Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಯನಾ ರಾಜೀವ್

ನಯನಾ ರಾಜೀವ್

ಮುಖ್ಯ ಉಪಸಂಪಾದಕಿ - TV9 Kannada

nayana.rajeev@tv9.com

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow On:
ಪ್ರೇಯಸಿ ಯಾರೊಂದಿಗೆ ಮಾತಾಡ್ತಾಳೆಂದು ತಿಳಿಯಲು ಹೋಗಿ ಟೆಲಿಕಾಂ ಕಚೇರಿಯನ್ನೇ ಧ್ವಂಸಗೊಳಿಸಿದ ವ್ಯಕ್ತಿ

ಪ್ರೇಯಸಿ ಯಾರೊಂದಿಗೆ ಮಾತಾಡ್ತಾಳೆಂದು ತಿಳಿಯಲು ಹೋಗಿ ಟೆಲಿಕಾಂ ಕಚೇರಿಯನ್ನೇ ಧ್ವಂಸಗೊಳಿಸಿದ ವ್ಯಕ್ತಿ

ಪ್ರೇಯಸಿ ಬಗ್ಗೆ ಅನುಮಾನ, ನಿತ್ಯ ಯಾರೊಂದಿಗೆ ಮಾತನಾಡುತ್ತಿದ್ದಾಳೆಂದು ತಿಳಿಯಲು ಹೋದ ವ್ಯಕ್ತಿ ಇಡೀ ಟೆಲಿಕಾಂ ಕಚೇರಿಯನ್ನೇ ಧ್ವಂಸಗೊಳಿಸಿರುವ ಘಟನೆ ಬಿಹಾರದ ಮುಜಾಫರ್​ಪುರದಲ್ಲಿ ನಡೆದಿದೆ. ಆತನಿಗೆ ತನ್ನ ಗೆಳತಿಯ ಮೇಲೆ ಹಲವು ದಿನಗಳಿಂದ ಅನುಮಾನವಿತ್ತು. ಹೇಗಾದರೂ ಮಾಡಿ ಅದನ್ನು ತಿಳಿದುಕೊಳ್ಳಲೇಬೇಕೆಂದು ನಿರ್ಧರಿಸಿದ್ದ, ಕೊಡಲಿಯನ್ನು ಹಿಡಿದು ಹುಚ್ಚು ಪ್ರೇಮಿ ಟೆಲಿಕಾಂ ಕಚೇರಿಯನ್ನು ತಲುಪಿದ್ದ. ಇದು ನನ್ನ ಗೆಳತಿಯ ನಂಬರ್ ನನಗೆ ಎಲ್ಲಾ ಕರೆಗಳ ವಿವರ ಬೇಕು , ಆಕೆ ಯಾರ ಜತೆ ಮಾತನಾಡುತ್ತಾಳೆ ಎಂದು ನನಗೆ ತಿಳಿಯಬೇಕು ಎಂದು ಹೇಳಿದ.

ಮಲೇಷ್ಯಾ: ಮಸೀದಿ ನಿರ್ಮಾಣಕ್ಕಾಗಿ 130 ವರ್ಷ ಪುರಾತನ ಹಿಂದೂ ದೇವಾಲಯ ನೆಲಸಮ

ಮಲೇಷ್ಯಾ: ಮಸೀದಿ ನಿರ್ಮಾಣಕ್ಕಾಗಿ 130 ವರ್ಷ ಪುರಾತನ ಹಿಂದೂ ದೇವಾಲಯ ನೆಲಸಮ

ಮಲೇಷ್ಯಾದ ಕೌಲಾಲಂಪುರದಲ್ಲಿ ಮಸೀದಿ ನಿರ್ಮಾಣಕ್ಕಾಗಿ 130 ವರ್ಷ ಪುರಾತನ ದೇವಾಲಯವನ್ನು ನೆಲಸಮ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಲನ್ ಇಂಡಿಯಾ ಬೀದಿಯಲ್ಲಿರುವ ಜಕೇಲ್​ ಮಾಲ್ ಎದುರಿರುವ ಪತ್ರಕಾಳಿಯಮ್ಮ ದೇವಸ್ಥಾನವನ್ನು ಕೆಡವಲು ನಿರ್ದೇಶಿಸಲಾಗಿದೆ. ಆ ಸ್ಥಳದಲ್ಲಿ ಮಸೀದಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಈ ಮೊದಲು ಈ ಪುರಾತನ ದೇವಾಲಯವನ್ನು ಕೆಡಗುವ ಕುರಿತಷ್ಟೇ ಆಲೋಚಿಸಲಾಗಿತ್ತು.

ಭಾರತದ ಶೇ.45ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಪ್ರಕರಣಗಳು

ಭಾರತದ ಶೇ.45ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಪ್ರಕರಣಗಳು

ಭಾರತದಲ್ಲಿರುವ 4,092 ಮಂದಿ ಶಾಸಕರ ಪೈಕಿ ಶೇ.45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್​ನ ವರದಿ ಹೇಳಿದೆ. ದೇಶದ 28 ವಿಧಾನಸಭೆಗಳು ಮತ್ತು 3 ಕೇಂದ್ರಾಡಳಿಯ ಪ್ರದೇಶಗಳಲ್ಲಿರುವ ಒಟ್ಟು 4092 ಶಾಸಕರಲ್ಲಿ ಅರ್ಧದಷ್ಟು ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.ಕೆಲವು ಶಾಸಕರ ವಿರುದ್ಧ ಸಾಮಾನ್ಯ ರೀತಿಯ ಅಪರಾಧಗಳು ದಾಖಲಾಗಿದ್ದರೆ, ಇನ್ನು ಕೆಲವರ ವಿರುದ್ಧ ಗಂಭೀರ ರೀತಿಯ ಅಪರಾಧಗಳು ದಾಖಲಾಗಿರುವುದು ಕಂಡುಬರುತ್ತದೆ.

ಪಾಕಿಸ್ತಾನದಲ್ಲಿ  ಗುಂಡಿನ ಚಕಮಕಿ, ಸೇನಾ ನಾಯಕ ಸಾವು ಹಾಗೂ 10 ಉಗ್ರರ ಹತ್ಯೆ

ಪಾಕಿಸ್ತಾನದಲ್ಲಿ ಗುಂಡಿನ ಚಕಮಕಿ, ಸೇನಾ ನಾಯಕ ಸಾವು ಹಾಗೂ 10 ಉಗ್ರರ ಹತ್ಯೆ

ಪಾಕಿಸ್ತಾನದ ಖೈಬರ್ ಫಖ್ತುಂಖ್ವಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಪಾಕಿಸ್ತಾನದ ಸೇನಾ ನಾಯಕ ಸಾವನ್ನಪ್ಪಿದ್ದು, 10 ಉಗ್ರರು ಕೂಡ ಹತರಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿದೆ. ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಂಘಟನೆಗೆ ಸೇರಿದ ಕನಿಷ್ಠ 10 ಉಗ್ರರು ಸಾವನ್ನಪ್ಪಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನಿ ಸೇನಾ ಕ್ಯಾಪ್ಟನ್ ಕೂಡ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ

ಉತ್ತರ ಪ್ರದೇಶ: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ

ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ವ್ಯಕ್ತಿಗೆ ತುಂಬಾ ದಿನಗಳಿಂದ ಹೊಟ್ಟೆ ನೋವು ಬರುತ್ತಿತ್ತು, ಹಲವು ವೈದ್ಯರನ್ನು ಸಂಪರ್ಕಿಸಿದರೂ ಸಮಸ್ಯೆ ಪರಿಹಾರವಾಗದಿದ್ದಾಗ ತನಗೆ ತಾನೇ ಸರ್ಜರಿ ಮಾಡಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಿದ್ದ.

ಲಕ್ನೋಗೆ ಬಂದಿಳಿದ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆ

ಲಕ್ನೋಗೆ ಬಂದಿಳಿದ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆ

ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆಸಿಫುಲ್ಲಾ ಅನ್ಸಾರಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 8.10 ಕ್ಕೆ ವಿಮಾನ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿತ್ತು, ಸಿಬ್ಬಂದಿ ಪ್ರಯಾಣಿಕರನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ವಿಮಾನದಲ್ಲಿದ್ದ ವೈದ್ಯರು ಪ್ರಯಾಣಿಕನನ್ನು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಉತ್ತರ ಪ್ರದೇಶ: ಮಾವನ ಮನೆಗೆ ಹೋಗಿ ನೇಣಿಗೆ ಶರಣಾದ ಅಳಿಯ

ಉತ್ತರ ಪ್ರದೇಶ: ಮಾವನ ಮನೆಗೆ ಹೋಗಿ ನೇಣಿಗೆ ಶರಣಾದ ಅಳಿಯ

ವ್ಯಕ್ತಿಯೊಬ್ಬ ಮಾವನ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪತ್ನಿಯನ್ನು ಕರೆದುಕೊಂಡು ಬರಲು ಹೋಗಿದ್ದ ವ್ಯಕ್ತಿ ಶವವಾಗಿದ್ದಾನೆ. ಸಾಯುವ ಮೊದಲು ವಿಡಿಯೋವೊಂದನ್ನು ಮಾಡಿಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಬಾಲಕ್​ರಾಮ್ ಎಂದು ಗುರುತಿಸಲಾಗಿದೆ. ಆ ವ್ಯಕ್ತಿ ಸಾಯುವ ಮುನ್ನ 15 ಸೆಕೆಂಡುಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದರು, ತನ್ನನ್ನು ಯಾರೋ ಕೊಲೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ನನ್ನ ಪತ್ನಿ ಸುಧಾಗೆ ಯಾವುದೇ ಹಕ್ಕಿಲ್ಲ.

ವಿಮಾನದಲ್ಲಿ ನಾಯಿ ಕೊಂಡೊಯ್ಯುವಂತಿಲ್ಲ ಎಂದಿದ್ದಕ್ಕೆ ಟಾಯ್ಲೆಟ್ ನೀರಿನಲ್ಲಿ ಮುಳುಗಿಸಿ ಕೊಂದ ಮಹಿಳೆ

ವಿಮಾನದಲ್ಲಿ ನಾಯಿ ಕೊಂಡೊಯ್ಯುವಂತಿಲ್ಲ ಎಂದಿದ್ದಕ್ಕೆ ಟಾಯ್ಲೆಟ್ ನೀರಿನಲ್ಲಿ ಮುಳುಗಿಸಿ ಕೊಂದ ಮಹಿಳೆ

ಸಾಕು ಪ್ರಾಣಿಗಳಿಗೋಸ್ಕರ ಜೀವವನ್ನೇ ಕೊಡುವ ಜನರ ನಡುವೆ, ಇಲ್ಲೊಬ್ಬ ಸ್ವಾರ್ಥಿ ತನಗೋಸ್ಕರ ನಾಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೆರಿಕದ ವಿಮಾನ ನಿಲ್ದಾಣದಲ್ಲಿ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದಕ್ಕೆ, ಮಹಿಳೆ ಟಾಯ್ಲೆಟ್​ ನೀರಿನಲ್ಲಿ ನಾಯಿಯನ್ನು ಮುಳುಗಿಸಿ ಕೊಂದಿದ್ದಾರೆ. 57 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಪೆಂಡೆಂಟ್​ ವರದಿ ಮಾಡಿದೆ.

ಅಪ್ಪ ಡ್ರಮ್​ನೊಳಗಿದ್ದಾರೆ, ಮುಗ್ಧ ಮಗುವಿನಿಂದ ಬಯಲಾಯ್ತಾ ಸೌರಭ್ ಕೊಲೆಯ ಭಯಾನಕ ಸತ್ಯ

ಅಪ್ಪ ಡ್ರಮ್​ನೊಳಗಿದ್ದಾರೆ, ಮುಗ್ಧ ಮಗುವಿನಿಂದ ಬಯಲಾಯ್ತಾ ಸೌರಭ್ ಕೊಲೆಯ ಭಯಾನಕ ಸತ್ಯ

ಮೀರತ್​ನಲ್ಲಿ ನಡೆದ ಸೌರಭ್ ರಜಪೂತ್ ಹತ್ಯೆ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಪ್ರೀತಿಸಿ ಕುಟುಂಬದವರ ವಿರೋಧ ಕಟ್ಟಿಕೊಂಡು ಆಕೆಯೇ ಬೇಕೆಂದು ಮದುವೆಯಾಗಿದ್ದ ಸೌರಭ್ ಕೊನೆಗೆ ತಾನು ಪ್ರೀತಿಸಿದವಳಿಂದಲೇ ಕೊಲೆಯಾಗಿದ್ದ. ಹಾಗಾದರೆ ಈ ಕೊಲೆ ಎಲ್ಲರೆದುರು ಬಯಲಾಗಿದ್ದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ. ಸೌರಭ್ ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲು ಲಂಡನ್​ನಿಂದ ಭಾರತಕ್ಕೆ ಬಂದಿದ್ದ.

ಜಮ್ಮು-ಕಾಶ್ಮೀರ: ರಾಜೌರಿಯಲ್ಲಿ ಪೊಲೀಸ್ ಗಸ್ತು ಪಡೆಯ ವಾಹನದ ಮೇಲೆ ಗ್ರೆನೇಡ್​ ದಾಳಿ

ಜಮ್ಮು-ಕಾಶ್ಮೀರ: ರಾಜೌರಿಯಲ್ಲಿ ಪೊಲೀಸ್ ಗಸ್ತು ಪಡೆಯ ವಾಹನದ ಮೇಲೆ ಗ್ರೆನೇಡ್​ ದಾಳಿ

ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆದಿದೆ. ರಾಜೌರಿ ಜಿಲ್ಲೆಯ ಥನಮಂಡಿ ತೆಹ್ಸಿಲ್‌ನ ಮಣಿಯಾಲ್ ಗಾಲಿ ಪ್ರದೇಶದಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಲಾಗಿದೆ. ಪೊಲೀಸ್ ವಾಹನದ ಮೇಲೆ ಗ್ರೆನೇಡ್ ಎಸೆಯಲಾಯಿತು ಆದರೆ ಅದೃಷ್ಟವಶಾತ್ ಅದು ವಾಹನದ ಪಕ್ಕದಲ್ಲಿ ಬಿದ್ದಿದ್ದರಿಂದ ಯಾವುದೇ ಸಾವುನೋವು ಸಂಭವಿಸಿಲ್ಲ. ಪೊಲೀಸ್ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

Video: ಔರಂಗಜೇಬನ ಸಮಾಧಿ ವಿವಾದ, ಸುತ್ತಲೂ ತಾತ್ಕಾಲಿಕ ಗೋಡೆ ನಿರ್ಮಾಣ

Video: ಔರಂಗಜೇಬನ ಸಮಾಧಿ ವಿವಾದ, ಸುತ್ತಲೂ ತಾತ್ಕಾಲಿಕ ಗೋಡೆ ನಿರ್ಮಾಣ

ನಾಗ್ಪುರ ಹಿಂಸಾಚಾರದ ನಂತರ ಖುಲ್ತಾಬಾದ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಧಿಕಾರಿಗಳು ಔರಂಗಜೇಬನ ಸಮಾಧಿಯ ಸುತ್ತಲೂ ತಾತ್ಕಾಲಿಕ ಗೋಡೆಯನ್ನು ನಿರ್ಮಿಸಿದ್ದಾರೆ. ಖುಲ್ತಾಬಾದ್‌ಗೆ ಹೋಗುವ ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಸಮಾಧಿಗೆ ಭೇಟಿ ನೀಡುವವರು ಆಧಾರ್ ಕಾರ್ಡ್ ತೋರಿಸಬೇಕು ಮತ್ತು ತಮ್ಮ ಮೊಬೈಲ್ ಫೋನ್‌ಗಳನ್ನು ಹೊರಗೆ ಇಡಬೇಕು. ವಿಶ್ವ ಹಿಂದೂ ಪರಿಷತ್ ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿತ್ತು.

Karnataka Weather: ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

Karnataka Weather: ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 25ರಿಂದ ಮಳೆಯಾಗಲಿದೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ