ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ಖತರ್ನಾಕ್ ದಂಪತಿ ಪೊಲೀಸರ ವಶ!
ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ವರ್ಕ್ ಫ್ರಂ ಹೋಂ ಪ್ಯಾಕಿಂಗ್ ಕೆಲಸದ ಆಸೆ ತೋರಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿರಣ್ ಮತ್ತು ಆರತಿ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಳಿಕಾ ದೇವಿ ಎಂಟರ್ ಪ್ರೈಸಸ್ ಹೆಸರಿನಲ್ಲಿ ಅಗರಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ಗಾಗಿ ಲಕ್ಷ ಲಕ್ಷ ಡೆಪಾಸಿಟ್ ಪಡೆದು ದೋಖಾ ಮಾಡಿದ್ದ ಈ ದಂಪತಿಯಿಂದ ಕಂಗಾಲಾಗಿದ್ದ ಸಾರ್ವಜನಿಕರು ದೂರು ನೀಡಿದ್ದು, ಪೊಲೀಸರು ಸದ್ಯ ತೀವ್ರ ತನಿಖೆ ನಡೆಸುತ್ತಿದ್ದಾರೆ.
- Naveen Kumar
- Updated on: Aug 7, 2026
- 10:53 am
ದೊಡ್ಡಬಳ್ಳಾಪುರದಲ್ಲಿ ಕಣ್ಣುಮನ ಸೆಳೆದ ಗಾಳಿಪಟ ಉತ್ಸವ: ಇಲ್ಲಿವೆ ಫೋಟೋಸ್
Doddaballapur Kite Festival Photos: ದೊಡ್ಡಬಳ್ಳಾಪುರದಲ್ಲಿ 10ನೇ ವರ್ಷದ ಆಷಾಢ ಮಾಸದ ಗಾಳಿಪಟ ಉತ್ಸವ ಅದ್ದೂರಿಯಾಗಿ ಜರುಗಿತು. ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದ ಬಾನಂಗಳದಲ್ಲಿ ಬಣ್ಣ ಬಣ್ಣದ ಗಾಳಿಪಟಗಳು ಹಾರಾಡಿದವು. ಕುಟುಂಬ ಸಮೇತ ಆಗಮಿಸಿದ ಜನ ಸಾಂಪ್ರದಾಯಿಕ ಕ್ರೀಡೆಯನ್ನು ಆನಂದಿಸಿದರು. ಫೋಟೋಸ್ ಇಲ್ಲಿವೆ.
- Naveen Kumar
- Updated on: Aug 2, 2026
- 7:29 pm
40 ಲಕ್ಷ ರೂ ವರದಕ್ಷಿಣೆ, ಸಂಬಳಕ್ಕಾಗಿ ಗಲಾಟೆ: ಚೇಂಬರ್ಗೆ ನುಗ್ಗಿ ಹೆತ್ತ ಮಗಳಿಗೆ ಚಾಕುವಿನಿಂದ ಇರಿದ ತಂದೆ!
Father Stabs Daughter: ಮಗಳು ಕೆಲಸ ಮಾಡುತ್ತಿದ್ದ ಕಾಲೇಜಿಗೆ ಬಂದು ತಂದೆ ಚಾಕು ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಜುಲೈ 25 ರಂದು ನಡೆದಿರುವ ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ.
- Naveen Kumar
- Updated on: Jul 30, 2026
- 6:36 pm
ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ
Siddaramaiah Retirement From Electoral Politics: ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ದೂರಸರಿಯಲು ನಿರ್ಧರಿಸಿದ್ದಾರೆ. ಅರ್ಥಾತ್ 2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಅಂತಾ ಘೋಷಿಸಿದ್ದಾರೆ. ಸಿದ್ದರಾಮಯ್ಯ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ. ಈ ಕುರಿತಾಗಿ ಯಾರು ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
- Naveen Kumar
- Updated on: Jul 26, 2026
- 7:34 pm
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ದೆಹಲಿಗೆ ತೆರಳುವ ಮುನ್ನ ಬಿಕೆ ಹರಿಪ್ರಸಾದ್ ಏನಂದ್ರು ನೋಡಿ
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪಕ್ಷ ಸಂಘಟನೆ ವಿಚಾರವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಮತ್ತು ಕೆಪಿಸಿಸಿ ವತಿಯಿಂದ ನಡೆಯುತ್ತಿರುವ ಸಂಘಟನ್ ಸರ್ಜಾನ್ ಅಭಿಯಾನ್ ಕುರಿತು ಚರ್ಚೆ ನಡೆಸುವುದು ಪ್ರಮುಖ ಉದ್ದೇಶ. ಕರ್ನಾಟಕದಲ್ಲಿ ಈ ಅಭಿಯಾನವನ್ನು ಪ್ರಾರಂಭಿಸುವ ಬಗ್ಗೆ ಘೋಷಣೆ ಮಾಡಿದ್ದು, ಇದರ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಯಲಿದೆ.
- Naveen Kumar
- Updated on: Jul 15, 2026
- 9:48 pm
ಆಲೂಗಡ್ಡೆ ಚಿಪ್ಸ್ ಪ್ರಿಯರೇ ಹುಷಾರ್: ಕೊಳೆತ ಆಲೂಗಡ್ಡೆ, ಗಲೀಜು ನೀರಿಂದ ಚಿಪ್ಸ್ ತಯಾರಿ
ದೇವನಹಳ್ಳಿ, ವಿಜಯಪುರದ 'ಶ್ರೀಸಾಯಿರಾಮ್ ಹಾಟ್ ಚಿಪ್ಸ್' ಬೇಕರಿಯಲ್ಲಿ ಕೊಳೆತ ಆಲೂಗಡ್ಡೆ ಹಾಗೂ ಗಲೀಜು ನೀರನ್ನು ಬಳಸಿ ಚಿಪ್ಸ್ ತಯಾರಿಸುತ್ತಿದ್ದ ಆಘಾತಕಾರಿ ಕೃತ್ಯ ಬಯಲಾಗಿದೆ. ಚಿಪ್ಸ್ ತಿಂದ ಮಕ್ಕಳು ತೀವ್ರ ಕೆಮ್ಮಿಗೆ ಒಳಗಾಗಿ ಅಸ್ವಸ್ಥರಾಗಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಅಧಿಕಾರಿಗಳು ತಕ್ಷಣವೇ ಬೇಕರಿಯನ್ನು ಸೀಜ್ ಮಾಡಿ, ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಇದು ಆಹಾರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Naveen Kumar
- Updated on: Jul 15, 2026
- 12:12 pm
ಚಿಕ್ಕಜಾಲ ರೌಡಿಶೀಟರ್ ‘ಕಿಂಗ್ ಮೇಕರ್ ದಾಸ’ನ ಬರ್ತ್ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭಾಗಿ
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕುಖ್ಯಾತ ರೌಡಿಶೀಟರ್ 'ಕಿಂಗ್ ಮೇಕರ್ ದಾಸ'ನ ಅದ್ಧೂರಿ ಹುಟ್ಟುಹಬ್ಬದಲ್ಲಿ ಭಾಗಿಯಾಗಿರುವುದು ಸದ್ದು ಮಾಡುತ್ತಿದೆ. ಆಲೂರು ಗ್ರಾಮದಲ್ಲಿ ನಡೆದ ಈ ಘಟನೆಯ ಫೋಟೋಗಳು ವೈರಲ್ ಆಗಿದ್ದು, ದಾಸ ಕೋಟಿಗಟ್ಟಲೆ ಭೂ ಕಬಳಿಕೆ ಹಾಗೂ ರಿಯಲ್ ಎಸ್ಟೇಟ್ ದಂಧೆಯಲ್ಲಿ ಸಕ್ರಿಯನಾಗಿದ್ದಾನೆ. ಕಳೆದ ಬಾರಿ ಇದೇ ರೌಡಿಶೀಟರ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರು ಅಮಾನತ್ತಾಗಿದ್ದರು. ಈ ಹೊಸ ವಿವಾದ ಮತ್ತಷ್ಟು ಸಂಚಲನ ಸೃಷ್ಟಿಸಿದೆ.
- Naveen Kumar
- Updated on: Jul 13, 2026
- 12:57 pm
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಲಗೇಜ್ ಬ್ಯಾಗ್ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ; ಆರೋಪಿ ಬಂಧನ
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕನಿಂದ 4.22 ಕೋಟಿ ಮೌಲ್ಯದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು, ಆರೋಪಿಯನ್ನು ನ್ಡಿಪಿಎಸ್ ಕಾಯ್ದೆಯಡಿ ಬಂಧಿಸಿದ್ದಾರೆ. ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕರಿಂದ ಕೆಲ ದಿನಗಳ ಹಿಂದೆಯೂ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೆಂಬುದು ಇಲ್ಲಿ ಗಮನಾರ್ಹ.
- Naveen Kumar
- Updated on: Jul 12, 2026
- 10:54 am
ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಸಿಡಿದೆದ್ದ ಪೋಷಕರು, ಪರಿಸ್ಥಿತಿ ಉದ್ವಿಗ್ನ
ಶಾಲೆಗಳು ಪ್ರಾರಂಭವಾಗಿ ಒಂದು ತಿಂಗಳು ಆಗಿದೆ ಅಷ್ಟೇ ಆಗಲೇ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣಗಳು ವರದಿಯಾಗುತ್ತಿವೆ. ಅಂತಹದ್ದೇ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆ ನಡೆದಿದೆ. ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಶಾಲೆಗೆ ನೇರ ಹೊಣೆ ಎಂದು ಕುಟುಂಬಸ್ಥರು, ದೈಹಿಕ ಶಿಕ್ಷಕ ಹಲ್ಲೆ ಮಾಡಿದ್ದಾರೆ. ಅಲ್ಲದೇ ದೈಹಿಕ ಶಿಕ್ಷಕನ್ನ ಕೊಲ್ಲುವವರೆಗೂ ಬಿಡಲ್ಲ ಎಂದು ಪಟ್ಟು ಹಿಡಿದಿದ್ದು, ಇದರಿಂದ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
- Naveen Kumar
- Updated on: Jul 8, 2026
- 2:35 pm
ಕೆಲಸ ಕೊಟ್ಟ ಮಾಲೀಕನಿಗೆ ನೌಕರನಿಂದಲೇ ಕೋಟಿ ರೂ. ನಾಮ; ಪ್ರೇಯಸಿ ಜೊತೆ ಸೇರಿ ಜರಿ ದಾರ ಕದ್ದ ಖದೀಮ ಜಹಿದ್ ಖಾನ್
ದೊಡ್ಡಬಳ್ಳಾಪುರದಲ್ಲಿ, ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಕಚ್ಚಾ ವಸ್ತುಗಳನ್ನು ವಂಚಿಸಿದ್ದಾರೆ. ಸೀರೆ ನೇಯುವ ಅಂಗಡಿಯ ಮಾಲೀಕರ ಅನುಪಸ್ಥಿತಿಯಲ್ಲಿ ಜರಿ ದಾರ ಮತ್ತು ಇತರ ವಸ್ತುಗಳನ್ನು ಕದ್ದು ಮಾರಾಟ ಮಾಡಿದ್ದಾರೆ. ದೂರು ನೀಡಿದರೂ ಪೊಲೀಸರಿಂದ ಕ್ರಮವಿಲ್ಲ ಎಂದು ಮಾಲೀಕ ಮೊಹಮ್ಮದ್ ಅಪನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಅವರ ಹೋರಾಟ ಮುಂದುವರಿದಿದೆ.
- Naveen Kumar
- Updated on: Jul 7, 2026
- 3:45 pm
ಪೆಟ್ರೋಲ್ ಬಂಕ್ ಸಂಬಳ ಸಾಕಾಗದೆ ಬೈಕ್ ಕಳ್ಳನಾದ ಭೂಪ! 42 ಬೈಕ್ ಜಪ್ತಿ ಮಾಡಿ ಮಾಲೀಕರಿಗೆ ನೀಡಿದ ವಿಜಯಪುರ ಪೊಲೀಸರು
Bengaluru Rural News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕಳೆದ ಒಂದೂವರೆ ವರ್ಷದಿಂದ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಕುಖ್ಯಾತ ಖದೀಮ ಖಲೀಲ್ ಅಹ್ಮದ್ನನ್ನು ಬಂಧಿಸಿದ್ದಾರೆ. ಬಂಧಿತನಿಂದ 42 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಮಾಲೀಕರಿಗೆ ಬೈಕ್ ಹಸ್ತಾಂತರಿಸಲಾಗಿದೆ.
- Naveen Kumar
- Updated on: Jun 25, 2026
- 2:18 pm
ಕೋರ್ಟ್ಗೆ ಅಲೆಯಬೇಕಿಲ್ಲ! ಕಳವಾಗಿದ್ದ ಬೈಕ್ಗಳನ್ನು ಠಾಣೆಯಲ್ಲೇ ಮಾಲೀಕರಿಗೆ ಒಪ್ಪಿಸಿ ವಿಜಯಪುರ ಪೊಲೀಸರ ವಿನೂತನ ಕಾರ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸರು ರಾಜ್ಯದಲ್ಲೇ ಮೊದಲ ಬಾರಿಗೆ ನ್ಯಾಯಾಧೀಶರ ಅನುಮತಿ ಪಡೆದು, ವಶಪಡಿಸಿಕೊಂಡ ಬೈಕ್ಗಳನ್ನು ಮೂಲ ಮಾಲೀಕರಿಗೆ ಠಾಣೆಯಲ್ಲೇ ನೇರವಾಗಿ ಹಸ್ತಾಂತರಿಸಿದ್ದಾರೆ. ಕೇವಲ ಬಾಂಡ್ ಪೇಪರ್ ಆಧಾರದ ಮೇಲೆ ಬೈಕ್ಗಳ ಹಸ್ತಾಂತರ ಮಾಡಲಾಗಿದೆ. ಆ ಮೂಲಕ ವಿನೂತನ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ.
- Naveen Kumar
- Updated on: Jun 25, 2026
- 9:42 am