ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
ಬೆಂಗಳೂರು ಗ್ರಾಮಾಂತರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ
ದೊಡ್ಡಬಳ್ಳಾಪುರ(Doddaballapura) ನಗರದ ರೋಜಿಪುರದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿ ಪರ್ವೀಜ್ ಪಾಷಾ(38) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಮೃತ ಪರ್ವೀಜ್, ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದಿದ್ದ ಎನ್ನಲಾಗಿದೆ.
- Naveen Kumar
- Updated on: Jun 28, 2024
- 4:10 pm
ತುಳಸಿಕಟ್ಟೆ ವಿಚಾರವಾಗಿ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಧರ್ಮ ದಂಗಲ್
ಜಾತ್ರೆ, ಶಾಲಾ-ಕಾಲೇಜು ಆಯ್ತು ಇದೀಗ ಬೆಂಗಳೂರಿನ ಎರಡನೇ ಅತೀದೊಡ್ಡ ಅಪಾರ್ಟ್ಮೆಂಟ್ನಲ್ಲಿ ಧರ್ಮ ದಂಗಲ್ ಕೇಳಿಬಂದಿದೆ. ಯಲಹಂಕ(Yalahanka) ತಾಲೂಕಿನ ಮಾರಸಂದ್ರದ ಪ್ರಾವಿಡೆಂಟ್ ವೆಲ್ವರ್ಥ್ ಅಪಾರ್ಟ್ಮೆಂಟ್ನಲ್ಲಿ ತುಳಸಿಕಟ್ಟೆ ವಿಚಾರವಾಗಿ ಎರಡು ಧರ್ಮಗಳ ನಡುವೆ ಗದ್ದಲ ಉಂಟಾಗಿದೆ.
- Naveen Kumar
- Updated on: Jun 27, 2024
- 4:28 pm
ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್ನಲ್ಲಿ ನವಜಾತ ಗಂಡು ಮಗು ಪತ್ತೆ
ಭುವನೇಶ್ವರದಿಂದ ಯಲಹಂಕಕ್ಕೆ ಬಂದ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್ನಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ರೈಲಿನಲ್ಲೇ ಹೆರಿಗೆಯಾಗಿದ್ದು ತಾಯಿ ಮಗುವನ್ನು ಡಸ್ಟ್ ಬಿನ್ಗೆ ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ತನಿಖೆ ನಡೆಸಲಾಗುತ್ತಿದೆ.
- Naveen Kumar
- Updated on: Jun 27, 2024
- 12:04 pm
ಬಾಳು ಕೊಡುತ್ತೇನೆ ಅಂತ ಕರೆದುಕೊಂಡು ಬಂದು ಮಹಿಳೆಯನ್ನು ಕೊಲೆಗೈದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದು ಬಾಡಿಗೆ ಮನೆಯೊಂದನ್ನ ಪಡೆದು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಾ ಜೀವನ ಓರ್ವ ಮಹಿಳೆ ಸಾಗಿಸುತ್ತಿದ್ದಳು. ಅದೊಂದು ದಿನ ಮಹಿಳೆ ಸಂಜೆಯಾದರೂ ಬಾಗಿಲು ತೆರೆದಿರಲಿಲ್ಲ. ಇದರಿಂದ ಅನುಮಾನಗೊಂಡ ಅಕ್ಕ-ಪಕ್ಕದ ನಿವಾಸಿಗಳು ಮನೆಯ ಕಿಟಕಿಯಿಂದ ಇಣುಕಿ ನೋಡಿ ಒಂದು ಕ್ಷಣ ಬೆಚ್ಚಿ ಬಿದ್ದಿದ್ದರು. ಅಲ್ಲಿ ನಡೆದಿದ್ದು ಏನು? ಈ ಸ್ಟೋರಿ ಓದಿ.
- Naveen Kumar
- Updated on: Jun 26, 2024
- 10:10 am
ಹೊಸಕೋಟೆಯ ಶ್ರೀಗುರು ನಳಪಾಕ ಹೋಟೆಲ್ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಇಬಿ ವೃತ್ತದ ಶ್ರೀಗುರು ನಳಪಾಕ ಹೋಟೆಲ್ನಲ್ಲಿ ಖರೀದಿಸಿದ್ದ ಗೋಬಿ ಮಂಚೂರಿಯಲ್ಲಿ ಹುಳ ಪತ್ತೆ ಆಗಿರುವಂತಹ ಘಟನೆ ನಡೆದಿದೆ. 190 ರೂ. ಪಡೆದು ಹುಳವಿರುವ ಗೋಬಿ ಕೊಟ್ಟಿದ್ದೀರಾ ಅಂತ ಗ್ರಾಹಕ ಮಹಿಳೆ ಹೋಟೆಲ್ನ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬಿ ಮಂಚೂರಿಯಲ್ಲಿ ಹುಳವಿದ್ದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದೆ.
- Naveen Kumar
- Updated on: Jun 24, 2024
- 10:37 pm
ಪ್ರಿಯತಮೆಗೆ ಬಾಡಿಗೆ ಮನೆ ಮಾಡಿಟ್ಟಿದ್ದ: ಆಗಾಗ ಬಂದು ಹೋಗುತ್ತಿದ್ದವ ನಿನ್ನೆ ಕೊಂದು ಹೋದ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಪ್ರಿಯಕರ ಕೊಲೆಗೈದಿರುವಂತಹ ಘಟನೆ ನಡೆದಿದೆ. 4 ತಿಂಗಳ ಹಿಂದೆ ಹೊಸಕೋಟೆಯಲ್ಲಿ ವೇಣು ಬಾಡಿಗೆ ಮನೆಮಾಡಿ ಇರಿಸಿದ್ದ. ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಮುಂಜಾನೆ ಪರಾರಿ ಆಗಿದ್ದಾನೆ.
- Naveen Kumar
- Updated on: Jun 24, 2024
- 10:09 pm
ಬೈಕ್ಗೆ ಲಾರಿ ಡಿಕ್ಕಿ; 3 ವರ್ಷದ ಮಗು ಸಾವು, ತಂದೆ-ತಾಯಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ (Accident) ವಾಗಿದ್ದು, ತಂದೆ ಆಂಜಿನೇಯ-ತಾಯಿ ಮಮತಾಗೆ ಗಂಭೀರ ಗಾಯವಾದರೆ, ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
- Naveen Kumar
- Updated on: Jun 21, 2024
- 3:46 pm
ಚಿಕ್ಕವಯಸ್ಸಿನಲ್ಲೆ ಯೋಗದಲ್ಲಿ ಸಾಧನೆ ಮಾಡಿದ ಪೋರಿ: ಬೆಳ್ಳಿ ಸೇರಿ ಹಲವು ಪದಕ ಗೆದ್ದ ದೊಡ್ಡಬಳ್ಳಾಪುರ ಬಾಲಕಿ
ದೊಡ್ಡಬಳ್ಳಾಪುರ ಯೋಗಪಟುಗಳ ತವರೂರಾಗಿದ್ದು, ನಗರದಲ್ಲಿ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಯೋಗಪಟುಗಳಿದ್ದಾರೆ. ಇದೀಗ 10 ನೇ ತರಗತಿ ಮುಗಿಸಿ ಪ್ರಥಮ ಪಿಯುಸಿಗೆ ಕಾಲಿಟ್ಟಿರುವ ಈ ಬಾಲಕಿ ಯೋಗ ಕ್ಷೇತ್ರದಲ್ಲಿ ಸಾಧನೆಗೈದಿದ್ದಾಳೆ. ನಗರದ ಶಾಂತಿನಗರದ ನಿವಾಸಿಗಳಾದ ರವಿಕುಮಾರ್ ಮತ್ತು ರತ್ನ ದಂಪತಿ ಮಗಳಾದ ಜಾಹ್ನವಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುನ್ನತ ಸಾಧನೆ ಮಾಡಿದ್ದಾಳೆ.
- Naveen Kumar
- Updated on: Jun 20, 2024
- 10:54 pm
ಹೊಸಕೋಟೆ: ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಬಳಿ ಓರ್ವನ ಯುವಕನ ಕೊಲೆಯಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಗಂಗಾಪುರ ನಿವಾಸಿ ನವೀನ್ ನಾಯಕ್ (27) ಕೊಲೆಯಾದ ಯುವಕ.
- Naveen Kumar
- Updated on: Jun 16, 2024
- 9:57 am
ಸ್ನೇಹಿತರ ಜೊತೆ ಲಾಂಗ್ ಡ್ರೈವ್ ಹೋದ ಇಬ್ಬರು ನೀರಿನಲ್ಲಿ ಮುಳುಗಿ ಸಾವು
ಶುಕ್ರವಾರ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿಗೆ 6 ಜನ ಸ್ನೇಹಿತರು ಲಾಂಗ್ ಡ್ರೈವ್ ಹೋಗಿದ್ದರು. ಆರು ಜನರಲ್ಲಿ ಮೂವರು ಬೆಟ್ಟಹಲಸೂರಿನಲ್ಲಿನ ಕ್ವಾರಿಯ ನೀರಿನಲ್ಲಿ ಈಜಲು ಹೋಗಿದ್ದಾರೆ. ಆದರೆ, ಮೂವರು ಮುಳುಗಲು ಆರಂಭಿಸಿದ್ದಾರೆ. ಮುಂದೇನಾಯ್ತು? ಈ ಸ್ಟೋರಿ ಓದಿ
- Naveen Kumar
- Updated on: Jun 15, 2024
- 3:08 pm
ಹೊಸಕೋಟೆ: ಮಾವಿನ ಹಣ್ಣು ಕೀಳುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು
ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿದ್ದು ಓದುತ್ತಿದ್ದ ಅಣ್ಣ-ತಮ್ಮ ಟೆರೆಸ್ ಮೇಲೆ ಹಾಕಿದ್ದ ಬಟ್ಟೆ ತರಲು ಹೋಗಿದ್ದರು. ಈ ವೇಳೆ ಅಲ್ಲೇ ಇದ್ದ ಮರದಲ್ಲಿ ಬಿಟ್ಟಿದ ಮಾವಿನ ಹಣ್ಣನ್ನು ಕೀಳಲು ಹೋಗಿದ್ದು ಓರ್ವ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಬಾಲಕ ಮಹಡಿ ಮೇಲಿದ್ದ ಕೆಳಕ್ಕೆ ಬಿದ್ದಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
- Naveen Kumar
- Updated on: Jun 9, 2024
- 1:42 pm
ಕೆಂಪೇಗೌಡ ಏರ್ಪೋರ್ಟ್ನಲ್ಲಿ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ; ಶೌಚಾಲಯದಲ್ಲೂ ಸಿಕ್ತು ಬಂಗಾರ
ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.29 ಕೋಟಿ ಮೌಲ್ಯದ ಚಿನ್ನವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು DRI ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ವಿಚಾರಣೆ ಶುರವಾಗಿದೆ.
- Naveen Kumar
- Updated on: Jun 7, 2024
- 7:16 pm