ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್ ಇಂಡಿಯಾ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ
ನಾಸಿಕ್: ಕಾರು, ಬೈಕ್ ನಡುವೆ ಭೀಕರ ಅಪಘಾತ, ಮಗು ಸೇರಿ 7 ಮಂದಿ ಸಾವು, ಇಬ್ಬರಿಗೆ ಗಾಯ
ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ(Accident) ಸಂಭವಿಸಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಜಿಲ್ಲೆಯ ದಿಂಡೋರಿ ನಗರದ ಬಳಿ ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ವಾನಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ಘಟನೆಯ ಬಗ್ಗೆ ಪೊಲೀಸರಿಗೆ ರಾತ್ರಿ 11.57 ಕ್ಕೆ ಮಾಹಿತಿ ಬಂದಿತ್ತು. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಎರಡೂ ವಾಹನಗಳು ರಸ್ತೆಬದಿಯಲ್ಲಿರುವ ಸಣ್ಣ ಪಟ್ಟಣದಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ, 2 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
- Nayana Rajeev
- Updated on: Jul 17, 2025
- 3:14 pm
Video: ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ, ಕುಡುಕನೋ, ಹುಚ್ಚನೋ ಒಂದೂ ಗೊತ್ತಿಲ್ಲ
ವ್ಯಕ್ತಿಯೊಬ್ಬ ಬಸ್ ಎದುರು ಹೋಗಿ ಕುಳಿತಿರುವ ವಿಡಿಯೋ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಆತ ಏಳುವುದಕ್ಕೆ ಸಿದ್ಧನಿರಲಿಲ್ಲ, ಕುಡುಕನೋ, ಹುಚ್ಚನೋ ಎಂದು ಗೊತ್ತಾಗದ ರೀತಿಯಲ್ಲಿ ಆತ ಇದ್ದ. ಪುಣೆ ಮಹಾನಗರ ಪರಿವಾಹನ್ ಮಹಾಮಂಡಲ್ ಲಿಮಿಟೆಡ್ ಬಸ್ ಬರುವಾಗ ಈತ ರಸ್ತೆ ಮಧ್ಯದಲ್ಲಿ ಹೋಗಿ ಕುಳಿತಿದ್ದಾನೆ. ಬಸ್ ಆತನ ಎದುರಿಗೆ ಬಂದು ನಿಂತಿದೆ. ಆದರೂ ಆತ ಏಳಲು ಸಿದ್ಧವಿರಲಿಲ್ಲ. ಬಳಿಕ ಹೇಗೋ ಎದ್ದು ನೃತ್ಯ ಮಾಡಲು ಶುರು ಮಾಡುತ್ತಾನೆ.
- Nayana Rajeev
- Updated on: Jul 17, 2025
- 2:22 pm
ತನ್ನನ್ನು ನಂಬಿ ಬಂದ ಗೆಳತಿಯನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನ, ಒಪ್ಪದಿದ್ದಾಗ ಕೊಲೆ
ಲಿವ್-ಇನ್ ಸಂಗಾತಿಯ ಎದೆಗೆ ಚಾಕುವಿನಿಂದ ಚುಚ್ಚಿ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ರಾಜೋಳು ಮಂಡಲ ವ್ಯಾಪ್ತಿಯ ಬಿ ಸವರಂ ಗ್ರಾಮದ ಸಿದ್ಧಾರ್ಥ ನಗರದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಪುಷ್ಪಾ ಎಂಬಾಕೆ ಮೃತಳು. ಆಕೆಗೆ ಈ ಹಿಂದೆಯೇ ಬೇರೊಬ್ಬರ ಜತೆ ವಿವಾಹವಾಗಿತ್ತು. ಪತಿಯಿಂದ ಬೇರ್ಪಟ್ಟು ಕಳೆದ ಆರು ತಿಂಗಳಿನಿಂದ ಶೇಖ್ ಶಮ್ಮಾ ಜತೆ ವಾಸಿಸುತ್ತಿದ್ದಳು. ಆ ಗ್ರಾಮದಲ್ಲೇ ಮನೆ ಬಾಡಿಗೆಗೆ ಪಡೆದಿದ್ದರು.
- Nayana Rajeev
- Updated on: Jul 17, 2025
- 12:42 pm
Video: ಇರಾಕ್ನ ಐದು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ, 50 ಮಂದಿ ಸಾವು
ಇರಾಕ್ನ ಐದು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 50 ಮಂದಿ ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ಪೂರ್ವ ಇರಾಕ್ನ ಅಲ್-ಕುಟ್ ನಗರದ ಹೈಪರ್ಮಾರ್ಕೆಟ್ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸಂಭವಿಸಿದೆ. ಅಲ್-ಕುಟ್ನಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.ಈ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಾಚಿತ್ತು. ದಟ್ಟ ಹೊಗೆ, ಬೆಂಕಿ ಯಾರನ್ನಾದರೂ ಬೆಚ್ಚಿ ಬೀಳಿಸುವಂತಿತ್ತು.
- Nayana Rajeev
- Updated on: Jul 17, 2025
- 11:59 am
ಪಾಟ್ನಾ: ಪೆರೋಲ್ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ಗುಂಡು ಹಾರಿಸಿದ ದುಷ್ಕರ್ಮಿಗಳು
ಪೆರೋಲ್ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಶಾಸ್ತ್ರಿ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಪ್ಯಾರಾಸ್ ಆಸ್ಪತ್ರೆ ಆವರಣದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಅಪರಿಚಿತ ದುಷ್ಕರ್ಮಿಗಳು ಕೈದಿಯ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಕೋರರನ್ನು ಗುರುತಿಸಲು ಮತ್ತು ಹಲ್ಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಘಟನೆಯು ಆಸ್ಪತ್ರೆಯೊಳಗೆ ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಯಿತು. ಗಾಯಗೊಂಡ ಕೈದಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.
- Nayana Rajeev
- Updated on: Jul 17, 2025
- 11:48 am
Narendra Modi: ಪ್ರಧಾನಿ ಮೋದಿ ಆಗಸ್ಟ್ನಲ್ಲಿ ಚೀನಾಗೆ ಭೇಟಿ ನೀಡುವ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ನಲ್ಲಿ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಗಾಗಿ ಚೀನಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಮೊದಲು, ವಿರೋಧ ಪಕ್ಷದ ನಾಯಕರು ಭಾರತದ ವಿದೇಶಾಂಗ ನೀತಿಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದ್ದಾರೆ. 25 ನೇ ಶೃಂಗಸಭೆ ಚೀನಾದ ಟಿಯಾಂಜಿನ್ ನಗರದಲ್ಲಿ ನಡೆಯಲಿದೆ. ಆಗಸ್ಟ್ನಲ್ಲಿ ಇದನ್ನು ನಡೆಸಲು ಉದ್ದೇಶಿಸಲಾಗಿದೆ. ಈ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಮುಂದಿನ ತಿಂಗಳು ಚೀನಾಗೆ ಭೇಟಿ ನೀಡಲಿದ್ದಾರೆ. ಇದರಿಂದ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳ ಹೊಸ ಅಧ್ಯಾಯವನ್ನು ತೆರೆಯಬಹುದು.
- Nayana Rajeev
- Updated on: Jul 17, 2025
- 11:48 am
ಗರ್ಭದಲ್ಲೇ ಶಿಶು ಸತ್ತಿದೆ ಎಂದ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಮಹಿಳೆ
ಗರ್ಭದಲ್ಲೇ ಶಿಶು ಸತ್ತಿದೆ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಘೋಷಿಸಿದ ಬಳಿಕ ಮಹಿಳೆ ಖಾಸಗಿ ಆಶ್ಪತ್ರೆಯಲ್ಲಿ ಆರೋಗ್ಯವಂತ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ. ದುರ್ಗಾ ದ್ವಿವೇದಿ ಎಂಬುವವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಆಸ್ಪತ್ರೆಯ ವೈದ್ಯರು ಮಹಿಳೆಯ ಗರ್ಭದಲ್ಲೇ ಶಿಶು ಸಾವನ್ನಪ್ಪಿದೆ ಎಂದು ಘೋಷಿಸಿದ್ದರು. ಕೂಡಲೇ ಮಹಿಳೆಯ ಪತಿ ತನ್ನ ಪತ್ನಿಯನ್ನು ಕರೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಆಕೆ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
- Nayana Rajeev
- Updated on: Jul 17, 2025
- 10:31 am
Video: ತಮಿಳುನಾಡು: ರಸ್ತೆಯಿಂದ ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿ
ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಯನ್ನು ರಸ್ತೆಯಿಂದ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗುಮ್ಮಿಡಿಪೂಂಡಿ ಪಟ್ಟಣದ ಬಳಿಯ ತಿರುವಲ್ಲೂರು ಜಿಲ್ಲೆಯಲ್ಲಿ ಜುಲೈ 12ರಂದು ಘಟನೆ ನಡೆದಿದೆ. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಪೊಲೀಸರನ್ನು ಕೇಳಿದ್ದಾರೆ. 10 ವರ್ಷದ ಬಾಲಕಿ ಶಾಲೆಯಿಂದ ಹಿಂತಿರುಗುತ್ತಿದ್ದಾಗ ಆರೋಪಿ ಆಕೆಯನ್ನು ಅಪಹರಿಸಲು ಪ್ರಯತ್ನಿಸಿದ್ದ.
- Nayana Rajeev
- Updated on: Jul 17, 2025
- 9:57 am
Video: ಹೈಕೋರ್ಟ್ನ ವರ್ಚ್ಯುವಲ್ ವಿಚಾರಣೆಗೆ ಟಾಯ್ಲೆಟ್ನಿಂದ ಹಾಜರಾದ ವ್ಯಕ್ತಿ, 1 ಲಕ್ಷ ರೂ. ದಂಡ
ವ್ಯಕ್ತಿಯೊಬ್ಬ ಟಾಯ್ಲೆಟ್ ಸೀಟ್ ಮೇಲೆ ಕುಳಿತು ಗುಜರಾತ್ ಹೈಕೋರ್ಟ್ನ ವರ್ಚ್ಯುವಲ್ ವಿಚಾರಣೆಗೆ ಹಾಜರಾಗಿದ್ದು, ಆತನಿಗೆ ನ್ಯಾಯಾಲಯವು 1 ಲಕ್ಷರೂ. ದಂಡ ವಿಧಿಸಿದೆ. ಆ ವ್ಯಕ್ತಿಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ನಡೆಯುತ್ತಿದೆ.ಸೋಮವಾರ ನ್ಯಾಯಮೂರ್ತಿ ಎ.ಎಸ್. ಸುಪೆಹಿಯಾ ಮತ್ತು ನ್ಯಾಯಮೂರ್ತಿ ಆರ್.ಟಿ. ವಚ್ಛಾನಿ ಅವರ ವಿಭಾಗೀಯ ಪೀಠದ ಮುಂದೆ ವಿಚಾರಣೆ ನಡೆಸಲಾಯಿತು. ನ್ಯಾಯಾಲಯವು ತನ್ನ ಆದೇಶದಲ್ಲಿ, ಆರೋಪಿ ಸಮದ್ ಅಬ್ದುಲ್ ರೆಹಮಾನ್ ಶಾ ತಮ್ಮ ನಡವಳಿಕೆಗಾಗಿ ಬೇಷರತ್ತಾಗಿ ಕ್ಷಮೆಯಾಚಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
- Nayana Rajeev
- Updated on: Jul 17, 2025
- 9:35 am
ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ
ಈಗ ಉತ್ತರಾಖಂಡದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ , ಬೆಳಗ್ಗೆ ವಿದ್ಯಾರ್ಥಿಗಳಿಗೆ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು ಕಲಿಸಲಾಗುತ್ತದೆ . ಉತ್ತರಾಖಂಡ ಸರ್ಕಾರದ ಅಧಿಕೃತ ಆದೇಶದ ಪ್ರಕಾರ, ರಾಜ್ಯದ ಸರ್ಕಾರಿ ಶಾಲೆಗಳ ಪ್ರಾರ್ಥನಾ ಸಭೆಯಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಒಂದು ಶ್ಲೋಕವನ್ನು ಅರ್ಥಪೂರ್ಣವಾಗಿ ಪಠಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ಭಾರತೀಯ ಸಂಪ್ರದಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸುಮಾರು 17,000 ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ಬಂದಿದೆ .
- Nayana Rajeev
- Updated on: Jul 17, 2025
- 9:10 am
Viral Video: ಆಸ್ತಿ ವಿವಾದ: ಕಾರು ಗುದ್ದಿಸಿ ಸಹೋದರನ ಕುಟುಂಬದವರನ್ನು ಕೊಲ್ಲಲು ಯತ್ನ
ಮನುಷ್ಯ, ಆಸ್ತಿ, ಹಣದ ವಿಚಾರಕ್ಕೆ ಬಂದರೆ ಯಾವ ಮಟ್ಟಕ್ಕಾದರೂ ಇಳಿಯುತ್ತಾನೆ ಎಂಬುದಕ್ಕೆ ಇದೇ ನಿದರ್ಶನ. ಆಸ್ತಿ ವಿವಾದ ತಾರಕ್ಕೇರಿ ವ್ಯಕ್ತಿಯೊಬ್ಬ ಕಾರು ಗುದ್ದಿಸಿ ಸಹೋದರನ ಕುಟುಂಬದವರೆಲ್ಲರನ್ನೂ ಹತ್ಯೆ ಮಾಡಲು ಪ್ರಯತ್ನಿಸಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಈ ವಿಡಿಯೋ ಸೆರೆಯಾಗಿದೆ.ಒಂದು ತಿಂಗಳ ಹಿಂದಿನವರೆಗೂ ತಮ್ಮ ಕಿರಿಯ ಮಗ ದಿಲ್ಬಾಗ್ ಸಿಂಗ್ ಜೊತೆ ವಾಸಿಸುತ್ತಿದ್ದ ಸುರ್ಜಿತ್ ಸಿಂಗ್ ಮತ್ತು ಅವರ ಪತ್ನಿಯ ವಿಚಾರವಾಗಿ ಗದ್ದಲ ಶುರುವಾಗಿತ್ತು.
- Nayana Rajeev
- Updated on: Jul 17, 2025
- 11:22 am
Karnataka Rains: ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರು, ಕೊಡಗು, ಹಾಸನದಲ್ಲಿ ಭಾರಿ ಮಳೆ ಸಾಧ್ಯತೆ
ಇಂದಿನಿಂದ ಕರ್ನಾಟಕದ 14ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ತುಮಕೂರು, ರಾಮನಗರ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
- Nayana Rajeev
- Updated on: Jul 17, 2025
- 11:13 am