AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ

Author - TV9 Kannada

naveenkumar.thimmarayppa@tv9.com

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್

ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್

ಚಾಲಕರ ಪ್ರತಿಭಟನೆ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ (BLR) ಹಳದಿ ಬೋರ್ಡ್ ಕ್ಯಾಬ್ ನಿಯಮಗಳನ್ನು ಪರಿಷ್ಕರಿಸಿದೆ. ಪಿಕಪ್ ಸಮಯವನ್ನು 10 ರಿಂದ 15 ನಿಮಿಷಗಳಿಗೆ ಹೆಚ್ಚಿಸಲಾಗಿದೆ. 45 ನಿಮಿಷಗಳ ನಂತರದ ದಂಡವನ್ನು 100 ರಿಂದ 50 ರೂ.ಗೆ ಕಡಿತಗೊಳಿಸಲಾಗಿದೆ. ಇಡೀ ದಿನದ ಪಾರ್ಕಿಂಗ್ ದಂಡ 600 ರಿಂದ 350 ರೂ.ಗೆ ಇಳಿದಿದೆ. ಇದು ಚಾಲಕರಿಗೆ ಸಮಾಧಾನ ತಂದಿದೆ.

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ

ಕಳೆದ 10 ದಿನಗಳಿಂದ ಕಾಣೆಯಾಗಿದ್ದ ಮಗ ಈಗ ಬರ್ತಾನೆ, ಆಗ ಬರ್ತಾನೆ ಅಂತ ಮನೆ ಬಾಗಿಲಲ್ಲೇ ಕಾದು ಕುಳಿತ್ತಿದ್ದ ತಾಯಿಗೆ ಇದೀಗ ನಿರಾಸೆ ಉಂಟಾಗಿದೆ. ಕಾಣೆಯಾಗಿದ್ದ ಪಿಯು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಅತ್ತ ಮಗ ಸಾವನ್ನಪ್ಪಿರುವ ಸುದ್ದಿ ತಿಳಿದ ತಾಯಿಗೆ ಬರ ಸಿಡಿಲು ಬಡಿದಂತೆ ಆಗಿದೆ.

ಬೆಂಗಳೂರು ಹೊರವಲಯದಲ್ಲಿ ಮತ್ತೊಂದು ರೈಲು ಮಾರ್ಗ: ಆರಂಭದಲ್ಲೇ ವಿಘ್ನ

ಬೆಂಗಳೂರು ಹೊರವಲಯದಲ್ಲಿ ಮತ್ತೊಂದು ರೈಲು ಮಾರ್ಗ: ಆರಂಭದಲ್ಲೇ ವಿಘ್ನ

ದೇವನಹಳ್ಳಿ ಬಳಿ ಕೆಂಪೇಗೌಡ ವಿಮಾನ ನಿಲ್ದಾಣ ಕಾರ್ಯಾರಂಭಿಸಿದ ನಂತರ ರಾಜ್ಯ ಮತ್ತು ಕೇಂದ್ರದಿಂದ ನೂರಾರು ಹೊಸ ಯೋಜನೆಗಳು ಈ ಭಾಗದಲ್ಲಿ ಜಾರಿಯಾಗುತ್ತಿದ್ದು ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡಿದೆ. ಈ ಬೆನ್ನಲ್ಲೇ ಇದೀಗ ಮತ್ತೊಂದು ಹೊಸ ರೈಲು ಮಾರ್ಗಕ್ಕೆ ಸರ್ಕಾರ ಮುಂದಾಗಿದ್ದು, ಅದರ ವಿರುದ್ದ ಸ್ಥಳಿಯ ರೈತರು ಹೋರಾಟದ ಹಾದಿ ಹಿಡಿಯಲು ಮುಂದಾಗಿದ್ದಾರೆ.

ಕೋಗಿಲು ಜನ ಕೂಗಿಗೆ ಕಿವಿಯಾದ ಮಕ್ಕಳ ಆಯೋಗ: ಮನೆಗಳನ್ನ ನೆಲಸಮ ಮಾಡಿದ್ದ ಅಧಿಕಾರಿಗಳ ವಿರುದ್ಧ ಕೇಸ್ ಬುಕ್

ಕೋಗಿಲು ಜನ ಕೂಗಿಗೆ ಕಿವಿಯಾದ ಮಕ್ಕಳ ಆಯೋಗ: ಮನೆಗಳನ್ನ ನೆಲಸಮ ಮಾಡಿದ್ದ ಅಧಿಕಾರಿಗಳ ವಿರುದ್ಧ ಕೇಸ್ ಬುಕ್

ಯಲಹಂಕದ ಕೋಗಿಲಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಡೆಸಿದ್ದ ಮನೆ ತೆರವು ಕಾರ್ಯಾಚರಣೆಯಿಂದ ನೂರಾರು ಮಕ್ಕಳು ಮತ್ತು ಬಾಣಂತಿಯರು ಬೀದಿಗೆ ಬಿದ್ದಿದ್ದಾರೆ. ಚಳಿಯಿಂದ 500ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಈ ಕುರಿತು ಟಿವಿ9 ವರದಿ ಆಧರಿಸಿ ರಾಜ್ಯ ಮಕ್ಕಳ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಜಿಬಿಎಗೆ ಖಡಕ್​ ಸೂಚನೆ ನೀಡಿದೆ.

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!

ಅನೈತಿಕ ಸಂಬಂಧ ಕೊನೆಗೊಳಿಸಿದ್ದಕ್ಕೆ ಯುವಕನ ಮೇಲೆ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ಮಧ್ಯಪ್ರವೇಶದಿಂದ ಯುವಕ ಪಾರಾಗಿದ್ದು, ಪೊಲೀಸರು ಮಹಿಳೆ ಸೇರಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಂಚಿಕೆ ಹೆಸರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಭಾರಿ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಸಮತಟ್ಟಾದ ಭೂಮಿಯನ್ನು ಪ್ರಭಾವಿಗಳಿಗೆ ಮೀಸಲಿಟ್ಟು, 20-30 ಅಡಿ ಆಳದ ಕ್ವಾರಿ ಜಾಗವನ್ನು ಬಡವರಿಗೆ ಮಂಜೂರು ಮಾಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಮಿತ್ರ ದ್ರೋಹ: ತಂಗಿ ಜೊತೆ ಲವ್ವಿಡವ್ವಿ; ಗೆಳೆಯನಿಗೆ ಚಟ್ಟ ಕಟ್ಟಿದ ಸ್ನೇಹಿತರು

ಮಿತ್ರ ದ್ರೋಹ: ತಂಗಿ ಜೊತೆ ಲವ್ವಿಡವ್ವಿ; ಗೆಳೆಯನಿಗೆ ಚಟ್ಟ ಕಟ್ಟಿದ ಸ್ನೇಹಿತರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತನನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಕೊಚ್ಚಿ ಸ್ನೇಹಿತರೇ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಹುಡುಗಿ ವಿಚಾರಕ್ಕೆ ಶುರುವಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಓರ್ವ ಅಪ್ರಾಪ್ತ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಡೆಡ್ಲಿ ಅಟ್ಯಾಕ್​​: ಯುವಕ ಜಸ್ಟ್​​ ಮಿಸ್​​

ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಡೆಡ್ಲಿ ಅಟ್ಯಾಕ್​​: ಯುವಕ ಜಸ್ಟ್​​ ಮಿಸ್​​

ಅಕ್ರಮ ಸಂಬಂಧದ ಆರೋಪ ಹಿನ್ನೆಲೆಯಲ್ಲಿ ಯುವಕನ ಮೇಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತ ಗಂಡನ ಮನೆಯಲ್ಲಿ ಕಿರುಕುಳಕ್ಕೆ ಬೇಸತ್ತು ತವರು ಮನೆಗೆ ಬಂದಿದ್ದ ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ಕೊಲೆಗೆ ವ್ಯಕ್ತಿಯೋರ್ವ ಯತ್ನಿಸಿರುವ ಘಟನೆ ಅಥಣಿ ತಾಲೂಕಿನ ತೆಲಸಂಗ ಗ್ರಾಮ‌ದಲ್ಲಿ ನಡೆದಿದೆ.

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆ ಶಿವಕುಮಾರ್​

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆ ಶಿವಕುಮಾರ್​

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್​ ಹುಸೇನ್ ನೀಡಿರುವ​ ಸ್ಫೋಟಕ ಹೇಳಿಕೆ ಸದ್ಯ ಸಂಚಲನ ಸೃಷ್ಟಿಸಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್​, ಶಾಸಕ ಇಕ್ಬಾಲ್​ ಹುಸೇನ್​ಗೆ​ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಹೇಳಿದ್ದಾರೆ.

ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ನಿಯಮ ಪಾಲಿಸಲೇಬೇಕು, ಉಲ್ಲಂಘಿಸಿದ್ರೆ ದಂಡ ಖಂಡಿತ

ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ನಿಯಮ ಪಾಲಿಸಲೇಬೇಕು, ಉಲ್ಲಂಘಿಸಿದ್ರೆ ದಂಡ ಖಂಡಿತ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿಯಾಗಿದೆ. ಇಂದಿನಿಂದ ಟರ್ಮಿನಲ್ 1ಕ್ಕೆ ಯಲ್ಲೋ ಬೋರ್ಡ್ ಕಾರುಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇವರು P3, P4 ಪಾರ್ಕಿಂಗ್ ಬಳಸಬೇಕು. ವೈಟ್ ಬೋರ್ಡ್ ವಾಹನಗಳಿಗೆ 8 ನಿಮಿಷ ಉಚಿತ ಪ್ರವೇಶವಿದ್ದು, ನಂತರ ಪ್ರತಿ 5 ನಿಮಿಷಕ್ಕೆ 150 ರೂ. ದಂಡ ವಿಧಿಸಲಾಗುವುದು. ಈ ನಿಯಮಗಳ ಬಗ್ಗೆ ಚಾಲಕರು ಮತ್ತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತಿದೆ, ಮತ್ತು ಅಡಚಣೆ ತಪ್ಪಿಸಲು ಬಂದೋಬಸ್ತ್ ಏರ್ಪಡಿಸಲಾಗಿದೆ.

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಸೈಟ್ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ ಹಾಗೂ ಹಣ ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಆಡಿಯೋ-ವಿಡಿಯೋ ಸಾಕ್ಷ್ಯಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದಾರೆ. ಅತ್ತ ಸ್ವಾಮೀಜಿಯೂ ಪ್ರತಿ ದೂರು ನೀಡಿದ್ದು, ಹಣಕ್ಕಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವನಹಳ್ಳಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

ದೇವನಹಳ್ಳಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಅತಿವೇವಾಗಿ ಬಂದ ಕಾರು ಡಿವೈಡರ್ ಹಾರಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿಯಾದ ಪರಿಣಾಕ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ. ಇದರಿಂದಾಗಿ ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.