AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

Author - TV9 Kannada

narsimhamurthi.pyati@tv9.com

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ

ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ

ಕಲಘಟಗಿಯ ಹರ್ಷ ಎಂಟರ್‌ಟೈನ್‌ಮೆಂಟ್ ಬಹುಕೋಟಿ ವಂಚನೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಹತ್ತು ವರ್ಷಗಳ ಹಿಂದೆ ಸಾವಿರಾರು ಹೂಡಿಕೆದಾರರನ್ನು ಮೋಸಗೊಳಿಸಿದ್ದ ಖಾಸನೀಸ್ ಸಹೋದರರ ವಿರುದ್ಧ ಜಿಲ್ಲಾಡಳಿತವು ಕ್ಲೇಮ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಜಪ್ತಿ ಮಾಡಿದ ಆಸ್ತಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹಣ ಕಳೆದುಕೊಂಡ ಸಂತ್ರಸ್ತರಲ್ಲಿ ಅಲ್ಪ ಪ್ರಮಾಣದ ಮರುಪಾವತಿಯ ಆಶಾಭಾವನೆ ಚಿಗುರಿದೆ.

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು

ಆತನೊಬ್ಬ ಬೌದ್ಧ ಸನ್ಯಾಸಿ. ತಾನಾಯಿತು ತನ್ನ ಧರ್ಮವಾಯಿತು ಎಂದು ಇದ್ದ. ಆದರೆ ಆತನ ಬಳಿ ಸಾಕಷ್ಟು ಹಣವಿದೆ ಅಂದುಕೊಂಡ ದುಷ್ಕರ್ಮಿಗಳು ಆತನ ಬೆನ್ನು ಬಿದ್ದಿದ್ದರು. ಆದರೆ ಆತನ ಬಳಿ ಹಣವೇ ಇಲ್ಲ ಅಂದಾಗ ಆತನನ್ನು ಕೊಂದು ಹಾಕಿ, ಬಳಿಕ ಬೇರೆ ಜಿಲ್ಲೆಯಲ್ಲಿ ಶವವನ್ನು ಎಸೆದು ಪಕ್ಕದ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಆದ್ರೆ, ಯಾವುದೇ ಸಣ್ಣ ಸುಳಿವು ಇಲ್ಲದಿದ್ದರೂ ಸಹ ಧಾರವಾಡ ಪೊಲೀಸರು ಪ್ರರಕಣದ ಬೆನ್ನು ಬಿದ್ದ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆ ವಿವಾದ ಮತ್ತೆ ಭುಗಿಲೆದ್ದಿದೆ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದರೂ, ಇದೀಗ ಆಡಳಿತಾರೂಢ ಬಿಜೆಪಿ ತನ್ನ ನಿರ್ಧಾರ ಬದಲಿಸಿದೆ. 16ನೇ ಹಣಕಾಸು ಆಯೋಗದ ಅನುದಾನ, ವಾರ್ಡ್ ವಿಭಜನೆ ಸಮಸ್ಯೆಗಳನ್ನು ಉಲ್ಲೇಖಿಸಿ, ಪ್ರತ್ಯೇಕ ಪಾಲಿಕೆ ಬದಲು ಬೃಹತ್ ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಆಗ್ರಹಿಸಿದೆ. ಸದ್ಯ ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ

ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ

ಧಾರವಾಡದ ಗಾಂಧಿ ಭವನದಲ್ಲಿ ಮಾವು ಬೆಳೆಗಾರರಿಂದ ನೇರ ಮಾರಾಟ ಅಭಿಯಾನ ಆರಂಭವಾಗಿದೆ. ದಲ್ಲಾಳಿಗಳ ಹಾವಳಿ ತಪ್ಪಿಸಿ, ಗ್ರಾಹಕರಿಗೆ ನೈಸರ್ಗಿಕವಾಗಿ ಮಾಗಿಸಿದ ರುಚಿಕರ ಆಪೋಸಾ ಹಾಗೂ ವಿವಿಧ ತಳಿಯ ಹಣ್ಣುಗಳನ್ನು ನ್ಯಾಯಯುತ ದರದಲ್ಲಿ ನೀಡಲಾಗುತ್ತಿದೆ. ಹವಾಮಾನ ವೈಪರೀತ್ಯದ ನಡುವೆಯೂ ರೈತರಿಗೆ ಆರ್ಥಿಕ ನೆರವು ನೀಡುವ ಈ ವಿನೂತನ ಪ್ರಯತ್ನ ಇದಾಗಿದ್ದು, ರಸಭರಿತ ಮಾವಿ ಹಣ್ಣುಗಳ ಝಲಕ್ ಇಲ್ಲಿದೆ ನೋಡಿ.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ಆದಿತ್ಯ ನೇಣಿಗೆ ಶರಣಾಗಿದ್ದ ಪ್ರಕರಣ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷ ನಾಯಕರು ಸರ್ಕಾರ ವಿರುದ್ಧ ಮುಗಿಬಿದ್ದಿದ್ದಾರೆ. ಇದೀಗ ವಿದ್ಯಾಗಿರಿ ಠಾಣೆಯ ಇನ್ಸ್​​ಪೆಕ್ಟರ್​​ ನನ್ನು ಅಮಾನತು ಮಾಡಲಾಗಿದೆ.

ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಸಾವು: ಮೃತದೇಹ ಪತ್ತೆ

ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಸಾವು: ಮೃತದೇಹ ಪತ್ತೆ

ಧಾರವಾಡ ಬೈಪಾಸ್ ಬಳಿ ಟಿಬೆಟಿಯನ್ ಮೂಲದ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ ಆಗಿದೆ. ಮುಖದ ಮೇಲೆ ಗಾಯಗಳಿದ್ದು, ಬೇರೆಡೆ ಕೊಲೆಗೈದು ಶವ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್​ ಸಿಬ್ಬಂದಿಗೆ ಬಿಗ್​​ ಶಾಕ್​​

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್​ ಸಿಬ್ಬಂದಿಗೆ ಬಿಗ್​​ ಶಾಕ್​​

ಪೊಲೀಸರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿತ್ತು. ಗಾಂಜಾ ಸೇವನೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಪೊಲೀಸರು ಆದಿತ್ಯನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳಾದ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್, ಸಯದ್ ತಹಸಿಲ್ದಾರ್ ಅವರನ್ನು ಅಮಾನತು ಮಾಡಲಾಗಿದೆ.

ಗೊಂದಲದ ಗೂಡಾದ ಕುಂದಗೋಳ ಜನಸಂಪರ್ಕ ಸಭೆ: ವೇದಿಕೆಯಲ್ಲೇ ಅಧಿಕಾರಿಗಳಿಗೆ ಸಚಿವ ಸಂತೋಷ್​​ ಲಾಡ್​​ ತರಾಟೆ

ಗೊಂದಲದ ಗೂಡಾದ ಕುಂದಗೋಳ ಜನಸಂಪರ್ಕ ಸಭೆ: ವೇದಿಕೆಯಲ್ಲೇ ಅಧಿಕಾರಿಗಳಿಗೆ ಸಚಿವ ಸಂತೋಷ್​​ ಲಾಡ್​​ ತರಾಟೆ

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಎದುರೇ ರೈತರೊಬ್ಬರು ತಮ್ಮ ಸಮಸ್ಯೆಗಳ ಬಗ್ಗೆ ಕೂಗಾಡಿದ್ದಾರೆ. ವೈಯಕ್ತಿಕವಾಗಿ ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದರೂ, ರೈತ ತಮ್ಮ ಅಳಲನ್ನು ಸಭೆಯಲ್ಲಿ ವ್ಯಕ್ತಪಡಿಸಲು ಪ್ರಯತ್ನಿಸಿದ ಪ್ರಸಂಗ ನಡೆದಿದೆ. ಈ ಘಟನೆಯು ಸಭೆಯಲ್ಲಿ ಅಲ್ಪ ಗೊಂದಲಕ್ಕೆ ಕಾರಣವಾಯಿತು.

ಗಾಂಜಾ ಸೇವನೆ ಆರೋಪಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ: ಹಣಕ್ಕೆ ಬೇಡಿಕೆ ಇಟ್ಟಿದ್ದರಾ ಪೊಲೀಸರು?

ಗಾಂಜಾ ಸೇವನೆ ಆರೋಪಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ: ಹಣಕ್ಕೆ ಬೇಡಿಕೆ ಇಟ್ಟಿದ್ದರಾ ಪೊಲೀಸರು?

ಧಾರವಾಡದಲ್ಲಿ ಬಿಎಸ್‌ಸಿ ವಿದ್ಯಾರ್ಥಿ ಆದಿತ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾಗಿರಿ ಠಾಣೆ ಪೊಲೀಸರು ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಆದಿತ್ಯ ಗಾಂಜಾ ಸೇವಿಸಿರಲಿಲ್ಲ ಎಂದು ವರದಿ ದೃಢಪಡಿಸಿತ್ತು. ಆದರೂ ಪೊಲೀಸರ ಮತ್ತು ಮಧ್ಯವರ್ತಿಯ ಹಣದ ಬೇಡಿಕೆ, ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆರೋಪಿಸಲಾಗಿದ್ದು, ತನಿಖೆಗೆ ಒತ್ತಾಯಿಸಲಾಗಿದೆ.

ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ; ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಮೆರವಣಿಗೆ!

ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ; ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಮೆರವಣಿಗೆ!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್‌ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕನ ಕೈವಾಡ!

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕನ ಕೈವಾಡ!

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ಮುಖಂಡನ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ತಲೆಮರೆಸಿಕೊಂಡಿರುವ ಕೈ ಮುಖಂಡನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ನಾಲ್ಕು ತಂಡ ರಚಿಸಿ ಹುಡುಕುತ್ತಿದ್ದರೂ ಸಹ ಆತನ ಸುಳಿವು ಸಿಗುತ್ತಿಲ್ಲ. ಬಂಧನ ಭೀತಿಯಿಂದ ಕೈ ಮುಖಂಡ ವಿದೇಶಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಹಾಗಾದ್ರೆ, ಯಾರು ಆ ಕೈ ಮುಖಂಡ? ಸ್ವಪಕ್ಷದ ಯವಕನನ್ನ ಹತ್ಯೆ ಮಾಡುವ ದ್ವೇಷ ಏನಿತ್ತು ಎನ್ನುವ ಡಿಟೇಲ್ಸ್ ಇಲ್ಲಿದೆ.

ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ

ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ ಹತ್ಯೆ ಪ್ರಕರಣ ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ.