ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಕೋರ್ಟ್ ಮೆಟ್ಟಿಲೇರಿದ್ದ 15 ದಂಪತಿ ಮತ್ತೆ ಒಂದಾದ ಕ್ಷಣ: ಅಪರೂಪದ ಘಟನೆಗೆ ಸಾಕ್ಷಿಯಾದ ಧಾರವಾಡ ಕೋರ್ಟ್
ಕೌಟುಂಬಿಕ ಕಲಹ ಸೇರಿ ವಿವಿಧ ಕಾರಣಗಳಿಗೆ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 15 ದಂಪತಿ ಎಲ್ಲವನ್ನೂ ಮರೆತು ಮತ್ತೆ ಹೊಸ ಜೀವನಕ್ಕೆ ಕಾಲಿಟ್ಟಿರುವಂತಹ ಘಟನೆ ಧಾರವಾಡ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದೆ. ಇದೇ ರೀತಿಯಾಗಿ ಇತ್ತ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಆರು ದಂಪತಿ ಮತ್ತೆ ಒಂದಾದರು.
- Narasimha Murti Pyati
- Updated on: Jul 11, 2026
- 7:26 pm
ಧಾರವಾಡ ಕೃಷಿ ವಿವಿ ಸಂಶೋಧನೆಗೆ ಜಾಗತಿಕ ಮನ್ನಣೆ: ಇಂಡೋನೇಷ್ಯಾಗೆ ಗೋಧಿ ಬೀಜ ರಫ್ತು
ಧಾರವಾಡ ಕೃಷಿ ವಿಶ್ವವಿದ್ಯಾಲಯದ DWR 162 ಗೋಧಿ ತಳಿಯು ಇದೀಗ ಇಂಡೋನೇಷ್ಯಾಕ್ಕೆ ರಫ್ತಾಗುತ್ತಿದೆ. ಭಾರತ ಮತ್ತು ಇಂಡೋನೇಷ್ಯಾ ನಡುವಿನ ಒಪ್ಪಂದದ ಭಾಗವಾಗಿ, ಪ್ರಾದೇಶಿಕ ಆಹಾರ ಭದ್ರತೆಯನ್ನು ಬಲಪಡಿಸಲು ಈ ತಳಿಯನ್ನು ಆಯ್ಕೆ ಮಾಡಲಾಗಿದೆ. ರೋಗ ನಿರೋಧಕ ಮತ್ತು ಅಧಿಕ ಇಳುವರಿ ಸಾಮರ್ಥ್ಯದ ಈ ತಳಿ, ಉಷ್ಣ ಹವಾಮಾನಕ್ಕೂ ಹೊಂದಿಕೊಳ್ಳುತ್ತದೆ. ಇದು ಧಾರವಾಡ ಕೃಷಿ ವಿವಿಗೆ ಹೆಮ್ಮೆಯಾಗಿದ್ದು, ಕೃಷಿ ಸಹಕಾರದಲ್ಲಿ ಮಹತ್ವದ ಮೈಲಿಗಲ್ಲು.
- Narasimha Murti Pyati
- Updated on: Jul 10, 2026
- 9:43 pm
ಟ್ರಾಫಿಕ್ ಫೈನ್ ಕಟ್ತೀವಿ ಅಂದ್ರೂ ಕಟ್ಟಿಸಿಕೊಳ್ಳದ ಮಷಿನ್: ಶೇ 50 ರಿಯಾಯಿತಿ ಎಡವಟ್ಟಿಗೆ ವಾಹನ ಮಾಲೀಕರು ಕಂಗಾಲ್
ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ ಘೋಷಿಸಿದ್ದರೂ, ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿವೆ. ಕೆಲವು ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಸಿಗುತ್ತಿದ್ದು, ಇದು ವಾಹನ ಸವಾರರು ಮತ್ತು ಪೊಲೀಸರಲ್ಲಿ ಗೊಂದಲ ಮೂಡಿಸಿದೆ. ಇನ್ನು ಜುಲೈ 10ರ ಗಡುವನ್ನು ವಿಸ್ತರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
- Narasimha Murti Pyati
- Updated on: Jul 3, 2026
- 10:18 pm
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ
ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿ ಫಯಾಜ್ನ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ವಜಾಗೊಳಿಸಿದೆ. ಈ ಹಿಂದೆ ಜಿಲ್ಲಾ ನ್ಯಾಯಾಲಯವೂ ವಜಾಗೊಳಿಸಿತ್ತು. ಪ್ರಕರಣದ ಗಾಂಭೀರ್ಯತೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯನ್ನು ಪರಿಗಣಿಸಿ ನ್ಯಾಯಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಸಿಐಡಿ ತನಿಖೆ ತೀವ್ರಗೊಂಡಿದ್ದು, ನೇಹಾ ಕುಟುಂಬಕ್ಕೆ ಇದು ಕಾನೂನು ಹೋರಾಟದಲ್ಲಿ ಸಿಕ್ಕ ದೊಡ್ಡ ಗೆಲುವು.
- Narasimha Murti Pyati
- Updated on: Jun 30, 2026
- 3:05 pm
ಧಾರವಾಡ: ದಲಿತರಿಗೆ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಹಿಂದೇಟು; ಕಾರಣವೇನು ಗೊತ್ತಾ?
ಧಾರವಾಡದ ಮುಗದ ಗ್ರಾಮದಲ್ಲಿ ದಲಿತ ಭೋವಿ ಸಮುದಾಯದವರಿಗೆ SC ಜಾತಿ ಪ್ರಮಾಣಪತ್ರ ನಿರಾಕರಿಸಲಾಗುತ್ತಿದೆ. ವಡ್ಡರ ಸಮಾಜದ ವಿರೋಧ ಮತ್ತು ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ, ಜಿಲ್ಲಾಧಿಕಾರಿಗಳ ಆದೇಶದ ಹೊರತಾಗಿಯೂ ಪ್ರಮಾಣಪತ್ರ ದೊರೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಯೋಜನೆಗಳ ಫಲಾನುಭವಿಗಳು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
- Narasimha Murti Pyati
- Updated on: Jun 22, 2026
- 5:21 pm
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದಿದ್ದಾರೆ. ಸೆಲ್ನಿಂದ ಹೊರಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎನ್ಐಎ (NIA) ತನಿಖೆ ಎದುರಿಸುತ್ತಿರುವ ಆರೋಪಿ (A1) ಮೊಹಮ್ಮದ್ ಖಾಸಿಫ್ ಮತ್ತು ರೆಹಾನ್ ಶರೀಫ್ (A4), ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
- Narasimha Murti Pyati
- Updated on: Jun 13, 2026
- 2:33 pm
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಮೃತ ಸಿದ್ದರಾಮಪ್ಪನ ಪತ್ನಿ ಲಕ್ಷ್ಮೀ, ಅಲೋಕ್ ಕುಮಾರ್ ಅವರೇ ನನ್ನ ಗಂಡನ ಜೀವ ಪಡೆದರು. ಸಸ್ಪೆಂಡ್ ಮಾಡಿದ್ದಾರೆ. ಮುಂದೆ ಜೈಲಿಗೆ ಕಳಿಸುತ್ತಾರೆ ಅಂತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಸಸ್ಪೆಂಡ್ ಮಾಡಿದ್ದು, ಇದೀಗ ಮೈಸೂರಿಗೆ ವರ್ಗಾವಣೆ ಮಾಡಿದ್ದರು. ಮೈಸೂರಿಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದರು. ಆದರೆ ತಂದೆ, ತಾಯಿ ಮುಖ ನೋಡಿ ಹೋಗುತ್ತೇನೆ ಅಂದಿದ್ದರು. ಆದರೆ ಇದೀಗ ಹೀಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮೇಲೆ ಕ್ರಮ ಆಗುತ್ತೆ ಏನು ಮಾಡಬೇಕು ಅನ್ನುತ್ತಿದ್ದರು. ಯಾವಾಗಲೂ ನನ್ನ ಅಲೋಕ್ ಕುಮಾರ್ ಜೈಲಿಗೆ ಕಳಿಸುತ್ತಾರೆ ಅನ್ನುತ್ತಿದ್ದರು ಎಂದು ಎಂದು ಆರೋಪಿಸಿದ್ದಾರೆ.
- Narasimha Murti Pyati
- Updated on: Jun 12, 2026
- 10:27 pm
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು?
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್ಯಾಂಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ ಗಂಗಾಧರ ಮುತ್ತಗಿ ವೆಟರ್ನರಿ ಸೈನ್ಸ್ನಲ್ಲಿ 0.5 ರ್ಯಾಂಕ್ ಹಾಗೂ ಬಿಎಸ್ಸಿ ಅಗ್ರಿಯಲ್ಲಿ 3.5 ರ್ಯಾಂಕ್ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.
- Narasimha Murti Pyati
- Updated on: Jun 12, 2026
- 6:17 pm
ಧಾರವಾಡದಲ್ಲಿ ಮತ್ತೆ ವಿದ್ಯಾರ್ಥಿಗಳ ಕಿಚ್ಚು: ಸತ್ಯಾಗಹಕ್ಕೆ ಪೊಲೀಸ್ ಬ್ರೇಕ್, ಜೂ 9ರವರೆಗೆ ಗಡುವು
ಸರ್ಕಾರದ ಖಾಲಿ ಹುದ್ದೆ ಭರ್ತಿ ವಿಚಾರವಾಗಿ ಈಗಾಗಲೇ ಧಾರವಾಡಲ್ಲಿ ಪ್ರತಿಭಟನೆಗಳು ಮಾಡಲಾಗಿದೆ. ಇದೀಗ ಮತ್ತೆ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಆದರೆ ಜೂನ್ 3 ರಂದು ನಿಗದಿಯಾಗಿದ್ದ ಸತ್ಯಾಗ್ರಹಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ಜೂನ್ 9ರವರೆಗೆ ಗಡುವು ನೀಡಿದ್ದು, ಸರ್ಕಾರ ನಮ್ಮೊಂದಿಗೆ ಚರ್ಚಿಸುವಂತೆ ಒತ್ತಾಯಿಸಿದ್ದಾರೆ.
- Narasimha Murti Pyati
- Updated on: Jun 1, 2026
- 3:27 pm
ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ
ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದಲ್ಲಿ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಈಜಲು ತೆರಳಿದ್ದ ಬಾಲಕರು ಮುಳುಗಿ ಜಲಸಮಾಧಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮೂವರ ಶವಗಳು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Narasimha Murti Pyati
- Updated on: May 30, 2026
- 6:07 pm
ಧಾರವಾಡ ಜನರ ದಶಕಗಳ ಬೇಡಿಕೆ ಈಡೇರುವ ಸಮಯ ಸನಿಹ: ಇದರಿಂದ ಜಿಲ್ಲೆಯ ಜನರಿಗೆ ಎಷ್ಟು ಲಾಭ?
ಧಾರವಾಡದ ಬಹುಕಾಲದ ಬೇಡಿಕೆಯಾಗಿದ್ದ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆ ಶೇ.60ರಷ್ಟು ಪೂರ್ಣಗೊಂಡಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದ 1500 ಕೋಟಿ ರೂ ಮೊತ್ತದ ಈ ಯೋಜನೆಯಿಂದ ನವಲಗುಂದ, ಕುಂದಗೋಳ ಸೇರಿದಂತೆ 37 ಹಳ್ಳಿಗಳಿಗೆ ಮಳೆಗಾಲದ ಪ್ರವಾಹದಿಂದ ಶಾಶ್ವತ ಪರಿಹಾರ ಸಿಗಲಿದೆ. ಹೂಳೆತ್ತುವಿಕೆ, ತಡೆಗೋಡೆ ನಿರ್ಮಾಣ ಕಾರ್ಯಗಳು ಭರದಿಂದ ಸಾಗಿದೆ.
- Narasimha Murti Pyati
- Updated on: May 27, 2026
- 5:02 pm
ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ ನೀಡಿ ಕಡತ ಹಿಂತಿರುಗಿಸಿದ್ದಾರೆ. ಹಾಲಿ ಸದಸ್ಯರ ಅವಧಿ ಮುಕ್ತಾಯವಾದ ನಂತರ ಹಾಗೂ ಜನಗಣತಿ ಪ್ರಕ್ರಿಯೆ ಮುಗಿದ ನಂತರವಷ್ಟೇ ವಿಭಜನೆ ಜಾರಿಯಾಗಬೇಕು ಎಂದು ರಾಜ್ಯಪಾಲರು ತಿಳಿಸಿದ್ದಾರೆ.
- Narasimha Murti Pyati
- Updated on: May 27, 2026
- 1:04 pm