ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು
ದೊಡ್ಡಬಳ್ಳಾಪುರದ ನಿವೃತ್ತ HAL ಉದ್ಯೋಗಿಯೊಬ್ಬರ 40 ಎಕರೆ ಜಮೀನಿಗೆ ಭೂಗಳ್ಳರು ನಕಲಿ ಮರಣ ಪತ್ರ ಸೃಷ್ಟಿಸಿ ಕಬಳಿಸಲು ಯತ್ನಿಸಿದ್ದಾರೆ. ಜೀವಂತವಿದ್ದವರನ್ನು ಸತ್ತಿದ್ದಾರೆ ಎಂದು ನಕಲಿ ದಾಖಲೆ ಸೃಷ್ಟಿಸಲಾಗಿದೆ. ಇನ್ನು ಈ ಅಕ್ರಮ ಪ್ರಶ್ನಿಸಲು ಹೋದಾಗ ಅಧಿಕಾರಿಗಳು ಲಕ್ಷಾಂತರ ರೂ ಲಂಚಕ್ಕೆ ಬೇಡಿಕೆಯಿಟ್ಟಿರು ಗಭೀರ ಆರೋಪಗಳು ಕೇಳಿಬಂದಿವೆ.
- Naveen Kumar
- Updated on: Apr 27, 2026
- 6:42 pm
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿರುವ ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಘಟನೆ ನಡೆದಿದೆ. ಸಾವಿರಾರೂ ಸಿಬ್ಬಂದಿ ಕೆಲಸ ಮಾಡುವ ಕಂಪನಿಯಲ್ಲಿ ನಡೆದ ಆತಂಕಕಾರಿ ಘಟನೆ ಬಗ್ಗೆ ಕಂಪನಿ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Naveen Kumar
- Updated on: Apr 22, 2026
- 9:05 pm
‘ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್ ಹಾಕಿದ್ದಾರೆ, ಅದಿಕ್ಕೆ ಹೀಗೆ ಮಾಡಿದೆ’: 9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ!
ದೇವನಹಳ್ಳಿಯಲ್ಲಿ ಯುವಕ ಆನಂದ್ 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಆತ, ತನಗೆ ನ್ಯಾಯ ಬೇಕೆಂದು ಆಗ್ರಹಿಸಿ ಈ ಕೆಲಸಕ್ಕೆ ಮುಂದಾಗಿದ್ದ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಏಳು ಗಂಟೆಗಳ ಕಾರ್ಯಾಚರಣೆ ನಡೆಸಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿ ವಶಕ್ಕೆ ಪಡೆದಿದ್ದಾರೆ.
- Naveen Kumar
- Updated on: Apr 22, 2026
- 9:59 am
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ
ಪೋಕ್ಸೋ ಪ್ರಕರಣದ ಆರೋಪಿ ಆನಂದ್ ಎಂಬಾತ, ತನಗೆ ನ್ಯಾಯ ಬೇಕೆಂದು ಅಪಾರ್ಟ್ಮೆಂಟ್ ಮೇಲೇರಿ ಹೈಡ್ರಾಮಾ ಮಾಡಿರುವ ಘಟನೆ ದೇವನಹಳ್ಳಿ ಬೈಪಾಸ್ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಸ್ಥಳಕ್ಕೆ ಡಿಸಿ ಬರಬೇಕೆಂದು ಪಟ್ಟು ಹಿಡಿದಿರುವ ಈತ, ಪೊಲೀಸರು ಹಾಗೂ ತಾಯಿಯ ಮನವೊಲಿಕೆಯ ಪ್ರಯತ್ನಗಳಿಗೂ ಬಗ್ಗದೆ ಹಠ ಮುಂದುವರಿಸಿದ ಪ್ರಸಂಗ ನಡೆದಿದೆ.
- Naveen Kumar
- Updated on: Apr 21, 2026
- 4:36 pm
ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ: 8 ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ ತೆರವು
ಪದೇಪದೇ ಸ್ಲೀಪರ್ ಕೋಚ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ದೇವನಹಳ್ಳಿ ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಂಟು ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ಗಳನ್ನು ತೆರವುಗೊಳಿಸಲಾಗಿದೆ. ರಾಣಿ ಕ್ರಾಸ್ ಬಳಿ ಬಸ್ಗಳನ್ನು ನಿಲ್ಲಿಸಿ ಈ ಕಾರ್ಯ ನಡೆಸಲಾಗಿದ್ದು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
- Naveen Kumar
- Updated on: Apr 21, 2026
- 12:40 pm
ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ
ಇಂಡಿಗೋ ವಿಮಾನ ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ ದೆಹಲಿಗೆ ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ - ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್ಗೆ ಶಿಫ್ಟ್ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ ಹಾಗೂ ಸಿಬ್ಬಂದಿ ಕೆಲಸಕ್ಕೆ ಇತರೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Naveen Kumar
- Updated on: Apr 19, 2026
- 8:36 pm
ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು” ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ?
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಿಯತಮೆ ಪವಿತ್ರಾಳ ಪತಿಯಾದ ಶಿವಶಂಕರ್ನನ್ನು ಹಂತಕ ಅನಿಲ್ ಕುಮಾರ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪ್ರಿಯಕರನೊಂದಿಗೆ ಸಂಬಂಧ ಮುರಿದುಕೊಳ್ಳಲು ಪವಿತ್ರಾ ಮುಂದಾದಾಗ, ಅನಿಲ್ ಕುಮಾರ್ ಶಿವಶಂಕರ್ನನ್ನು ದಾರಿ ತಪ್ಪೆಂದು ಭಾವಿಸಿ ಕೊಲೆಗೆ ಸಂಚು ರೂಪಿಸಿದ್ದ. ಪೊಲೀಸರು ಸದ್ಯ ಅನಿಲ್ ಕುಮಾರ್ನನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ.
- Naveen Kumar
- Updated on: Apr 18, 2026
- 7:58 pm
ಕಲ್ಚರ್ ಫೆಸ್ಟ್ನಲ್ಲಿ ಮಿಂದೆದ್ದ ಪ್ರೆಸಿಡೆನ್ಸಿ ವಿವಿಯ ವಿದ್ಯಾರ್ಥಿಗಳು: ಇಲ್ಲಿವೆ ಫೋಟೋಸ್
ಬೆಂಗಳೂರಿನ ಪ್ರೆಸಿಡೆನ್ಸಿ ವಿವಿಯಲ್ಲಿ ನಡೆದ ಎರಡು ದಿನಗಳ ಇನ್ವೆನ್ಸಿಯಾ ಕಲ್ಚರಲ್ ಫೆಸ್ಟ್ ಯುವಜನರ ಗಮನ ಸೆಳೆಯಿತು. ಮಳೆಯ ನಡುವೆಯೂ ಬಾಲಿವುಡ್ ಗಾಯಕ ಜಾವಿದ್ ಆಲಿ ಸಂಗೀತಕ್ಕೆ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ನಟಿ ಶ್ರೀಲೀಲಾ ಸೇರಿದಂತೆ ಹಲವು ಭಾಗವಹಿಸಿ ಯುವಜನರನ್ನು ರಂಜಿಸಿದರು. ಸಂಗೀತ, ನೃತ್ಯ, ರಂಗಭೂಮಿ ಒಳಗೊಂಡ ಈ ಉತ್ಸವವು ಕ್ಯಾಂಪಸ್ನಲ್ಲಿ ಉತ್ಸಾಹದ ವಾತಾವರಣ ಸೃಷ್ಟಿಸಿತು.
- Naveen Kumar
- Updated on: Apr 11, 2026
- 9:30 pm
ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ರಾಜ್ಯಪಾಲರಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿಯುತ್ತಿದ್ದ ಮಳೆ ಮತ್ತು ಲ್ಯಾಂಡಿಂಗ್ ಕ್ಲಿಯರೆನ್ಸ್ ಸಿಗದ ಕಾರಣ ವಿಮಾನವು ಕೆಐಎಬಿಯಲ್ಲಿ ಇಳಿಯಲು ಸಾಧ್ಯವಾಗದೆ ಮಂಗಳೂರಿಗೆ ಮರಳಿತ್ತು. ಇದೀಗ ಮತ್ತೊಮ್ಮೆ ರಾಜ್ಯಪಾಲರ ವಿಮಾನ ಬೆಂಗಳೂರಿಗೆ ಬರಲು ಸಿದ್ಧವಾಗಿದೆ.
- Naveen Kumar
- Updated on: Apr 10, 2026
- 9:54 pm
ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್ನಲ್ಲಿ ಹುಸಿ ಬಾಂಬ್ ಬೆದರಿಕೆ!
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಆತಂಕ ಸೃಷ್ಟಿಸಿತು. ವಿಮಾನದ ಶೌಚಾಲಯದಲ್ಲಿ ಪತ್ತೆಯಾದ ಟಿಷ್ಯೂ ಪೇಪರ್ನಲ್ಲಿ ಬಾಂಬ್ ಸಂದೇಶವಿತ್ತು. 183 ಪ್ರಯಾಣಿಕರನ್ನು ಸ್ಥಳಾಂತರಿಸಿದ ನಂತರ, ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Naveen Kumar
- Updated on: Apr 5, 2026
- 2:14 pm
ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಸಹೋದರ!: ಆರೋಪಿ ವಿರುದ್ಧ ಕೇಸ್ ದಾಖಲು
ದೇವನಹಳ್ಳಿಯ ರೆಡ್ಡಿಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಅಣ್ಣನ ಮೇಲಿನ ಕೋಪಕ್ಕೆ ಮಲಸಹೋದರ ಆತನ ಸಾಕು ನಾಯಿಗೆ ಗುಂಡಿಟ್ಟು ಕೊಂದಿದ್ದಾನೆ. ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ನಾಯಿ ಓಡಾಡುತ್ತಿರುತ್ತೆ ಎಂಬ ಕ್ಷುಲ್ಲಕ ಆರೋಪ ಮಾಡಿ ಫೈರಿಂಗ್ ನಡೆಸಲಾಗಿದ್ದು, ಸ್ಥಳದಲ್ಲೇ ಶ್ವಾನ ಪ್ರಾಣಬಿಟ್ಟಿದೆ. ಘಟನೆ ಸಂಬಂಧ ಆರೋಪಿ ಹಾಗೂ ಆತನ ಪತ್ನಿ ಮೇಲೆ FIR ದಾಖಲಾಗಿದೆ.
- Naveen Kumar
- Updated on: Apr 3, 2026
- 6:24 pm
ಇನ್ಫೋಸಿಸ್ನ ಹಿರಿಯ ಅಧಿಕಾರಿಗಳಂತೆ ನಟಿಸಿ 6 ಕೋಟಿ ರೂ. ಪಂಗನಾಮ! ನಾಲ್ವರ ಮೇಲೆ ಎಫ್ಐಆರ್
ಬೆಂಗಳೂರಿನಲ್ಲಿ ಇನ್ಫೋಸಿಸ್ ಹಿರಿಯ ಅಧಿಕಾರಿಗಳ ಸೋಗಿನಲ್ಲಿ 6.3 ಕೋಟಿ ರೂ. ವಂಚನೆ ನಡೆದಿದೆ. ಮೈಸೂರು ಮರ್ಕಂಟೈಲ್ ಕಂಪನಿಗೆ ಸಿಎಸ್ಆರ್ ಅನುದಾನದ ಭರವಸೆ ನೀಡಿ ಆರೋಪಿಗಳು ನಕಲಿ ಪರಿಶೀಲನೆ, ಅರ್ನೆಸ್ಟ್ ಮನಿ ಡೆಪಾಸಿಟ್ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
- Naveen Kumar
- Updated on: Apr 3, 2026
- 2:48 pm