AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

Author - TV9 Kannada

narsimhamurthi.pyati@tv9.com

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಧಾರವಾಡದ ಅಳ್ನಾವರ ಎಪಿಎಂಸಿ ಮಾರುಕಟ್ಟೆ ಜಾಗಕ್ಕೆ ರಿಯಲ್ ಎಸ್ಟೇಟ್ ಲಾಬಿ ಸಂಚು

ಧಾರವಾಡದ ಅಳ್ನಾವರ ಎಪಿಎಂಸಿ ಮಾರುಕಟ್ಟೆ ಜಾಗಕ್ಕೆ ರಿಯಲ್ ಎಸ್ಟೇಟ್ ಲಾಬಿ ಸಂಚು

ಧಾರವಾಡ ಜಿಲ್ಲೆಯ ಅಳ್ನಾವರ ಎಪಿಎಂಸಿ ಮಾರುಕಟ್ಟೆ ಜಾಗವು ಬಳಕೆಯಿಲ್ಲದೆ ಬಿದ್ದಿದ್ದು, ರಿಯಲ್ ಎಸ್ಟೇಟ್ ಲಾಬಿಯ ಕಣ್ಣಿಗೆ ಬಿದ್ದಿದೆ. ಕೃಷಿಯೇತರ ಚಟುವಟಿಕೆಗಳಿಗೆ ನಿವೇಶನಗಳನ್ನು ಮಾಡಿ ಲೀಸ್‌ಗೆ ನೀಡುವ ಎಪಿಎಂಸಿ ನಿರ್ಧಾರಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಸಾ ಮಿಲ್ ಮಾಲೀಕರು ಅಕ್ರಮವಾಗಿ ಜಾಗ ಬಳಸುತ್ತಿದ್ದು, ಭೂ ಕಬಳಿಕೆ ಭೀತಿ ಎದುರಾಗಿದೆ.

ಧಾರವಾಡ ಕಲಾವಿದನ ‘ಬೀಜ ಗಣಪತಿ’ ಕಲ್ಪನೆ: ವಿಸರ್ಜನೆ ನಂತರ ಅರಳುತ್ತೆ ಹಸಿರು ಸಂಕುಲ; ಫೋಟೋಸ್

ಧಾರವಾಡ ಕಲಾವಿದನ ‘ಬೀಜ ಗಣಪತಿ’ ಕಲ್ಪನೆ: ವಿಸರ್ಜನೆ ನಂತರ ಅರಳುತ್ತೆ ಹಸಿರು ಸಂಕುಲ; ಫೋಟೋಸ್

ಉತ್ತರ ಕರ್ನಾಟಕದಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವ ಗಣೇಶ ಚತುರ್ಥಿಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಿ ಸಜ್ಜಾಗಿದೆ. ಧಾರವಾಡದ ಕಲಾವಿದರೊಬ್ಬರು ಜೇಡಿಮಣ್ಣಿನಲ್ಲಿ ವಿವಿಧ ಬಗೆಯ ಬೀಜಗಳನ್ನು ಇಟ್ಟು ವಿಶೇಷ ಬೀಜ ಗಣೇಶನ ಮೂರ್ತಿಗಳನ್ನು ತಯಾರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಜೊತೆಗೆ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಉತ್ತೇಜಿಸುತ್ತಿದ್ದಾರೆ. ಫೋಟೋಸ್​ ಇಲ್ಲಿವೆ ನೋಡಿ.

ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಶೂ ಭಾಗ್ಯ: ಒಂದೇ ವಾರದಲ್ಲಿ ಬಯಲಾಯ್ತು ಅಸಲಿ ಗುಣಮಟ್ಟ!

ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಶೂ ಭಾಗ್ಯ: ಒಂದೇ ವಾರದಲ್ಲಿ ಬಯಲಾಯ್ತು ಅಸಲಿ ಗುಣಮಟ್ಟ!

ಧಾರವಾಡದ ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿತರಿಸಲಾದ ಉಚಿತ ಶೂಗಳು ಒಂದೇ ವಾರದಲ್ಲಿ ಹರಿದು ಹೋಗಿದ್ದು, ಕಳಪೆ ಗುಣಮಟ್ಟದ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಶೂಗಳನ್ನು ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಸುಧಾರಣಾ ಸಮಿತಿ ಸದಸ್ಯರು ಸ್ಥಳೀಯಮಟ್ಟದ ವ್ಯಾಪಾರಿಗಳಿಂದ ಖರೀದಿಸುತ್ತಿದ್ದರು. ಆದರೆ ಈ ಬಾರಿ ಸರ್ಕಾರವೇ ರಾಜ್ಯಮಟ್ಟದಲ್ಲಿ ಗುತ್ತಿಗೆ ನೀಡಿತ್ತು ಎನ್ನಲಾಗಿದೆ.

ಪ್ರತ್ಯೇಕ ಘಟನೆ: ಜೈಲಿನಲ್ಲಿ ಫಿನಾಯಿಲ್ ಕುಡಿದ ಕೈದಿ; ಪೊಲೀಸ್ ಠಾಣೆ ಆವರಣದಲ್ಲೇ ವಿಷ ಸೇವಿಸಿದ ಮಹಿಳೆ

ಪ್ರತ್ಯೇಕ ಘಟನೆ: ಜೈಲಿನಲ್ಲಿ ಫಿನಾಯಿಲ್ ಕುಡಿದ ಕೈದಿ; ಪೊಲೀಸ್ ಠಾಣೆ ಆವರಣದಲ್ಲೇ ವಿಷ ಸೇವಿಸಿದ ಮಹಿಳೆ

ಪ್ರತ್ಯೇಕ ಘಟನೆಗಳು: ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೂಲಸೌಕರ್ಯದ ಕೊರತೆ ಮತ್ತು ಅವ್ಯವಸ್ಥೆ ಖಂಡಿಸಿ ಕೈದಿಗಳ ಪ್ರತಿಭಟನೆಗೆ ಅಧಿಕಾರಿಗಳು ಕ್ಯಾರೆ ಎನ್ನದಿದ್ದಾಗ ಓರ್ವ ಕೈದಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮತ್ತೊಂದೆಡೆ ಕಲಬುರಗಿ ಜಿಲ್ಲೆಯ ನೆಲೋಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಕ್ಕೆ ಬೇಸತ್ತು ಮಹಿಳೆ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಅಭಿವೃದ್ಧಿಯ ಹೆಸರಲ್ಲಿ ಅನ್ನದಾತನ ಬದುಕಿಗೆ ಕೊಳ್ಳಿ: ಭೂಸ್ವಾಧೀನದ ಕಾರ್ಮೋಡ; ಸೂರು ಕಳೆದುಕೊಳ್ಳುವ ಭೀತಿಯಲ್ಲಿ ನೂರಾರು ಕುಟುಂಬ

ಅಭಿವೃದ್ಧಿಯ ಹೆಸರಲ್ಲಿ ಅನ್ನದಾತನ ಬದುಕಿಗೆ ಕೊಳ್ಳಿ: ಭೂಸ್ವಾಧೀನದ ಕಾರ್ಮೋಡ; ಸೂರು ಕಳೆದುಕೊಳ್ಳುವ ಭೀತಿಯಲ್ಲಿ ನೂರಾರು ಕುಟುಂಬ

ಧಾರವಾಡ-ಬೆಳಗಾವಿ ನಡುವಿನ ಕೈಗಾರಿಕಾ ಕಾರಿಡಾರ್ ಯೋಜನೆಗೆ ಸರ್ಕಾರ ಕೈಗೊಂಡಿರುವ ಬೃಹತ್ ಭೂಸ್ವಾಧೀನ ಪ್ರಕ್ರಿಯೆ, ದಶಕಗಳಿಂದ ಕೃಷಿಯನ್ನೇ ನಂಬಿ ಬದುಕುತ್ತಿರುವ ನೂರಾರು ರೈತ ಕುಟುಂಬಗಳ ಬದುಕನ್ನು ಅಕ್ಷರಶಃ ಬೀದಿಗೆ ತಳ್ಳುವ ಆತಂಕ ಸೃಷ್ಟಿಸಿದೆ. ಕೃಷಿ ಭೂಮಿ ಜೊತೆಗೆ ಮನೆಯನ್ನು ಕಳೆದುಕೊಳ್ಳುವ ಅನಿವಾರ್ಯತೆ ಅನ್ನದಾತರಿಗೆ ಎದುರಾಗಿದೆ.

ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ: ದಾವಣಗೆರೆಯ ಮೂವರು ಸಾವು!

ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ: ದಾವಣಗೆರೆಯ ಮೂವರು ಸಾವು!

ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ದಾವಣಗೆರೆ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದ್ದು, ಗಾಯಗೊಂಡ ಮತ್ತೂ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗರಗ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ಕಾರ್ಯಕ್ರಮದಲ್ಲಿ ಭಾಗಯಾಗಲು ಧಾರವಾಡಕ್ಕೆ ಆಗಮಿಸಿದ್ದ ನಟ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಎಬಿವಿಪಿ, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ತಡೆದಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೂ ನುಗ್ಗಲು ಪ್ರಯತ್ನಿಸಿದ್ದಾರೆ. ಇದರಿಂದ ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆಯೇ ಪೊಲೀಸರು, ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ರಾಜಕೀಯ ತಿರುವು ಪಡೆದುಕೊಂಡ ಹುಬ್ಬಳ್ಳಿಯ ಪುಷ್ಕರಣಿ ವಿವಾದ: ದಾಖಲೆ ಸಮೇತ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ರಾಜಕೀಯ ತಿರುವು ಪಡೆದುಕೊಂಡ ಹುಬ್ಬಳ್ಳಿಯ ಪುಷ್ಕರಣಿ ವಿವಾದ: ದಾಖಲೆ ಸಮೇತ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

Hubballi Pushkarani Dispute: ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ರಸ್ತೆ ನಿರ್ಮಾಣದ ವೇಳೆ ಪುಷ್ಕರಣಿ ಮುಚ್ಚಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಹಿಂದೂ ಭಾವನೆಗಳಿಗೆ ಧಕ್ಕೆ ಎಂದು ಆರೋಪಿಸಿದರೆ, ಕಾಂಗ್ರೆಸ್ ಇದು ರಾಜಕೀಯ ಗಿಮಿಕ್ ಎಂದು ತಿರುಗೇಟು ನೀಡಿದೆ. ಬಿಜೆಪಿ ನಾಯಕರೇ ಹಿಂದೂ ದೇಗುಲಗಳು ಮತ್ತು ಐತಿಹಾಸಿಕ ಕಟ್ಟಡಗಳ ಬಳಿ ಅನುಮತಿ ಇಲ್ಲದೆ ಅಭಿವೃದ್ಧಿ ಮಾಡಿದ್ದನ್ನು ಕಾಂಗ್ರೆಸ್ ದಾಖಲೆ ಸಮೇತ ಬಹಿರಂಗಪಡಿಸಿದೆ.

ಧಾರವಾಡದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: ಫೋನ್ ಪೇ ಮೂಲಕ ಲಂಚ ಪಡೆದ 3 ಹೆಡ್ ಕಾನ್‌ಸ್ಟೇಬಲ್‌ಗಳು ಹಾಗೂ ಹೋಮ್‌ಗಾರ್ಡ್ ಬಂಧನ

ಧಾರವಾಡದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್: ಫೋನ್ ಪೇ ಮೂಲಕ ಲಂಚ ಪಡೆದ 3 ಹೆಡ್ ಕಾನ್‌ಸ್ಟೇಬಲ್‌ಗಳು ಹಾಗೂ ಹೋಮ್‌ಗಾರ್ಡ್ ಬಂಧನ

ಧಾರವಾಡದಲ್ಲಿ ಫೋನ್ ಪೇ ಮೂಲಕ ಮರಳು ಸಾಗಣೆ ಲಾರಿ ಚಾಲಕನಿಂದ ₹30,000 ಲಂಚ ಪಡೆದ ಆರೋಪದ ಮೇಲೆ ಮೂವರು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ಒಬ್ಬ ಗೃಹರಕ್ಷಕ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಲಾರಿ ಬಿಡಲು ಹಣ ಪಡೆದಿದ್ದ ಈ ನಾಲ್ವರ ಡಿಜಿಟಲ್ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಕೈಗೊಂಡ ಕ್ರಮ ಇದು.

Vinay Kulkarni Returns: 6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!

Vinay Kulkarni Returns: 6 ವರ್ಷಗಳ ಬಳಿಕೆ ತವರೂರಿಗೆ ಆಗಮಿಸಿದ ವಿನಯ್ ಕುಲಕರ್ಣಿ!

ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಬರೋಬ್ಬರಿ 6 ವರ್ಷಗಳ ಬಳಿಕ ತಮ್ಮ ಸ್ವಕ್ಷೇತ್ರ ಧಾರವಾಡಕ್ಕೆ ಭವ್ಯ ಎಂಟ್ರಿ ನೀಡಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧನದ ಬಳಿಕ ಜಿಲ್ಲಾ ಪ್ರವೇಶಕ್ಕೆ ಇದ್ದ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಕೋರ್ಟ್ ಅನುಮತಿ ಸಿಗುತ್ತಿದ್ದಂತೆಯೇ ಕುಟುಂಬ ಸಮೇತರಾಗಿ ಆಗಮಿಸಿದ ವಿನಯ್ ಕುಲಕರ್ಣಿಗೆ ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.

ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲು

ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲು

ಆಷಾಢ ಕಳೆದು ಶ್ರಾವಣ ಆಗಮಿಸುತ್ತಿದ್ದಂತೆ ಹಬ್ಬ, ಉತ್ಸವಗಳು ಒಂದರ ಹಿಂದೆ ಒಂದರಂತೆ ಆಗಮಿಸುತ್ತಿವೆ. ಆದರೆ ಈ ಬಾರಿ ರಾಜ್ಯಾದ್ಯಂತ ಮಳೆ ಕೈಕೊಟ್ಟ (ಎಲ್‌ ನಿನೋ) ಕಾರಣ ಬೆಳೆಗಳ ಪ್ರಮಾಣ ಶೇ.50ರಷ್ಟು ಇಳಿಕೆಯಾಗಿದೆ. ಇದು ಹಬ್ಬದ ಉತ್ಸವದ ಮೇಲೆ ಕರಿಛಾಯೆ ಮೂಡಿಸಿದ್ದು, ಅಕ್ಕಿ, ಸಕ್ಕರೆ, ಬೆಲ್ಲ ಸೇರಿದಂತೆ ಅಗತ್ಯ ವಸ್ತುಗಳ ದರ ನಾಗಾಲೋಟದಲ್ಲಿ ಸಾಗುತ್ತಿದೆ. ಇದಕ್ಕೆ ತರಕಾರಿಯೂ ಹೊರತಾಗಿಲ್ಲ.

ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹ: ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ

ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹ: ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (AKSSA) ನಿರಂತರ ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ನಡೆದ ಬೃಹತ್ ಪ್ರತಿಭಟನೆ, ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಹಾಗೂ ಹೈಕೋರ್ಟ್ ಮಧ್ಯಪ್ರವೇಶದ ನಂತರವೂ ಬೇಡಿಕೆ ಸಂಪೂರ್ಣ ಈಡೇರಿಲ್ಲ. ಹೀಗಾಗಿ ಮತ್ತೊಂದು ಸುತ್ತಿನ ಹೋರಾಟಕ್ಕೀಗ ಸಂಘಟನೆ ಮುಂದಾಗಿದೆ.