AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಯನಾ ರಾಜೀವ್

ನಯನಾ ರಾಜೀವ್

ಮುಖ್ಯ ಉಪಸಂಪಾದಕಿ - TV9 Kannada

nayana.rajeev@tv9.com

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow On:
ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಪ್ರಯಾಣಿಸುವಾಗ ಅದರಲ್ಲೂ ಉತ್ತರ ಭಾರತದ ರೈಲುಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಿರುತ್ತದೆ. ಹಣ ಕೇಳುತ್ತಾರೆ, ಕೊಟ್ಟರೆ ಆಶೀರ್ವಾದ ಮಾಡುತ್ತಾರೆ, ಕೊಡದಿದ್ದರೆ ಏನೋ ಬೈದು ಶಾಪ ಹಾಕುತ್ತಾ ಹೋಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇವರ ವರ್ತನೆ ಮಿತಿ ಮೀರಿದೆ, ಹಣ ಕೊಡದಿದ್ದರೆ ಹೊಡೆಯುವುದು, ಅನುಚಿತವಾಗಿ ವರ್ತಿಸುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅಂಥದ್ದೇ ವಿಡಿಯೋವೊಂದರಲ್ಲಿ ಮಂಗಳಮುಖಿಯೊಬ್ಬರು ಹಣ ಕೇಳಿದಾಗ ಪ್ರಯಾಣಿಕ ಹಣ ಕೊಡದಿದ್ದಕ್ಕೆ ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಕೆಟ್ಟದಾಗಿ ವರ್ತಿಸಿದ್ದು, ಎಲ್ಲರಿಗೂ ಮುಜುಗರ ತಂದಿತ್ತು.

ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆಗೆ ಭಾರಿ ಆಕ್ಷೇಪ

ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆಗೆ ಭಾರಿ ಆಕ್ಷೇಪ

ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್​ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ಏಪ್ರಿಲ್ 9ರ ಒಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದು.

Assembly Elections 2026 Voting: ನಾಳೆ ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 4ಕ್ಕೆ ಫಲಿತಾಂಶ

Assembly Elections 2026 Voting: ನಾಳೆ ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 4ಕ್ಕೆ ಫಲಿತಾಂಶ

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ 2026ರ ವಿಧಾನಸಭಾ ಚುನಾವಣಾ ಪ್ರಚಾರ ಮಂಗಳವಾರ ಅಂತ್ಯಗೊಂಡಿದೆ. ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126, ಕೇರಳದ 140 ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳಲ್ಲಿನ ಮತದಾರರು ಮತ್ತು ಅಭ್ಯರ್ಥಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿದೆ.

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು 25% ರಷ್ಟು ಕಡಿತಗೊಳಿಸಿದೆ. ಈ ನಿರ್ಧಾರವು ತಕ್ಷಣದಿಂದ ಜಾರಿಗೆ ಬರಲಿದ್ದು, ಮೂರು ತಿಂಗಳ ಅವಧಿಗೆ ಅನ್ವಯಿಸುತ್ತದೆ. ಏರುತ್ತಿರುವ ಇಂಧನ ಬೆಲೆಗಳು ಮತ್ತು ಜಾಗತಿಕ ಉದ್ವಿಗ್ನತೆಗಳಿಂದ ಸಂಕಷ್ಟದಲ್ಲಿರುವ ವಿಮಾನಯಾನ ಸಂಸ್ಥೆಗಳಿಗೆ ಇದು ಗಮನಾರ್ಹ ಪರಿಹಾರ ನೀಡುವ ನಿರೀಕ್ಷೆಯಿದೆ. ಈ ಕ್ರಮವು ವಾಯುಯಾನ ವಲಯದ ಆರ್ಥಿಕ ಒತ್ತಡವನ್ನು ತಗ್ಗಿಸುವ ಗುರಿಯನ್ನು ಹೊಂದಿದೆ.

Video: ಒಳ್ಳೆ ಟಿಪ್​ ಟಾಪ್​ ಆಗಿ ಬಂದು ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ

Video: ಒಳ್ಳೆ ಟಿಪ್​ ಟಾಪ್​ ಆಗಿ ಬಂದು ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ

ಸೂಟು ಬೂಟು ಹಾಕಿಕೊಂಡು ಬಂದ ಕಳ್ಳ ಬೈಕ್ ಡಿಕ್ಕಿಯಿಂದ 5 ಲಕ್ಷ ರೂ. ಕದ್ದಿರುವ ಘಟನೆ ಪಲ್ನಾಡುವಿನಲ್ಲಿ ನಡೆದಿದೆ. ಸಾಲದ ಮೇಲೆ ಸಾಲ ಪಡೆದು, ಈರುಳ್ಳಿ ಖರೀದಿಸಲೆಂದು ಸ್ಕೂಟಿ ಡಿಕ್ಕಿಯಲ್ಲಿ ರೈತ ಇಟ್ಟಿದ್ದ 5 ಲಕ್ಷ ರೂ. ಹಣವನ್ನು ಓರ್ವ ತೆಗೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಈರುಳ್ಳಿ ಗೋದಾಮಿನ ಎದುರು ಬಂದು ವ್ಯಕ್ತಿಯೊಬ್ಬ ಫೋನ್​​ನಲ್ಲಿ ಮಾತನಾಡುತ್ತಿರುವಂತೆ ನಟಿಸುತ್ತಾನೆ. ಬಳಿಕ ರೈತ ಏನೋ ಕೆಲಸ ಮಾಡುತ್ತಿರುವ ಸಮಯ ನೋಡಿ ಬೈಕ್​ನ ಡಿಕ್ಕಿಯಲ್ಲಿದ್ದ ದುಡ್ಡಿನ ಚೀಲ ಎತ್ತಿಕೊಂಡು ಪರಾರಿಯಾಗುತ್ತಾನೆ.

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿವೆ, ಹಾರ್ಮುಜ್ ಜಲಸಂಧಿ ತೆರೆಯಲಾಗಿದೆ. ಡೊನಾಲ್ಡ್ ಟ್ರಂಪ್ ಘೋಷಿಸಿದಂತೆ, ಚೀನಾ ಮತ್ತು ಪಾಕಿಸ್ತಾನದ ಮಧ್ಯಸ್ಥಿಕೆ ಈ ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಚೀನಾ ಇತರೆ ದೇಶಗಳ ಮೂಲಕ ಇರಾನ್ ಮೇಲೆ ಪ್ರಭಾವ ಬೀರಿತು, ಆದರೆ ಟ್ರಂಪ್ ಪಾಕಿಸ್ತಾನದ ಮಾತುಕತೆ ನಿರ್ಣಾಯಕವೆಂದು ಒಪ್ಪಿಕೊಂಡರು. ಯುದ್ಧದ ಭೀತಿಯನ್ನು ಶಮನಗೊಳಿಸಲು ಈ ಪ್ರಮುಖ ರಾಜತಾಂತ್ರಿಕ ಪ್ರಯತ್ನಗಳು ನೆರವಾಗಿವೆ.

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ಆಂಧ್ರಪ್ರದೇಶದ ರೈಲಿನಲ್ಲಿ ಮಹಿಳೆಯೊಬ್ಬರು ಸುರಕ್ಷಿತವಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದರು. ಎಂಟು ತಿಂಗಳ ಗರ್ಭಿಣಿ ತರನ್ನಮ್ ಖಾತುನ್ ಅವರಿಗೆ ಪ್ರಯಾಣದ ವೇಳೆ ಹೆರಿಗೆ ನೋವು ಕಾಣಿಸಿಕೊಂಡಾಗ, ರೈಲ್ವೆ ಸಿಬ್ಬಂದಿ ಮತ್ತು ಟಿಕೆಟ್ ಪರಿಶೀಲನಾಧಿಕಾರಿ ಜಿ. ಜ್ಯೋತಿ ತಕ್ಷಣ ನೆರವಿಗೆ ಧಾವಿಸಿದರು. ಅವರ ಸಕಾಲಿಕ ಸಹಾಯದಿಂದ ರೈಲಿನಲ್ಲೇ ಹೆರಿಗೆ ಮಾಡಿಸಲಾಯಿತು. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ರೈಲ್ವೆ ಸಿಬ್ಬಂದಿಯ ಮಾನವೀಯತೆ ಮತ್ತು ಕ್ಷಿಪ್ರ ಸ್ಪಂದನೆಗೆ ಪ್ರಶಂಸೆ ವ್ಯಕ್ತವಾಗಿದೆ.

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಅಮೆರಿಕದೊಂದಿಗೆ ಇರಾನ್ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿದ್ದರೂ, ಮೊಜ್ತಬಾ ಖಮೇನಿ 'ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ' ಎಂದು ಮಿಲಿಟರಿ ಘಟಕಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆಯಿಂದ ಡೊನಾಲ್ಡ್ ಟ್ರಂಪ್ ಘೋಷಿಸಿದ ಈ ತಾತ್ಕಾಲಿಕ ಒಪ್ಪಂದವು ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಇರಾನ್‌ಗೆ ಷರತ್ತು ವಿಧಿಸಿದೆ. ಇಸ್ರೇಲ್ ಕೂಡ ಒಪ್ಪಿದೆ. ಸಂಘರ್ಷ ಇನ್ನೂ ಪೂರ್ಣಗೊಂಡಿಲ್ಲ.

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆದಿದ್ದು, ತೈಲ ಸಾಗಾಟ ಸುಗಮವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್‌ನಿಂದ ಎರಡು ವಾರಗಳ ಕದನ ವಿರಾಮ ಘೋಷಣೆಯ ನಂತರ ಈ ಒಪ್ಪಂದ ಏರ್ಪಟ್ಟಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯು ಪ್ರಮುಖ ಪಾತ್ರ ವಹಿಸಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಇಳಿದು, ಅಮೆರಿಕದ ಷೇರು ಮಾರುಕಟ್ಟೆಗಳು ಏರಿಕೆಯಾಗಿವೆ. ಇದು ಜಾಗತಿಕ ಆರ್ಥಿಕತೆಗೆ ನೆಮ್ಮದಿ ತಂದಿದೆ.

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್ ಅವರ ಅತ್ತಿಗೆ ಆಶಾ (32), ಅವರ ಮಕ್ಕಳಾದ ಶ್ರೇಯಶ್ (11), ಶ್ರಾವಣಿ (11), ಶ್ರದ್ಧಾ (13) ಮತ್ತು ಸೃಷ್ಟಿ (14), ಮತ್ತು ಸಂಬಂಧಿಕರ ಮಗು ಸಮೃದ್ಧಿ (7) ಸೇರಿದ್ದಾರೆ.

ಇಂದು ಯಾರೂ ರೈಲಿನಲ್ಲಿ ಓಡಾಡ್ಬೇಡಿ, ಇರಾನ್ ಜನರಿಗೆ ಇಸ್ರೇಲ್ ಎಚ್ಚರಿಕೆ, ಹೊಸ ಅಪಾಯದ ಮುನ್ಸೂಚನೆಯೇ?

ಇಂದು ಯಾರೂ ರೈಲಿನಲ್ಲಿ ಓಡಾಡ್ಬೇಡಿ, ಇರಾನ್ ಜನರಿಗೆ ಇಸ್ರೇಲ್ ಎಚ್ಚರಿಕೆ, ಹೊಸ ಅಪಾಯದ ಮುನ್ಸೂಚನೆಯೇ?

ಇರಾನ್(Iran) ಜನರು ರೈಲಿನಲ್ಲಿ ಪ್ರಯಾಣಿಸದಂತೆ ಇಸ್ರೇಲ್ ಎಚ್ಚರಿಕೆ ನೀಡಿದ್ದು, ಹೊಸ ಅಪಾಯದ ಮುನ್ನೆಚ್ಚರಿಕೆ ನೀಡಿದೆ. ಕಳೆದ ಐದು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿದೆ. ಫಾರ್ಸಿ ಭಾಷೆಯಲ್ಲಿ ಸಂದೇಶವೊಂದನ್ನು ಬಿಡುಗಡೆ ಮಾಡಿದ ಇಸ್ರೇಲ್ ಸೇನೆ ರೈಲಿನಲ್ಲಿ ಪ್ರಯಾಣಿದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿದೆ. ನಿಮ್ಮ ಸುರಕ್ಷತೆಗಾಗಿ ಇಂದು ರಾತ್ರಿ 9 ಗಂಟೆಯವರೆಗೆ ದೇಶಾದ್ಯಂತ ರೈಲುಗಳಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ ಎಂದು ಸೇನೆ ಹೇಳಿದೆ. ಟೆಹ್ರಾನ್ ವಾರಗಟ್ಟಲೆ ಇರಾನ್‌ನಾದ್ಯಂತ ಇಂಟರ್ನೆಟ್ ಅನ್ನು ನಿರ್ಬಂಧಿಸಿದೆ.

ಮುಟ್ಟಾಗುವ ಹೆಣ್ಣುಮಕ್ಕಳು ಶಬರಿಮಲೆಗೆ ಹೋಗಬಹುದೇ? ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ಶುರು

ಮುಟ್ಟಾಗುವ ಹೆಣ್ಣುಮಕ್ಕಳು ಶಬರಿಮಲೆಗೆ ಹೋಗಬಹುದೇ? ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ಶುರು

ದೇಶದ ಸುಪ್ರೀಂ ಕೋರ್ಟ್‌ನಲ್ಲಿ ಶಬರಿಮಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣವು ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಒಂಬತ್ತು ನ್ಯಾಯಾಧೀಶರ ವಿಶೇಷ ಪೀಠವನ್ನು ತಲುಪಿದ್ದು, ಅಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣವನ್ನು ಮತ್ತೆ ವಿಚಾರಣೆ ನಡೆಸಲಾಗುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಸೆಪ್ಟೆಂಬರ್ 2018 ರಲ್ಲಿ ಶಬರಿಮಲೆಯ ಭಗವಾನ್ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ಅನುಮತಿಸುವ ತೀರ್ಪಿನ ವಿರುದ್ಧ ಸಲ್ಲಿಸಲಾದ ಪುನರ್ವಿಮರ್ಶೆ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಪ್ರಮುಖ ಪ್ರಶ್ನೆಗಳನ್ನು ಹುಟ್ಟುಹಾಕುವ ಸಂಬಂಧಿತ ವಿಷಯಗಳನ್ನು ಸಹ ವಿಚಾರಣೆ ನಡೆಸುತ್ತಿದೆ.

ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ
ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ