ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ತ್ರಿಶಂಕುಸ್ಥಿತಿಗೆ ಸಿಲುಕಿದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಹುದ್ದೆ: ಹೈಕೋರ್ಟ್ನಿಂದ ತಡೆಯಾಜ್ಞೆ
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಸದ್ಯ ಜಟಾಪಟಿ ಶುರುವಾಗಿದೆ. ಮೆರಿಟ್ ಮತ್ತು ಸಾಮಾಜಿಕ ನ್ಯಾಯದ ಮೇಲೆ ನೇಮಕಾತಿ ನಡೆದಿಲ್ಲವೆಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕುಲಪತಿ ಆಕಾಂಕ್ಷಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ನೇಮಕಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರ ಇತ್ತೀಚೆಗೆ ನೂತನ ಕುಲಪತಿಯ ನೇಮಕ ಮಾಡಿತ್ತು.
- Narasimha Murti Pyati
- Updated on: Jul 10, 2025
- 9:35 am
ಸ್ವಯಂ ನಿವೃತ್ತಿ ಬಗ್ಗೆ ಎಎಸ್ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ ಇಲ್ಲಿದೆ ನೋಡಿ
ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ್ದಾರೆ. ಬುಧವಾರ ಕರ್ತವ್ಯಕ್ಕೂ ಹಾಜರಾಗುವ ಮುನ್ನ ಮಾತನಾಡಿದ ಅವರು, ಸಿಎಂ ಹಾಗೂ ಗೃಹಸಚಿವರು ಮಾತನಾಡಿದ್ದಾರೆ ಎಂದಿದ್ದಾರೆ. ಎಎಸ್ಪಿ ನಾರಾಯಣ ಭರಮನಿ ಪ್ರತಿಕ್ರಿಯೆಯ ವಿಡಿಯೋ ಇಲ್ಲಿದೆ.
- Narasimha Murti Pyati
- Updated on: Jul 3, 2025
- 2:16 pm
ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್
ಬೆಳಗಾವಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಸಾರ್ವಜನಿಕವಾಗಿ ಸಿಎಂ ನಡೆದುಕೊಂಡ ರೀತಿ, ವರ್ತನೆಯನ್ನು ವಿಪಕ್ಷಗಳು ಸೇರಿದಂತೆ ಸಾರ್ವಜನಿಕರು ಖಂಡಿಸಿದ್ದರು. ಆದ್ರೆ, ಸಾರ್ವಜನಿಕವಾಗಿಯೇ ಅವಮಾನಕ್ಕೀಡಾದ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ.
- Narasimha Murti Pyati
- Updated on: Jul 2, 2025
- 4:21 pm
ಗಾಯದ ಮೇಲೆ ಬರೆ: ಸಂಕಷ್ಟದಲ್ಲಿರುವ ಧಾರವಾಡದ ರೈತರಿಗೆ ಬ್ಯಾಂಕ್ನಿಂದ ನೋಟಿಸ್!
ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ನವಲಗುಂದ ತಾಲೂಕಿನ ರೈತರ ಬೆಳೆ ಹಾನಿಯಾಗಿದೆ. ಈ ನಡುವೆ, ಮೊರಬ ಗ್ರಾಮದ ರೈತರಿಗೆ ಬ್ಯಾಂಕ್ ಆಫ್ ಬರೋಡಾ ಸಾಲ ಮರುಪಾವತಿ ನೋಟೀಸ್ ನೀಡಿದೆ. ಹೀಗಾಗಿ ರೈತರು ಸರ್ಕಾರದಿಂದ ಸಹಾಯ ಕೋರುತ್ತಿದ್ದಾರೆ. ಸರ್ಕಾರ ರೈತರ ಸಾಲ ಮನ್ನಾ ಮಾಡಿ ಅವರನ್ನು ಬೆಂಬಲಿಸಬೇಕೆಂಬುದು ರೈತ ಮುಖಂಡರು ಆಗ್ರಹಿಸಿದ್ದಾರೆ.
- Narasimha Murti Pyati
- Updated on: Jul 1, 2025
- 7:32 pm
ಜು.1ರಂದು ಧಾರವಾಡದಲ್ಲಿ ಹುತಾತ್ಮ ದಿನ ಆಚರಣೆ ಆಚರಿಸುವುದ್ಯಾಕೆ? ಇದಕ್ಕಿದೆ ಬ್ರಿಟಿಷರ ಲಿಂಕ್
ಅದು ಸ್ವಾತಂತ್ರ್ಯಾ ಪೂರ್ವದ ದಿನಗಳು. ಬ್ರಿಟಿಷರ ದಬ್ಬಾಳಿಕೆ ವಿರುದ್ಧ ದೇಶಾದ್ಯಂತ ನಿರಂತರವಾಗಿ ಹೋರಾಟ ನಡೆದ ದಿನಗಳವು. ಮಹಾತ್ಮಾ ಗಾಂಧಿಯವರು ಆರಂಭಿಸಿದ್ದ ಅಸಹಕಾರ ಚಳುವಳಿಗೆ ಎಲ್ಲೆಡೆ ಬೆಂಬಲ ವ್ಯಕ್ತವಾಗಿತ್ತು. ಇಂಥ ದಿನಗಳಲ್ಲಿಯೇ ಧಾರವಾಡದಲ್ಲಿ ಹೋರಾಟವೊಂದು ನಡೆದು, ಬ್ರಿಟೀಷ್ ಗುಂಡಿಗೆ ಮೂವರು ರಾಷ್ಟ್ರಭಕ್ತರು ಹುತಾತ್ಮರಾಗಿದ್ದರು. ಈ ಹುತಾತ್ಮರನ್ನು ಸ್ಮರಿಸಲು ಇಂದಿಗೂ ಧಾರವಾಡದಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಇಲ್ಲಿದೆ ವಿವರ
- Narasimha Murti Pyati
- Updated on: Jul 1, 2025
- 6:59 pm
ಶುಭಾಂಶು ಶುಕ್ಲಾ ಜತೆ ಬಾಹ್ಯಾಕಾಶಕ್ಕೆ ಮೆಂತ್ಯ, ಹಸಿರು ಕಾಳು ಹೋಗಲು ಕಾರಣವೇನು, ಗಗನಯಾನಕ್ಕೂ ಧಾರವಾಡ ಕೃಷಿ ವಿವಿಗೂ ಲಿಂಕ್ ಹೇಗೆ? ಇಲ್ಲಿದೆ ವಿವರ
ಆಕ್ಸಿಯಮ್ 4 ಅಂತರಿಕ್ಷಯಾನದಲ್ಲಿ ಭಾರತೀಯ ಶುಭಾಂಶು ಶುಕ್ಲಾ ಜೊತೆಗೆ ಹೋಗಿರುವುದು ನಮ್ಮ ಕರ್ನಾಟಕದ ಹಸಿರು ಮತ್ತು ಮೆಂತೆ ಕಾಳುಗಳು. ಇವು ಮುಂದೆ ಮೊಳಕೆಯೊಡೆದು ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಸಂಶೋಧನೆಗೆ ಬರಲಿವೆ ಎಂಬುವುದು ಈಗ ಗೊತ್ತಾಗಿರುವ ವಿಚಾರ. ಇದೇ ಕಾರಣದಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಖ್ಯಾತಿ ಇದೀಗ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ಹಾಗಾದರೆ ಕೃಷಿ ವಿವಿ ಈ ವಿಚಾರವಾಗಿ ಕೆಲಸ ಮಾಡುತ್ತಿರುವುದು ಇದೇ ಮೊದಲನೇ ಸಲನಾ? ಗಗನಯಾನಕ್ಕೂ ಈ ಕೃಷಿ ವಿವಿಗೆ ಲಿಂಕ್ ಬೆಳೆದಿದ್ದು ಹೇಗೆ? ಇಲ್ಲಿದೆ ವಿವರ.
- Narasimha Murti Pyati
- Updated on: Jun 27, 2025
- 4:38 pm
ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರು ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬಾಲಗಿರಿ ಗ್ರಾಮದಿಂದ ಬೆಣಚಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ 2019 ರಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಇದೀಗ ಮಳೆ ಹೆಚ್ಚಾದರೆ ಗ್ರಾಮದ ಜನರು ಹೊರಜಗತ್ತಿನಿಂದ ಸಂಪರ್ಕ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜನರು ಕೆಲಸಕ್ಕೆ ಮತ್ತು ವಿದ್ಯಾರ್ಥಿಗಳು ಶಾಲೆಗೆ ಹೋಗದ ಪರಿಸ್ಥಿತಿ ನಿರ್ಮಾಣವಾಗಲಿದೆ.
- Narasimha Murti Pyati
- Updated on: Jun 27, 2025
- 9:29 am
ಶುಭಾಂಶು ಶುಕ್ಲಾ ಜತೆ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿವೆ ಧಾರವಾಡದ ಮೆಂತ್ಯ, ಒಣಬೀಜ, ಹಸಿರುಕಾಳು!
ಧಾರವಾಡದ ಕೃಷಿ ವಿಶ್ವವಿದ್ಯಾಲಯವು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಸಿರುಕಾಳು, ಮೆಂತ್ಯ ಮತ್ತು ಇತರ ಒಣ ಬೀಜಗಳನ್ನು ಕಳುಹಿಸಿದೆ. ಗಗನಯಾತ್ರಿಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಮತ್ತು ಬಾಹ್ಯಾಕಾಶ ಪರಿಸರದಲ್ಲಿ ಇವುಗಳ ಬೆಳೆಯುವ ಸಾಮರ್ಥ್ಯವನ್ನು ಅಧ್ಯಯನ ಮಾಡಲು ಈ ಪ್ರಯೋಗ ಮಾಡಲಾಗುತ್ತಿದೆ. ಈ ಕುರಿತು ವಿವಿಯ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಯೋಜನೆಯ ಪ್ರಧಾನ ಅಧಿಕಾರಿ ಡಾ. ರವಿಕುಮಾರ್ ಹೊಸಮನಿ ನೀಡಿರುವ ಮಾಹಿತಿ ಇಲ್ಲಿದೆ.
- Narasimha Murti Pyati
- Updated on: Jun 26, 2025
- 12:42 pm
ಹಣ ತೋರಿಸಿ ಬಳಿಕ ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ಪಂಗನಾಮ
ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಡಬೇಕಿದ್ದ ಹಣದ ಕಂತೆಯನ್ನು ಮೊದಲು ತೋರಿಸಿ, ಆ ಬಳಿಕ ಪೇಪರ್ಗಳಿರುವ ಬಂಡಲ್ನ್ನೇ ಹಣ ಅಂತ ಕೊಟ್ಟು ಮಾಜಿ ಯೋಧ ಸೇರಿದಂತೆ ಐವರಿಗೆ ವಂಚಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
- Narasimha Murti Pyati
- Updated on: Jun 20, 2025
- 10:26 pm
ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಧಾರವಾಡ, ಕೊಡಗು, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ನೀರು ನುಗ್ಗಿದೆ. ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಜೂನ್ 17 ರವರೆಗೆ ಮಳೆಯ ಮುನ್ಸೂಚನೆ ನೀಡಿದೆ.
- Narasimha Murti Pyati
- Updated on: Jun 12, 2025
- 10:33 pm
ಮತ್ತೆ ಹೊತ್ತಿಕೊಂಡ ಮಹದಾಯಿ ಹೋರಾಟದ ಕಿಚ್ಚು: ಧಾರವಾಡದಲ್ಲಿ ಪ್ರತಿಭಟನಾ ರ್ಯಾಲಿ
ಧಾರವಾಡದಲ್ಲಿ ಮಹದಾಯಿ ನದಿ ನೀರಿಗಾಗಿ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಕಡಾಪ ಮೈದಾನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದೆ. ಈ ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕದ ರೈತರು ಮತ್ತು ಹೋರಾಟಗಾರರು ಭಾಗವಹಿಸಿದ್ದಾರೆ. ನಾಲ್ಕು ದಶಕಗಳಿಂದ ನಡೆಯುತ್ತಿದೆ. ಹೋರಾಟಗಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Narasimha Murti Pyati
- Updated on: Jun 10, 2025
- 4:36 pm
ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಯೋಗೀಶ್ ಗೌಡ ಕೊಲೆ ಕೇಸ್ನ ಈವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ. ಒಂದು ವಾರದೊಳಗೆ ಸಿಬಿಐಗೆ ಶರಣಾಗುವಂತೆ ಸೂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- Narasimha Murti Pyati
- Updated on: Jun 7, 2025
- 11:06 am