ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್ ಇಂಡಿಯಾ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ
ಪಶ್ಚಿಮ ಬಂಗಾಳ: ಬಡತನದಿಂದ ಬೇಸತ್ತು ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ
ಬಡತನದಿಂದ ಬೇಸತ್ತು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ತೀಸ್ತಾ ನದಿಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದಿದೆ. ಘಟನೆ ಸಮಯದಲ್ಲಿ ಅಲ್ಲೇ ಇದ್ದ ಸ್ಥಳೀಯರು ಕೂಡಲೇ ಓಡಿ ಬಂದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೀಮಾ ದಿನಗಟ್ಟಲೆ ಹೊಟ್ಟೆಗೆ ಕೂಳಿಲ್ಲದೆ ಇದ್ದರು, ಗಂಡ ಬಿಪುಲ್ ಬವಾಲಿ ಬಡಗಿ ಮತ್ತು ದಿನಗೂಲಿ ನೌಕರರಾಗಿದ್ದು, ಉತ್ತರ ಬಂಗಾಳದಲ್ಲಿ ಭಾರಿ ಮಳೆಯಿಂದಲಾಗಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ.
- Nayana Rajeev
- Updated on: Jul 4, 2025
- 3:04 pm
Video: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹರ್ಯಾಣದ ಫರೀದಾಬಾದ್ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದೆ. ಹಾಸನ ಜಿಲ್ಲೆಯೊಂದರಲ್ಲೇ 25ಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ. ವ್ಯಕ್ತಿಯೊಬ್ಬರು ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಕುಸಿದುಬಿದ್ದು ಪ್ರಾಣಬಿಟ್ಟಿದ್ದಾರೆ. ಮೃತರನ್ನು ಪಂಕಜ್ ಶರ್ಮಾ ಎಂದು ಗುರುತಿಸಲಾಗಿದೆ.
- Nayana Rajeev
- Updated on: Jul 4, 2025
- 2:15 pm
ಅಹಮದಾಬಾದ್: ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮೋಂಟು ಪಟೇಲ್ ನಿವಾಸದ ಮೇಲೆ ಸಿಬಿಐ ದಾಳಿ
ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮೋಂಟು ಪಟೇಲ್ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ(ಸಿಬಿಐ) ದಾಳಿ ನಡೆಸಿದೆ. ಅಹಮದಾಬಾದ್ನ ಜುಂಡಾಲ್ನಲ್ಲಿರುವ ಅವರ ಬಂಗಲೆಯ ಮೇಲೆ ಸಿಬಿಐ ದಾಳಿ ಮಾಡಿದೆ. ಅಕ್ರಮ ಕಾಲೇಜುಗಳ ನಿರ್ಮಾಣಕ್ಕೆ ಮಾನ್ಯತೆ ನೀಡುವುದು ಮತ್ತು ಇತರ ಹಗರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ದೆಹಲಿಯಲ್ಲಿರುವ ಅವರ ಕಚೇರಿ ಮತ್ತು ಮನೆಯಲ್ಲಿ ಲಂಚ ಪಡೆದ ಆರೋಪ ಅವರ ಮೇಲಿದೆ. ಎಬಿವಿಪಿ ಸಮಿತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಮೋಂಟು ಪಟೇಲ್ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದರು.
- Nayana Rajeev
- Updated on: Jul 4, 2025
- 12:45 pm
Video: ಹೊತ್ತಿ ಉರಿದ ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ರೈಲು
ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.
- Nayana Rajeev
- Updated on: Jul 4, 2025
- 12:09 pm
27 ವರ್ಷಗಳ ಹಿಂದೆ ಪ್ರಧಾನಿ ಮೋದಿ ಸ್ವಭಾವ ಹೇಗಿತ್ತು? ಟ್ರಿನಿಡಾಡ್ ಉದ್ಯಮಿ ಮಿತ್ತಲ್ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಮೊದಲ ಬಾರಿಗೆ ಟ್ರಿನಿಡಾಡ್ ಮತ್ತು ಟೊಬಾಗೋಗೆ ಭೇಟಿ ನೀಡಿದ್ದಾರೆ. ಆದರೆ ಇದು ಅವರ ಎರಡನೇ ಭೇಟಿಯಾಗಿದೆ. 27 ವರ್ಷಗಳ ಹಿಂದೆ ಅಂದರೆ 1998ರಲ್ಲಿ ಪ್ರಧಾನಿ ಮೋದಿ ಟ್ರಿನಿಡಾಡ್ನಲ್ಲಿರುವ ತಮ್ಮ ಮನೆಯಲ್ಲಿ ಉಳಿದುಕೊಂಡಿದ್ದ ವಿಚಾರದ ಕುರಿತು ಉಕ್ಕಿನ ಉದ್ಯಮಿ ಎಂಎಲ್ ಮಿತ್ತಲ್ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜುಲೈ 2ರಿಂದ 10ರವರೆಗೆ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಘಾನಾ ಬಳಿಕ ಎರಡನೇ ಭಾಗವಾಗಿ ಟ್ರಿನಿಡಾಡ್ ಮತ್ತು ಟೊಬಾಗೋಗೆ ಭೇಟಿ ನೀಡಿದ್ದಾರೆ.
- Nayana Rajeev
- Updated on: Jul 4, 2025
- 11:32 am
ಟ್ರಿನಿಡಾಡ್ ಪ್ರಧಾನಿ ಕಮಲಾಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ಕೊಟ್ಟ ಮೋದಿ
ಪ್ರಧಾನಿ ನರೇಂದ್ರ ಮೋದಿ(Narendra Modi) ಗುರುವಾರ ಟ್ರಿನಿಡಾಡ್ ಹಾಗೂ ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಧಾನಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್ಗೆ ಮಹಾಕುಂಭದಿಂದ ತಂದ ಪವಿತ್ರ ಜಲ ಹಾಗೂ ರಾಮ ಮಂದಿರ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಹಾರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು.
- Nayana Rajeev
- Updated on: Jul 4, 2025
- 10:42 am
ಟ್ರಿನಿಡಾಡ್ ಮತ್ತು ಟೊಬಾಗೋದ ಮೊದಲ ಮಹಿಳಾ ಪ್ರಧಾನಿ ಕಮಲಾಗೂ ಭಾರತಕ್ಕೂ ಏನು ನಂಟು?
ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ರಿನಿಡಾಡ್ ಮತ್ತು ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿ ಭಾಷಣದ ವೇಳೆ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಉದ್ಘರಿಸಿದ್ದಾರೆ. ಹಾಗಾದರೆ ಕಮಲಾ ಪ್ರಸಾದ್ಗೂ ಭಾರತಕ್ಕೂ ಇರುವ ನಂಟೇನು ಎಂಬುದನ್ನು ತಿಳಿಯೋಣ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐದು ರಾಷ್ಟ್ರಗಳ ಭೇಟಿಯ ಎರಡನೇ ಹಂತದಲ್ಲಿ ಗುರುವಾರ ಟ್ರಿನಿಡಾಡ್ ಮತ್ತು ಟೊಬಾಗೋಗೆ ತಲುಪಿದ್ದಾರೆ. ಅಲ್ಲಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್ ಅವರು ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ಆತ್ಮೀಯ ಸ್ವಾಗತ ಕೋರಿದರು. ಟ್ರಿನಿಡಾಡ್ ಪ್ರಧಾನ ಮಂತ್ರಿಯವರ ಆಹ್ವಾನದ ಮೇರೆಗೆ ಪ್ರಧಾನಿಯವರ ಈ ಭೇಟಿ ನಡೆಯುತ್ತಿದೆ.
- Nayana Rajeev
- Updated on: Jul 4, 2025
- 10:26 am
Video: ಮೋದಿ ಸ್ವಾಗತಕ್ಕೆಂದು ಏರ್ಪೋರ್ಟ್ಗೆ ಟ್ರಿನಿಡಾಡ್ ಮತ್ತು ಟೊಬಾಗೋ ಸರ್ಕಾರದಿಂದ ಎಷ್ಟು ಜನ ಬಂದಿದ್ರು ನೋಡಿ
ಪ್ರಧಾನಿ ನರೇಂದ್ರ ಮೋದಿ ಟ್ರಿನಿಡಾಡ್ ಹಾಗೂ ಟೊಬಾಗೋ ಭೇಟಿಗೆ ತೆರಳಿದ್ದಾರೆ. ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಭವ್ಯ ಸ್ವಾಗತ ಸಿಕ್ಕಿತು. ಪ್ರಧಾನಿ ಕಮಲಾ, 38 ಸಚಿವರು ನಾಲ್ಕು ಸಂಸದರು ಮೋದಿ ಸ್ವಾಗತಕ್ಕೆಂದು ಏರ್ಪೋರ್ಟ್ ತೆರಳಿದ್ದರು. ಇದು ಭಾರತ ಹಾಗೂ ಈ ದೇಶದ ನಡುವಿನ ಸಂಬಂಧ ಹೇಗಿದೆ ಎಂಬುದನ್ನು ತೋರಿಸುತ್ತದೆ. ಇಡೀ ಸಚಿವ ಸಂಪುಟವೇ ಮೋದಿ ಸ್ವಾಗತಕ್ಕೆಂದು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದಿದ್ದಾರೆ.
- Nayana Rajeev
- Updated on: Jul 4, 2025
- 11:59 am
Video: ಪೋರ್ಟ್ ಆಫ್ ಸ್ಪೇನ್ನಲ್ಲಿ ಭೋಜ್ಪುರಿ ಚೌತಾಲಾದೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಅಪ್ಪಟ ಭಾರತೀಯ ಶೈಲಿಯಲ್ಲಿ ಭೋಜ್ಪುರಿ ಚೌತಾಲಾ(ಗೀತೆ)ದೊಂದಿಗೆ ಪೋರ್ಟ್ ಆಫ್ ಸ್ಪೇನ್ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲಾಯಿತು. ಈ ಕುರಿತು ಖುದ್ದಾಗಿ ಮೋದಿ ಭೋಜ್ಪುರಿಯಲ್ಲೇ ಪೋಸ್ಟ್ ಮಾಡಿದ್ದಾರೆ. ಧಾನಿ ನರೇಂದ್ರ ಮೋದಿ ತಮ್ಮ ಘಾನಾ ಭೇಟಿಯ ಎರಡನೇ ಹಂತವಾಗಿ ಬುಧವಾರ ಟ್ರಿನಿಡಾಡ್ ಮತ್ತು ಟೊಬಾಗೊಗೆ ಆಗಮಿಸಿದ್ದಾರೆ. ಅನಿವಾಸಿ ಭಾರತೀಯರು ನೃತ್ಯ, ಸಂಗೀತ ಮತ್ತು ವೇಷಭೂಷಣಗಳಲ್ಲಿ ತಮ್ಮ ಭಾರತೀಯ ಪರಂಪರೆಯನ್ನು ಪ್ರದರ್ಶಿಸಿದರು. ವಿಶೇಷವೆಂದರೆ ಪೋರ್ಟ್ ಆಫ್ ಸ್ಪೇನ್ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಭೋಜ್ಪುರಿ ಚೌತಾಲಾವನ್ನು ಪ್ರಸ್ತುತಪಡಿಸಲಾಯಿತು.
- Nayana Rajeev
- Updated on: Jul 4, 2025
- 9:37 am
One Big Beautiful Bill: ಟ್ರಂಪ್ಗೆ ಜಯ, ಒನ್ ಬಿಗ್ ಬ್ಯೂಟಿಫುಲ್ ಬಿಲ್ಗೆ ಯುಎಸ್ ಕಾಂಗ್ರೆಸ್ ಅನುಮೋದನೆ
ಅಮೆರಿಕದಲ್ಲಿ ಒನ್ ಬಿಗ್ ಬ್ಯೂಟಿಫುಲ್ ಬಿಲ್ ಅನ್ನು ಗುರುವಾರ ಅಂಗೀಕರಿಸಲಾಯಿತು. ಡೆಮಾಕ್ರಟಿಕ್ ಪಕ್ಷದ ನಾಯಕ ಮತ್ತು ನ್ಯೂಯಾರ್ಕ್ನ ಸದಸ್ಯ ಹಕೀಮ್ ಜೆಫ್ರಿಸ್ ಮಸೂದೆಯ ವಿರುದ್ಧ ದಾಖಲೆಯ ಭಾಷಣ ಮಾಡುವ ಮೂಲಕ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಸದನದಲ್ಲಿ ಮತದಾನವನ್ನು ವಿಳಂಬಗೊಳಿಸಿದರು. ಈ ಮಸೂದೆಯು ತೆರಿಗೆ ಕಡಿತ, ಮಿಲಿಟರಿ ಬಜೆಟ್, ರಕ್ಷಣಾ ಮತ್ತು ಇಂಧನ ಉತ್ಪಾದನೆಗೆ ಹೆಚ್ಚಿದ ಖರ್ಚು, ಹಾಗೆಯೇ ಆರೋಗ್ಯ ಮತ್ತು ಪೌಷ್ಟಿಕಾಂಶ ಕಾರ್ಯಕ್ರಮಗಳಲ್ಲಿನ ಕಡಿತದಂತಹ ಪ್ರಮುಖ ನಿಬಂಧನೆಗಳನ್ನು ಒಳಗೊಂಡಿದೆ.
- Nayana Rajeev
- Updated on: Jul 4, 2025
- 9:12 am
Video: ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ರಿನಿಡಾಡ್ ಮತ್ತು ಟೊಬಾಗೊ ತಲುಪಿದ್ದಾರೆ. ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರು ತಮ್ಮ 38 ಸಚಿವರು ಮತ್ತು ನಾಲ್ವರು ಸಂಸದರೊಂದಿಗೆ ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು ಎಂದು ಕರೆದಿದ್ದಾರೆ.
- Nayana Rajeev
- Updated on: Jul 4, 2025
- 9:48 am
Karnataka Rains: ಹಾಸನ, ಶಿವಮೊಗ್ಗ ಸೇರಿ ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಇಂದು ಭಾರಿ ಮಳೆ
ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಮಲೆನಾಡು, ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
- Nayana Rajeev
- Updated on: Jul 4, 2025
- 7:26 am