ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ ‘ಬ್ರಾಹ್ಮಣ ಕುರುಬ’ ಮತ್ತು ‘ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್’ ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.
ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ: ಮಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಾಯಿ
ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.
- Narasimha Murti Pyati
- Updated on: Jan 28, 2026
- 10:50 pm
Dharwad: ನೇಣು ಬಿಗಿದುಕೊಂಡು ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ
ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಡಿಮ್ಹಾನ್ಸ್ನಲ್ಲಿ ಸೈಕಿಯಾಟ್ರಿಕ್ ಪಿಜಿ ಮಾಡುತ್ತಿದ್ದ 24 ವರ್ಷದ ಯುವತಿ ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಇಲ್ಲಿ ವ್ಯಾಸಂಗ ಮಾಡಲು ಆಸಕ್ತಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಯ ಸತ್ಯಾಸತ್ಯತೆ ಹೊರಬರಬೇಕಿದೆ.
- Narasimha Murti Pyati
- Updated on: Jan 28, 2026
- 10:32 am
ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಧಾರವಾಡದ ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಫಲಾನುಭವಿಗಳಿಗೆ ಜಿ ಪ್ಲಸ್ ಮಾದರಿಯ ಮನೆಗಳನ್ನು ನೀಡಿರುವ ಸರ್ಕಾರ, ಬಡಾವಣೆಗೆ ಮೂಲ ಸೌಯರ್ಕ ಒದಗಿಸದೇ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ಇಲ್ಲಿ ಬಂದು ನೆಲೆಸಲು ಜನ ಹಿಂದೇಟು ಹಾಕುತ್ತಿದ್ದು, ಬಹುತೇಕ ಮನೆಗಳು ಖಾಲಿ ಬಿದ್ದಿವೆ. ಚರಂಡಿ ನಿರ್ಮಿಸದೇ ಹಕ್ಕುಪತ್ರ ವಿತರಣೆ ಮಾಡಲಾಗಿದ್ದು, ಕುಡಿಯೋ ನೀರಿನ ಸಮಸ್ಯೆಯೂ ಇಲ್ಲಿದೆ ಎನ್ನಲಾಗಿದೆ.
- Narasimha Murti Pyati
- Updated on: Jan 23, 2026
- 1:57 pm
ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ!
Dharwad Zakia Mulla Murder Case: ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿಯೊಂದರ ಬಳಿ ಪತ್ತೆಯಾಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಮದುವೆಯಾಗಬೇಕಿದ್ದವನೇ ಆಕೆಯೊಂದಿಗೆ ಸಂಜೆವರೆಗೂ ಸುತ್ತಾಡಿ ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ.
- Narasimha Murti Pyati
- Updated on: Jan 22, 2026
- 3:04 pm
ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್ ಟ್ವಿಸ್ಟ್, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು
2025 ನವೆಂಬರ್ 11 ರಂದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಬಾಜಾನ್ ಚಿನ್ನೂರು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೋಷಕರು ಸೊಸೆಯ ವಿರುದ್ಧ ಕೊಲೆಯ ಆರೋಪ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದಲ್ಲಿ ಹೂತಿದ್ದ ಶವವನ್ನು ಹೊರತೆಗೆಯಲಾಗಿದೆ. ಮರಣೋತ್ತರ ವರದಿ ಬಂದ ನಂತರ ಇದು ಕೊಲೆಯೋ ಅಥವಾ ಹೃದಯಾಘಾತವೋ ಎಂಬುದು ಬಹಿರಂಗವಾಗಲಿದ್ದು, ಸತ್ಯ ತಿಳಿಯಲು ತನಿಖೆ ಮುಂದುವರಿದಿದೆ.
- Narasimha Murti Pyati
- Updated on: Jan 21, 2026
- 5:42 pm
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್?
ಧಾರವಾಡ ಹೊರವಲಯದಲ್ಲಿ 19 ವರ್ಷದ ಜಕಿಯಾ ಮುಲ್ಲಾ ಎಂಬ ಯುವತಿಯ ಶವ ಪತ್ತೆಯಾಗಿದೆ. ಮನೆಯಿಂದ ಹೊರ ಹೋಗಿದ್ದ ಯುವತಿ ಮರುದಿನ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಮರತದೇಹ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಎರಡು ಠಾಣೆಗಳ ವ್ಯಾಪ್ತಿಯ ಬಗ್ಗೆ ಗೊಂದಲ ಹಿನ್ನೆಲೆ ಧಾರವಾಡ ಗ್ರಾಮೀಣ ಮತ್ತು ವಿದ್ಯಾಗಿರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Narasimha Murti Pyati
- Updated on: Jan 21, 2026
- 3:28 pm
ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್ಗಳ ಅಂದ
ವಾಯುವ್ಯ ಸಾರಿಗೆ ಸಂಸ್ಥೆಯು ಆದಾಯಕ್ಕಾಗಿ ಧಾರವಾಡ-ಬೆಳಗಾವಿ ಬಸ್ಗಳಿಗೆ ಕಪ್ಪು ಜಾಹೀರಾತು ಸ್ಟಿಕ್ಕರ್ಗಳನ್ನು ಅಂಟಿಸಿ ವಿರೂಪಗೊಳಿಸಿದೆ. ಇದರಿಂದ ಬಸ್ಗಳ ಸೌಂದರ್ಯ ಕೆಟ್ಟು, ರಾತ್ರಿ ಕಾಣಿಸದೆ ಅಪಘಾತ ಭೀತಿ ಹೆಚ್ಚಿದೆ. ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದರೆ ಸಾರಿಗೆ ಸಂಸ್ಥೆ ಮಾತ್ರ ನಿಯಮಬದ್ಧವೆಂದು ಸಮರ್ಥಿಸಿಕೊಂಡಿದೆ.
- Narasimha Murti Pyati
- Updated on: Jan 20, 2026
- 7:55 pm
ಮತ್ತೆ ಸಂಕಷ್ಟದಲ್ಲಿ ಧಾರವಾಡ ಮಾವು ಬೆಳೆಗಾರರು: ಹಣ್ಣಿನ ರಾಜನಿಗೆ ಕಾಡುತ್ತಿದೆ ಭಯಾನಕ ರೋಗ
ಧಾರವಾಡ ಜಿಲ್ಲೆಯ ಮಾವು ಬೆಳೆಗಾರರು ಹಲವು ವರ್ಷಗಳಿಂದ ನಷ್ಟ ಎದುರಿಸುತ್ತಿದ್ದಾರೆ. ಈ ಬಾರಿ ಡಿಸೆಂಬರ್ನಲ್ಲಿ ಉತ್ತಮ ಹೂವು ಬಿಟ್ಟಿದ್ದರಿಂದ ಬಂಪರ್ ಬೆಳೆಯ ನಿರೀಕ್ಷೆ ಮೂಡಿತ್ತು. ಆದರೆ ಜನವರಿಯಲ್ಲಿ ಅಕಾಲಿಕ ಮಳೆ ಮತ್ತು ತಾಪಮಾನ ಕುಸಿತದಿಂದ ಹೂವುಗಳಿಗೆ ರೋಗದ ಭೀತಿ ಎದುರಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿದ್ದ ರೈತರಿಗೆ ಮತ್ತೆ ನಿರಾಸೆ ಕಾಡಿದ್ದು, ಬೆಳೆ ನಷ್ಟದ ಆತಂಕದಲ್ಲಿದ್ದಾರೆ.
- Narasimha Murti Pyati
- Updated on: Jan 16, 2026
- 5:42 pm
ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ
Makara Sankranti: ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಧಾರವಾಡದಲ್ಲಿ ಮಕರ ಸಂಕ್ರಾಂತಿಯನ್ನು ಮಹಿಳೆಯರು ಅತೀ ಸಂಭ್ರಮದಿಂದ ಆಚರಿಸಿದರು. ಬಗೆ ಬಗೆಯ ಅಡುಗೆ ಸವಿದು, ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಜಾನಪದ ಸಂಶೋಧನಾ ಕೇಂದ್ರದ ಸದಸ್ಯರ ಮಕರ ಸಂಕ್ರಾಂತಿ ಸಡಗರ ಹೀಗಿತ್ತು ಇಲ್ಲಿವೆ ಫೋಟೋಸ್.
- Narasimha Murti Pyati
- Updated on: Jan 14, 2026
- 5:50 pm
ಧಾರವಾಡದಲ್ಲಿ ಕಿಡ್ನ್ಯಾಪ್ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ
ಧಾರವಾಡದ ಕಮಲಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಅಪಹರಣಕ್ಕೊಳಗಾಗಿದ್ದ ಮಕ್ಕಳಿಬ್ಬರು ದಾಂಡೇಲಿ ಬಳಿ ಪತ್ತೆ ಆಗಿದ್ದಾರೆ. ಪರಿಚಿತ ವ್ಯಕ್ತಿ ಮಕ್ಕಳನ್ನು ಬೈಕ್ನಲ್ಲಿ ಅಪಹರಿಸಿದ್ದ. ಆದರೆ ದಾಂಡೇಲಿಗೆ ತೆರಳುವಾಗ ಸಂಭವಿಸಿದ ಅಪಘಾತದಿಂದ ಇದೀಗ ಮಕ್ಕಳು ಪತ್ತೆಯಾಗಿದ್ದಾರೆ. ಸದ್ಯ ಇಬ್ಬರು ಮಕ್ಕಳು ಪೊಲೀಸರ ವಶದಲ್ಲಿದ್ದು, ಸುರಕ್ಷಿತರಾಗಿದ್ದಾರೆ.
- Narasimha Murti Pyati
- Updated on: Jan 12, 2026
- 8:21 pm
ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ!
ಆ ಅಕ್ಕಿ ಒಲೆ ಮೇಲೆ ಕುದಿಯುತ್ತಿದ್ದರೆ ಓಣಿಯ ತುಂಬ ಘಮ ಪಸರಿಸುತ್ತಿತ್ತು. ಹೆಣ್ಣು ಮಕ್ಕಳಿಗೆ ಉಡಿಯಕ್ಕಿ ಹಾಕಿದರೆ ಒಡಲು ತುಂಬುತ್ತಿತ್ತು. ರೋಗ ರುಜಿನಕ್ಕೆ ಈ ಅಕ್ಕಿಯ ಪಾಯಸವೇ ಔಷಧಿ! ಈ ಭತ್ತದ ಹುಲ್ಲು ತಿಂದ ಗೂಳಿಗಳು ಕಾದಾಟಕ್ಕೆ ಕಾಲು ಕೆದರುತ್ತಿದ್ದವು. ಆದರೆ ಇದೀಗ ಈ ಭತ್ತವೇ ಕಣ್ಣರೆಯಾಗಿದೆ. ಧಾರವಾಡ ಮೂಲದ ಆ ಅಕ್ಕಿ ಇದೀಗ ಕಾಣುತ್ತಲೇ ಇಲ್ಲ.
- Narasimha Murti Pyati
- Updated on: Jan 12, 2026
- 7:38 am
ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ
ಭೂಸ್ವಾಧೀನ ಪರಿಹಾರ ಬಾಕಿ ಇರುವ ಹಿನ್ನೆಲೆಯಲ್ಲಿ ಧಾರವಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಮತ್ತು ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಗಿದೆ. ಇದೇ ರೀತಿ ಹಾಸನದಲ್ಲಿ ಯಗಚಿ ನಾಲೆಗಾಗಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡದ ಕಾರಣ ಜಿಲ್ಲಾಧಿಕಾರಿಗಳ ಕಾರನ್ನು ಕೋರ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
- Narasimha Murti Pyati
- Updated on: Jan 9, 2026
- 8:04 pm