ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್ ಇಂಡಿಯಾ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ
ಕೊಟ್ಟಿರೋ 11 ಲಕ್ಷ ರೂ. ಸ್ಕಾರ್ಪಿಯೋ ಕಾರು ಸಾಕಾಗಿಲ್ಲ, ಹೆಚ್ಚು ಹಣ ತರುವಂತೆ ಕಿರುಕುಳ, ಮಹಡಿಯಿಂದ ಬಿದ್ದು ಮಹಿಳೆ ಸಾವು
ಮಗಳ ಮದುವೆಗಾಗಿ ಆಕೆಯ ತಂದೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಕೇಳಿದ್ದೆಲ್ಲವನ್ನು ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದರು. ಆದರೆ ವರದಕ್ಷಿಣೆಯ ರಕ್ಕಸ ಹಪಾಹಪಿಗೆ ಕೇವಲ 25 ವರ್ಷದ ದೀಪಿಕಾ ನಾರಂಗ್ ಎಂಬಾಕೆ ಪ್ರಾಣ ಕಳೆದುಕೊಂಡಿದ್ದಾಳೆ. ಮದುವೆಯಾಗಿ 17 ತಿಂಗಳಿಗೆ ಮೂರನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈಕೆಯ ತಂದೆ ಸಂಜಯ್ ನಾರಂಗ್ ಇದು ಆತ್ಮಹತ್ಯೆಯಲ್ಲ, ಇದೊಂದು ಭೀಕರ ಕೊಲೆ ಎಂದು ಕಣ್ಣೀರು ಹಾಕಿದ್ದಾರೆ. 2024ರ ಡಿಸೆಂಬರ್ನಲ್ಲಿ ದೀಪಿಕಾ ಮದುವೆ ಅದ್ದೂರಿಯಾಗಿ ನೆರವೇರಿತ್ತು.
- Nayana Rajeev
- Updated on: May 18, 2026
- 2:39 pm
ಬಿಹಾರ: ಸಹೋದರನ ಕುಟುಂಬದ ನಾಲ್ವರನ್ನು ಕೊಂದು, ಶವಗಳ ಕತ್ತರಿಸಿ ಸೂಟ್ಕೇಸ್ಗಳಲ್ಲಿ ತುಂಬಿ ಎಸೆದ ವ್ಯಕ್ತಿ
ಹಣದ ವ್ಯಾಮೋಹ ಮತ್ತು ಕೌಟುಂಬಿಕ ಕಲಹಕ್ಕೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಿರಿಯ ಸಹೋದರನೇ ತನ್ನ ಅಣ್ಣ, ಅತ್ತಿಗೆ ಹಾಗೂ ಅವರ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಷ್ಟಕ್ಕೇ ನಿಲ್ಲದ ಈತನ ಕ್ರೌರ್ಯ, ಸಾಕ್ಷ್ಯ ನಾಶಪಡಿಸಲು ನಾಲ್ವರ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ಕೇಸ್ ಹಾಗೂ ಚೀಲಗಳಲ್ಲಿ ತುಂಬಿ ವಿವಿಧ ನದಿ, ಕಾಲುವೆಗಳಿಗೆ ಎಸೆದಿದ್ದಾನೆ.
- Nayana Rajeev
- Updated on: May 18, 2026
- 12:35 pm
ನೀಟ್-ಯುಜಿ ಪೇಪರ್ ಲೀಕ್ ಹಗರಣ: ಸಿಬಿಐ ತನಿಖೆಯಲ್ಲಿ ಬಿಗ್ ಟ್ವಿಸ್ಟ್; ಬ್ಯೂಟಿಷಿಯನ್ ಬಿಚ್ಚಿಟ್ಟ ಸ್ಫೋಟಕ ರಹಸ್ಯವೇನು?
ದೇಶಾದ್ಯಂತ ತಲ್ಲಣ ಸೃಷ್ಟಿಸಿರುವ 2026ರ ನೀಟ್-ಯುಜಿ (NEET-UG) ಪರೀಕ್ಷೆ ರದ್ದತಿ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ (CBI), ಅತ್ಯಂತ ಮಹತ್ವದ ಜಾಲವನ್ನು ಭೇದಿಸಿದೆ. ಈ ಹಗರಣದ ಕರಾಳ ಮುಖವನ್ನು ಬಯಲು ಮಾಡುವ ವರದಿ ಇಲ್ಲಿದೆ.ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯ 2026ನೇ ಸಾಲಿನ ನೀಟ್-ಯುಜಿ ಪ್ರಶ್ನೆ-ನಿಗದಿ ಸಮಿತಿಯ ತಜ್ಞೆಯಾಗಿದ್ದ 57 ವರ್ಷದ ಮನೀಷಾ ಗುರುನಾಥ್ ಮಾಂಧರೆ ಅವರನ್ನು ಸಿಬಿಐ ಬಂಧಿಸಿದೆ. ಈಕೆಗೆ ಸಸ್ಯಶಾಸ್ತ್ರ (Botany) ಮತ್ತು ಪ್ರಾಣಿಶಾಸ್ತ್ರ (Zoology) ಎರಡೂ ವಿಷಯಗಳ ಅಂತಿಮ ಪ್ರಶ್ನೆಪತ್ರಿಕೆಗಳನ್ನು ನೋಡಲು ಅವಕಾಶವಿತ್ತು. ಆರ್ಥಿಕ ಲಾಭಕ್ಕಾಗಿ ಮಾಂಧರೆ ಈ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಗೂ ಮುನ್ನವೇ ಸೋರಿಕೆ ಮಾಡಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಇವರನ್ನು 14 ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.
- Nayana Rajeev
- Updated on: May 18, 2026
- 12:09 pm
ಭಾರತ-ಸ್ವೀಡನ್ ಬಾಂಧವ್ಯಕ್ಕೆ ಹೊಸ ವೇಗ: ಪ್ರಧಾನಿ ಮೋದಿ ಪ್ರವಾಸದ ಪ್ರಮುಖ ಒಪ್ಪಂದಗಳ ಬಗ್ಗೆ ಮಾಹಿತಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸ್ವೀಡನ್ ಪ್ರವಾಸವು ಭಾರತ ಮತ್ತು ಸ್ವೀಡನ್ ದೇಶಗಳ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳಿಗೆ ಹೊಸ ವೇಗವನ್ನು ನೀಡಿದೆ. ಈ ಭೇಟಿಯು ಅತ್ಯಂತ ಯಶಸ್ವಿಯಾಗಿದ್ದು, ಉಭಯ ದೇಶಗಳ ಸಂಬಂಧವನ್ನು ‘ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್’ (Strategic Partnership) ಮಟ್ಟಕ್ಕೆ ಕೊಂಡೊಯ್ಯಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಜಂಟಿ ಸಂಶೋಧನೆಗೆ ಚಾಲನೆ ನೀಡಲಾಗಿದೆ. ಭಾರತ-ಸ್ವೀಡನ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಕಾರಿಡಾರ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ.
- Nayana Rajeev
- Updated on: May 18, 2026
- 11:33 am
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಮಹಾ ಕ್ರಾಂತಿ: ಇನ್ನು ಐದು ಗಂಟೆಗಳ ಐವಿ ಡ್ರಿಪ್ ಬೇಕಿಲ್ಲ, ಭಾರತದಲ್ಲಿ ಬಿಡುಗಡೆಯಾಯ್ತು ಹೊಸ ಇಂಜೆಕ್ಷನ್
ಭಾರತದ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಗಾಳಿ ಬೀಸಿದ್ದು, ಶ್ವಾಸಕೋಶದ ಕ್ಯಾನ್ಸರ್ ರೋಗಿಗಳಿಗೆ ವರದಾನವಾಗಬಲ್ಲ ಅತ್ಯಾಧುನಿಕ ಚುಚ್ಚುಮದ್ದು ಬಿಡುಗಡೆಯಾಗಿದೆ. ರಾಶ್ ಫಾರ್ಮಾ ಸಂಸ್ಥೆಯು 'ಟೆಸೆಂಟ್ರಿಕ್' (Tecentriq) ಹೆಸರಿನ ಈ ಇಮ್ಯುನೊಥೆರಪಿ ಔಷಧವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇಲ್ಲಿಯವರೆಗೆ ರೋಗಿಗಳು ಆಸ್ಪತ್ರೆಯ ಬೆಡ್ ಮೇಲೆ ಗಂಟೆಗಟ್ಟಲೆ ಮಲಗಿ ಇಂಟ್ರಾವೆನಸ್ (IV) ಡ್ರಿಪ್ ಮೂಲಕ ಚಿಕಿತ್ಸೆ ಪಡೆಯಬೇಕಿತ್ತು. ಆದರೆ, ಈ ಹೊಸ ‘ಸಬ್ಕ್ಯುಟೇನಿಯಸ್ ಇಂಜೆಕ್ಷನ್’ ಅನ್ನು ಅತ್ಯಂತ ಸುಲಭವಾಗಿ ಚರ್ಮದ ಅಡಿಯಲ್ಲಿ ಕೇವಲ 7 ನಿಮಿಷಗಳಲ್ಲಿ ನೀಡಬಹುದು. ಇದು ರೋಗಿಗಳ ದೈಹಿಕ ಒತ್ತಡವನ್ನು ತಗ್ಗಿಸುವುದಲ್ಲದೆ, ಆಸ್ಪತ್ರೆಗಳ ಮೇಲಿನ ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ವಯಸ್ಸಾದವರಿಗೆ ಮತ್ತು ದೂರದ ಊರುಗಳಿಂದ ಬರುವ ರೋಗಿಗಳಿಗೆ ಈ ವೇಗದ ಚಿಕಿತ್ಸಾ ವಿಧಾನವು ಭಾರಿ ಅನುಕೂಲ ಕಲ್ಪಿಸಲಿದೆ.
- Nayana Rajeev
- Updated on: May 18, 2026
- 11:21 am
‘ದಳಪತಿ’ ರಾಜಕೀಯ ತಮಿಳುನಾಡಿಗೆ ಮಾತ್ರ ಸೀಮಿತವೇ? ಕೇರಳಂ ಸಿಎಂ ವಿಡಿ ಸತೀಶನ್ ಪದಗ್ರಹಣಕ್ಕೆ ವಿಜಯ್ ಗೈರು
ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ದೇಶದ ಪ್ರಮುಖ ನಾಯಕರು ಪಾಲ್ಗೊಂಡಿದ್ದ ಈ ಭವ್ಯ ಸಮಾರಂಭದಲ್ಲಿ, ತಮಿಳುನಾಡಿನ ನೂತನ ಸಿಎಂ ದಳಪತಿ ವಿಜಯ್ ಅವರ ಗೈರು ಭಾರಿ ಚರ್ಚೆಗೆ ಕಾರಣವಾಗಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಿರುವ ವಿಜಯ್, ಅಧಿಕೃತ ಆಮಂತ್ರಣವಿದ್ದರೂ ಕೊನೆ ಕ್ಷಣದಲ್ಲಿ ದೂರ ಉಳಿದಿದ್ದಾರೆ. ವಿಜಯ್ ಅವರ ರಾಜಕೀಯ ಸಿದ್ಧಾಂತವು 'ತಮಿಳು ಅಸ್ಮಿತೆ'ಗೆ ಸೀಮಿತವಾಗಿರುವುದರಿಂದ ಹಾಗೂ ತಮ್ಮ ಪಕ್ಷವನ್ನು ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಮಯ ಎಂದು ಬಿಂಬಿಸಲು ಇಷ್ಟಪಡದ ಕಾರಣ ಅವರು ಈ ನಿರ್ಧಾರ ಕೈಗೊಂಡಿರಬಹುದು ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
- Nayana Rajeev
- Updated on: May 18, 2026
- 10:42 am
VD Satheesan Oath Taking: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸತೀಶನ್
Kerala New Chief Minister VD Satheesan Swearing-in Ceremony: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.
- Nayana Rajeev
- Updated on: May 18, 2026
- 10:32 am
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕುರ್ಚಿಗೆ ಕುತ್ತು ತಂದಿದ್ದ ಅಸಲಿ ರಹಸ್ಯ ದಾಖಲೆ ಬಯಲು
ಅಮೆರಿಕದ ಈ ಹಸಿರು ನಿಶಾನೆ ಸಿಗುತ್ತಿದ್ದಂತೆಯೇ, ಪಾಕ್ ಸೇನೆಯ ಬೆಂಬಲದೊಂದಿಗೆ ಏಪ್ರಿಲ್ 9, 2022ರಂದು ಇಮ್ರಾನ್ ಖಾನ್ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಲಾಯಿತು. ಇದರ ನಂತರ ಇಮ್ರಾನ್ ಖಾನ್ ಅವರ ಪಿಟಿಐ (PTI) ಪಕ್ಷವನ್ನು ನಿಷೇಧಿಸಲಾಯಿತು, ಅವರ ಚುನಾವಣಾ ಚಿಹ್ನೆಯನ್ನು ಕಿತ್ತುಕೊಳ್ಳಲಾಯಿತು. ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬಿಬಿ ಅವರ ಮೇಲೆ ಸಾಲು ಸಾಲು ಭ್ರಷ್ಟಾಚಾರ ಮತ್ತು ದೇಶದ್ರೋಹದ ಪ್ರಕರಣಗಳನ್ನು ಹಾಕಿ ಜೈಲಿಗಟ್ಟಲಾಯಿತು. ಕಳೆದ ವರ್ಷದಿಂದ ಇಮ್ರಾನ್ ಖಾನ್ ಅವರನ್ನು ಏಕಾಂತ ಸರೆಮನೆಯಲ್ಲಿ ಇಡಲಾಗಿದೆ.
- Nayana Rajeev
- Updated on: May 18, 2026
- 9:28 am
Video: ಬಿಹಾರದಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು
ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.
- Nayana Rajeev
- Updated on: May 18, 2026
- 9:00 am
ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ
ಭೋಪಾಲ್ನಲ್ಲಿ ಸಂಭವಿಸಿದ ನೋಯ್ಡಾ ಮೂಲದ ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು ಈಗ ಭಾರಿ ರಾಜಕೀಯ ಮತ್ತು ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ ಮೃತಳ ಕುಟುಂಬಸ್ಥರು ನಡೆಸುತ್ತಿರುವ ಹೋರಾಟದ ಸಂಪೂರ್ಣ ವಿವರ ಇಲ್ಲಿದೆ.ನನ್ನ ಮಗಳ ಸಾವಿಗೆ ನ್ಯಾಯ ಸಿಗದಿದ್ದರೆ ನಾನು ಮುಖ್ಯಮಂತ್ರಿಯವರ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡು ಪ್ರಾಣ ಬಿಡುತ್ತೇನೆ ಎಂದು ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಏಮ್ಸ್ ಭೋಪಾಲ್ ನೀಡಿರುವ ಆರಂಭಿಕ ಮರಣೋತ್ತರ ಪರೀಕ್ಷೆಯ ವರದಿ ತೃಪ್ತಿಕರವಾಗಿಲ್ಲ ಎಂದು ಆರೋಪಿಸಿರುವ ಕುಟುಂಬಸ್ಥರು, ದೆಹಲಿಯ ಏಮ್ಸ್ನಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಮಗಳ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
- Nayana Rajeev
- Updated on: May 18, 2026
- 8:17 am
ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಅಪಘಾತ: ಏರ್ ಶೋ ವೇಳೆ ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು
ಪಶ್ಚಿಮ ಇಡಾಹೊದ ಮೌಂಟೇನ್ ಹೋಮ್ ವಾಯುಪಡೆ ನೆಲೆಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ಯುಎಸ್ ನೌಕಾಪಡೆಯ ಎರಡು ಯುದ್ಧ ವಿಮಾನಗಳು ಗಾಳಿಯಲ್ಲೇ ಭೀಕರವಾಗಿ ಡಿಕ್ಕಿ ಹೊಡೆದಿವೆ. ಅಪಘಾತಕ್ಕೀಡಾದ ವಿಮಾನಗಳನ್ನು ನೌಕಾಪಡೆಯ ಅತ್ಯಾಧುನಿಕ 'ಇಎ 18-ಜಿ ಗ್ರೋಲರ್ಸ್' ಎಂದು ಗುರುತಿಸಲಾಗಿದೆ. ಅತಿ ವೇಗದಲ್ಲಿ ಹಾರಾಟ ನಡೆಸುತ್ತಿದ್ದಾಗ ಸಂಭವಿಸಿದ ಈ ಭೀಕರ ಡಿಕ್ಕಿಯ ಹೊರತಾಗಿಯೂ, ಎರಡೂ ಜೆಟ್ಗಳಲ್ಲಿದ್ದ ನಾಲ್ವರು ಸಿಬ್ಬಂದಿ ತಕ್ಷಣವೇ ಸುರಕ್ಷಿತವಾಗಿ ಹೊರಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Nayana Rajeev
- Updated on: May 18, 2026
- 7:52 am
ಜಗತ್ತಿಗೆ ಎದುರಾಗಿದೆ ಭೀಕರ ಬಡತನದ ಭೀತಿ, ಕೋವಿಡ್, ಯುದ್ಧ ಮತ್ತು ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಗಂಭೀರ ಎಚ್ಚರಿಕೆ
ಇತ್ತೀಚಿನ ಜಾಗತಿಕ ಬಿಕ್ಕಟ್ಟುಗಳಿಂದ ವಿಶ್ವದ ದೇಶಗಳು ಪಾಠ ಕಲಿಯಲು ವಿಫಲವಾದರೆ, ಜಗತ್ತಿನಲ್ಲಿ ಮತ್ತೆ ಭಾರೀ ಬಡತನ ಮರಳುವ ಅಪಾಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಉನ್ನತ ಮಟ್ಟದ ಆರ್ಥಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳ ಅವಧಿಯನ್ನು ಕೋವಿಡ್-19 ಸಾಂಕ್ರಾಮಿಕ, ಭೀಕರ ಯುದ್ಧಗಳು ಮತ್ತು ತೈಲ-ಇಂಧನ ಬಿಕ್ಕಟ್ಟುಗಳಿಂದ ಕೂಡಿದ ವಿಪತ್ತು ಎಂದು ಬಣ್ಣಿಸಿದರು. ಈ ಸರಣಿ ಆಘಾತಗಳು ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳ ಆರ್ಥಿಕ ಸ್ಥಿರತೆಯನ್ನು ಧ್ವಂಸಗೊಳಿಸಿವೆ ಎಂದರು.
- Nayana Rajeev
- Updated on: May 18, 2026
- 7:31 am