್ತು ಪರೀಕ್ಷಾ ಒತ್ತಡ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
- Narasimha Murti Pyati
- Updated on: Mar 9, 2025
- 3:51 pm
ಧಾರವಾಡ: ಜೈಲಿಗಾಗಿ ಹಾಕಿದ ಜಾಮರ್ನಿಂದ ಊರಿನ ಜನರಿಗೆ ಶಿಕ್ಷೆ! ಸ್ಥಳೀಯರ ಸಮಸ್ಯೆ ಒಂದೇ ಎರಡೇ…
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಸಿಗ್ನಲ್ ಜಾಮರ್ ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತಿದೆ. ಮೊಬೈಲ್ ಸಂಪರ್ಕ ಕಡಿತದಿಂದ ವಿದ್ಯಾರ್ಥಿಗಳು, ರೋಗಿಗಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜಾಮರ್ನಿಂದಾಗಿ ಜೈಲಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಲು ಸಹ ಕಷ್ಟವಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅಗತ್ಯ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
- Narasimha Murti Pyati
- Updated on: Mar 8, 2025
- 3:54 pm