ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಬೆಂಗಳೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕರ ಗೋಳಾಟ ನೋಡಿ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ಗೆ ದೆಹಲಿಯಿಂದ ಬರಬೇಕಿದ್ದ ಇಂಡಿಗೋ ವಿಮಾನ 12 ಗಂಟೆ ವಿಳಂಬದಿಂದ ಪ್ರಯಾಣಿಕರು ಪರದಾಡಿದ್ದಾರೆ. 3 ದಿನದಲ್ಲಿ ಇಂಡಿಗೋ ವಿಮಾನಗಳ 205 ಸಂಚಾರ ರದ್ದಾಗಿದೆ. ವಿಮಾನಗಳು ನಿಂತಲ್ಲೇ ನಿಂತಿದ್ರೆ, ಪ್ರಯಾಣಿಕರು ಡಿಪಾರ್ಚರ್ ಗೇಟ್ ಬಳಿ ಕೂರಲು ಜಾಗವಿಲ್ಲದೆ ದಿಕ್ಕೆಟ್ಟಿದ್ರು.
- Naveen Kumar
- Updated on: Dec 4, 2025
- 9:10 pm
ಬೆಂಗಳೂರಿನಲ್ಲಿ ವರ, ಭುವನೇಶ್ವರದಲ್ಲಿ ವಧು: ಇಂಡಿಗೋ ವಿಮಾನದಿಂದ ಮದುವೆಗೆ ವಿಘ್ನದ ಆತಂಕ
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿವೆ. ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ. ಭುವನೇಶ್ವರದಲ್ಲಿ ನಡೆಯಬೇಕಿದ್ದ ಮದುವೆಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದ ವರನ ಕುಟುಂಬಕ್ಕೂ ವಿಮಾನ ವ್ಯತ್ಯಯದಿಂದ ಆತಂಕ ಎದುರಾಗಿದೆ. ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
- Naveen Kumar
- Updated on: Dec 4, 2025
- 4:24 pm
ತುಂಬಿ ತುಳುಕುತ್ತಿರುವ ಬೆಂಗಳೂರು ಏರ್ಪೋರ್ಟ್ ಟರ್ಮಿನಲ್ 1: ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ
‘ಥರ್ಡ್ ಪಾರ್ಟಿ ಸಿಸ್ಟಂ’ ದೋಷದಿಂದ ಚೆಕ್-ಇನ್ ವ್ಯತ್ಯಯ ಉಂಟಾಗಿ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಸಮಯದಲ್ಲಿ ವಿಳಂಬವಾಗಿದ್ದಾಯ್ತು. ಇದೀಗ ಇಂಡಿಗೋ ಏರ್ಲೈನ್ಸ್ ವಿಮಾನ ಸಂಚಾರದಲ್ಲಿ ನಿರಂತರ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟರ್ಮಿನಲ್ ಒಂದರಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದೆ. ವಿಡಿಯೋ ಇಲ್ಲಿದೆ ನೋಡಿ.
- Naveen Kumar
- Updated on: Dec 4, 2025
- 7:13 am
ಬೆಂಗಳೂರು ಏರ್ಪೋರ್ಟ್: ಹೊಸ ಪಾರ್ಕಿಂಗ್ ರೂಲ್ಸ್ಗೆ ಕ್ಯಾಬ್ ಚಾಲಕರ ವಿರೋಧ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಸೆಂಬರ್ 8ರಿಂದ ಹೊಸ ಪಾರ್ಕಿಂಗ್ ನಿಯಮಗಳು ಜಾರಿಗೆ ಬರಲಿವೆ. ಸೈಡ್ ಪಿಕಪ್ ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವುದು ಇದರ ಉದ್ದೇಶ. ಎಲ್ಲೋ ಬೋರ್ಡ್ ಟ್ಯಾಕ್ಸಿಗಳಿಗೆ ಆಗಮನ ದ್ವಾರ ನಿಷೇಧಿಸಿ, P3 ಮತ್ತು P4 ಪಾರ್ಕಿಂಗ್ಗೆ ಸೂಚಿಸಲಾಗಿದೆ. ಆದರೆ, ಈ ಹೊಸ ನಿಯಮಗಳಿಗೆ ಚಾಲಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
- Naveen Kumar
- Updated on: Dec 3, 2025
- 1:33 pm
ಬೆಂಗಳೂರು ಏರ್ಪೋರ್ಟ್: 50 ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ, 20 ಫ್ಲೈಟ್ಗಳು ರದ್ದು
ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 70ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. 22 ವಿಮಾನಗಳು ರದ್ದಾಗಿದ್ದು, 50ಕ್ಕೂ ಹೆಚ್ಚು ವಿಳಂಬವಾಗಿವೆ. ಕೊಲ್ಕತ್ತಾ, ದೆಹಲಿ ಸೇರಿದಂತೆ ಹಲವು ನಗರಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ನಲ್ಲಿ ಪರದಾಟ ನಡೆಸಿದ್ದಾರೆ. ಈ ಅಡಚಣೆ ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ.
- Naveen Kumar
- Updated on: Dec 2, 2025
- 7:38 pm
ಬಯಲು ಸೀಮೆಯಲ್ಲಿ ಕಾಶ್ಮೀರ ಕೇಸರಿ ಬೆಳೆದು ಸೈ ಎನಿಸಿಕೊಂಡ ಸಾಫ್ಟ್ವೇರ್ ಇಂಜಿನಿಯರ್
ದೊಡ್ಡಬಳ್ಳಾಪುರದ ಸಾಫ್ಟ್ವೇರ್ ಇಂಜಿನಿಯರ್ ಮನೆಯ ಕೋಣೆಯಲ್ಲೇ ಕೇಸರಿ ಬೆಳೆದು ವಿಶೇಷ ಸಾಧನೆ ಮಾಡಿದ್ದಾರೆ. ಎಸಿಯ ಸಹಾಯದಿಂದ ಕೇಸರಿ ಬೆಳೆಗೆ ಬೇಕಾದ ಹವಾಮಾನ ಸೃಷ್ಟಿಸಿ, 45 ಕೆ.ಜಿ. ಗಡ್ಡೆಗಳನ್ನು ಬಳಸಿ ಯಶಸ್ವಿಯಾಗಿ ಕೃಷಿ ಮಾಡಿದ್ದಾರೆ. ಈ ನವೀನ ಕೃಷಿ ವಿಧಾನದಿಂದ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
- Naveen Kumar
- Updated on: Dec 1, 2025
- 7:32 pm
ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದಾರಿಯಲ್ಲಿ ಬಸ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ: 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕ್ಯಾಂಟರ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್ ಹಾಗೂ ಬಸ್ನ ಮುಂಭಾಗ ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದೆ.
- Naveen Kumar
- Updated on: Nov 27, 2025
- 12:42 pm
ದೆಹಲಿಯಲ್ಲಿ ಬೀಡುಬಿಟ್ಟ ಡಿ.ಕೆ. ಶಿವಕುಮಾರ್ ಬಣ: ಕುತೂಹಲ ಮೂಡಿಸಿದ ಶಾಸಕರ ನಡೆ
ಕರ್ನಾಟಕ ರಾಜಕೀಯದಲ್ಲಿ ನಾಯಕತ್ವದ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ರಾಷ್ಟ್ರ ರಾಜಧಾನಿಯನ್ನ ಶಾಸಕರ ತಂಡ ತಲುಪಿದ್ದು, ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದರೂ ಡಿಕೆಶಿ ಬಣದ ಶಾಸಕರು ಅವರನ್ನು ಭೇಟಿಯಾಗಿರಲಿಲ್ಲ.
- Naveen Kumar
- Updated on: Nov 24, 2025
- 12:56 pm
ಬಾರ್ ಮಾಡಲು ಅಡ್ಡಿಯಾಗಿದೆ ಎಂದು ಆಂಜನೇಯ ಸ್ವಾಮಿಯ ದೇವಸ್ಥಾನವೇ ಧ್ವಂಸ!
ಬಾರ್ ಮಾಡಲು ಅಡ್ಡಿಯಾದ ಕಾರಣಕ್ಕೆ ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ವಾಕಿಂಗ್ ಬಂದಿದ್ದವರು ದೇಗಲು ನೆಲಸಮ ಆಗಿದ್ದನ್ನು ಗಮನಿಸಿದ್ದಾರೆ. ಈ ಬಗ್ಗೆ ನಂದಗುಡಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರು ದೌಡಾಯಿಸಿದ್ದಾರೆ.
- Naveen Kumar
- Updated on: Nov 20, 2025
- 10:17 am
ಬೆಂಗಳೂರಿನ ಏರ್ಪೋರ್ಟ್ನಲ್ಲಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; 8 ಬಗೆಯ ಅಪರೂಪದ ಪ್ರಾಣಿಗಳೂ ವಶಕ್ಕೆ
ಬೆಂಗಳೂರಿನ ದೇವನಹಳ್ಳಿ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಕಳೆದ 18 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
- Naveen Kumar
- Updated on: Nov 18, 2025
- 12:27 pm
ಕೆಂಪೇಗೌಡ ಏರ್ಪೋಟ್ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಈ ಘಟನೆ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ವಿಡಿಯೋ ನೋಡಿ.
- Naveen Kumar
- Updated on: Nov 17, 2025
- 11:02 pm
ಕೆಂಪೇಗೌಡ ಏರ್ಪೋಟ್ನಲ್ಲಿ ಮಿತಿ ಮೀರಿದ ಸೈಡ್ ಪಿಕಪ್ ಚಾಲಕರ ಹಾವಳಿ: ಲಾಂಗ್ ಹಿಡಿದು ಅಟ್ಟಾಡಿಸಿದ ಭೂಪ ಅರೆಸ್ಟ್
ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಸದ್ಯ ಈ ಘಟನೆಯಿಂದ ಏರ್ಪೋಟ್ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಬೆಚ್ಚಿಬಿದ್ದಿದ್ದರು. ಸದ್ಯ ಏರ್ಪೋಟ್ ಭದ್ರತಾ ಪಡೆ ಸಿಬ್ಬಂದಿ ಓರ್ವ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
- Naveen Kumar
- Updated on: Nov 17, 2025
- 8:41 pm