ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತಕ್ಕೆ ಬಂದಿದೆ ಎನ್ನಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಸಿಬ್ಬಂದಿಯಿಂದ ಭಾವುಕ ವಿದಾಯ ಪಡೆದು ಕಚೇರಿ ಖಾಲಿ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಅಲ್ಲದೆ, ರಾಜ್ಯಪಾಲರ ಭೇಟಿಗೆ ಇಂದು ಸಮಯವನ್ನೂ ಕೇಳಿದ್ದಾರೆ. ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ರಾತ್ರಿ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.
- Pradeep Chikkati
- Updated on: May 28, 2026
- 6:49 am
ಇದೆಂಥಾ ದುರ್ದೈವ! ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದು ಆಟಗಾರ ಸಾವು
KSCA ಲೀಗ್ ಪಂದ್ಯದ ವೇಳೆಯೇ ಕ್ರಿಕೆಟಿಗ ಹೃದಯಾಘಾತವಾಗಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೊಮ್ಮಸಂದ್ರದ ಎಸ್ಎಲ್ಎಸ್ ಮೈದಾನದಲ್ಲಿ ನಡೆದಿದೆ. ನೀರು ಕುಡಿಯುತ್ತಿದ್ದಾಗ ಸ್ಥಳದಲ್ಲೇ ಕುಸಿದುಬಿದ್ದಿದ್ದ ಕ್ರಿಕೆಟಿಗ ನನ್ನು ಆಸ್ಪತ್ರೆಗೆ ಸಾಗಿಸುವಾಗಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕ್ರಿಕೆಟಿಗ ರಣಜಿ ಪಂದ್ಯಗಳನ್ನು ಆಡಿದ ಅನುಭವ ಕೂಡ ಹೊಂದಿದ್ದರು.
- Pradeep Chikkati
- Updated on: May 24, 2026
- 7:14 pm
ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾಟ್ರಸ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್ನ ಪತ್ನಿ
ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಕ್ವಾಟ್ರಸ್ನಲ್ಲೇ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಸದ್ಯ ಪತಿ ಮತ್ತು ಕುಟುಂಬಸ್ಥರ ಮೇಲೆ ವರದಕ್ಷಿಣೆ ಕಿರುಕುಳ, ಮಾನಸಿಕ ಮತ್ತು ದೈಹಿಕ ಹಿಂಸೆಯ ಆರೋಪ ಕೇಳಿಬಂದಿದ್ದು, ಕೆ.ಆರ್.ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.
- Pradeep Chikkati
- Updated on: May 23, 2026
- 10:27 pm
ಕಾಕ್ರೋಚ್ ಜನತಾ ಪಾರ್ಟಿಗೆ ‘ಲಕ್ಷ್ಮಣರೇಖೆ’ ಎಳೆದ ಬೆಂಗಳೂರು ಪೊಲೀಸರು, ಆಗಿದ್ದೇನು?
ಸಾಮಾಜಿಕ ಜಾಲತಾಣಗಳಲ್ಲಿ ಯಾವುದಕ್ಕೆ ಯಾವಾಗ ಡಿಮ್ಯಾಂಡ್ ಬರುತ್ತೆ ಎಂದು ಊಹಿಸಲು ಅಸಾಧ್ಯ.ಮೂರ್ನಾಲ್ಕು ದಿನದ ಹಿಂದೆ ರಾತ್ರೋರಾತ್ರಿ ದೇಶಾದ್ಯಂತ 'ಕಾಕ್ರೋಚ್ ಪಾರ್ಟಿ ಆಫ್ ಇಂಡಿಯಾ' (Cockroach Party of India) ಎಂಬ ವಿಚಿತ್ರ ಹೆಸರಿನ ಟ್ರೆಂಡ್ ಸದ್ದು ಮಾಡುತ್ತಿದ್ದು, ಇದೀಗ ಕಾಕ್ರೋಚ್ ಪಾರ್ಟಿ ಮತ್ತೊಂದು ಹೆಜ್ಜೆ ಇಡಲು ಮುಂದಾಗಿದೆ. ಆದ್ರೆ, ಇದಕ್ಕೆ ಬೆಂಗಳೂರು ಪೊಲೀಸ್ರು ಲಕ್ಷ್ಮಣ ರೇಖೆ ಎಳೆದಿದ್ದಾರೆ.
- Pradeep Chikkati
- Updated on: May 22, 2026
- 8:14 pm
ಬೆಂಗಳೂರಿನಲ್ಲಿ ಬುಡಸಮೇತ ರಸ್ತೆ ಮೇಲೆ ಬಿದ್ದ ಬೃಹತ್ ಮರ: ಶಂಕರಮಠ ರಸ್ತೆ ಬಂದ್!
ಬೆಂಗಳೂರಿನ ಶಂಕರಮಠ ರಸ್ತೆಯಲ್ಲಿ ಭಾರೀ ಗಾಳಿ ಮಳೆಯಿಂದ ಬೃಹತ್ ಮರ ಧರೆಗುರುಳಿದೆ. ಇದರಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಸುಮಾರು 15 BMTC ಬಸ್ಗಳು ಸಂಜೆ 7 ಗಂಟೆಯಿಂದ ಸಿಲುಕಿವೆ. ಸಂಚಾರಕ್ಕೆ ಅಡಚಣೆಯಾಗಿದ್ದು, BBMP ಸಿಬ್ಬಂದಿ ಮರ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದು ನಗರದ ಸಂಚಾರ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರಿದೆ.
- Pradeep Chikkati
- Updated on: May 21, 2026
- 10:09 pm
ಮರಗಳು ಧರೆಗೆ, ನೀರು ರಸ್ತೆಗೆ: ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ
Bengaluru Rain: ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಮೈಸೂರು ರಸ್ತೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಮಳೆರಾಯ ಆರ್ಭಟಿಸಿದ್ದಾನೆ. ರಸ್ತೆಗಳು ಜಲಾವೃತವಾಗಿ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಇನ್ನು ಬೃಹತ್ ಮರ ಮತ್ತು ಕಂಬಗಳು ಉರುಳಿಬಿದ್ದು ಅವಾಂತರಗಳು ಸಂಭವಿಸಿವೆ.
- Pradeep Chikkati
- Updated on: May 21, 2026
- 7:55 pm
ಹುಡ್ಗಿ ಆಯಸ್ಸು ಗಟ್ಟಿ: ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ರಕ್ಷಣೆ, ಪೊಲೀಸ್- ಅಗ್ನಿ ಶಾಮಕ ಸಿಬ್ಬಂದಿಗೆ ಸೆಲ್ಯೂಟ್
ಇನ್ನೇನು ಬಾಲಕಿಯೋರ್ವಳು ಕಟ್ಟಡದ ಮೇಲಿಂದ ಜಿಗಿದು ಜೀವ ಕಳೆದುಕೊಳ್ಳಬೇಕೆನ್ನುವಷ್ಟರಲ್ಲೇ ಹೊಯ್ಸಳ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೇವರಾಗಿ ಬಂದು ಕಾಪಾಡಿದ್ದಾರೆ. ಇದರೊಂದಿಗೆ ಅನಾಯಾಸವಾಗಿ ಹೋಗುತ್ತಿದ್ದ ಒಂದು ಜೀವವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಬಾಳಿ ಬದುಕಬೇಕಿದ್ದ ಬಾಲಕಿ ಪ್ರಾಣ ಕಳೆದುಕೊಳ್ಳುವ ದುಡುಕಿನ ನಿರ್ಧಾರ ಕೈಗೊಂಡಿದ್ಯಾಕೆ? ಕೊನೆಗೆ ಆಕೆಯ ಪ್ರಾಣ ಉಳಿಸಿದ್ಹೇಗೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Pradeep Chikkati
- Updated on: May 21, 2026
- 6:37 pm
ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಮೇ 21 ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂಪಾರ್ಕ್ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಹೀಗಾಗಿ ಮುಂಜಾತ್ರಾ ಕ್ರಮವಾಗಿ ಟ್ರಾಫಿಕ್ ಪೊಲೀಸರು, ಬೆಂಗಳೂರಿನ ಫ್ರೀಡಂಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ? ಪರ್ಯಾಯ ಮಾರ್ಗಗಳಾವುವು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Pradeep Chikkati
- Updated on: May 20, 2026
- 10:03 pm
ಇಂಧನ ಬೆಲೆ ಮತ್ತಷ್ಟು ಹೆಚ್ಚಳ: ತಜ್ಞರಿಂದ 8ರಿಂದ 10 ರೂಪಾಯಿ ಏರಿಕೆ ಬಗ್ಗೆ ಭವಿಷ್ಯ
ಪೆಟ್ರೋಲ್, ಡಿಸೇಲ್, ಸಿಎನ್ಜಿ ಬೆಲೆ ಈಗಾಗಲೇ ಮೂರು ರೂಪಾಯಿ ಏರಿಕೆಯಾಗಿದ್ದು, ಇದು ಆರಂಭ ಮಾತ್ರ ಎನ್ನುತ್ತಿದ್ದಾರೆ ತಜ್ಞರು. ಜಾಗತಿಕ ತೈಲ ಬಿಕ್ಕಟ್ಟಿನಿಂದಾಗಿ ಇಂಧನ ಬೆಲೆ ಎಂಟರಿಂದ ಹತ್ತು ರೂಪಾಯಿಗಳಷ್ಟು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದು ಸರಕು ಸಾಗಣೆ ವೆಚ್ಚ ಏರಿಕೆ ಮಾಡಿ, ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿ ಗ್ರಾಹಕರ ಮೇಲೆ ಭಾರಿ ಹೊರೆ ಬೀರಲಿದೆ.
- Pradeep Chikkati
- Updated on: May 17, 2026
- 10:27 am
2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣದಲ್ಲಿ ಸಚಿವ ಜಮೀರ್ ಖಾನ್ ಸಂಸ್ಥೆಗೂ ಲಿಂಕ್: ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್!
ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಬರೋಬ್ಬರಿ 2,000 ಕೋಟಿ ರೂ. ಮೊತ್ತದ ಬೃಹತ್ ನಕಲಿ ಐಟಿಸಿ (Input Tax Credit) ವಂಚನೆ ಜಾಲವನ್ನು ಭೇದಿಸಿದೆ. ಸ್ಕ್ರ್ಯಾಪ್ ಸಾಗಾಟದ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸಲು ವಾಹನಗಳನ್ನು ಬಳಸಿದ ಆರೋಪದ ಮೇಲೆ ಸಚಿವ ಜಮೀರ್ ಖಾನ್ಗೆ ಸೇರಿದ 'ನ್ಯಾಷನಲ್ ಟ್ರಾವೆಲ್ಸ್'ಗೆ ಇಲಾಖೆ ನೋಟಿಸ್ ನೀಡಿದ್ದು, ಒಟ್ಟು 127 ನಕಲಿ ಸಂಸ್ಥೆಗಳ ಈ ಜಾಲಕ್ಕೆ ಸಂಬಂಧಿಸಿ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ.
- Pradeep Chikkati
- Updated on: May 16, 2026
- 12:29 pm
ಜೈಲುಗಳಲ್ಲಿ ಅಕ್ರಮಕ್ಕೆ ಬ್ರೇಕ್: ಕೈದಿಗಳು ಮತ್ತು ಅಧಿಕಾರಿಗಳ ಮೇಲೆ ನಿಗಾ ಇಡಲು ‘ಪ್ರಿಸನರ್ಸ್ ಟ್ರ್ಯಾಕಿಂಗ್’ ಸಿಸ್ಟಮ್!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಹಾವಳಿ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಯತ್ನದಂತಹ ಘಟನೆಗಳ ನಂತರ, ಡಿಜಿಪಿ ಅಲೋಕ್ ಕುಮಾರ್ ಅವರು ‘ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್ಮೆಂಟ್’ ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಕೈದಿಗಳು ಮತ್ತು ಸಿಬ್ಬಂದಿಯ ಪ್ರತಿಯೊಂದು ಚಲನವಲನವನ್ನು ಡಿಜಿಟಲ್ ರೂಪದಲ್ಲಿ ದಾಖಲಿಸುವ ಮೂಲಕ ಜೈಲಿನ ಅಕ್ರಮಗಳನ್ನು ತಡೆಯುವುದು ಇದರ ಗುರಿಯಾಗಿದೆ.
- Pradeep Chikkati
- Updated on: May 12, 2026
- 9:44 am
ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ
ಮೇ 10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ HAL ಗೇಟ್ ನಂ.30 ಸುತ್ತಮುತ್ತ ಮತ್ತು ನೈಸ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧವಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪರ್ಯಾಯ ಮಾರ್ಗಗಳು ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಸೂಚಿಸಲಾಗಿದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
- Pradeep Chikkati
- Updated on: May 9, 2026
- 3:21 pm