ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಕೆಆರ್ ಮಾರ್ಕೆಟ್ನಲ್ಲಿ ಜನಸಾಗರ: ಬೆಳ್ಳಂಬೆಳಗ್ಗೆಯೇ ಟ್ರಾಫಿಕ್ ಜಾಮ್
Bangalore traffic jam: ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ನಲ್ಲಿ ಜನಸಾಗರವೇ ಹರಿದುಬಂದಿದೆ. ವಿವಿಧ ಊರುಗಳಿಂದ ರೈತರು ಕೂಡ ಬೆಳೆದ ವಸ್ತುಗಳ ಮಾರಾಟಕ್ಕೆ ಬಂದಿದ್ದಾರೆ. ಮತ್ತೊಂದೆಡೆ, ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗೆ ಜನರು ಮುಗಿಬಿದ್ದಿದ್ದು, ಟೌನ್ ಹಾಲ್ನಿಂದ ಕೆ.ಆರ್. ಮಾರ್ಕೆಟ್ವರೆಗೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
- Pradeep Chikkati
- Updated on: Aug 20, 2026
- 7:03 am
ED ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ: ಶಿವಾನಂದ ನೀಲಣ್ಣನವರ್ ಅರೆಸ್ಟ್
Shivanand Neelannavar Cse: ಬೆಳಗಾವಿಯ ಶಿವಂ ಅಸೋಸಿಯೇಟ್ ಕಂಪನಿಯಿಂದ 2110 ಕೋಟಿ ರೂ ವಂಚನೆ ಮಾಡಿರುವುದು ಇಡಿ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಬೆನ್ನಲ್ಲೇ ಮಂಗಳೂರು ವಲಯದ ಇಡಿ ಅಧಿಕಾರಿಗಳು ಶಿವಾನಂದ ನೀಲಣ್ಣನವರ್ನನ್ನು ಬಂಧಿಸಿದ್ದಾರೆ. ಸದ್ಯ 12 ದಿನಗಳ ಕಾಲ ED ವಶಕ್ಕೆ ನೀಡಿ ಮಂಗಳೂರು ED ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
- Pradeep Chikkati
- Updated on: Aug 14, 2026
- 4:59 pm
ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಆಂಧ್ರ ಮೂಲದ ಸಿಮ್, ಒಂದೇ ಕಂಪನಿಯ ಫೋನ್ಗಳ ಪೂರೈಕೆಯ ಜಾಲ!
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ದಾಳಿ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಪತ್ತೆಯಾದ ಮೊಬೈಲ್ ಹಾಗೂ ಸಿಮ್ ಕಾರ್ಡ್ಗಳ ಹಿಂದೆ ಆಂಧ್ರಪ್ರದೇಶ ಮೂಲದ ಬೃಹತ್ ಜಾಲವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೈಲಿನಲ್ಲಿ ಸಿಕ್ಕ ಮೂರೂ ಫೋನ್ಗಳು ಒಂದೇ ಕಂಪನಿಯದ್ದಾಗಿದ್ದು, ಅಕ್ರಮವಾಗಿ ಮೊಬೈಲ್ ಪೂರೈಸುತ್ತಿದ್ದ ಜಾಲದ ಪತ್ತೆಗೆ ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
- Pradeep Chikkati
- Updated on: Aug 14, 2026
- 11:02 am
ಆ 15ರಂದು ವಿಧಾನಸೌಧ ಮುಂದೆ ಫ್ರೀಡಂ ಹಬ್ಬ: ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ
Freedom Habba traffic diversions: ಆಗಸ್ಟ್ 15 ರಂದು ವಿಧಾನಸೌಧದ ಮುಂದೆ ನಡೆಯುವ ಫ್ರೀಡಂ ಹಬ್ಬ ಕಾರ್ಯಕ್ರಮ ಹಿನ್ನೆಲೆ ಸಂಚಾರ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ. ಸಾವಿರಾರು ಜನರು ಸೇರುವ ನಿರೀಕ್ಷೆಯಿದ್ದು, ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
- Pradeep Chikkati
- Updated on: Aug 13, 2026
- 5:35 pm
ಜೈಲಿನಲ್ಲಿ ರಾಜಾರೋಷವಾಗಿ ಫೋನ್ನಲ್ಲಿ ಮಾತನಾಡಿರುವ ಪ್ರಜ್ವಲ್, ಆಡಿಯೋನಲ್ಲೇನಿದೆ ಗೊತ್ತಾ?
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್ ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್ಗ ಸಹ ಕಂಡುಬಂದಿದೆ. ಹೌದು...ಜೈಲಿನಲ್ಲಿ ಸಿಕ್ಕ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ.
- Pradeep Chikkati
- Updated on: Aug 12, 2026
- 10:08 pm
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಸಿಕ್ಕ ಮೊಬೈಲ್, ಪೆನ್ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ದಿನಾಲೂ ಸುದ್ದಿಯಲ್ಲಿರುತ್ತೆ.ಕಾರಣ ವಿಐಪಿ ಖೈದಿಗಳ ಸಂಖ್ಯೆ ಜಾಸ್ತಿ ಆಗಿರೋದು.ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಮತ್ತೆ ಸದ್ದು ಮಾಡಿದ್ದು, ಫೋನ್,ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೈಪ್ರೊಫೈಲ್ ಕೈದಿ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಅದರಲ್ಲೂ ಮುಖ್ಯವಾಗಿ ಪ್ರಜ್ವಲ್ ಬಳಿ ಇದ್ದ ಮೊಬೈಲ್ ಹಾಗೂ ಪೆನ್ ಡ್ರೈವ್ನ್ಲಲಿ ಅಶ್ಲೀಲ ವಿಡಿಯೋಗಳು ಇರುವುದು ಕಂಡುಬಂದಿದೆ.
- Pradeep Chikkati
- Updated on: Aug 12, 2026
- 9:30 pm
ಹಸುಗಳಿಂದ ಟ್ರಾಫಿಕ್ ಜಾಮ್ ಆಗಿದ್ದಕ್ಕೆ ಅವುಗಳ ಮಾಲೀಕನ ಮೇಲೆ FIR!: ಏರ್ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ
ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಹಸುಗಳಿಂದ ಸಂಚಾರಕ್ಕೆ ಅಡಚಣೆ ಉಂಟಾದ ಕಾರಣ ಅವುಗಳ ಮಾಲೀಕನ ವಿರುದ್ಧ ಬಿಎನ್ಎಸ್ (BNS) ಕಾಯ್ದೆಯಡಿ ಎಫ್ಐಆರ್ (FIR) ದಾಖಲಾಗಿರುವ ಅಪರೂಪದ ಘಟನೆ ಹೆಚ್ಎಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದಿರುವ ದಿನ ರಿಂಗ್ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ HAL ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಈ ಸಂಬಂಧ ದೂರು ನೀಡಿದ್ದರು.
- Pradeep Chikkati
- Updated on: Aug 11, 2026
- 4:38 pm
ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ?
ಮದುವೆಯಾದ ಮೊದಲ ದಿನವೇ "ನೀ ನನಗೆ ಇಷ್ಟವಿಲ್ಲ" ಎಂದು ಪತ್ನಿಯನ್ನ ದೂರ ತಳ್ಳಿ, 'ತಲಾಕ್' ನಿಷೇಧದ ನಡುವೆಯೂ ತಲಾಕ್ ನೀಡಿ ವರದಕ್ಷಿಣೆ ಹಾಗೂ ದೈಹಿಕ ಹಿಂಸೆ ನೀಡಿದ ಆರೋಪ ಬೆಂಗಳೂರಿನಲ್ಲಿ ಕೇಳಿ ಬಂದಿದೆ. ಪ್ರಕರಣ ಸಂಬಂಧ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದು, ಆರೋಪಿಗಳು ಪ್ರಭಾವಿ ಸಚಿವರ ಕಡೆಯವರು ಎಂದೂ ದೂರಿದ್ದಾಳೆ.
- Pradeep Chikkati
- Updated on: Aug 11, 2026
- 12:30 pm
ಊರು, ಊಟದ ವಿಚಾರಕ್ಕೆ ಪತ್ನಿ ಕೊಲೆ: 7 ದಿನಗಳ ಕಾರ್ಯಾಚರಣೆ ನಂತರ ಬಿಹಾರ-ನೇಪಾಳ ಗಡಿಯಲ್ಲಿ ಹಂತಕ ಬಂಧನ, ಹೇಗಿತ್ತು ಗೊತ್ತಾ? ರೋಚಕ ಬೇಟೆ
ಬೆಂಗಳೂರಿನ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾಕುಮಾರಿ ಕೊಲೆ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಪತಿ ಧೀರಜ್ ಕುಮಾರ್, ರೀಮಾಳನ್ನು ಕೊಲೆ ಮಾಡಿದ್ದು, ಬಿಹಾರದಲ್ಲಿ ಬಂಧಿಸಲಾಗಿದೆ. ರೀಲ್ಸ್ ಗೀಳು, ದಾಂಪತ್ಯ ಜೀವನದಲ್ಲಿ ಆಸಕ್ತಿ ಕಳೆದುಕೊಂಡಿದ್ದು, ಲೈಂಗಿಕ ಕ್ರಿಯೆಗೆ ನಿರಾಕರಣೆ ಹಾಗೂ ಬಿಹಾರಕ್ಕೆ ಹಿಂದಿರುಗುವ ಹಠ ಕೊಲೆಗೆ ಕಾರಣವೆಂದು ತನಿಖೆಯಿಂದ ಬಹಿರಂಗವಾಗಿದೆ.
- Pradeep Chikkati
- Updated on: Aug 7, 2026
- 11:03 am
899.35 ಕೋಟಿ ವಂಚನೆ ಕೇಸ್: ದೀಪಕ್ ಕೇಬಲ್ ಕಂಪನಿಯ 150 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
SBI Fraud Case: ಎಸ್ಬಿಐ ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ವಲಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕರಾದ ಕೆ. ವೆಂಕಟೇಶ್ವರ ರಾವ್ ಮತ್ತು ಸತ್ಯವತಿ ಬಾಲ್ ಅವರ 150 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ.
- Pradeep Chikkati
- Updated on: Aug 6, 2026
- 7:29 pm
ವಾಹನ ಸವಾರರ ಗಮನಕ್ಕೆ: 10 ದಿನ ಪೀಣ್ಯ ಫ್ಲೈಓವರ್ ಬಂದ್; ಹೀಗಿವೆ ಪರ್ಯಾಯ ಮಾರ್ಗಗಳು
Peenya Flyover Closed: ಬೆಂಗಳೂರಿನ ಪೀಣ್ಯ ಫ್ಲೈಓವರ್ನಲ್ಲಿ ಡಾಂಬರೀಕರಣ ಕಾಮಗಾರಿ ಹಿನ್ನೆಲೆ ಇಂದಿನಿಂದ ಆಗಸ್ಟ್ 5ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕುರಿತಾಗಿ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪರ್ಯಾಯ ಮಾರ್ಗಗಳು ಯಾವವು ಎಂಬ ಮಾಹಿತಿ ಇಲ್ಲಿದೆ.
- Pradeep Chikkati
- Updated on: Jul 27, 2026
- 10:01 pm
ಬೆಂಗಳೂರಿನಲ್ಲಿ ನೀಟ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆದಿದ್ದು, ವಿದ್ಯಾರ್ಥಿಗಳ ಆಕ್ರೋಶ ವಿಕೋಪಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ನಡೆದ ನೀಟ್ ಪತ್ರಿಭಟನೆ ವೇಳೆ ಯುವತಿಯೋರ್ವಳು ಆಕ್ಷೇಪಾರ್ಹ ಪೋಸ್ಟರ್ ಪ್ರದರ್ಶಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
- Pradeep Chikkati
- Updated on: Jul 26, 2026
- 5:50 pm