ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಕೇಳೋರಿಲ್ಲ ಅತಿಥಿ ಉಪನ್ಯಾಸಕರ ಗೋಳು: ಕೆಲಸ ಕಳೆದುಕೊಳ್ಳುವ ಭೀತಿ; ಕಾನೂನು ಹೋರಾಟಕ್ಕೆ ಸಜ್ಜು
Dharwad Guest Lecturers: ಕರ್ನಾಟಕದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 20-25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರಿಗೆ ಇದೀಗ ತಮ್ಮ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಏಕೆಂದರೆ ಸರಕಾರ ಹೊಸದಾಗಿ 2000 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.
- Narasimha Murti Pyati
- Updated on: Aug 23, 2026
- 5:55 pm
ಮನೆಯಲ್ಲೇ ಪರಿಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಸುವುದು ಹೇಗೆ? ಧಾರವಾಡದಲ್ಲೊಂದು ಮಾದರಿ ಕಾರ್ಯಾಗಾರ
Eco-Friendly Ganesha: ಪಿಒಪಿ ಗಣೇಶ ವಿಗ್ರಹಗಳಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ, ಕೆಲವ ಸಂಸ್ಥೆಗಳಿಂದ ಮನೆಗಳಲ್ಲಿಯೇ ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಗಳನ್ನು ಹೇಗೆ ತಯಾರಿಸಬೇಕು ಎಂಬ ಕಾರ್ಯಾಗಾರವನ್ನು ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದೆ. ಜನರು ಕೂಡ ಅಷ್ಟೇ ಆಸಕ್ತಿಯಿಂದ ಭಾಗಿಯಾಗಿದ್ದರು. ಇಲ್ಲಿವೆ ನೋಡಿ ಫೋಟೋಸ್.
- Narasimha Murti Pyati
- Updated on: Aug 22, 2026
- 6:38 pm
Dharwad Special Report: ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಧಾರವಾಡ ಜಿಲ್ಲೆಯು ಅಂಗಾಂಗ ದಾನದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜೀವದಾನದ ಮಹತ್ವವನ್ನು ಸಾರಿದೆ. ರಾಜ್ಯದ ಒಟ್ಟು 67,632 ಅಂಗಾಂಗ ದಾನಿಗಳಲ್ಲಿ, ಧಾರವಾಡದ ಪಾಲು 12,534. ಇದು ಪ್ರಜ್ಞಾವಂತ ಸಮಾಜದ ಸಂಕೇತವಾಗಿದ್ದು, ಎಂಟು ಜನರಿಗೆ ಹೊಸ ಜೀವನ ನೀಡುವ ಈ ಮಹಾನ್ ಕಾರ್ಯದಲ್ಲಿ ಧಾರವಾಡ ಮಾದರಿಯಾಗಿದೆ.
- Narasimha Murti Pyati
- Updated on: Aug 22, 2026
- 1:14 pm
ಪಡಿತರ ಚೀಟಿ ಇ-ಕೆವೈಸಿಗೆ ಕೈಕೊಟ್ಟ ಸರ್ವರ್: ಜನಸಾಮಾನ್ಯರ ಪರದಾಟ
Dharwad News: ಬಡವರ ಹೊಟ್ಟೆ ತುಂಬಿಸಬೇಕಾದ ಸರ್ಕಾರದ ಪಡಿತರ ವ್ಯವಸ್ಥೆ ಇದೀಗ ಬಡ ಜನರಿಗೆ ಹಿಂಸೆಯಾಗಿ ಪರಿಣಮಿಸಿದೆ. ಪಡಿತರ ವಿತರಣೆಯಲ್ಲಿ ಅನರ್ಹರನ್ನು ಪತ್ತೆ ಹಚ್ಚುವ ನೆಪದಲ್ಲಿ ಜಾರಿಗೆ ತಂದಿರುವ ಕಠಿಣ ತಂತ್ರಾಂಶ ಹಾಗೂ ನಿರಂತರ ಸರ್ವರ್ ಸಮಸ್ಯೆಯಿಂದಾಗಿ ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಬಡ ಫಲಾನುಭವಿಗಳು ತುತ್ತು ಕೂಳಿಗಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ದಿನಗಟ್ಟಲೆ ಕಾದು ಹೈರಾಣಾಗುತ್ತಿದ್ದಾರೆ.
- Narasimha Murti Pyati
- Updated on: Aug 19, 2026
- 5:22 pm
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಪೊಲೀಸರಿಂದ ಬಿಗಿ ಭದ್ರತೆ
ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ AKSSA ಸಂಘಟನೆ ಹೋರಾಟಕ್ಕೆ ಕರೆ ನೀಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಕಳೆದ ವರ್ಷದ ದೊಡ್ಡ ಹೋರಾಟದ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಸಂಘಟನೆ ಅಧ್ಯಕ್ಷ ಕಾಂತ ಕುಮಾರ್ ಅವರ ಸುಳಿವು ಇಲ್ಲದಿದ್ದರೂ, ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಮುಂದುವರಿಸಿದ್ದಾರೆ.
- Narasimha Murti Pyati
- Updated on: Aug 18, 2026
- 11:20 am
ಧಾರವಾಡದಲ್ಲಿ ಮತ್ತೆ ಹೋರಾಟಕ್ಕೆ ಮುಂದಾದ ಉದ್ಯೋಗಾಕಾಂಕ್ಷಿಗಳು; ಅನುಮತಿ ನಿರಾಕರಿಸಿದ ಖಾಕಿ
Dharwad job aspirants protest: ಧಾರವಾಡದಲ್ಲಿ ಆಗಸ್ಟ್ 18ರಂದು ಆಕ್ಸಾ ಸಂಘಟನೆ ನಡೆಸಲು ಉದ್ದೇಶಿಸಿದ್ದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಹು-ಧಾ ಕಮಿಷನರ್ ಎನ್. ಶಶಿಕುಮಾರ್ ಅನುಮತಿ ನಿರಾಕರಿಸಿದ್ದಾರೆ. ಕಳೆದ ಸೆಪ್ಟೆಂಬರ್ನಲ್ಲಿ ನಡೆದ ದೊಡ್ಡಮಟ್ಟದ ಪ್ರತಿಭಟನೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳನ್ನು ಕಾರಣವಾಗಿ ನೀಡಿ, ಇದೀಗ ಅನುಮತಿ ನಿರಾಕರಿಸಲಾಗಿದೆ.
- Narasimha Murti Pyati
- Updated on: Aug 16, 2026
- 5:50 pm
ರೈತರಿಗೆ ‘ಖಾರ’ವಾದ ಮೆಣಸಿನಕಾಯಿ: ಸಂಕಷ್ಟಕ್ಕೆ ಸಿಲುಕಿದ ಅನ್ನದಾತ
Chili Price Crash: ಧಾರವಾಡ ಜಿಲ್ಲೆಯ ರೈತರು ಅನಾವೃಷ್ಟಿ ನಡುವೆಯೂ ಬೋರ್ವೆಲ್ ನೀರು ಬಳಸಿ ಮೆಣಸಿನಕಾಯಿ ಬೆಳೆದಿದ್ದರು. ಆದರೆ ಬೆಳೆ ಕಟಾವಿಗೆ ಬಂದಾಗ ದರ ಕುಸಿತವಾಗಿದೆ. ಕಾರ್ಮಿಕರ ಕೂಲಿ ಹಾಗೂ ಸಾಗಾಣಿಕಾ ವೆಚ್ಚವೂ ಸಿಗದ ಕಾರಣ, ರೈತರು ಕಂಗಾಲಾಗಿದ್ದಾರೆ. ಬೆಳೆ ಕಟಾವು ಮಾಡದೆ ಗಿಡದಲ್ಲೇ ಬಿಡುತ್ತಿದ್ದಾರೆ.
- Narasimha Murti Pyati
- Updated on: Aug 8, 2026
- 6:18 pm
ಧಾರವಾಡ ಹೈಕೋರ್ಟ್ನಲ್ಲಿಂದು ಮಹಿಳೆಯರದ್ದೇ ಪಾರುಪತ್ಯ! ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ
Dharawad News: ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಇಂದು (ಆಗಸ್ಟ್ 1) ವಿಶೇಷ ಮಹಿಳಾ ನ್ಯಾಯಪೀಠಗಳ ಕಲಾಪ ನಡೆಯಲಿದ್ದು, ಮಹಿಳಾ ನ್ಯಾಯಮೂರ್ತಿಗಳ ಜೊತೆಗೆ ರಾಜ್ಯ ಸರ್ಕಾರದ ಪರವಾಗಿ ಮಹಿಳಾ ಕಾನೂನು ಅಧಿಕಾರಿಗಳ ತಂಡವೇ ವಾದ ಮಂಡಿಸಲಿದೆ. ಏಳು ಪೀಠಗಳಲ್ಲಿ ಇಡೀ ದಿನ ವಿಚಾರಣೆ ನಡೆಯಲಿದೆ.
- Narasimha Murti Pyati
- Updated on: Aug 1, 2026
- 8:32 am
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ (Yogesh Gowda) ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ (High Court) ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ. ಇನ್ನೊಂದೆಡೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗುವುದಾಗಿ ಮೃತ ಯೋಗೇಶ್ ಗೌಡ ಸಹೋದರ ಗುರನಾಥ್ ಗೌಡ ಹೇಳಿದ್ದಾರೆ. ಆದ್ರೆ, ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಸುಪ್ರೀಂ ಕೋರ್ಟ್ಗೆ ಹೋಗುವುದಿಲ್ಲ ಎಂದಿದ್ದಾರೆ.
- Narasimha Murti Pyati
- Updated on: Jul 31, 2026
- 9:34 pm
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಕುರಿತು ಹೋರಾಟಗಾರ ಬಸವರಾಜ್ ಕೊರವರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಜಾಮೀನು ಕೂಡ ಸಿಗಬಾರದು ಎಂದ ಅವರು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತಾ, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿ ಆಗಿದ್ದರಿಂದ ಹೋರಾಟ ಮುಂದುವರಿಯಲಿದೆ.
- Narasimha Murti Pyati
- Updated on: Jul 31, 2026
- 1:10 pm
ಧಾರವಾಡದ ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
Dharwad News: ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ಬೆಂಗಳೂರು–ಬೆಳಗಾವಿ ಎಕ್ಸ್ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ಸೇರಿದಂತೆ ಕೆಲವು ರೈಲುಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ನಿಂತಿದ್ದು, ಪ್ರಯಾಣಿಕರು ಪರದಾಡಿದರು. ರೈಲು ನಿಲ್ದಾಣದಲ್ಲಿನ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.
- Narasimha Murti Pyati
- Updated on: Jul 28, 2026
- 12:40 pm
ಬೈ ಒನ್ ಗೇಟ್ ಒನ್ ಆಫರ್: 703 ರೂ ವಸ್ತುಗೆ ಬರೋಬ್ಬರಿ 35 ಸಾವಿರ ರೂ ದಂಡ ತೆತ್ತ ಬ್ಲಿಂಕಿಟ್!
Blinkit fine: ಕೇವಲ 703 ರೂ ಬೆಲೆಯ ವಸ್ತುಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬ್ಲಿಂಕಿಟ್ ಕಂಪನಿಗೆ ಬರೋಬ್ಬರಿ 35 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಬೈ ಒನ್ ಗೇಟ್ ಒನ್ ಆಫರ್ ನೀಡಿ ಗ್ರಾಹಕರಿಗೆ ಮೋಸ ಆರೋಪ ಕೇಳಿಬಂದಿದೆ.
- Narasimha Murti Pyati
- Updated on: Jul 27, 2026
- 5:43 pm