ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!
ವಿ. ಮುನಿಯಪ್ಪ ದೋಷಿ, ಕರ್ನಾಟಕ ಲೋಕಾಯುಕ್ತ ತೀರ್ಪು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಂಡಿ ವಿ. ಮುನಿಯಪ್ಪ ಅವರಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 4.5 ಕೋಟಿ ರೂ. ದಂಡ ವಿಧಿಸಲಾಗಿದೆ. 12 ವರ್ಷಗಳ ಕಾನೂನು ಹೋರಾಟದ ನಂತರ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ಬೆಂಗಳೂರಿನ ಬಸವ ಭವನದ ಮಾಜಿ ಎಂಡಿ ಆಗಿದ್ದ ಮುನಿಯಪ್ಪ ವಿರುದ್ಧ 2014ರಲ್ಲಿ ದೂರು ದಾಖಲಾಗಿತ್ತು.
- Pradeep Chikkati
- Updated on: Mar 31, 2026
- 7:34 pm
ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ಗೆ ಚಾಕುವಿನಿಂದ 10 ಬಾರಿ ಇರಿದ, ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ
ಸಾಮಾನ್ಯವಾಗಿ ಯಾವುದೇ ಒಂದು ಕಂಪನಿ ಸಡನ್ ಆಗಿ ಉದ್ಯೋಗದಿಂದ ತೆಗೆದು ಹಾಕಿದರೆ ನಾವೇನು ಮಾಡಬಹುದು ಅಳುತ್ತಾ ಕೂರಬಹುದು. ಸಂಸ್ಥೆಗೆ ಹಿಡಿಶಾಪ ಹಾಕುತ್ತಾ ಬೇರೆ ಉದ್ಯೋಗ ಹುಡುಕಲು ಶುರು ಮಾಡಬಹುದು. ಆದರೆ ಇಲ್ಲೊಬ್ಬ ಉದ್ಯೋಗಿ ತನ್ನನ್ನು ಕೆಲಸದಿಂದ ತೆಗೆದು ಹಾಕಿದ ಉದ್ಯೋಗಸಂಸ್ಥೆ ಮ್ಯಾನೇಜರ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಈ ಕೃತ್ಯ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ.
- Pradeep Chikkati
- Updated on: Mar 31, 2026
- 4:25 pm
‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆಯ ಅಕ್ರಮ ಹೆಚ್ಚಿದ್ದು, ಮೊಬೈಲ್ ವಶಕ್ಕೆ ಮುಂದಾದ ಸಿಬ್ಬಂದಿಗೆ ಕೈದಿಗಳು ಜೀವ ಬೆದರಿಕೆ ಹಾಕಿದ್ದಾರೆ. ಹತ್ತು ದಿನಗಳಲ್ಲಿ 21 ಮೊಬೈಲ್ಗಳು ಪತ್ತೆಯಾಗಿದ್ದು, ಇವುಗಳನ್ನು ಒಳಚರಂಡಿ ಪೈಪ್ಗಳಲ್ಲಿ ಬಚ್ಚಿಡಲಾಗಿತ್ತು ಎಂದು ಹೇಳಲಾಗಿದೆ. ಜಾಮರ್ ವ್ಯವಸ್ಥೆ ಇದ್ದರೂ ನೆಟ್ವರ್ಕ್ ಸಿಗುತ್ತಿರುವುದು ಆತಂಕ ಮೂಡಿಸಿದ್ದು, ಜೈಲರ್ ಮತ್ತು ವಾರ್ಡನ್ಗಳ ಶಾಮೀಲು ಬಗ್ಗೆ ಡಿಜಿಪಿ ಅಸಮಾಧಾನ ವ್ಯಕ್ತಪಡಿಸಿ ತನಿಖೆಗೆ ಆದೇಶಿಸಿದ್ದಾರೆ.
- Pradeep Chikkati
- Updated on: Mar 31, 2026
- 8:49 am
ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ
ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್ನಿಂದ ಇಂದಿರಾನಗರಕ್ಕೆ ತೆರಳುತ್ತಿದ್ದಾಗ, ಬೈಕ್ನಲ್ಲಿ ದಾರಿಯುದ್ದಕ್ಕೂ ಅಸಭ್ಯವಾಗಿ ವರ್ತಿಸಿದ ಕುರಿತು ಸಂತ್ರಸ್ತೆ ಯುವತಿ ದೂರು ನೀಡಿದ್ದರು. ಇದರ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ.
- Pradeep Chikkati
- Updated on: Mar 31, 2026
- 7:37 am
ಅಚ್ಚುಕಟ್ಟು ವ್ಯವಸ್ಥೆ: ಆರ್ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಚಿನ್ನಸ್ವಾಮಿ ಸ್ಪೇಡಿಯಂ ಬಳಿಕ ಕಾಲ್ತುಳಿ ಸಂಭವಿಸಿ 11 ಆರ್ಸಿಬಿ ಅಭಿಮಾನಿಗಳು ದುರಂತ ಸಾವು ಕಂಡಿದ್ದರು. ಈ ಕರಾಳ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳು ಸುಸೂತ್ರವಾಗಿ ನಡೆಲು ಎಲ್ಲಾ ವ್ಯವಸ್ಥೆ ಮಾಡಿದೆ.
- Pradeep Chikkati
- Updated on: Mar 29, 2026
- 4:27 pm
‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು ಮಾಡಿದೆ. ಬೇಕಂತಲೇ ಡಿಜಿಪಿ ಅಲೋಕ್ ಕುಮಾರ್ ಅವರ ಹೆಸರು ಹೇಳಿ ಮಾಡಿರುವ ವೀಡಿಯೋ ವೈರಲ್ ಆಗಿದೆ. ಆದೇಶದಂತೆ ತನಿಖೆ ನಡೆಸಿದಾಗ, ಮೊಬೈಲ್ಗಳು ಪತ್ತೆಯಾಗಿದ್ದು, ಮೂವರು ಕೈದಿಗಳನ್ನು ಗುರುತಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ವಾರ್ಡರ್ಗಳನ್ನು ಅಮಾನತುಗೊಳಿಸಿ, ಜೈಲರ್ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.
- Pradeep Chikkati
- Updated on: Mar 29, 2026
- 12:25 pm
ನಟ ಎಂದುಕೊಂಡು ಇನ್ಯಾರನ್ನೋ ಕಿಡ್ನ್ಯಾಪ್: ಹಲ್ಲೆ ಮಾಡಿ ಬೆದರಿಕೆ ಹಾಕಿ ಬಿಟ್ಟುಕಳಿಸಿದ ಖದೀಮರು
ಓರ್ವ ವ್ಯಕ್ತಿ ಮೇಲೆ ಪುಂಡರ ಗ್ಯಾಂಗ್ವೊಂದು ಹಲ್ಲೆ ಮಾಡಿ ಬಳಿಕ ಕಿಡ್ನ್ಯಾಪ್ಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ನಾಗರಹೊಳೆ ಸರ್ಕಲ್ನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಟ ಎಂದುಕೊಂಡು ಬೇರೆಯಾರನ್ನೊ ಖದೀಮರು ಕಿಡ್ನ್ಯಾಪ್ ಮಾಡಿ, ಹಲ್ಲೆ ಮಾಡಿ ಬಿಟ್ಟುಕಳುಹಿಸಿದ್ದಾರೆ.
- Pradeep Chikkati
- Updated on: Mar 28, 2026
- 4:21 pm
ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ
ಬೆಂಗಳೂರಿನ ಪೀಣ್ಯದ ಹೆಚ್ಎಂಟಿ ಲೇಔಟ್ನಲ್ಲಿ ಭೀಕರ ಡಬಲ್ ಮರ್ಡರ್ ನಡೆದಿದೆ. 16 ವರ್ಷದ ಅಪ್ರಾಪ್ತ ಬಾಲಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧವೇ ಈ ಘಟನೆಗೆ ಕಾರಣ. ಸದ್ಯ ಸ್ಥಳಕ್ಕೆ ಡಿಸಿಪಿ ನಾಗೇಶ್ ಮತ್ತು ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ.
- Pradeep Chikkati
- Updated on: Mar 26, 2026
- 3:07 pm
ಸೇತುವೆ ಮೇಲೆ ನಿಂತಿದ್ದ ಈಚರ್ ವಾಹನಕ್ಕೆ ಗೂಡ್ಸ್ ವ್ಯಾನ್ ಡಿಕ್ಕಿ: ಮೂವರು ದಾರುಣ ಸಾವು
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಧ್ಯರಾತ್ರಿ ನಡೆದ ಭೀಕರ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಓಲ್ಡ್ ಮದ್ರಾಸ್ ರಸ್ತೆಯ ಮೇಡಹಳ್ಳಿ ಬ್ರಿಡ್ಜ್ ಮೇಲೆ ಈಚರ್ ವಾಹನಕ್ಕೆ ಹಿಂದೆಯಿಂದ ಗೂಡ್ಸ್ ವ್ಯಾನ್ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದವರು ಉಸಿರು ಚೆಲ್ಲಿದ್ದಾರೆ. ಕೆ.ಆರ್. ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
- Pradeep Chikkati
- Updated on: Mar 22, 2026
- 11:30 am
ಡಿಆರ್ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರಲ್ಲಿ 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡಿಆರ್ಐ ಅಧಿಕಾರಿಗಳು ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ಈ ಡ್ರಗ್ಸ್ ಅನ್ನು ನಾಯಿಯ ಆಹಾರದ ಪ್ಯಾಕೆಟ್ಗಳಲ್ಲಿ ಅಡಗಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ಅವರ ಮನೆಯಲ್ಲಿ 70ಕ್ಕೂ ಹೆಚ್ಚು ಸಿಮ್ ಮತ್ತು 40 ಡೆಬಿಟ್ ಕಾರ್ಡ್ಗಳು ಸಿಕ್ಕಿವೆ.
- Pradeep Chikkati
- Updated on: Mar 22, 2026
- 6:55 am
ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರ್ಚ್ 18 ರಂದೇ ಯುಗಾದಿಯ ಸಂಭ್ರಮ ಕಂಡುಬರಲು ಶುರುವಾಗಿದೆ. ಕೆಆರ್ ಮಾರ್ಕೆಟ್ ಸೇರಿದಂತೆ ನಗರದ ವಿವಿಧೆಡೆ ಹಬ್ಬಕ್ಕೆ ವಸ್ತುಗಳ ಖರೀದಿ ಜೋರಾಗಿದೆ. ಆದರೆ, ಹಬ್ಬದ ಸಂದರ್ಭದಲ್ಲೇ ಹೂವು, ಹಣ್ಣುಗಳ ದರ ತುಸು ಏರಿಕೆಯಾಗಿದ್ದು, ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. ಹೂವು-ಹಣ್ಣಿನ ದರ ವಿವರ ಇಲ್ಲಿದೆ.
- Pradeep Chikkati
- Updated on: Mar 18, 2026
- 7:05 am
ವೈಯರ್ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!
ಬೆಂಗಳೂರಿನ ವರ್ತೂರಿನ ಕೊಡತಿ ಬಳಿ ಮದುವೆ ವಿಚಾರಕ್ಕೆ ಪ್ರೇಮ ವೈಫಲ್ಯದಿಂದ ಭೀಕರ ಕೊಲೆ ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು ಪ್ರಿಯಕರ ಅಯ್ಯಪ್ಪ ವೈಯರ್ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಅಯ್ಯಪ್ಪನನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ. ಮೊದಲ ಪತ್ನಿಗೆ ವಿಚ್ಛೇದನ ನೀಡುವಂತೆ ರಂಜಿತಾ ಒತ್ತಾಯಿಸಿದ್ದೇ ಜಗಳಕ್ಕೆ ಕಾರಣ.
- Pradeep Chikkati
- Updated on: Mar 14, 2026
- 12:25 pm