ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಧಾರವಾಡ ಹೈಕೋರ್ಟ್ನಲ್ಲಿಂದು ಮಹಿಳೆಯರದ್ದೇ ಪಾರುಪತ್ಯ! ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ
Dharawad News: ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಇಂದು (ಆಗಸ್ಟ್ 1) ವಿಶೇಷ ಮಹಿಳಾ ನ್ಯಾಯಪೀಠಗಳ ಕಲಾಪ ನಡೆಯಲಿದ್ದು, ಮಹಿಳಾ ನ್ಯಾಯಮೂರ್ತಿಗಳ ಜೊತೆಗೆ ರಾಜ್ಯ ಸರ್ಕಾರದ ಪರವಾಗಿ ಮಹಿಳಾ ಕಾನೂನು ಅಧಿಕಾರಿಗಳ ತಂಡವೇ ವಾದ ಮಂಡಿಸಲಿದೆ. ಏಳು ಪೀಠಗಳಲ್ಲಿ ಇಡೀ ದಿನ ವಿಚಾರಣೆ ನಡೆಯಲಿದೆ.
- Narasimha Murti Pyati
- Updated on: Aug 1, 2026
- 8:32 am
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ (Yogesh Gowda) ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ (High Court) ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ. ಇನ್ನೊಂದೆಡೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗುವುದಾಗಿ ಮೃತ ಯೋಗೇಶ್ ಗೌಡ ಸಹೋದರ ಗುರನಾಥ್ ಗೌಡ ಹೇಳಿದ್ದಾರೆ. ಆದ್ರೆ, ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಸುಪ್ರೀಂ ಕೋರ್ಟ್ಗೆ ಹೋಗುವುದಿಲ್ಲ ಎಂದಿದ್ದಾರೆ.
- Narasimha Murti Pyati
- Updated on: Jul 31, 2026
- 9:34 pm
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಕುರಿತು ಹೋರಾಟಗಾರ ಬಸವರಾಜ್ ಕೊರವರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಜಾಮೀನು ಕೂಡ ಸಿಗಬಾರದು ಎಂದ ಅವರು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತಾ, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿ ಆಗಿದ್ದರಿಂದ ಹೋರಾಟ ಮುಂದುವರಿಯಲಿದೆ.
- Narasimha Murti Pyati
- Updated on: Jul 31, 2026
- 1:10 pm
ಧಾರವಾಡದ ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
Dharwad News: ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ಬೆಂಗಳೂರು–ಬೆಳಗಾವಿ ಎಕ್ಸ್ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ಸೇರಿದಂತೆ ಕೆಲವು ರೈಲುಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ನಿಂತಿದ್ದು, ಪ್ರಯಾಣಿಕರು ಪರದಾಡಿದರು. ರೈಲು ನಿಲ್ದಾಣದಲ್ಲಿನ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.
- Narasimha Murti Pyati
- Updated on: Jul 28, 2026
- 12:40 pm
ಬೈ ಒನ್ ಗೇಟ್ ಒನ್ ಆಫರ್: 703 ರೂ ವಸ್ತುಗೆ ಬರೋಬ್ಬರಿ 35 ಸಾವಿರ ರೂ ದಂಡ ತೆತ್ತ ಬ್ಲಿಂಕಿಟ್!
Blinkit fine: ಕೇವಲ 703 ರೂ ಬೆಲೆಯ ವಸ್ತುಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬ್ಲಿಂಕಿಟ್ ಕಂಪನಿಗೆ ಬರೋಬ್ಬರಿ 35 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಬೈ ಒನ್ ಗೇಟ್ ಒನ್ ಆಫರ್ ನೀಡಿ ಗ್ರಾಹಕರಿಗೆ ಮೋಸ ಆರೋಪ ಕೇಳಿಬಂದಿದೆ.
- Narasimha Murti Pyati
- Updated on: Jul 27, 2026
- 5:43 pm
ಧಾರವಾಡದಲ್ಲಿ ಬಯೋಗ್ಯಾಸ್ ಘಟಕಕ್ಕೆ ವಿರೋಧ: ಸಿಡಿದೆದ್ದ 10ಕ್ಕೂ ಹೆಚ್ಚು ಹಳ್ಳಿ ಜನರು; ಏನಿದು ವಿವಾದ?
Dharwad Bio-Gas Plant Protest: ಧಾರವಾಡದ ಶಿವಳ್ಳಿ ಸಮೀಪ ಮಡ್ಡಿಗುಡ್ಡದಲ್ಲಿ ನಿರ್ಮಾಣವಾಗುತ್ತಿರುವ ಬಯೋಗ್ಯಾಸ್ ಘಟಕದ ವಿರುದ್ಧ ಗ್ರಾಮಸ್ಥರು ತೀವ್ರ ಹೋರಾಟ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡದ ಕಸ ಸಂಸ್ಕರಣೆಯಿಂದ ಅಂತರ್ಜಲ ಮಾಲಿನ್ಯ, ಆರೋಗ್ಯ ಸಮಸ್ಯೆಗಳು, ಕೃಷಿ ನಾಶ ಮತ್ತು ದುರ್ವಾಸನೆ ಭೀತಿ ಎದುರಾಗಿದೆ. ಹೀಗಾಗಿ ಘಟಕ ಸ್ಥಳಾಂತರಕ್ಕೆ ಜನರು ಒತ್ತಾಯಿಸುತ್ತಿದ್ದಾರೆ.
- Narasimha Murti Pyati
- Updated on: Jul 25, 2026
- 7:30 pm
ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ಪರೀಕ್ಷಾ ಅಕ್ರಮ ತಡೆಗೆ ಸರ್ಕಾರವು "ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024" ಜಾರಿಗೆ ತಂದಿದೆ. ಇದರಡಿ ಶಿಕ್ಷೆಯನ್ನು ಐದರಿಂದ ಹತ್ತು ವರ್ಷಕ್ಕೆ ಮತ್ತು ದಂಡವನ್ನು 10 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ, ಜಾಮೀನುರಹಿತ ಅಪರಾಧವನ್ನಾಗಿ ಮಾಡಲಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. 22 ಲಕ್ಷ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಗಂಭೀರತೆಯನ್ನು ಪ್ರದರ್ಶಿಸಿದೆ.
- Narasimha Murti Pyati
- Updated on: Jul 25, 2026
- 5:50 pm
ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ!
Dharwad Consumer Commission: ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಯು ಓರ್ವ ಗ್ರಾಹಕರಿಗೆ ಅವರ 2.4 ಲಕ್ಷ ರೂ ಉಳಿತಾಯ ಹಣವನ್ನು ನೀಡಲು ನಿರಾಕರಿಸಿದ ಹಿನ್ನೆಲೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಸೊಸೈಟಿಗೆ 60 ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ಮಾಡಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಪೀಠ ಈ ಮಹತ್ವದ ಆದೇಶ ನೀಡಿದೆ.
- Narasimha Murti Pyati
- Updated on: Jul 23, 2026
- 7:29 pm
ಧಾರವಾಡ: ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧಾರವಾಡದಲ್ಲಿ ಮೆಣಸಿನಕಾಯಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ಬೆಳೆ ಕಟಾವು ಮತ್ತು ಸಾಗಣೆ ವೆಚ್ಚ ಭರಿಸಲಾಗದೆ, ಗೋವನಕೊಪ್ಪ ಗ್ರಾಮದ ರೈತರೊಬ್ಬರು ಮೂರು ಎಕರೆ ಮೆಣಸಿನಕಾಯಿ ಬೆಳೆಯನ್ನೇ ಟ್ರ್ಯಾಕ್ಟರ್ನಿಂದ ನಾಶಪಡಿಸಿದ್ದಾರೆ. ಇತ್ತ ಬೀದರ್ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಸೋಯಾಬೀನ್ ಸೇರಿದಂತೆ ಹಲವು ಬೆಳೆಗಳು ಒಣಗುತ್ತಿದ್ದು, ರೈತರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
- Narasimha Murti Pyati
- Updated on: Jul 23, 2026
- 3:09 pm
ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ
ಧಾರವಾಡದ ಅಮ್ಮಿನಬಾವಿ ಬಳಿ ಚಲಿಸುತ್ತಿದ್ದ ಸರ್ಕಾರಿ ಬಸ್ನ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಎಂಟು ಜನ ಗಾಯಗೊಂಡಿದ್ದಾರೆ. ಇತ್ತ ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿದ ಕಾರು ಹರಿದು ಯುವಕನೊಬ್ಬ ಅಸುನೀಗಿದ್ದಾನೆ. ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Narasimha Murti Pyati
- Updated on: Jul 22, 2026
- 4:21 pm
ಪತ್ನಿಯಿಂದಲೇ ವೈದ್ಯನ ಕೊಲೆ ಪ್ರಕರಣ: ಆರೋಪಿ ಡಾ. ಪ್ರಿಯಾಂಕಾ ಎರಡನೇ ಪತ್ನಿ!; ಬಗೆದಷ್ಟೂ ಬಯಲಾಗ್ತಿದೆ ಅಚ್ಚರಿಯ ಮಾಹಿತಿ
Dharwad News: ಧಾರವಾಡದಲ್ಲಿ ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆಯಾದ ಪ್ರಕರಣದಲ್ಲಿ ಅಚ್ಚರಿಯ ಮಾಹಿತಿ ಲಭ್ಯವಾಗಿದೆ. ಆರೋಪಿ ಡಾ. ಪ್ರಿಯಾಂಕಾ ಎರಡನೇ ಪತ್ನಿಯಾಗಿದ್ದು, ಪತಿ ಕೊಲೆ ಬಳಿಕ ಮಗನಿಗೂ ಇರಿದು, ತಾನೂ ಇನ್ಸುಲಿನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬುದು ತಿಳಿದುಬಂದಿದೆ. ಪತಿ ಕುಟುಂಬಸ್ಥರನ್ನು ಕಂಡರೆ ಆಕೆಗೆ ಆಗುತ್ತಿರಲಿಲ್ಲ, ಗಂಡನ ಮೇಲೂ ವಿಪರೀತ ಅನುಮಾನ ಆಕೆಗೆ ಇತ್ತು ಎಂ ವಿಚಾರಗಳು ತನಿಖೆ ವೇಳೆ ಬಯಲಾಗಿದೆ.
- Narasimha Murti Pyati
- Updated on: Jul 16, 2026
- 1:01 pm
ಮನೆಯಲ್ಲೇ ಅನಸ್ತೇಶಿಯಾ ತಜ್ಞನ ಭೀಕರ ಕೊಲೆ: ಪತ್ನಿಯಿಂದಲೇ ದುರಂತ ಅಂತ್ಯ ಕಂಡ ವೈದ್ಯ?
Dharwad News: ಧಾರವಾಡದ ಅಪಾರ್ಟ್ಮೆಂಟ್ನಲ್ಲಿ ಚಿರಾಯು ಆಸ್ಪತ್ರೆಯ ಅನಸ್ತೇಷಿಯಾ ತಜ್ಞ ಡಾ. ಕಿರಣ್ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದ್ದು, ನೇತ್ರ ವೈದ್ಯೆಯಾಗಿರುವ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಪತ್ನಿಯೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
- Narasimha Murti Pyati
- Updated on: Jul 16, 2026
- 11:53 am