ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಧಾರವಾಡ ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಹಲವು ದಿನಗಳಿಂದ ಕಾಡಿದ್ದ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಈ ಅನಿರೀಕ್ಷಿತ ಮಳೆ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಸಾರ್ವಜನಿಕರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ, ಮಳೆಯೊಂದಿಗೆ ಬೀಸಿದ ಪ್ರಬಲ ಗಾಳಿಯು ಮಾವಿನ ಬೆಳೆಗೆ ಗಂಭೀರ ಸಂಕಷ್ಟವನ್ನು ತಂದೊಡ್ಡಿದ್ದು, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ.
- Narasimha Murti Pyati
- Updated on: Mar 14, 2026
- 7:38 pm
ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್: ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್
ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್, ಮದ್ಯ, ಸಿಗರೇಟ್ ಸುಲಭವಾಗಿ ಸಿಗುತ್ತಿರುವುದು ಆಘಾತಕಾರಿ. ಪೋಕ್ಸೋ ಕೈದಿಯೊಬ್ಬ ಹೊರಗಿನ ಬಾಲಕಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಜೈಲಿನ ಭ್ರಷ್ಟಾಚಾರವನ್ನು ಬಯಲು ಮಾಡಿದ್ದಾನೆ. ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಹ 'ಹಾಯಾಗಿರುವುದಾಗಿ' ಆಡಿಯೋದಲ್ಲಿ ತಿಳಿಸಿದೆ. ಜೈಲು ಸಿಬ್ಬಂದಿಗಳ ಹಣದ ಆಸೆಯೇ ಇದಕ್ಕೆ ಕಾರಣ. ಡಿಜಿಪಿ ಅಲೋಕ್ ಕುಮಾರ್ ಅವರ ಡ್ರಗ್ ಟೆಸ್ಟ್ ಕ್ರಮಗಳು ತುರ್ತಾಗಿ ಜಾರಿಯಾಗಬೇಕು.
- Narasimha Murti Pyati
- Updated on: Mar 14, 2026
- 1:06 pm
ರೊಟ್ಟಿ ಅಂಗಡಿ ಲೈಸೆನ್ಸ್ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ-1 ಅಧಿಕಾರಿ ಹೀನಾ ಕೌಸರ್, ರೊಟ್ಟಿ ಅಂಗಡಿ ಲೈಸೆನ್ಸ್ ನೀಡಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1,000 ರೂ. ಪಡೆದು, ಉಳಿದ 3,500 ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ಬಲೆಗೆ ಕೆಡವಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆಯು ನಡೆದಿದೆ.
- Narasimha Murti Pyati
- Updated on: Mar 7, 2026
- 1:35 pm
ಈ ಊರಲ್ಲಿ ಹೋಳಿ ಆಚರಣೆ ಫುಲ್ ಡಿಫರೆಂಟ್: ಕತ್ತಿ ಹಿಡಿದು ಕಾಮಣ್ಣನ ಕಾಯುತ್ತಾರೆ ಗ್ರಾಮಸ್ಥರು!
ಧಾರವಾಡದ ಮುಳಮುತ್ತಲ ಗ್ರಾಮದಲ್ಲಿ ಹೋಳಿ ಹಬ್ಬ ವಿಭಿನ್ನವಾಗಿ ಆಚರಿಸಲಾಗುತ್ತದೆ. ಬಣ್ಣದಾಟದ ಬದಲು ಗ್ರಾಮಸ್ಥರು ತಮ್ಮ ಮನೆಯ ಆಯುಧಗಳೊಂದಿಗೆ ಕಾಮಣ್ಣನ ಮೂರ್ತಿಯನ್ನು ಕಳ್ಳತನದಿಂದ ರಕ್ಷಿಸುತ್ತಾರೆ. ಇತಿಹಾಸದ ಒಂದು ಘಟನೆಯಿಂದ ಹುಟ್ಟಿಕೊಂಡ ಈ ಅನನ್ಯ ಸಂಪ್ರದಾಯವು ಇಂದಿಗೂ ಮುಂದುವರಿದಿದೆ. ಬೇರೆ ಊರಿನ ಜನರೂ ಈ ವಿಚಿತ್ರ ಆಚರಣೆಯನ್ನು ನೋಡಲು ಬರುತ್ತಾರೆ. ಇದು ಕೇವಲ ಆಚರಣೆಯಲ್ಲ, ಜನರ ನಂಬಿಕೆಯೂ ಆಗಿದೆ.
- Narasimha Murti Pyati
- Updated on: Mar 3, 2026
- 4:29 pm
ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!
ಧಾರವಾಡದಿಂದ ಆರಂಭವಾದ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಈಗ ರಾಜ್ಯಾದ್ಯಂತ ವಿಸ್ತರಿಸಲಿದೆ. FRBM ಕಾಯ್ದೆಯಿಂದ ಹುದ್ದೆ ಕಡಿತವಾಗುತ್ತಿದ್ದು, 56 ಸಾವಿರ ಹುದ್ದೆ ಭರ್ತಿ ಘೋಷಣೆಯೂ ವೇಳಾಪಟ್ಟಿ ಇಲ್ಲದೆ ವಿಳಂಬವಾಗಿದೆ. ಯುವಕರ ದುರ್ಬಳಕೆ ಕುರಿತು ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಾರ್ಚ್ 6ರಿಂದ ಯುವ ಅಧಿವೇಶನ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯಿಸಲು ವೇದಿಕೆ ಮುಂದಾಗಿದೆ.
- Narasimha Murti Pyati
- Updated on: Mar 3, 2026
- 2:17 pm
ವಿದೇಶದಲ್ಲಿ ಧಾರವಾಡದ ಯುವಕನ ಚಮತ್ಕಾರ: ಇದು ಯೋಗದಿಂದ ಬದುಕೇ ಬದಲಾದ ಕಥೆ
ಅದ್ಯಾರೋ ನೀಡಿದ ಒಂದೊಂದು ಸಲಹೆ ಇದೀಗ ಧಾರವಾಡದ ಯುವಕನೋರ್ವನ ಇಡೀ ಬದುಕೇ ಬದಲಾಯಿಸಿದೆ. ತನ್ನ ಆರೋಗ್ಯ ಸುಧಾರಣೆಗಾಗಿ ಆರಂಭಿಸಿದ ಯೋಗಾಭ್ಯಾಸ ಇಂದು ಅದೇ ಆತನ ಪಾಲಿಗೆ ವೃತ್ತಿ ಆಗಿದೆ. ವಿದೇಶದಲ್ಲಿ ನೂರಾರು ಜನರಿಗೆ ಶಿಕ್ಷಕರಾಗಿ ತಾವು ಕಲಿತ ಯೋಗ ವಿದ್ಯೆಯನ್ನು ಧಾರೆಯೆರೆಯುತ್ತಿದ್ದಾರೆ. ಹಾಗಾದರೆ ಅವರು ಯಾರೆಂದು ತಿಳಿಯಿರಿ.
- Narasimha Murti Pyati
- Updated on: Feb 27, 2026
- 9:58 pm
SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
ಧಾರವಾಡದಲ್ಲಿ SSLC ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಪ್ರಶ್ನೆಪತ್ರಿಕೆ ನೀಡಿ, ಪಾಸ್ ಮಾಡಿಸುವ ನೆಪದಲ್ಲಿ ಆತನಿಂದ ಲಕ್ಷಾಂತರ ರೂ ಮೌಲ್ಯದ ಬಂಗಾರವನ್ನು ಪಡೆದುಕೊಂಡಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಈ ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಡ ನಡೆದಿದೆ. ಸದ್ಯ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿಲ್ಲ.
- Narasimha Murti Pyati
- Updated on: Feb 25, 2026
- 10:23 pm
ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ
ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾಹಿತಿ ನೀಡಿದ್ದಾರೆ.
- Narasimha Murti Pyati
- Updated on: Feb 24, 2026
- 6:17 pm
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್ ಸ್ಫೋಟಕ ಆರೋಪ
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರವು ದಿವಾಳಿಯಾಗಿದೆ, ಸಂಬಳಕ್ಕೂ ಹಣವಿಲ್ಲ ಎಂದ ಅವರು ತಕ್ಷಣ ನೇಮಕಾತಿ ನಡೆಸದಿದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
- Narasimha Murti Pyati
- Updated on: Feb 24, 2026
- 12:06 pm
ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್
ಉದ್ಯೋಗಾಕಾಂಕ್ಷಿಗಳ ಕಿಚ್ಚು ಧಾರವಾಡದಲ್ಲಿ ಮತ್ತೆ ಸ್ಫೋಟಗೊಂಡಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆದಿದೆ. ಪ್ರೊಟೆಸ್ಟ್ಗೆ ಪೊಲೀಸರು ಅನುಮತಿ ನಿರಾಕರಿಸಿದರೂ ಕ್ಯಾರೇ ಮಾಡದ ಯುವಕರು, ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ.
- Narasimha Murti Pyati
- Updated on: Feb 24, 2026
- 11:40 am
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
- Narasimha Murti Pyati
- Updated on: Feb 24, 2026
- 11:29 am
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎಂದು ತಿಳಿಸಿದರು. ಲಂಚದ ಮೊತ್ತದ ಬಗ್ಗೆ ಭಿನ್ನ ವರದಿಗಳಿರುವ ಕಾರಣ ಸತ್ಯಾಂಶಗಳನ್ನು ಕಲೆಹಾಕಿದ ನಂತರ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.
- Narasimha Murti Pyati
- Updated on: Feb 21, 2026
- 8:12 pm