ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.
’10 ಲಕ್ಷ ಕೊಟ್ಟರೆ ಒಂದು ಕೋಟಿ ಕೊಡ್ತೀವಿ’: ಕೋಟಿ ಕೋಟಿ ಆಮಿಷ ತೋರಿಸಿ ವಂಚಿಸಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ದಿವಂಗತ ಜಯಲಲಿತಾ ಬೇನಾಮಿ ಆಸ್ತಿ ಹೆಸರಿನಲ್ಲಿ 10 ಲಕ್ಷಕ್ಕೆ 1 ಕೋಟಿ ನೀಡುವ ಆಮಿಷವೊಡ್ಡಿ 4.5 ಕೋಟಿ ರೂ. ವಂಚಿಸಿದ್ದ ಖದೀಮರ ಗ್ಯಾಂಗ್ ಅನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಕಳೆದ ಹಲವು ವರ್ಷಗಳಿಂದ ಸ್ನೇಹಿತರು ಮತ್ತು ಸ್ಥಳಿಯರನ್ನ ನಂಬಿಸಿದ್ದ. ವಿಡಿಯೋ ಕಾಲ್ನಲ್ಲಿ ಮೂಟೆಗಳಲ್ಲಿ ಹಣ ತೋರಿಸಿ ಜನರ ವಿಶ್ವಾಸಗಳಿದ್ದ ಈತ ಹೊಸಕೋಟೆ ಸುತ್ತಮುತ್ತ 4.5 ಕೋಟಿಗೂ ಅಧಿಕ ಹಣ ಸಂಗ್ರಹಿಸಿದ್ದ ಎನ್ನಲಾಗಿದೆ.
- Naveen Kumar
- Updated on: Sep 18, 2026
- 10:57 am
ಸತೀಶ್ ಜಾರಕಿಹೊಳಿ ಮನೆ ಮೇಲೆ ರೇಡ್ ಬೆನ್ನಲ್ಲೇ ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಇ.ಡಿ. ನಿರ್ದೇಶಕ ರಾಹುಲ್ ನವೀನ್ ಬೆಂಗಳೂರಿಗೆ ಆಗಮಿಸಿದ್ದು, ಹಲವು ಮಹತ್ವದ ಇ.ಡಿ. ದಾಳಿ ಪ್ರಕರಣಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ. ಮುಖ್ಯವಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದ ಇ.ಡಿ. ದಾಳಿ ಪ್ರಕರಣದ ತನಿಖೆಯ ಪ್ರಗತಿಯ ಕುರಿತು ಅವರು ಸಭೆ ನಡೆಸುವ ನಿರೀಕ್ಷೆಯಿದೆ.
- Naveen Kumar
- Updated on: Sep 12, 2026
- 9:11 pm
ಕೆಂಪೇಗೌಡ ಏರ್ಪೋರ್ಟ್ ಟೋಲ್ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ: ಪ್ರತ್ಯೇಕ ಲೇನ್ಗೆ ಹೆಚ್ಚಿದ ಒತ್ತಾಯ
ದೇವರಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ ಟೋಲ್ ಪ್ಲಾಜಾದಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳಿಗೆ ಪ್ರತ್ಯೇಕ ಲೇನ್ ಇಲ್ಲದ ಕಾರಣ ರೋಗಿಗಳು ಹಾಗೂ ಚಾಲಕರು ನಿತ್ಯ ಪರದಾಡುತ್ತಿದ್ದಾರೆ. ವಿಐಪಿ ವಾಹನಗಳ ಲೇನ್ನಲ್ಲಿ ಸಂಚರಿಸಬೇಕಾದ ಅನಿವಾರ್ಯತೆಯಿಂದ ಅಪಘಾತಗಳು ಸಂಭವಿಸುತ್ತಿದ್ದು, ಪ್ರತ್ಯೇಕ ಲೇನ್ ವ್ಯವಸ್ಥೆ ಮಾಡುವಂತೆ ಆಕ್ರೋಶ ವ್ಯಕ್ತವಾಗಿದೆ.
- Naveen Kumar
- Updated on: Sep 11, 2026
- 1:14 pm
ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಪಕ್ಷದ ಹಿರಿಯ ನಾಯಕರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು, ಗ್ಯಾರಂಟಿ ಯೋಜನೆಗಳು ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
- Naveen Kumar
- Updated on: Sep 10, 2026
- 6:02 pm
ಲೋನ್ ಕಟ್ಟದ್ದಕ್ಕೆ ಬ್ಯಾಂಕ್ನಿಂದ ಕಾಲೇಜ್ ಸೀಜ್: ಆಯುರ್ವೇದಿಕ್ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ, ಅಹೋರಾತ್ರಿ ಧರಣಿ
ಬ್ಯಾಂಕ್ ಲೋನ್ ಕಟ್ಟದ್ದಕ್ಕೆ ದೊಡ್ಡಬಳ್ಳಾಪುರದ ಆತ್ರೇಯ ಆಯುರ್ವೇದ ಕಾಲೇಜ್ನ್ನು ಸೀಜ್ ಮಾಡಿರುವಂತಹ ಘಟನೆ ನಡೆದಿದೆ. ಇತ್ತ ನೂರಾರು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಎರಡು ತಿಂಗಳಿಂದ ಪಾಠವಿಲ್ಲದೆ, ಕ್ಯಾಂಪಸ್ ಪ್ರವೇಶವೂ ಇಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾಡಳಿತ ಹಾಗೂ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
- Naveen Kumar
- Updated on: Sep 9, 2026
- 9:23 pm
ಮತ್ತೆ ಬಂದ ಬ್ಲಾಕ್ ಪಲ್ಸರ್ ಖದೀಮರು: ಬೆಂಗಳೂರು ಹೊರವಲಯದಲ್ಲಿ ಸರಣಿ ಸರಗಳ್ಳತನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಬ್ಲಾಕ್ ಪಲ್ಸರ್ ಬೈಕ್ನಲ್ಲಿ ಬಂದ ಸರಗಳ್ಳರು ಸರಣಿ ಅಪರಾಧಗಳನ್ನು ಎಸಗುತ್ತಿದ್ದಾರೆ. ನಂದಗುಡಿ, ಸೂಲಿಬೆಲೆ, ವಿಜಯಪುರ, ಹೊಸಕೋಟೆ, ದೇವನಹಳ್ಳಿ ಪ್ರದೇಶಗಳಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿ ಮಾಂಗಲ್ಯ ಸರ ಕಳ್ಳತನ ಮಾಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.
- Naveen Kumar
- Updated on: Sep 9, 2026
- 5:54 pm
ದೊಡ್ಡಬಳ್ಳಾಪುರದಲ್ಲಿ ಅಪರೂಪದ ಘಟನೆ: ಒಂದೇ ಬಾರಿಗೆ 4 ಮರಿಗಳಿಗೆ ಜನ್ಮ ನೀಡಿದ ನಾಟಿ ಕುರಿ
ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಗ್ರಾಮದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರೈತ ಗೋಪಾಲಕೃಷ್ಣ ಅವರ ನಾಟಿ ಕುರಿಯು ಒಂದೇ ಸೂಲಿನಲ್ಲಿ ನಾಲ್ಕು ಆರೋಗ್ಯಕರ ಮರಿಗಳಿಗೆ ಜನ್ಮ ನೀಡಿದೆ. ಸಾಮಾನ್ಯವಾಗಿ ಕುರಿಗಳು ಒಂದೋ ಎರಡೋ ಮರಿಗಳಿಗೆ ಜನ್ಮ ನೀಡುತ್ತವೆ. ಈ ವಿಶೇಷ ಪ್ರಸವ ಸ್ಥಳೀಯ ಕುರಿ ಸಾಕಾಣಿಕೆದಾರರು ಮತ್ತು ಗ್ರಾಮಸ್ಥರಲ್ಲಿ ಅಚ್ಚರಿ ಹಾಗೂ ಸಂತಸ ಮೂಡಿಸಿದೆ.
- Naveen Kumar
- Updated on: Sep 8, 2026
- 9:39 am
ದೇವೇಗೌಡ್ರು ಬೇಕಿದ್ರೆ ಕೋರ್ಟ್ಗೆ ಹೋಗಲಿ, ಉಪವಾಸ ಮಾಡ್ಲಿ: ನೈಸ್ʼ ಪತ್ರಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರಿನ ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿವೆ. ಯಾರು ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರು ಟೋಲ್ ಕಟ್ಟಲು ಹಿಂದೇಟು ಹಾಕುತ್ತಿದ್ದು, ಇದರಿಂದ ಟೋಲ್ ಸಿಬ್ಬಂದಿ ಜನರ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಎಂಟ್ರಿ ಕೊಟ್ಟಿರುವ ದೇವೇಗೌಡ್ರಿಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
- Naveen Kumar
- Updated on: Sep 7, 2026
- 7:24 pm
ತಪ್ಪಿದ ಭಾರಿ ದುರಂತ: ಬೆಂಗಳೂರಿನಲ್ಲಿ ವರ್ಜಿನ್ ಅಟ್ಲಾಂಟಿಕ್ ವಿಮಾನ ತುರ್ತು ಭೂಸ್ಪರ್ಶ
ತಾಂತ್ರಿಕ ದೋಷದಿಂದಾಗಿ ಲಂಡನ್ಗೆ ಹೊರಟಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 270 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ದೋಷ ಕಂಡುಕೊಂಡಿತು. ಅರ್ಧ ಗಂಟೆಗೂ ಹೆಚ್ಚು ಕಾಲ ತುಮಕೂರು ಸುತ್ತಾ ಮುತ್ತ ಹಾರಾಟ ನಡೆಸಿ ಸುರಕ್ಷಿತವಾಗಿ ಇಳಿದಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
- Naveen Kumar
- Updated on: Sep 6, 2026
- 1:19 pm
ಸಚಿವ ಕೆ.ಹೆಚ್. ಮುನಿಯಪ್ಪ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆ ರೋಷಾವೇಶ: ಕಾರಣ ಇಲ್ಲಿದೆ
ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರ್ಯಕ್ರಮದಲ್ಲಿ ತಸ್ಲೀಮ್ ಎಂಬ ಮುಸ್ಲಿಂ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ಮೂಲಭೂತ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿರುವುದನ್ನು ಖಂಡಿಸಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಜನರ ಸಮಸ್ಯೆಗಳನ್ನು ಆಲಿಸದ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಿದ್ದಾರೆ. ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
- Naveen Kumar
- Updated on: Sep 6, 2026
- 11:13 am
ಮೊದಲ ಬಾರಿಗೆ ಫ್ಲೈಟ್ ಏರಿದ ಸರ್ಕಾರಿ ಶಾಲಾ ಮಕ್ಕಳು!
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಮಲ್ಲೇಪುರ ಸರ್ಕಾರಿ ಶಾಲೆ ಹಾಗೂ ಅನಾಥಾಶ್ರಮದ 200ಕ್ಕೂ ಹೆಚ್ಚು ಮಕ್ಕಳು ಮೊದಲ ಬಾರಿಗೆ ವಿಮಾನವೇರಿ ಮುಂಬೈಗೆ ಪ್ರವಾಸ ಬೆಳೆಸಿದ್ದಾರೆ. ಉದ್ಯಮಿ ಎಂ.ಪಿ. ಗಿರೀಶ್ ತಮ್ಮ ವೈಯಕ್ತಿಕ ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ತಿಳಿಸುವ ಉದ್ದೇಶದಿಂದ ಈ ಪ್ರವಾಸ ಆಯೋಜಿಸಿದ್ದು, ಮಕ್ಕಳು ಮತ್ತು ಶಿಕ್ಷಕರು ಚೈತ್ಯಭೂಮಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸಲಿದ್ದಾರೆ.
- Naveen Kumar
- Updated on: Sep 5, 2026
- 1:36 pm
ಏರ್ಪೋರ್ಟ್ ಫ್ಲೈಓವರ್ ಮೇಲೆ ಬೈಕ್ ನಿರ್ಬಂಧ ಬೆನ್ನಲ್ಲೇ ರೈಡರ್ಸ್ ಹುಚ್ಚಾಟ: ಮಧ್ಯರಾತ್ರಿ ರೈಡಿಂಗ್, ಪೊಲೀಸರ ಹದ್ದಿನ ಕಣ್ಣು
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫ್ಲೈಓವರ್ ಮೇಲೆ ನಾಳೆಯಿಂದ ಬೈಕ್ ಸಂಚಾರ ನಿಷೇಧಿಸಲಾಗುತ್ತಿದೆ. ಹೀಗಾಗಿ ರಾತ್ರಿ ವೇಳೆ ಏರ್ಪೋರ್ಟ್ನಲ್ಲಿ ಕೆಲ ಬೈಕ್ ರೈಡರ್ಗಳು ರಾತ್ರಿ ವೇಳೆ ರೈಡಿಂಗ್ ಮೂಲಕ ಹುಚ್ಚಾಟ ಮೆರೆದು ಕಿರಿಕಿರಿ ಉಂಟುಮಾಡಿದ್ದಾರೆ. ಈ ಕುರಿತಾಗಿ ವಿಡಿಯೋಗಳು ವೈರಲ್ ಆಗಿವೆ.
- Naveen Kumar
- Updated on: Sep 3, 2026
- 5:52 pm