ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಧಾರವಾಡದಲ್ಲಿ ಮಹಿಳೆ ದುರಂತ ಸಾವು: ನೀರು ಕಾಯಿಸುವಾಗ ಇರಲಿ ಎಚ್ಚರಿಕೆ!
ಧಾರವಾಡದ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ನೀರು ಕಾಯಿಸುವಾಗ ವಿದ್ಯುತ್ ಸ್ಪರ್ಶಿಸಿ ಓರ್ವ ಗೃಹಿಣಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಕೆಟ್ನಲ್ಲಿ ಕಾಯಿಲ್ ಮೂಲಕ ನೀರು ಕಾಯಿಸುತ್ತಿದ್ದಾಗ ಆಕಸ್ಮಿಕವಾಗಿ ಸ್ಪರ್ಶಿಸಿ ಈ ದುರ್ಘಟನೆ ಸಂಭವಿಸಿದೆ. ಹೀಗಾಗಿ ಮನೆಯಲ್ಲಿ ವಿದ್ಯುತ್ ಉಪಕರಣಗಳನ್ನು ಬಳಸುವಾಗ ಅತ್ಯಂತ ಎಚ್ಚರಿಕೆ ವಹಿಸುವುದು ಮುಖ್ಯ.
- Narasimha Murti Pyati
- Updated on: Apr 2, 2026
- 7:22 pm
ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ, ಧಾರವಾಡದಲ್ಲಿ ಭುಗಿಲೆದ್ದ ಆಕ್ರೋಶ
ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬೈಕ್ನಲ್ಲಿ ಬರುವಾಗ ದಾರಿಯುದ್ದಕ್ಕೂ ಮೈಮುಟ್ಟಿ ಅಸಭ್ಯ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾನೆ. ಮತ್ತೊಂದೆಡೆ ಧಾರವಾಡದಲ್ಲೂ ಸಹ ಜಿಮ್ ಟ್ರೈನರ್ ಓರ್ವ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ಪ್ರತ್ಯೇಕ ಘಟನೆ ವಿವರ ಈ ಕೆಳಗಿನಂತಿದೆ.
- Narasimha Murti Pyati
- Updated on: Mar 30, 2026
- 10:37 pm
ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?
ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿದ್ದಾನೆ. ಜೈಲಿನಲ್ಲಿ ಮೊಬೈಲ್ಗಳ ರಾಜಾರೋಷ ಬಳಕೆಯ ಬಗ್ಗೆ ಇದು ಪುರಾವೆಯಾಗಿದೆ. ಕೋರ್ಟ್ನಲ್ಲಿ ತನ್ನ ಪರವಾಗಿ ಮಾತನಾಡಯವಂತೆ ಆತ ಸಂತ್ರಸ್ತೆಯನ್ನು ಒತ್ತಾಯಿಸಿದ್ದಾನೆ ಎಂದು ದೂರಲಾಗಿದೆ.
- Narasimha Murti Pyati
- Updated on: Mar 30, 2026
- 2:07 pm
ಧಾರವಾಡದ ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?
ಧಾರವಾಡದ ರಾಮಾಪುರ ಅರಣ್ಯದಲ್ಲಿ ಮಾಜಿ ಶಾಸಕರ ಪುತ್ರ ರಾಜು ಬೋಳಶೆಟ್ಟಿಯ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಿಕ್ಕಿತ್ತು. ಅವರನ್ನು ಯಾರೋ ಕೊಲೆ ಮಾಡಿ ಕಾರಿನ ಸಮೇತ ಸುಟ್ಟು ಹಾಕಿರುವ ಶಂಕೆಯೂ ವ್ಯಕ್ತವಾಗಿತ್ತು. ಆ ಶಂಕೆಯೀಗ ದೃಢಪಟ್ಟಿದೆ. ಮಹಿಳೆಯೊಂದಿಗಿನ ಅನೈತಿಕ ಸಂಬಂಧದ ಹಿನ್ನೆಲೆ ಶಾಸಕನ ಪುತ್ರನ ಕೊಲೆಯಾಗಿದೆ ಎಂದು ತಿಳಿದು ಬಂದಿದ್ದು, ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
- Narasimha Murti Pyati
- Updated on: Mar 25, 2026
- 2:28 pm
Video: ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಧಾರವಾಡದ ರಾಮಾಪುರ ಅರಣ್ಯದಲ್ಲಿ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಸುಟ್ಟ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಜಿಲ್ಲಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಇದು ಪೂರ್ವನಿಯೋಜಿತ ಕೊಲೆ ಎಂದು ಬಲವಾಗಿ ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ.
- Narasimha Murti Pyati
- Updated on: Mar 24, 2026
- 4:30 pm
ಯುಗಾದಿ ದಿನವೇ ಧಾರವಾಡದಲ್ಲಿ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!
ಧಾರವಾಡದ ಅಮ್ಮಿನಭಾವಿಯಲ್ಲಿ ಯುಗಾದಿ ದಿನವೇ ರಕ್ತಪಾತ ನಡೆದಿರುವ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ನಡೆದ ಗಲಾಟೆ, ಬಳಿಕ ಅಣ್ಣನೇ ತಂಗಿಯನ್ನ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
- Narasimha Murti Pyati
- Updated on: Mar 19, 2026
- 9:02 pm
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಧಾರವಾಡ ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಹಲವು ದಿನಗಳಿಂದ ಕಾಡಿದ್ದ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಈ ಅನಿರೀಕ್ಷಿತ ಮಳೆ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಸಾರ್ವಜನಿಕರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ, ಮಳೆಯೊಂದಿಗೆ ಬೀಸಿದ ಪ್ರಬಲ ಗಾಳಿಯು ಮಾವಿನ ಬೆಳೆಗೆ ಗಂಭೀರ ಸಂಕಷ್ಟವನ್ನು ತಂದೊಡ್ಡಿದ್ದು, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ.
- Narasimha Murti Pyati
- Updated on: Mar 14, 2026
- 7:38 pm
ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್: ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್
ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್, ಮದ್ಯ, ಸಿಗರೇಟ್ ಸುಲಭವಾಗಿ ಸಿಗುತ್ತಿರುವುದು ಆಘಾತಕಾರಿ. ಪೋಕ್ಸೋ ಕೈದಿಯೊಬ್ಬ ಹೊರಗಿನ ಬಾಲಕಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಜೈಲಿನ ಭ್ರಷ್ಟಾಚಾರವನ್ನು ಬಯಲು ಮಾಡಿದ್ದಾನೆ. ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಹ 'ಹಾಯಾಗಿರುವುದಾಗಿ' ಆಡಿಯೋದಲ್ಲಿ ತಿಳಿಸಿದೆ. ಜೈಲು ಸಿಬ್ಬಂದಿಗಳ ಹಣದ ಆಸೆಯೇ ಇದಕ್ಕೆ ಕಾರಣ. ಡಿಜಿಪಿ ಅಲೋಕ್ ಕುಮಾರ್ ಅವರ ಡ್ರಗ್ ಟೆಸ್ಟ್ ಕ್ರಮಗಳು ತುರ್ತಾಗಿ ಜಾರಿಯಾಗಬೇಕು.
- Narasimha Murti Pyati
- Updated on: Mar 14, 2026
- 1:06 pm
ರೊಟ್ಟಿ ಅಂಗಡಿ ಲೈಸೆನ್ಸ್ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ-1 ಅಧಿಕಾರಿ ಹೀನಾ ಕೌಸರ್, ರೊಟ್ಟಿ ಅಂಗಡಿ ಲೈಸೆನ್ಸ್ ನೀಡಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1,000 ರೂ. ಪಡೆದು, ಉಳಿದ 3,500 ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ಬಲೆಗೆ ಕೆಡವಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆಯು ನಡೆದಿದೆ.
- Narasimha Murti Pyati
- Updated on: Mar 7, 2026
- 1:35 pm
ಈ ಊರಲ್ಲಿ ಹೋಳಿ ಆಚರಣೆ ಫುಲ್ ಡಿಫರೆಂಟ್: ಕತ್ತಿ ಹಿಡಿದು ಕಾಮಣ್ಣನ ಕಾಯುತ್ತಾರೆ ಗ್ರಾಮಸ್ಥರು!
ಧಾರವಾಡದ ಮುಳಮುತ್ತಲ ಗ್ರಾಮದಲ್ಲಿ ಹೋಳಿ ಹಬ್ಬ ವಿಭಿನ್ನವಾಗಿ ಆಚರಿಸಲಾಗುತ್ತದೆ. ಬಣ್ಣದಾಟದ ಬದಲು ಗ್ರಾಮಸ್ಥರು ತಮ್ಮ ಮನೆಯ ಆಯುಧಗಳೊಂದಿಗೆ ಕಾಮಣ್ಣನ ಮೂರ್ತಿಯನ್ನು ಕಳ್ಳತನದಿಂದ ರಕ್ಷಿಸುತ್ತಾರೆ. ಇತಿಹಾಸದ ಒಂದು ಘಟನೆಯಿಂದ ಹುಟ್ಟಿಕೊಂಡ ಈ ಅನನ್ಯ ಸಂಪ್ರದಾಯವು ಇಂದಿಗೂ ಮುಂದುವರಿದಿದೆ. ಬೇರೆ ಊರಿನ ಜನರೂ ಈ ವಿಚಿತ್ರ ಆಚರಣೆಯನ್ನು ನೋಡಲು ಬರುತ್ತಾರೆ. ಇದು ಕೇವಲ ಆಚರಣೆಯಲ್ಲ, ಜನರ ನಂಬಿಕೆಯೂ ಆಗಿದೆ.
- Narasimha Murti Pyati
- Updated on: Mar 3, 2026
- 4:29 pm
ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!
ಧಾರವಾಡದಿಂದ ಆರಂಭವಾದ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಈಗ ರಾಜ್ಯಾದ್ಯಂತ ವಿಸ್ತರಿಸಲಿದೆ. FRBM ಕಾಯ್ದೆಯಿಂದ ಹುದ್ದೆ ಕಡಿತವಾಗುತ್ತಿದ್ದು, 56 ಸಾವಿರ ಹುದ್ದೆ ಭರ್ತಿ ಘೋಷಣೆಯೂ ವೇಳಾಪಟ್ಟಿ ಇಲ್ಲದೆ ವಿಳಂಬವಾಗಿದೆ. ಯುವಕರ ದುರ್ಬಳಕೆ ಕುರಿತು ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಾರ್ಚ್ 6ರಿಂದ ಯುವ ಅಧಿವೇಶನ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯಿಸಲು ವೇದಿಕೆ ಮುಂದಾಗಿದೆ.
- Narasimha Murti Pyati
- Updated on: Mar 3, 2026
- 2:17 pm
ವಿದೇಶದಲ್ಲಿ ಧಾರವಾಡದ ಯುವಕನ ಚಮತ್ಕಾರ: ಇದು ಯೋಗದಿಂದ ಬದುಕೇ ಬದಲಾದ ಕಥೆ
ಅದ್ಯಾರೋ ನೀಡಿದ ಒಂದೊಂದು ಸಲಹೆ ಇದೀಗ ಧಾರವಾಡದ ಯುವಕನೋರ್ವನ ಇಡೀ ಬದುಕೇ ಬದಲಾಯಿಸಿದೆ. ತನ್ನ ಆರೋಗ್ಯ ಸುಧಾರಣೆಗಾಗಿ ಆರಂಭಿಸಿದ ಯೋಗಾಭ್ಯಾಸ ಇಂದು ಅದೇ ಆತನ ಪಾಲಿಗೆ ವೃತ್ತಿ ಆಗಿದೆ. ವಿದೇಶದಲ್ಲಿ ನೂರಾರು ಜನರಿಗೆ ಶಿಕ್ಷಕರಾಗಿ ತಾವು ಕಲಿತ ಯೋಗ ವಿದ್ಯೆಯನ್ನು ಧಾರೆಯೆರೆಯುತ್ತಿದ್ದಾರೆ. ಹಾಗಾದರೆ ಅವರು ಯಾರೆಂದು ತಿಳಿಯಿರಿ.
- Narasimha Murti Pyati
- Updated on: Feb 27, 2026
- 9:58 pm