AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದೀಪ್​ ಚಿಕ್ಕಾಟಿ

ಪ್ರದೀಪ್​ ಚಿಕ್ಕಾಟಿ

Crime Reporter - TV9 Kannada

pradeep.chikkati@tv9.com

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ
ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ.
ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
Follow On:
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು

ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು

ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮರು ಆದೇಶ ಹೊರಡಿಸಲು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಬಗ್ಗೆ ನಟ ದರ್ಶನ್ ಪರ ವಕೀಲರಾದ ನಾಸಿರ್ ಅಲಿ ಅವರು ವಿವರ ನೀಡಿದ್ದಾರೆ. ವಿಚಾರಣೆ ನಡೆದ ರೀತಿಯ ಬಗ್ಗೆ ಅವರು ಮಾತನಾಡಿದ್ದಾರೆ.

ಒಂದೆಡೆ ಬಿಜೆಪಿ ಬಳ್ಳಾರಿ ಚಲೋ, ಇನ್ನೊಂದೆಡೆ ಇಡಿ ವಿಚಾರಣೆ: ಮಾಜಿ ಸಚಿವ ನಾಗೇಂದ್ರ ಹೇಳಿದ್ದೇನು?

ಒಂದೆಡೆ ಬಿಜೆಪಿ ಬಳ್ಳಾರಿ ಚಲೋ, ಇನ್ನೊಂದೆಡೆ ಇಡಿ ವಿಚಾರಣೆ: ಮಾಜಿ ಸಚಿವ ನಾಗೇಂದ್ರ ಹೇಳಿದ್ದೇನು?

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ನಾಗೇಂದ್ರ ಆರೋಪಿಯಾಗಿದ್ದು, ಬಿಜೆಪಿಯ ನಿರಂತರ ಹೋರಾಟ, ಪ್ರತಿಭಟನೆ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇನ್ನೊಂಡೆ ಇಡಿ ಸಹ ನಾಗೇಂದ್ರ ಅವರನ್ನು ವಿಚಾರಣೆಗೊಳಪಡಿಸಿದೆ. ಹೌದು...ಇಂದು (ಸೆಪ್ಟೆಂಬರ್ 07) ವಿಚಾರಣೆ ಹಾಜರಾದ ನಾಗೇಂದ್ರ ಅವರನ್ನು ನಿರಂತರವಾಗಿ ಐದು ಗಂಟೆಗಳ ಕಾಲ ಸುದೀರ್ಘ ವಿಚಾರಣೆಗೊಳಪಡಿಸಿದೆ. 5 ಗಂಟೆಗಳ ವಿಚಾರಣೆ ಮುಗಿಸಿಕೊಂಡು ಆಚೆ ಬಂದಿರುವ ನಾಗೇಂದ್ರ ಬಿಜೆಪಿಯ ಬಳ್ಳಾರಿ ಪಾದಯಾತ್ರೆ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಇಡಿ ವಿಚಾರಣೆ ಸಂಬಂಧ ಏನೆಲ್ಲಾ ಹೇಳಿದ್ದಾರೆ ನೋಡಿ.

ಭೀಕರ ರಸ್ತೆ ಅಪಘಾತ: ತಾಯಿ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಗು ದುರಂತ ಅಂತ್ಯ

ಭೀಕರ ರಸ್ತೆ ಅಪಘಾತ: ತಾಯಿ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಗು ದುರಂತ ಅಂತ್ಯ

ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಬಾಲಕ ಭವಿನ್ ಮೃತಪಟ್ಟಿದ್ದಾನೆ. ತಾಯಿ ಶುಭಲತಾ ಜೊತೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ, ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಬಾಲಕನ ಮೇಲೆ ಹರಿದು, ಭವಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್

ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್

ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಬೆಂಗಳೂರು ಪೊಲೀಸರು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆಯೋಜಕರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ನಿಗದಿತ ಸಮಯ, ಮಾರ್ಗ ಪಾಲನೆ ಹಾಗೂ ಧ್ವನಿವರ್ಧಕಗಳ ಬಳಕೆಗೆ ಮಿತಿ ವಿಧಿಸಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಪಿಒಪಿ ಗಣೇಶ ಮೂರ್ತಿಗಳ ಬದಲಿಗೆ ಮಣ್ಣಿನ ಗಣೇಶನನ್ನೇ ಪ್ರತಿಷ್ಠಾಪಿಸುವಂತೆ ಮನವಿ ಮಾಡಿದ್ದಾರೆ.

‘ಕೇಸ್ ಹಿಂಪಡೆಯಿರಿ’: ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್; ಆದರೂ ಇಲ್ಲ ಕ್ಷಮೆ

‘ಕೇಸ್ ಹಿಂಪಡೆಯಿರಿ’: ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್; ಆದರೂ ಇಲ್ಲ ಕ್ಷಮೆ

ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂಬ ನಿಲುವು ತಾಳಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಆರೋಪಿಗಳು ಹಾಗೂ ಅವರ ಕುಟುಂಬದವರು ಪರಿಪರಿಯಾಗಿ ಬೇಡಿಕೊಂಡರೂ ಕೂಡ ರಮ್ಯಾ ಅವರು ಮನಸ್ಸು ಬದಲಾಯಿಸಿಲ್ಲ.

ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಟಫ್​​ ರೂಲ್ಸ್​​: ಈ ನಿಯಮಗಳನ್ನ ಪಾಲಿಸದಿದ್ರೆ ಕ್ರಮ ಫಿಕ್ಸ್​​ ಎಂದ ನಗರ ಪೊಲೀಸ್ ಆಯುಕ್ತ

ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಟಫ್​​ ರೂಲ್ಸ್​​: ಈ ನಿಯಮಗಳನ್ನ ಪಾಲಿಸದಿದ್ರೆ ಕ್ರಮ ಫಿಕ್ಸ್​​ ಎಂದ ನಗರ ಪೊಲೀಸ್ ಆಯುಕ್ತ

ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಪೊಲೀಸರು ಕಠಿಣ ಮಾರ್ಗಸೂಚಿ ಜಾರಿಗೊಳಿಸಿದ್ದು, ಜಿಬಿಎ ಅನುಮತಿ, ನಿಗದಿತ ಮೆರವಣಿಗೆ ಮಾರ್ಗ ಹಾಗೂ ಸ್ವಯಂಸೇವಕರ ಪಟ್ಟಿ ಸಲ್ಲಿಕೆ ಕಡ್ಡಾಯಗೊಳಿಸಲಾಗಿದೆ. ಮೆರವಣಿಗೆ ಮಾರ್ಗ ಮತ್ತು ಗಣೇಶ ವಿಸರ್ಜನೆ ಸ್ಥಳಗಳಲ್ಲಿ ಜಿಬಿಎ ಹಾಗೂ ಸ್ಥಳೀಯ ಆಯಾ ಡಿಸಿಪಿಗಳಿಂದ ಪರಿಶೀಲನೆ ನಡೆಯಲಿದೆ. ನಿಯಾಮವಳಿ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ವಿವಾದ: ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್ ಉತ್ತರಾಖಂಡಕ್ಕೆ ವರ್ಗಾವಣೆ

ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ವಿವಾದ: ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್ ಉತ್ತರಾಖಂಡಕ್ಕೆ ವರ್ಗಾವಣೆ

ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ ಉತ್ತರಾಖಂಡದ ಹಲ್ದವಾನಿಯ ರಾಮಲೀಲಾ ಮೈದಾನ ಶುದ್ಧೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ವಿಧಾನಸೌಧದಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ಹಲ್ದವಾನಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಖರ್ಗೆ ಅವರು ದಲಿತರೆಂಬ ಕಾರಣಕ್ಕೆ ವೇದಿಕೆ ಶುದ್ಧೀಕರಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ವಿವಾದದ ಕುರಿತು ದೇಶಾದ್ಯಂತ ಹಲವು ಎಫ್ಐಆರ್ ಗಳು ದಾಖಲಾಗಿವೆ.

ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ: ಬೈಕ್, ಆಟೋ, ಗೂಡ್ಸ್ ವಾಹನ ಸಂಚಾರ ನಿಷೇಧ

ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ: ಬೈಕ್, ಆಟೋ, ಗೂಡ್ಸ್ ವಾಹನ ಸಂಚಾರ ನಿಷೇಧ

ಬೆಂಗಳೂರಿನ 4 ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಹಾಗೂ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಇಂದಿನಿಂದ ಹೊಸ ನಿಯಮಗಳು ಜಾರಿಯಾಗಿವೆ. ಸಂಚಾರ ದಟ್ಟಣೆ, ಅಪಘಾತಗಳನ್ನು ನಿಯಂತ್ರಿಸಲು ಮತ್ತು ವೀಲಿಂಗ್ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಏರ್‌ಪೋರ್ಟ್, ಕೆ.ಆರ್. ಮಾರ್ಕೆಟ್, ಪೀಣ್ಯ ಮತ್ತು ರಾಗಿಗುಡ್ಡ ಫ್ಲೈಓವರ್‌ಗಳಲ್ಲಿ 24/7 ಮತ್ತು ಸಮಯಾಧಾರಿತ ನಿರ್ಬಂಧಗಳನ್ನು ವಿಧಿಸಲಾಗಿದೆ.

ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಪುತ್ರನ ವಿರುದ್ಧ ಹಲ್ಲೆ ಆರೋಪ: ಸಹಪಾಠಿಯನ್ನು ಕಾರಿನಲ್ಲಿ ಎಳೆದೊಯ್ದು ಥಳಿತ

ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಪುತ್ರನ ವಿರುದ್ಧ ಹಲ್ಲೆ ಆರೋಪ: ಸಹಪಾಠಿಯನ್ನು ಕಾರಿನಲ್ಲಿ ಎಳೆದೊಯ್ದು ಥಳಿತ

ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಮತ್ತು ಅಪಹರಣ ಆರೋಪ ಕೇಳಿಬಂದಿದೆ. ಕಾರು ಓವರ್‌ಟೇಕ್ ಮಾಡಿದ ಕಾರಣ ಸಹಪಾಠಿ ಮನೀಶ್ ಗೌಡರನ್ನು ಬಲವಂತವಾಗಿ ಕರೆದೊಯ್ದು ಥಳಿಸಿದ್ದಾರೆನ್ನಲಾಗಿದೆ. ಗಾಯಗೊಂಡ ಮನೀಶ್ ಗೌಡ ಆಸ್ಪತ್ರೆ ಸೇರಿದ್ದು, ಕೆಂಗೇರಿ ಪೊಲೀಸರಿಗೆ ದೂರು ನೀಡಲಾಗಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಹೊಸ ಟ್ರಾಫಿಕ್ ರೂಲ್ಸ್:5 ಫ್ಲೈಓವರ್​​ಗಳ ಮೇಲೆ ವಾಹನ ಸಂಚಾರಕ್ಕೆ ಬ್ರೇಕ್!

ಬೆಂಗಳೂರಿನಲ್ಲಿ ಹೊಸ ಟ್ರಾಫಿಕ್ ರೂಲ್ಸ್:5 ಫ್ಲೈಓವರ್​​ಗಳ ಮೇಲೆ ವಾಹನ ಸಂಚಾರಕ್ಕೆ ಬ್ರೇಕ್!

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಲೆದೂರಿದೆ. ಇದರ ನಡುವೆ ಅಪಘಾತಗಳ ಸಂಖ್ಯೆ ಸಹ ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ಟ್ರಾಫಿಕ್ ರೂಲ್ಸ್ ಬದಲಾವಣೆ ಮಾಡಲಾಗಿದೆ. ಸಂಚಾರ ಸುರಕ್ಷತೆ ಹಿತದೃಷ್ಟಿಯಿಂದ ಬೆಂಗಳೂರಿನ ಐದು ಪ್ರಮುಖ ಫ್ಲೈಓವರ್​​​​​ಗಳ ಮೇಲೆ ಕೆಲ ಮಾದರಿ ವಾಹನಗಳಿಗೆ ನಿರ್ಬಂಧ ವಿಧಿಸಿದ್ದಾರೆ. ಯಾವೆಲ್ಲಾ ಫ್ಲೈಓವರ್​​​​​ ಮೇಲೆ ಯಾವ್ಯಾವ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ ಎನ್ನುವ ವಿವರ ಇಲ್ಲಿದೆ.

ಬಸವನಗುಡಿ ಈದ್ ಮಿಲಾದ್ ಮೆರವಣಿಗೆಯಲ್ಲಿನ  ಗಲಾಟೆಗೆ ಅಸಲಿ ಕಾರಣ ಬಹಿರಂಗ

ಬಸವನಗುಡಿ ಈದ್ ಮಿಲಾದ್ ಮೆರವಣಿಗೆಯಲ್ಲಿನ ಗಲಾಟೆಗೆ ಅಸಲಿ ಕಾರಣ ಬಹಿರಂಗ

ನಿನ್ನೆ (ಆಗಸ್ಟ್ 26) ದೇಶದೆಲ್ಲೆಡೆ ಈದ್ ಮೀಲದ್ ಹಬ್ಬದ ಆಚರಣೆ ನಡೆಯುತ್ತಿತ್ತು. ಆದರೆ ಬೆಂಗಳೂರಿನ ಬಸವನಗುಡಿಯಲ್ಲಿ ಮಾತ್ರ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಈ ಸಂಬಂಧ ಜೈಕಾರ ಹಾಕಿ ಗಲಾಟೆ ಮಾಡಿದವರ ಮೇಲೆ ಕೇಸ್ ಬಿದ್ದಿದ್ದು, ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದು ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಘಟನೆ ಕಾರಣವೇನು ಎನ್ನುವುದನ್ನು ಪೊಲೀಸರೇ ಮಾಧ್ಯಮ ಪ್ರಕಟಣೆ ಮೂಲಕ ಬಹಿರಂಗಪಡಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ

ಈದ್ ಮಿಲಾದ್ ಮೆರವಣಿಗೆ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ

ಬೆಂಗಳೂರಿನ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಜಟಾಪಟಿ ನಡೆದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆಯಾಗಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರೂ, ಇತ್ತಠಾಣೆ ಎದುರು ಹಿಂದೂ ಪರ ಕಾರ್ಯಕರ್ತರ ಜಮಾವಣೆಗೊಂಡ ಹಿನ್ನೆಲೆ ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!