ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

Author - TV9 Kannada

narsimhamurthi.pyati@tv9.com

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಜಾಮೀನಿನಲ್ಲಿ ಹೊರಗಿರುವವರನ್ನು ಸಿಎಂ ಮಾಡಿದ್ದರಲ್ಲವೇ ಸಿದ್ದರಾಮಯ್ಯ: ಪ್ರಲ್ಹಾದ್ ಜೋಶಿ ಪ್ರಶ್ನೆ

ಜಾಮೀನಿನಲ್ಲಿ ಹೊರಗಿರುವವರನ್ನು ಸಿಎಂ ಮಾಡಿದ್ದರಲ್ಲವೇ ಸಿದ್ದರಾಮಯ್ಯ: ಪ್ರಲ್ಹಾದ್ ಜೋಶಿ ಪ್ರಶ್ನೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್​ಐಆರ್ ದಾಖಸಿದ ಬೆನ್ನಲ್ಲೇ ಅವರ ರಾಜೀನಾಮೆಗೂ ಒತ್ತಡ ಹೆಚ್ಚಾಗಿದೆ. ತಮ್ಮನ್ನು ಸಮರ್ಥಿಸಿಕೊಳ್ಳಲು ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಜಾಮೀನಿನ ಮೇಲೆ ಇದ್ದಾರಲ್ಲವೇ ಎನ್ನುತ್ತಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಸಮಾವೇಶದಲ್ಲಿ ಗೋಲ್​ಮಾಲ್?; ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು

ಗ್ಯಾರಂಟಿ ಸಮಾವೇಶದಲ್ಲಿ ಗೋಲ್​ಮಾಲ್?; ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು

ರಾಜ್ಯ ಕಾಂಗ್ರೆಸ್ ಸರ್ಕಾರ, ಲೋಕಸಭೆ ಚುನಾವಣೆಗೂ ಮುಂಚೆ ರಾಜ್ಯಾದ್ಯಂತ ತನ್ನ ಪ್ರಸಿದ್ಧ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳ ಸಮಾವೇಶ ನಡೆಸಿತ್ತು. ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಈ ಫಲಾನುಭವಿಗಳ ಸಮಾವೇಶ ಧಾರವಾಡ ಜಿಲ್ಲೆಯ ಐದು ಕಡೆಗಳಲ್ಲಿ ಆಗಿತ್ತು. ಆಗ ಗ್ಯಾರಂಟಿ ಸಮಾವೇಶಕ್ಕೆ ಬಳಕೆಯಾದ ಅನುದಾನ ಹಾಗೂ ಖರ್ಚಿನ ಲೆಕ್ಕದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಇದೀಗ ಲೋಕಾಯುಕ್ತಕ್ಕೆ ದೂರೊಂದು ದಾಖಲಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಶ್ರೀಗಳ ಉಪಟಳ ಹೆಚ್ಚಾಗುತ್ತದೆ ಎಂದು ಹೇಳಿದ್ದೆ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ನುಡಿ

ಶ್ರೀಗಳ ಉಪಟಳ ಹೆಚ್ಚಾಗುತ್ತದೆ ಎಂದು ಹೇಳಿದ್ದೆ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ನುಡಿ

ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವ ವಿಚಾರ ಹೊರಬರ್ತಿದ್ದಂತೆ ಭಾರಿ ಸಂಚಲನ ಎದ್ದಿತ್ತು. ಕೋಟ್ಯಂತರ ಭಕ್ತರಲ್ಲಿ ಆತಂಕ ಮೂಡಿತ್ತು. ಈ ವಿಚಾರವಾಗಿ ಧಾರವಾಡದಲ್ಲಿ ಕೋಡಿಶ್ರೀ ಮಾತನಾಡಿದ್ದು, ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಈಗ ಸ್ಥಳ ಸ್ವಚ್ಛತೆ ಮಾಡುತ್ತಿದ್ದಾರೆ ಆದರೆ ತಿಂದವರ ಹೊಟ್ಟೆ ಏನು ಮಾಡುವವರು ಈಗ ಎಂದಿದ್ದಾರೆ.

ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತು!

ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತು!

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿರುವ ವಿಚಾರವಾಗಿ ಧಾರವಾಡದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯಗೆ ಮುಡಾ ಸಂಕಷ್ಟದ ಬಗ್ಗೆ ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ಇದೀಗ ನಿಜವಾಗಿದೆ. ಹಾಗಿದ್ದರೆ ಕೋಡಿಶ್ರೀ ಹೇಳಿದ್ದೇನು? ವಿಡಿಯೋ ನೋಡಿ.

ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ​

ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ​

ಧಾರವಾಡ ಕೃಷಿ ಮೇಳ 2024 ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ.

ಸರ್ಕಾರದ ವಾತ್ಸಲ್ಯ ಯೋಜನೆ ವಿಷಯದಲ್ಲಿ ತಪ್ಪು ಸಂದೇಶ ರವಾನೆ; ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರೋ ಜನ

ಸರ್ಕಾರದ ವಾತ್ಸಲ್ಯ ಯೋಜನೆ ವಿಷಯದಲ್ಲಿ ತಪ್ಪು ಸಂದೇಶ ರವಾನೆ; ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರೋ ಜನ

ಸಾಮಾಜಿಕ ಜಾಲತಾಣ ವಾಟ್ಸಾಪ್​ನ ಫಾರ್ವರ್ಡ್ ಮೆಸೇಜ್ ಹಾವಳಿಯಿಂದಾಗಿ ಇತ್ತೀಚೆಗೆ ಸತ್ಯ ಯಾವುದು, ಸುಳ್ಳು ಯಾವುದು ಎನ್ನುವುದು ತಿಳಿಯದಂತಾಗಿದೆ. ಅದರಲ್ಲಿಯೂ ಸರ್ಕಾರಿ ಯೋಜನೆಗಳ ವಿಷಯದಲ್ಲಂತೂ ಒಳ್ಳೆ ಸಂದೇಶ ವೈರಲ್ ಆಗುವ ಬದಲಿಗೆ ಗೊಂದಲ ಮೂಡಿಸೋ ಸಂದೇಶಗಳೇ ಈ ವಾಟ್ಸಾಪ್​ನಿಂದ ಹೆಚ್ಚು ವೈರಲ್ ಆಗುತ್ತಿರುತ್ತೆ. ಅಂತಹುದೇ ಒಂದು ಫಾರ್ವರ್ಡ್ ಮೆಸೇಜ್ ಈಗ ಸರ್ಕಾರದ ಮಹತ್ವದ ಯೋಜನೆಯೊಂದರ ವಿಷಯದಲ್ಲಿ ಗೊಂದಲ ಸೃಷ್ಟಿಸಿದೆ.

ತಿರುಪತಿ ಲಡ್ಡು ವಿವಾದ: ಇಡಿ ಕ್ಷೇತ್ರ ಗೋ ಮೂತ್ರದ ಮೂಲಕ ಶುದ್ಧೀಕರಣ ಆಗಬೇಕು ಎಂದ ಮುತಾಲಿಕ್

ತಿರುಪತಿ ಲಡ್ಡು ವಿವಾದ: ಇಡಿ ಕ್ಷೇತ್ರ ಗೋ ಮೂತ್ರದ ಮೂಲಕ ಶುದ್ಧೀಕರಣ ಆಗಬೇಕು ಎಂದ ಮುತಾಲಿಕ್

ತಿರುಪತಿ ಲಡ್ಡು ವಿವಾದ ವಿಚಾರವಾಗಿ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​​, ತಿರುಪತಿ ತಿಮ್ಮಪ್ಪ ಸಹ ಕ್ಷಮಿಸದ ಅಪರಾಧ ಜಗನ್ ರೆಡ್ಡಿ ಮಾಡಿದ್ದಾರೆ. ಹೀಗಾಗಿ ಇಡಿ ಕ್ಷೇತ್ರ ಗೋ ಮೂತ್ರದ ಮೂಲಕ ಶುದ್ಧೀಕರಣ ಆಗಬೇಕು ಎಂದು ಹೇಳಿದ್ದಾರೆ.

ಧಾರವಾಡ: ಭಾವೈಕ್ಯತೆ ಮೆರೆದ ಎರಡೂ ಕೋಮಿನ ಜನ; ವಿಗ್ರಹ, ಬೋರ್ಡ್​ ತೆರವುಗೊಳಿಸಲು ನಿರ್ಧಾರ

ಧಾರವಾಡ: ಭಾವೈಕ್ಯತೆ ಮೆರೆದ ಎರಡೂ ಕೋಮಿನ ಜನ; ವಿಗ್ರಹ, ಬೋರ್ಡ್​ ತೆರವುಗೊಳಿಸಲು ನಿರ್ಧಾರ

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ಕೋಮುಗಲಭೆಗಳು ಎದ್ದು ಬಿಡುತ್ತಿವೆ. ಎರಡೂ ಕೋಮಿನ ಜನರು ಎದುರುಕಡೆ ನಿಂತು ಹೊಡೆದಾಡೋದು, ಕಲ್ಲು ತೂರುವುದು ನಡೆದೇ ಇದೆ. ಆದರೆ, ಇಂಥ ವಿಚಾರಗಳ ಮಧ್ಯೆ ಧಾರವಾಡದಲ್ಲಿ ಎರಡು ಕೋಮುಗಳ ಜನರು ಭಾವೈಕ್ಯತೆ ಮೆರೆದು ದೇಶಕ್ಕೇ ಮಾದರಿಯಾಗಿದ್ದಾರೆ. ಏನಿದು ಕಥೆ ಅಂತೀರಾ? ಈ ಸ್ಟೋರಿ ಓದಿ.

ಸೆಪ್ಟೆಂಬರ್ 19 ಗುರುವಾರ ಧಾರವಾಡದ ಹಲವು ಪ್ರದೇಶಗಳಲ್ಲಿ ಪವರ್​​ ಕಟ್​

ಸೆಪ್ಟೆಂಬರ್ 19 ಗುರುವಾರ ಧಾರವಾಡದ ಹಲವು ಪ್ರದೇಶಗಳಲ್ಲಿ ಪವರ್​​ ಕಟ್​

ಧಾರವಾಡದಲ್ಲಿ ಗುರುವಾರ (ಸೆ.19) ರಂದು ಕೆಪಿಟಿಸಿಎಲ್​ 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ತಿಳಸಿದೆ.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಬಾಳಿ ಬದುಕಬೇಕಾದ ಯುವಕ-ಯುವತಿಯರು ಜೀವತೊರೆಯುತ್ತಿದ್ದಾರೆ. ಅದರಂತೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡಬಲ್ ಪೇಮೆಂಟ್ ಹಗರಣ; ಧಾರವಾಡ ಕೆಐಎಡಿಬಿ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಇಡಿ ವಶಕ್ಕೆ

ಡಬಲ್ ಪೇಮೆಂಟ್ ಹಗರಣ; ಧಾರವಾಡ ಕೆಐಎಡಿಬಿ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಇಡಿ ವಶಕ್ಕೆ

ಕೆಐಎಡಿಬಿ(KIADB)ಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ಸೇರಿ ಹಲವರು ಜೈಲು ಸೇರಿದ್ದರು. ಇದೀಗ ಈ ಇಬ್ಬರನ್ನು ಇಡಿ(ED) ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!

ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!

ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯ ಮನಸೂರ ಗ್ರಾಮದ‌ ಹೊರವಲಯದ ಸರ್ಕಾರಿ ಶಾಲೆಯ ಜಗುಲಿಯಲ್ಲಿ ದುರುಳರು ಮದ್ಯಪಾನ ಪಾರ್ಟಿ ಮಾಡಿ ತ್ಯಾಜ್ಯ ಬಿಟ್ಟುಹೋದ ಘಟನೆ ವರದಿಯಾಗಿದೆ. ದುಷ್ಕರ್ಮಿಗಳು ಅಧ್ವಾನ ಮಾಡಿ ಹೋದ ಕೃತ್ಯಕ್ಕೆ ಸಂಬಂಧಿಸಿದ ವಿಡಿಯೋ ಇಲ್ಲಿದೆ ನೋಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ