ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮ ಅಧಿಕಾರಿಗಳಿಂದ ದಬ್ಬಾಳಿಕೆ: ಬಡವರ ಮನೆ ತೆರವಿಗೆ ಪುಡಿ ರೌಡಿಗಳ ಬಳಕೆ
Muddanahalli land dispute: ಯಲಹಂಕದ ಮುದ್ದನಹಳ್ಳಿಯಲ್ಲಿ ದಶಕಗಳಿಂದ ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿದ್ದ ಬಡ ಕುಟುಂಬಗಳನ್ನು ರಾಜೀವ್ ಗಾಂಧಿ ವಸತಿ ನಿಗಮವು ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಪೊಲೀಸರ ಬದಲು ಪುಡಿ ರೌಡಿಗಳಿಂದ ಮನೆ ತೆರವಿಗೆ ಮುಂದಾಗಿರುವ ಆರೋಪ ಕೇಳಿಬಂದಿದ್ದು, ಸ್ಥಳೀಯರು ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾರೆ.
- Naveen Kumar
- Updated on: Aug 26, 2026
- 7:42 pm
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ಫ್ಲೈಟ್ನಲ್ಲಿದ್ದ ಪ್ರಯಾಣಿಕರಿಂದಲೇ ಕೃತ್ಯ ಶಂಕೆ
ಲಕ್ನೋದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ 6E-231 ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ್ದರಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭಾರಿ ಆತಂಕ ಸೃಷ್ಟಿಯಾಯಿತು. ಪೈಲಟ್ ಎಟಿಸಿಗೆ ಮಾಹಿತಿ ನೀಡಿದ ನಂತರ, ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಿ, ಶ್ವಾನದಳ, ಸಿಐಎಸ್ಎಫ್ ಮತ್ತು ಪೊಲೀಸರಿಂದ ತೀವ್ರ ತಪಾಸಣೆ ನಡೆಸಲಾಯಿತು. ವಿಮಾನದ ಒಳಗೆ ಪತ್ರ ಸಿಕ್ಕಿದ ಕಾರಣ ಎಲ್ಲರಲ್ಲಿಯೂ ಗಲಿಬಿಲಿ ಉಂಟಾಗಿತ್ತು.
- Naveen Kumar
- Updated on: Aug 26, 2026
- 12:56 pm
ಬ್ಯಾಂಕ್ ಲೋನ್ ಕಟ್ಟಿಲ್ಲವೆಂದು ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಬಳಿಯ ಆತ್ರೇಯ ಆಯುರ್ವೇದಿಕ್ ಮಹಾವಿದ್ಯಾಲಯಕ್ಕೆ ಕಳೆದೊಂದು ತಿಂಗಳಿಂದ ಬೀಗ ಹಾಕಿರುವುದರಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್ ಸಾಲದ ವಿಚಾರದಿಂದ ಕಾಲೇಜು ಮುಚ್ಚಲಾಗಿದೆ ಎನ್ನಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸುವುದಾಗಿ ಆಡಳಿತ ಮಂಡಳಿ ತಿಳಿಸಿದೆ.
- Naveen Kumar
- Updated on: Aug 24, 2026
- 12:53 pm
ಹೊಸಕೋಟೆ ದಮ್ ಬಿರಿಯಾನಿ ಕ್ರೇಜ್ಗೆ ಅಪಘಾತ, ಗಲಾಟೆ ನಂಟು: 4 ಗಂಟೆ ಬಿರಿಯಾನಿಗೆ ಬ್ರೇಕ್!
Hosakote Biryani: ಹೊಸಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಸಿಗುವ ಬಿಸಿ ಬಿಸಿ ದಮ್ ಬಿರಿಯಾನಿ ಮಾರಾಟಕ್ಕೆ ಸದ್ಯ ಪೊಲೀಸರು ಬ್ರೇಕ್ ಹಾಕಿದ್ದಾರೆ. ಆ ಮೂಲಕ ಅಪಘಾತ ಹಾಗೂ ಗಲಾಟೆ ಪ್ರಕರಣಗಳನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಇದು ಬಿರಿಯಾನಿ ಪ್ರಿಯರು ಮತ್ತು ಹೋಟೆಲ್ ಮಾಲೀಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
- Naveen Kumar
- Updated on: Aug 23, 2026
- 5:01 pm
Hoskote Biryani: ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆಯಲ್ಲಿ ಮುಂಜಾನೆ ಬಿರಿಯಾನಿ ಸೆಂಟರ್ಗಳ ಅಕಾಲಿಕ ಕಾರ್ಯಾಚರಣೆ, ಅಪಘಾತಗಳು, ಟ್ರಾಫಿಕ್ ಜಾಮ್ ಹಾಗೂ ಎಂಆರ್ಪಿ ಮೀರಿ ಮಾರಾಟದ ಹಿನ್ನೆಲೆಯಲ್ಲಿ ಪೊಲೀಸರು ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ಸ್ಪೆಕ್ಟರ್ ಗೋವಿಂದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಬೆಳಗ್ಗೆ 6 ಗಂಟೆಯ ನಂತರ ಬಿರಿಯಾನಿ ಸೆಂಟರ್ಗಳನ್ನು ತೆರೆಯುವಂತೆ ಮತ್ತು ಇತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
- Naveen Kumar
- Updated on: Aug 23, 2026
- 10:01 am
AC ರಿಪೇರಿ ಮಾಡ್ತಿದ್ದವನಿಗೆ ಪಾಕ್ ಗ್ಯಾಂಗ್ಸ್ಟರ್ಗಳ ನಂಟು: ಇವನ ಕಥೆ ಕೇಳಿದ್ರೆ ಶಾಕ್ ಆಗ್ತೀರಿ
Bengaluru suspect terror arrest: ಪಾಕಿಸ್ತಾನಿ ಗ್ಯಾಂಗ್ ಜೊತೆ ನಂಟು ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ಹೊರವಲಯದಲ್ಲಿ ಓರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಪಾಕ್ ಗ್ಯಾಂಗ್ನೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದು, ತರಬೇತಿ ಪಡೆದಿದ್ದನೆಂಬ ಆರೋಪಿಸಲಾಗಿದೆ. ಸದ್ಯ ಈ ಕುರಿತಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
- Naveen Kumar
- Updated on: Aug 22, 2026
- 7:48 pm
ಸೆ.1ರಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ UDF ಪರಿಷ್ಕರಣೆ: ಹೊರಡುವ,ಬರುವ ಪ್ರಯಾಣಿಕರಿಗೆ ಎಷ್ಟು ಶುಲ್ಕ?
ಬೆಂಗಳೂರಿನ ಕೆಂಪೇಗೌಡ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಹೋಗುವ ಮತ್ತು ಬಂದಿಳಿಯುವ ಪ್ರಯಾಣಿಕರಿಗೆ ಅನ್ವಯವಾಗುವಂತೆ ಹೊಸ ಸುಂಕದ (Tariff) ರಚನೆಗೆ ಎಇಆರ್ಎ (AERA) ಅಧಿಕೃತ ಅನುಮೋದನೆ ನೀಡಿದೆ. ಹೀಗಾಗಿ ಸೆಪ್ಟೆಂಬರ್ 1ರಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ UDF ಪರಿಷ್ಕರಣೆ ಮಾಡಲಾಗುತ್ತಿದೆ. ಹಾಗಾದ್ರೆ, ದೇಶೀಯ ಪ್ರಯಾಣಿಕರಿಗೆ ಎಷ್ಟು? ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಎಷ್ಟು ಎನ್ನುವ ವಿವರ ಇಲ್ಲಿದೆ.
- Naveen Kumar
- Updated on: Aug 22, 2026
- 4:50 pm
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು, ಭರ್ಜರಿ ಆದಾಯ
ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಗಗನಕ್ಕೇರಿದೆ. ಇದರಿಂದ ಜನರು ನೇರವಾಗಿ ರೈತರ ತೋಟದ ಮೊರೆ ಹೋಗಿದ್ದಾರೆ. ಹೌದು...ಮಾರಾಟಗಾರರು ರೈತರಿಂದ ಖರೀದಿಸಿ ತಂದು ದುಪ್ಪಟ್ಟು ದರಕ್ಕೆ ಮಾರುತ್ತಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸುತ್ತಮುತ್ತಲಿನ ಗ್ರಾಮಗಳ ತೋಟಗಳಲ್ಲೇ ಜನರು ಹೂ ಖರೀದಿಸಿದ್ದು, ರೈತರು ಫುಲ್ ಖುಷ್ ಅಗಿದ್ದಾರೆ. ಮಾರುಕಟ್ಟೆಗೆ ಹಾಕುವ ಮುನ್ನವೆ ರೈತರ ತೋಟಗಳಲ್ಲಿದ್ದ ಹೂಗಳು ಖಾಲಿಯಾಗಿದ್ದು, ವರಮಹಾಲಕ್ಷ್ಮಿ ಹಬ್ಬದಲ್ಲಿ ಭರ್ಜರಿ ಆದಾಯ ಗಳಿಸಿದ್ದಾರೆ.
- Naveen Kumar
- Updated on: Aug 21, 2026
- 2:43 pm
ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಏರ್ಪೋರ್ಟ್ನ ವಿಐಪಿ ಪ್ರೋಟೋಕಾಲ್ಗೆ ಬಳಕೆ; ಬಡ ರೋಗಿಗಳ ಪರದಾಟ
ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಪ್ರೋಟೋಕಾಲ್ಗೆ ಬಳಸುತ್ತಿರುವುದರಿಂದ ಸ್ಥಳೀಯ ರೋಗಿಗಳು ತುರ್ತು ಸೇವೆಗಾಗಿ ಪರದಾಡುತ್ತಿದ್ದಾರೆ. ಬಡ ರೋಗಿಗಳಿಗೆ ಬೆಂಗಳೂರಿಗೆ ವರ್ಗಾಯಿಸಲು ವಾಹನ ಸಿಗದೆ ಖಾಸಗಿ ಆಂಬ್ಯುಲೆನ್ಸ್ಗಳ ಸಾವಿರಾರು ರೂಪಾಯಿ ಬಾಡಿಗೆ ಪಾವತಿಸಬೇಕಾಗಿದೆ. KIAB ಗೆ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ, ತಾಲೂಕು ಆಸ್ಪತ್ರೆಯ ವಾಹನಗಳನ್ನು ಸಾರ್ವಜನಿಕ ಸೇವೆಗೆ ಮೀಸಲಿಡುವಂತೆ ಜನ ಆಗ್ರಹಿಸಿದ್ದಾರೆ.
- Naveen Kumar
- Updated on: Aug 19, 2026
- 12:15 pm
ಬೆಂಗಳೂರು ಏರ್ಪೋರ್ಟ್ ಬಳಿಯ ಹೋಟೆಲ್ನಲ್ಲಿ ಘೋರ ದುರಂತ: ಇಬ್ಬರು ಮಕ್ಕಳನ್ನ ಕೊಂದ ತಂದೆ
ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಇರುವ ತಾಜ್ ಹೋಟೆಲ್ನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೋಟೆಲ್ ರೂಮ್ನಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರೆ, ತಂದೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.
- Naveen Kumar
- Updated on: Aug 10, 2026
- 9:25 pm
ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು
ಮಾಲೀಕರು ಊರಿಗೆ ಹೋದ ಸಮಯದಲ್ಲಿ ಸೆಕ್ಯೂರಿಟಿಗಾರ್ಡ್ ಕುಟುಂಬವೇ ಮನೆ ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ನೇಪಾಳ ಮೂಲದ ಆರೋಪಿಗಳು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದು, ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Naveen Kumar
- Updated on: Aug 10, 2026
- 3:53 pm
‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ಖತರ್ನಾಕ್ ದಂಪತಿ ಪೊಲೀಸರ ವಶ!
ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ವರ್ಕ್ ಫ್ರಂ ಹೋಂ ಪ್ಯಾಕಿಂಗ್ ಕೆಲಸದ ಆಸೆ ತೋರಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿರಣ್ ಮತ್ತು ಆರತಿ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಳಿಕಾ ದೇವಿ ಎಂಟರ್ ಪ್ರೈಸಸ್ ಹೆಸರಿನಲ್ಲಿ ಅಗರಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ಗಾಗಿ ಲಕ್ಷ ಲಕ್ಷ ಡೆಪಾಸಿಟ್ ಪಡೆದು ದೋಖಾ ಮಾಡಿದ್ದ ಈ ದಂಪತಿಯಿಂದ ಕಂಗಾಲಾಗಿದ್ದ ಸಾರ್ವಜನಿಕರು ದೂರು ನೀಡಿದ್ದು, ಪೊಲೀಸರು ಸದ್ಯ ತೀವ್ರ ತನಿಖೆ ನಡೆಸುತ್ತಿದ್ದಾರೆ.
- Naveen Kumar
- Updated on: Aug 7, 2026
- 10:53 am