AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ

Author - TV9 Kannada

naveenkumar.thimmarayppa@tv9.com

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 6.66 ಕೆಜಿ ತೂಕದ ಈ ದುಬಾರಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿರುವ ಪ್ರಯಾಣಿಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ನಡೆಸುತ್ತಿರುವ ತೀವ್ರ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ.

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಬಳಿ ಟ್ರಕ್ ಚಾಲಕ ಏಕಾಏಕಿ ಯೂಟರ್ನ್ ಪಡೆದಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಘಟನಾ ಸ್ಥಳದ ವಿಡಿಯೋ ಇಲ್ಲಿದೆ.

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

ಖಾತೆ ಹಂಚಿಕೆ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ದೇವನಹಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದೆ. ರಾಮಲಿಂಗಾ ರೆಡ್ಡಿ, ಕೆ.ಹೆಚ್. ಮುನಿಯಪ್ಪರ ಬಂಡಾಯದಿಂದ ಉಂಟಾದ ಬಿಕ್ಕಟ್ಟು ಪರಿಹರಿಸಲು ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ ಭಾಗವಹಿಸಿದ್ದಾರೆ. ಮುನಿಯಪ್ಪ ಆಹಾರ ಖಾತೆಯನ್ನು ನಿರಾಕರಿಸಿ, ಕೃಷಿ/ಸಮಾಜ ಕಲ್ಯಾಣ ಇಲಾಖೆ ಬಯಸಿದ್ದಾರೆ. ಹೈಕಮಾಂಡ್ ಡ್ಯಾಮೇಜ್ ಕಂಟ್ರೋಲ್ ಸೂತ್ರ ಸಿದ್ಧಪಡಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ

ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ತಮಗೆ ನೀಡಿರುವ ಆಹಾರ ಖಾತೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈಕಮಾಂಡ್ ಹಿರಿತನವನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕೃಷಿ ಅಥವಾ ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ. ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್​ ತೆಗೆದುಕೊಳ್ಳಲ್ಲ ಎಂದಿದ್ದಾರೆ. ಇದರೊಂದಿಗೆ, ಕಾಂಗ್ರೆಸ್ ಖಾತೆ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗುವ ಸುಳಿವು ಕಾಣಿಸಿದೆ.

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ

ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಡಾ. ಕೆ. ಸುಧಾಕರ್‌ರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತಗೆದುಕೊಂಡಿರುವ ಘಟನೆ ನಡೆದಿದೆ. ಯಲಹಂಕದಲ್ಲಿ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ. ಕಳೆದ ಲೋಕಸಭಾ ಚುನಾವಣೆಯಿಂದಲೂ ಶಾಸಕರು ಮತ್ತು ಸಂಸದರ ನಡುವೆ ಮುನಿಸು ಮುಂದುವರಿದುಕೊಂಡು ಬಂದಿದ್ದು, ಅದೀಗ ಮತ್ತೊಂದು ಹಂತ ತಲುಪಿದೆ.

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಹೊಸಕೋಟೆಯ ಕಣ್ಣೂರಹಳ್ಳಿ ರಸ್ತೆಯಲ್ಲಿ ಒಂದೇ ಸ್ಥಳದಲ್ಲಿ ಪತ್ತೆಯಾದ 23 ನಾಗರಹಾವಿನ ಮರಿಗಳನ್ನು ಉರಗ ತಜ್ಞ ಸಿಎಸ್ ನಾಗಭೂಷಣ ಅವರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ನಾಗರ ಹಾವಿನ ಮರಿಗಳನ್ನು ಅರಣ್ಯಕ್ಕೆ ಬಿಡಲು ಸಿದ್ಧತೆ ನಡೆಸಲಾಗಿದೆ. ಒಂದೇ ಕಡೆ ಪತ್ತೆಯಾದ ನಾಗರ ಹಾವಿನ ಮರಿಗಳ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಸಿದ್ದರಾಮಯ್ಯ ಅವರ ಬೆನ್ನಲ್ಲೇ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನರ್ರಚನೆ ಕುರಿತಂತೆ ಪಕ್ಷದ ನಾಯಕರೊಂದಿಗೆ ಪ್ರಮುಖ ಚರ್ಚೆ ನಡೆಸ ಬೇಕಿರುವ ಕಾರಣ ಅವರು ಈ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ಕರ್ನಾಟಕ ಕಾಂಗ್ರೆಸ್​​ನಲ್ಲಿನ (Karnataka Congress) ನಾಯಕತ್ವ ಬದಲಾವಣೆಯ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಸಿಎಂ ಸಿದ್ದರಾಮಯ್ಯನವರು (Siddaramaiah) ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಸರಣಿ ಸಭೆ ನಡೆಸಿ ಇಂದು (ಮೇ 27) ರಾತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವುದರಿಂದ ಏರ್​​ಪೋರ್ಟ್​​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇನ್ನು ವಿಶೇಷ ಅಂದ್ರೆ, ಡಿಕೆ ಶಿವಕುಮಾರ್ಅ  ವರನ್ನ ಕರೆದೊಯ್ಯಲು ಸರ್ಕಾರಿ ಬದಲು ಖಾಸಗಿ ಕಾರು ಬಂದಿರುವುದು ವಿಶೇಷ. ಇನ್ನು ಮರ್ಸಿಡಿಸ್ ಬೆಂಜ್ ಬೆಂಜ್ ಜಿ63 ಕಾರು ಹೇಗಿದೆ ನೋಡಿ.

ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯಲ್ಲೇ ಸರ್ಕಾರ ಮುಳುಗಿದೆ ಎಂದು ಟೀಕಿಸಿದ ಅವರು, ಬರಗಾಲ, ನೆರೆ, ಬೆಂಗಳೂರು ಸಮಸ್ಯೆಗಳತ್ತ ಗಮನ ಹರಿಸುವ ಬದಲು ಕುರ್ಚಿಗಾಗಿ ಹೋರಾಟ ನಡೆಸುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದೂ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್

ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಟರ್ಮಿನಲ್-1ರ ಮೇಲ್ಛಾವಣಿ ಮತ್ತೆ ಸೋರಿದ್ದು, ಒಳಗೆಲ್ಲ ನೀರು ತುಂಬಿ ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆ ಹಾಗೂ ಟರ್ಮಿನಲ್ ಒಳಗೆ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು?

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು?

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಟೇಕಾಫ್ ವೇಳೆ ಹೊಗೆ ಕಾಣಿಸಿಕೊಂಡು ದೊಡ್ಡ ಅನಾಹುತ ತಪ್ಪಿದೆ. ಪೈಲಟ್ ತಕ್ಷಣ ವಿಮಾನ ನಿಲ್ಲಿಸಿದ್ದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಸ್ಥಳಾಂತರಗೊಂಡರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತಾಂತ್ರಿಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ

ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.

ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್