ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
ಪೆಟ್ರೋಲ್ ಬಂಕ್ ಸಂಬಳ ಸಾಕಾಗದೆ ಬೈಕ್ ಕಳ್ಳನಾದ ಭೂಪ! 42 ಬೈಕ್ ಜಪ್ತಿ ಮಾಡಿ ಮಾಲೀಕರಿಗೆ ನೀಡಿದ ವಿಜಯಪುರ ಪೊಲೀಸರು
Bengaluru Rural News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕಳೆದ ಒಂದೂವರೆ ವರ್ಷದಿಂದ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಕುಖ್ಯಾತ ಖದೀಮ ಖಲೀಲ್ ಅಹ್ಮದ್ನನ್ನು ಬಂಧಿಸಿದ್ದಾರೆ. ಬಂಧಿತನಿಂದ 42 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಮಾಲೀಕರಿಗೆ ಬೈಕ್ ಹಸ್ತಾಂತರಿಸಲಾಗಿದೆ.
- Naveen Kumar
- Updated on: Jun 25, 2026
- 2:18 pm
ಕೋರ್ಟ್ಗೆ ಅಲೆಯಬೇಕಿಲ್ಲ! ಕಳವಾಗಿದ್ದ ಬೈಕ್ಗಳನ್ನು ಠಾಣೆಯಲ್ಲೇ ಮಾಲೀಕರಿಗೆ ಒಪ್ಪಿಸಿ ವಿಜಯಪುರ ಪೊಲೀಸರ ವಿನೂತನ ಕಾರ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸರು ರಾಜ್ಯದಲ್ಲೇ ಮೊದಲ ಬಾರಿಗೆ ನ್ಯಾಯಾಧೀಶರ ಅನುಮತಿ ಪಡೆದು, ವಶಪಡಿಸಿಕೊಂಡ ಬೈಕ್ಗಳನ್ನು ಮೂಲ ಮಾಲೀಕರಿಗೆ ಠಾಣೆಯಲ್ಲೇ ನೇರವಾಗಿ ಹಸ್ತಾಂತರಿಸಿದ್ದಾರೆ. ಕೇವಲ ಬಾಂಡ್ ಪೇಪರ್ ಆಧಾರದ ಮೇಲೆ ಬೈಕ್ಗಳ ಹಸ್ತಾಂತರ ಮಾಡಲಾಗಿದೆ. ಆ ಮೂಲಕ ವಿನೂತನ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ.
- Naveen Kumar
- Updated on: Jun 25, 2026
- 9:42 am
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2.09 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಬ್ಯಾಂಕಾಕ್ನಿಂದ ಬಂದಿಳಿದ ಪ್ರಯಾಣಿಕನೊಬ್ಬ ಬ್ಯಾಗ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.09 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಪ್ರಕರಣಗಳು ಹೆಚ್ಚಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ಇರಿಸುತ್ತಿದ್ದಾರೆ.
- Naveen Kumar
- Updated on: Jun 22, 2026
- 3:19 pm
ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಸ್ಥಿತಿ ಗಂಭೀರ
ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ರಾಂಗ್ ರೂಟ್ನಲ್ಲಿ ಬಂದ ಬಿಎಂಟಿಸಿ (BMTC) ಬಸ್ ಡಿಕ್ಕಿಯಾಗಿ ದೇವನಹಳ್ಳಿಯ ದಂಪತಿ ಹಾಗೂ 2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತೋರ್ವ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Naveen Kumar
- Updated on: Jun 19, 2026
- 8:05 pm
ಬೆಂಗಳೂರು ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಎರಡು ಭರ್ಜರಿ ಕಾರ್ಯಾಚರಣೆಗಳಲ್ಲಿ ಬ್ಯಾಂಕಾಕ್ನಿಂದ ಸಾಗಿಸುತ್ತಿದ್ದ 13.14 ಕೋಟಿ ರೂ. ಮೌಲ್ಯದ 38.34 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಲಗೇಜ್ ಬ್ಯಾಗ್ಗಳಲ್ಲಿ ಡ್ರಗ್ಸ್ ಬಚ್ಚಿಟ್ಟಿದ್ದ 6 ಜನರನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
- Naveen Kumar
- Updated on: Jun 15, 2026
- 9:33 am
ಕರ್ನಾಟಕಕ್ಕೆ ಕೊಟ್ಟ ಅನುದಾನ: ಯೋಜನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್
ಇಂದು ಬೆಂಗಳೂರಿನ ಜಯನಗರದಲ್ಲಿ ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವಿವಿಧ ಯೋಜನೆಗಳ ಅಡಿಯಲ್ಲಿ ಆಗಿರುವ ಪ್ರಗತಿಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಕೂಡ ಮಾಡಿದ್ದಾರೆ.
- Naveen Kumar
- Updated on: Jun 14, 2026
- 7:16 pm
ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಆಟವಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಹೊಂಡಕ್ಕೆ ಬೇಲಿ ಅಳವಡಿಸದ ಹಿನ್ನೆಲೆಯಲ್ಲಿ ರೈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆ ಮುಂದುವರಿದೆ. ಪುಟ್ಟ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
- Naveen Kumar
- Updated on: Jun 14, 2026
- 12:33 pm
ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಬೆಂಗಳೂರು ಏರ್ಪೋರ್ಟ್ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ
ದುಬೈನಿಂದ ಬೆಂಗಳೂರು ಏರ್ಪೋರ್ಟ್ಗೆ ಬಂದಿದ್ದ ಪ್ರಯಾಣಿಕನಿಂದ 1.37 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕ್ಯಾಪ್ಸುಲ್ಗಳಲ್ಲಿ ಚಿನ್ನದ ಪೇಸ್ಟ್ ರೂಪದಲ್ಲಿ ಇದನ್ನು ಸಾಗಿಸಲಾಗುತ್ತಿತ್ತು. ಮತ್ತೊಂದೆಡೆ ಬೆಂಗಳೂರು ಉತ್ತರ ತಾಲೂಕಿನ ಕದಿರೇನಹಳ್ಳಿಯಲ್ಲಿ ಒಂಟಿ ಮನೆ ಟಾರ್ಗೆಟ್ ಮಾಡಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ನಡೆದಿದೆ.
- Naveen Kumar
- Updated on: Jun 10, 2026
- 3:09 pm
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಬೆಂಗಳೂರಿಗೆ ಬರಬೇಕಿದ್ದ ‘ಕೈ’ ಶಾಸಕರ ಪ್ರವಾಸ ಕೊನೇ ಕ್ಷಣದಲ್ಲಿ ರದ್ದು
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಬೆಂಗಳೂರು ಏರ್ಪೋರ್ಟ್ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್ ಲಾ ರೆಸಾರ್ಟ್ಗೆ ತೆರಳಲಿದ್ದಾರೆ. ಅವರನ್ನು ಕರೆದೊಯ್ಯಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ.
- Naveen Kumar
- Updated on: Jun 9, 2026
- 7:42 pm
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಲಗೇಜ್ ಬ್ಯಾಗ್ನಲ್ಲಿ ಅಡಗಿಸಿಟ್ಟಿದ್ದ 6.66 ಕೆಜಿ ತೂಕದ ಈ ದುಬಾರಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿರುವ ಪ್ರಯಾಣಿಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ನಡೆಸುತ್ತಿರುವ ತೀವ್ರ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ.
- Naveen Kumar
- Updated on: Jun 8, 2026
- 11:50 am
ಟ್ರಕ್ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಬಳಿ ಟ್ರಕ್ ಚಾಲಕ ಏಕಾಏಕಿ ಯೂಟರ್ನ್ ಪಡೆದಿದ್ದರಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಘಟನಾ ಸ್ಥಳದ ವಿಡಿಯೋ ಇಲ್ಲಿದೆ.
- Naveen Kumar
- Updated on: Jun 8, 2026
- 11:36 am
ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ
ಖಾತೆ ಹಂಚಿಕೆ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ದೇವನಹಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದೆ. ರಾಮಲಿಂಗಾ ರೆಡ್ಡಿ, ಕೆ.ಹೆಚ್. ಮುನಿಯಪ್ಪರ ಬಂಡಾಯದಿಂದ ಉಂಟಾದ ಬಿಕ್ಕಟ್ಟು ಪರಿಹರಿಸಲು ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ ಭಾಗವಹಿಸಿದ್ದಾರೆ. ಮುನಿಯಪ್ಪ ಆಹಾರ ಖಾತೆಯನ್ನು ನಿರಾಕರಿಸಿ, ಕೃಷಿ/ಸಮಾಜ ಕಲ್ಯಾಣ ಇಲಾಖೆ ಬಯಸಿದ್ದಾರೆ. ಹೈಕಮಾಂಡ್ ಡ್ಯಾಮೇಜ್ ಕಂಟ್ರೋಲ್ ಸೂತ್ರ ಸಿದ್ಧಪಡಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.
- Naveen Kumar
- Updated on: Jun 5, 2026
- 1:05 pm