AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

Author - TV9 Kannada

narsimhamurthi.pyati@tv9.com

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಹೆಡ್​​ ಕ್ವಾರ್ಟಸ್​ ಆಗಿದ್ದೇಕೆ ವಿದ್ಯಾಕಾಶಿ ಧಾರವಾಡ?

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಹೆಡ್​​ ಕ್ವಾರ್ಟಸ್​ ಆಗಿದ್ದೇಕೆ ವಿದ್ಯಾಕಾಶಿ ಧಾರವಾಡ?

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದರೂ ನೇಮಕಾತಿ ವಿಳಂಬದಿಂದ ನಿರಾಶೆ ಹೆಚ್ಚಿದೆ. ಈ ನಡುವೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ಹಬ್ ಆಗಿರುವ ವಿದ್ಯಾಕಾಶಿ ಧಾರವಾಡದಲ್ಲಿ ಮೇಲಿಂದ ಮೇಲೆ ಪ್ರತಿಭಟನೆಗಳೂ ನಡೆಯುತ್ತಿವೆ. ಅಷ್ಟಕ್ಕೂ ನಿರುದ್ಯೋಗ ಸಮಸ್ಯೆ ಇಲ್ಲಿಯವರನ್ನು ಮಾತ್ರ ಕಾಡುತ್ತಿಲ್ಲ. ರಾಜ್ಯಾದ್ಯಂತ ಅನೇಕ ಯುವಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಹೀಗಿದ್ದರೂ ಧಾರವಾಡದಲ್ಲೇ ಯಾಕೆ ಹೆಚ್ಚು ಪ್ರತಿಭಟನೆಗಳು ನಡೆಯುತ್ತವೆ ಎಂಬ ಪ್ರಶ್ನೆಗೆ ಒಒಂದಿಷ್ಟು ಉತ್ತರಗಳು ಇಲ್ಲಿವೆ.

ಧಾರವಾಡದಲ್ಲಿ ಮತ್ತೆ ಸಿಡಿದೆದ್ದ ವಿದ್ಯಾರ್ಥಿಗಳು: ಸ್ಟೂಡೆಂಟ್ಸ್​​​​​ ಕಿಚ್ಚು ಹೇಗಿತ್ತು ನೋಡಿ

ಧಾರವಾಡದಲ್ಲಿ ಮತ್ತೆ ಸಿಡಿದೆದ್ದ ವಿದ್ಯಾರ್ಥಿಗಳು: ಸ್ಟೂಡೆಂಟ್ಸ್​​​​​ ಕಿಚ್ಚು ಹೇಗಿತ್ತು ನೋಡಿ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಜನಸಾಮಾನ್ಯರ ವೇದಿಕೆ ವತಿಯಿಂದ ಇಂದು ಹೋರಾಟ ಮಾಡಲಾಯಿತು. ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಪ್ರತಿಭಟನೆ ಸಂಘಟನೆಗಳು ಹೋರಾಟ ಮಾಡಿದವರು. ಇನ್ನು ಈ ವೇಳೆ ಸುಮಾರು 50 ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಮುಗಿಯದ ಪೊಲೀಸ್​​ ವರ್ಗಾವಣೆ ಆಟ: ಇನ್‌ಸ್ಪೆಕ್ಟರ್​​ಗಳಿಲ್ಲದೇ ಬಿಕೋ ಎನ್ನುತ್ತಿರುವ ಧಾರವಾಡ ಠಾಣೆಗಳು

ಮುಗಿಯದ ಪೊಲೀಸ್​​ ವರ್ಗಾವಣೆ ಆಟ: ಇನ್‌ಸ್ಪೆಕ್ಟರ್​​ಗಳಿಲ್ಲದೇ ಬಿಕೋ ಎನ್ನುತ್ತಿರುವ ಧಾರವಾಡ ಠಾಣೆಗಳು

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಸಮಸ್ಯೆ ತೀವ್ರಗೊಂಡಿದ್ದು, ಉಪನಗರ ಮತ್ತು ನಗರ ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳೇ ಇಲ್ಲ. ಪ್ರಮುಖ ಠಾಣೆಗಳಲ್ಲಿ ಅಧಿಕಾರಿಗಳ ಅನುಪಸ್ಥಿತಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಭೀತಿ ಎದುರಾಗಿದೆ.

ಧಾರವಾಡದಲ್ಲೊಂದು ಘೋರ ದುರಂತ:  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲೊಂದು ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲೊಂದು ಘೋರ ದುರಂತ ನಡೆದು ಹೋಗಿದೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ಚಿಕ್ಕ ಮಕ್ಕಳನ್ನು ಸಮೇತ ದಂಪತಿ ಸಹ ದುರಂತ ಅಂತ್ಯಕಂಡಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಈ ಘಟನೆ ಸಂಬಂಧ ಸ್ಥಳೀಯರು ಮಮ್ಮಲ ಮರುಗಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅಷ್ಟಕ್ಕೂ ಆತ್ಮಹತ್ಯೆಗೆ ಕಾರಣವೇನು? ಜೀವ ಕಳೆದುಕೊಳ್ಳುವಷ್ಟು ಏನಾಗಿತ್ತು?

ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ

ಮಕ್ಕಳಲ್ಲಿ ರಕ್ತಹೀನತೆ: ಶಾಕ್​ ಆಗುವಂತಿದೆ ಧಾರವಾಡ ಆರೋಗ್ಯ ಇಲಾಖೆ ಅಂಕಿ ಅಂಶ

ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ರಕ್ತಹೀನತೆ ಕೇಸ್​​ಗಳ ಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿದೆ. 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ, ಜಂಕ್‌ ಫುಡ್‌ ಹಾಗೂ ಮೊಬೈಲ್‌ನ ಅತಿಯಾದ ಬಳಕೆಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ ಅಡಿಯಲ್ಲಿ ಮಕ್ಕಳ ತಪಾಸಣೆ ನಡೆಸುವ ವೇಳೆ ಈ ವಿಷಯ ಬೆಳಕಿಗೆ ಬಂದಿದೆ.

Children’s Day Special: 3D ಪ್ರಿಂಟಿಂಗ್​ ಪ್ರವೀಣೆ 7ನೇ ತರಗತಿಯ ಈ ಬಾಲೆ

Children’s Day Special: 3D ಪ್ರಿಂಟಿಂಗ್​ ಪ್ರವೀಣೆ 7ನೇ ತರಗತಿಯ ಈ ಬಾಲೆ

ಧಾರವಾಡದ 7ನೇ ತರಗತಿ ವಿದ್ಯಾರ್ಥಿನಿ ನೀತಿ ಕುಲಕರ್ಣಿ 3D ಪ್ರಿಂಟಿಂಗ್ ಕಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಶಾಲಾ ಅಧ್ಯಯನದ ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಲ್ಯಾಂಪ್​​ಗಳು, ಆಟಿಕೆಗಳು ಸೇರಿದಂತೆ ಆಕರ್ಷಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಆ ಮೂಲಕ ಸ್ವಂತ ಆದಾಯ ಗಳಿಸುತ್ತಿರುವ ನೀತಿ, ಇತರೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ವಿಜಯಪುರ, ಬಾಗಲಕೋಟೆ ಆಯ್ತು ಈಗ ಕನ್ನೇರಿ ಶ್ರೀಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೂ ನಿರ್ಬಂಧ

ವಿಜಯಪುರ, ಬಾಗಲಕೋಟೆ ಆಯ್ತು ಈಗ ಕನ್ನೇರಿ ಶ್ರೀಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೂ ನಿರ್ಬಂಧ

ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗಾಯತ ಮಠಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ರಾಷ್ಟ್ರವ್ಯಾಪಿ ಸುದ್ಧಿಯಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಪ್ರವೇಶಿಸದಂತೆ ಸ್ವಾಮೀಜಿ ಮೇಲೆ ನಿರ್ದಂಧ ಹೇರಲಾಗಿದೆ. ಅದರಂತೆ ಇದೀಗ ಧಾರವಾಡ ಜಿಲ್ಲೆಗೂ ಸ್ವಾಮೀಜಿ ಬರದಂತೆ ನಿಷೇಧಿಸಲಾಗಿದೆ.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಹೇಳಿದ್ದಿಷ್ಟು

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಹೇಳಿದ್ದಿಷ್ಟು

ಡಿ. 8ಕ್ಕೆ ಬೆಳಗಾವಿಯಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಶಾಸಕರು ಮಾತನಾಡುತ್ತಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ವಿಶೇಷ ದಿನಗಳನ್ನು ನಿಗದಿಪಡಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಶಾಸಕರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಸರಾ, ದೀಪಾವಳಿ ಧಮಾಕಾ: 18.8 ಟನ್ ಸ್ವೀಟ್ ಮಾರಾಟ ಮಾಡಿ ದಾಖಲೆ ಬರೆದ ಧಾರವಾಡ ಕೆಎಂಎಫ್​

ದಸರಾ, ದೀಪಾವಳಿ ಧಮಾಕಾ: 18.8 ಟನ್ ಸ್ವೀಟ್ ಮಾರಾಟ ಮಾಡಿ ದಾಖಲೆ ಬರೆದ ಧಾರವಾಡ ಕೆಎಂಎಫ್​

ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಧಾರವಾಡ ಕೆಎಂಎಫ್ (ಧಾಮುಲ್) 18.8 ಟನ್ ಸಿಹಿ ಉತ್ಪನ್ನಗಳ ಮಾರಾಟ ಮಾಡಿದ್ದು, 80 ಲಕ್ಷ ರೂ. ಆದಾಯ ಗಳಿಸಿದೆ. ಧಾರವಾಡ ಪೇಡಾ, ಮೈಸೂರು ಪಾಕ್ ಸೇರಿದಂತೆ ವಿವಿಧ ನಂದಿನಿ ಸಿಹಿ ಉತ್ಪನ್ನಗಳಿಗೆ ಅಪಾರ ಬೇಡಿಕೆ ಹೆಚ್ಚಾಗಿತ್ತು. ಖಾಸಗಿ ಸಂಸ್ಥೆಗಳೊಂದಿಗೆ ಪೈಪೋಟಿ ನಡೆಸಿ ಕೆಎಂಎಫ್ ಸಾಧನೆ ಮಾಡಿದೆ.

ಸರಕಾರದ ದಿವ್ಯ ನಿರ್ಲಕ್ಷ್ಯ: ಪಾಳುಬಿದ್ದ ಡಾ.ಗಂಗೂಬಾಯಿ ಹಾನಗಲ್ ಮನೆ

ಸರಕಾರದ ದಿವ್ಯ ನಿರ್ಲಕ್ಷ್ಯ: ಪಾಳುಬಿದ್ದ ಡಾ.ಗಂಗೂಬಾಯಿ ಹಾನಗಲ್ ಮನೆ

ಸರಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ಖ್ಯಾತ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮನೆ ಪಾಳು ಬಿದ್ದಿದೆ. ಧಾರವಾಡ ನಗರದ ಶುಕ್ರವಾರ ಪೇಟೆ ಬಡಾವಣೆಯಲ್ಲಿರುವ ನಿವಾಸ ಹಂತ ಹಂತವಾಗಿ ಕುಸಿಯುತ್ತಿದ್ದು, ಇದರ ನಿರ್ವಹಣೆ ನೋಡಿಕೊಳ್ಳಬೇಕಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಸ್ಮಾರಕವನ್ನು ಮರತೇ ಬಿಟ್ಟಿದೆ ಎಂಬುದು ಸ್ಥಳೀಯರ ಆರೋಪ.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು

ಇತ್ತೀಚಿಗೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಕುರಾನ್ ಪಠಣ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಆ ವಿಚಾರ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಕುರಾನ್ ಪಠಿಸಿದ ಜಾಗದಲ್ಲಿ ಹೋಮ ಮಾಡಲು ಬಿಜೆಪಿ ಸಜ್ಜಾಗಿದ್ದು, ವಿವಾದ ತೀವ್ರಗೊಳ್ಳುವ ಲಕ್ಷಣ ಕಾಣಿಸಿದೆ.

ಜಾತಿಗಣತಿ: ‘ಸಾಮಾನ್ಯ ಬ್ರಾಹ್ಮಣ’ ಆಯ್ಕೆ ಇಲ್ಲದ್ದಕ್ಕೆ ಧಾರವಾಡದಲ್ಲಿ ಆಕ್ಷೇಪ

ಜಾತಿಗಣತಿ: ‘ಸಾಮಾನ್ಯ ಬ್ರಾಹ್ಮಣ’ ಆಯ್ಕೆ ಇಲ್ಲದ್ದಕ್ಕೆ ಧಾರವಾಡದಲ್ಲಿ ಆಕ್ಷೇಪ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ 'ಸಾಮಾನ್ಯ ಬ್ರಾಹ್ಮಣ' ಆಯ್ಕೆ ಇಲ್ಲದ್ದಕ್ಕೆ ಆಕ್ಷೇಪ ಕೇಳಿಬಂದಿದೆ. ಕಂದಾಯ ಇಲಾಖೆಯಿಂದ ನೀಡಲಾಗುವ ಜಾತಿ ಪ್ರಮಾಣಪತ್ರದಲ್ಲಿ ಬ್ರಾಹ್ಮಣ ಸಮುದಾಯದವರನ್ನ 'ಸಾಮಾನ್ಯ ಬ್ರಾಹ್ಮಣ' ಎಂದು ನಮೂದಿಸಲಾಗುತ್ತದೆ. ಆದರೆ ಗಣತಿ ವೇಳೆ ಆ ಆಯ್ಕೆ ಯಾಕಿಲ್ಲ ಎಂಬ ಪ್ರಶ್ನೆ ಕೇಳಿಬರತೊಡಗಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ