ನಟಿ ರುಕ್ಮಿಣಿ ವಸಂತ್ ಎಐ ವಿಡಿಯೋ ಪ್ರಕರಣ: ಬೆಂಗಳೂರಲ್ಲಿ ಮೂವರು ಆರೋಪಿಗಳ ಬಂಧನ
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿರುವ ನಟಿ ರುಕ್ಮಿಣಿ ವಸಂತ್ ಅವರು ಬಿಕಿನಿ ಧರಿಸಿ ಫೋಟೋಶೂಟ್ ಮಾಡಿದ ರೀತಿಯಲ್ಲಿ ವಿಡಿಯೋ ಮತ್ತು ಫೋಟೋಗಳನ್ನು ಎಡಿಟ್ ಮಾಡಲಾಗಿತ್ತು. ಎಐ ತಂತ್ರಜ್ಞಾನ ಬಳಸಿಕೊಂಡು ಈ ಕೃತ್ಯ ಎಸಗಿದ್ದ ಆರೋಪಿಗಳು ಈಗ ಬೆಂಗಳೂರು ಸೈಬರ್ ಪೊಲೀಸರ ಬಲೆಗೆ ಬಿದ್ದಿದ್ದಾರೆ.
- Pradeep Chikkati
- Updated on: Jun 19, 2026
- 9:47 pm
ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ
ಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಲ್ಲಿ ರೌಡಿಗಳನ್ನ ಹಾಗೂ ರೌಡಿ ಚಟುವಟಿಕೆಯನ್ನ ಮಟ್ಟ ಹಾಕಲು ರೌಡಿ ನಿಗ್ರಹ ದಳವನ್ನ ರಚನೆ ಮಾಡಲು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣತೊಟ್ಟಿದ್ದಾರೆ. ಹೌದು..ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲು ಖಡಕ್ ಆದೇಶಿಸಿದ್ದಾರೆ.
- Pradeep Chikkati
- Updated on: Jun 17, 2026
- 4:33 pm
ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು?
ರಾಜ್ಯದಲ್ಲಿ ರೌಡಿಗಳ ಹೆಡೆಮುರಿ ಕಟ್ಟಬೇಕಾದ ಪೊಲೀಸ್ ಇಲಾಖೆ ಮಾಡಿದ ಅದೊಂದು ದೊಡ್ಡ ಎಡವಟ್ಟಿಗೆ ರೌಡಿಗಳಿಗೆ ರಿಲೀಫ್ ಸಿಕ್ಕಿದೆ. ರೌಡಿಶೀಟರ್ ರೋಹಿತ್ ಅಲಿಯಾಸ್ ಒಂಟೆ ರೋಹಿತ್ ಸೇರಿದಂತೆ 66 ನಟೋರಿಯಸ್ ರೌಡಿಗಳನ್ನು ರೌಡಿಶೀಟ್ನಿಂದ ಕೈಬಿಡಲಾಗಿದೆ. ಪೊಲೀಸರು ಸೂಕ್ತ ದಾಖಲೆಗಳನ್ನು ಒದಗಿಸದಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.
- Pradeep Chikkati
- Updated on: Jun 15, 2026
- 7:09 pm
ನಕ್ಸಲ್ ಚಟುವಟಿಕೆಗೆ ಬೆಂಗಳೂರಲ್ಲಿ ಹಣಕಾಸು ವಹಿವಾಟು: ರಾಜ್ಯದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್ಐಆರ್
ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪದಡಿ ಅಮೆರಿಕಾ ಮೂಲದ ಸಂಸ್ಥೆ, ರಾಜ್ಯದ ನಾಲ್ವರು ಸೇರಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಕೊತ್ತನೂರು ವ್ಯಾಪ್ತಿಯಲ್ಲಿ ಹಣ ವರ್ಗಾವಣೆ ಹಿನ್ನೆಲೆ ಇಡಿ ಅಧಿಕಾರಿಗಳು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
- Pradeep Chikkati
- Updated on: Jun 13, 2026
- 5:11 pm
ಕೋರ್ಟ್ ತೀರ್ಪು ಬರೋ ಮುನ್ನವೇ ಮಡಿವಾಳ ಬಾಂಬ್ ಸ್ಫೋಟ ಕೇಸ್ನ ಶಂಕಿತ ಉಗ್ರ ಸಾವು
2008ರ ಬೆಂಗಳೂರು ಮಡಿವಾಳ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಮೃತಪಟ್ಟಿದ್ದಾನೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದ 60 ವರ್ಷದ ಅಬ್ದುಲ್ ಖಾದರ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಬಾಂಬ್ ಸ್ಫೋಟದಲ್ಲಿ ಅಬ್ದುಲ್ ಖಾದರ್ ಆರೋಪಿಯಾಗಿದ್ದು, ಕೆಲವೇ ದಿನಗಳಲ್ಲಿ ಸ್ಫೋಟ ಕೇಸ್ನ ತೀರ್ಪು ಬರುವ ಸಾಧ್ಯತೆಯಿತ್ತು. ಆದ್ರೆ, ತೀರ್ಪು ಹೊರ ಬೀಳುವ ಮೊದಲೇ ಶಂಕಿತ ಉಗ್ರ ಮೃತಪಟ್ಟಿದ್ದಾನೆ.
- Pradeep Chikkati
- Updated on: Jun 12, 2026
- 7:59 pm
ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸಿಸಿಟಿವಿ ವೈರ್ ಕಟ್ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದ್ದು, ಕಂಪನಿಗಳು ಬಾಕಿ ಹಣ ನೀಡದೆ ವಂಚಿಸಲು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿವೆ ಎಂಬ ಆರೋಪ ಕೇಳಿಬಂದಿದೆ. ಕೋರ್ಟ್ ನೀಡಿದ್ದ ಎಸ್ಒಪಿ ನಿಯಮ ಉಲ್ಲಂಘಿಸಿ ಎಐ ಹೆಸರಿನಲ್ಲಿ ಸಾಮಾನ್ಯ ಕ್ಯಾಮೆರಾ ಅಳವಡಿಸಿ ಕಣ್ಣಿಗೆ ಮಣ್ಣೆರಚಲಾಗಿದ್ದು, ತಾಂತ್ರಿಕ ದೋಷದಿಂದ ಸಿಸಿಟಿವಿ ಆಫ್ ಆಗಿದ್ದನ್ನೇ ದುಷ್ಕೃತ್ಯ ಎಂದು ಬಿಂಬಿಸಲಾಗಿದೆ ಎಂದು ಐವಿಎಸ್ ಸಿಬ್ಬಂದಿ ದೂರಿದ್ದಾರೆ.
- Pradeep Chikkati
- Updated on: Jun 7, 2026
- 1:11 pm
ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಅತ್ಯಂತ ಗಮನ ಸೆಳೆದಿರುವುದು ಗೃಹ ಇಲಾಖೆಯನ್ನು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಲಾಗಿದ್ದು, ಇಂದು (ಜೂನ್ 05) ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
- Pradeep Chikkati
- Updated on: Jun 5, 2026
- 8:30 pm
15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್ನಿಂದ ರಾಜೇಶ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ ನಿಷೇಧ
ನಕಲಿ ಆದಾಯ ತೋರಿಸಿ ಹೂಡಿಕೆದಾರರಿಗೆ ವಂಚನೆ ಆರೊಪ ಹಿನ್ನೆಲೆ ಬೆಂಗಳೂರು ಮೂಲದ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಗೆ ಷೇರು ಮಾರ್ಕೆಟ್ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಇನ್ನು ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ಸೆಬಿಯಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ.
- Pradeep Chikkati
- Updated on: Jun 4, 2026
- 8:59 pm
ಬೆಂಗಳೂರು: ಎಸ್ಬಿಐ ಬ್ಯಾಂಕ್ ಒಕ್ಕೂಟಕ್ಕೆ ಕೋಟ್ಯಂತರ ರೂ ವಂಚನೆ; ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್
ಇತ್ತೀಚೆಗೆ ದೀಪಕ್ ಕೇಬಲ್ಸ್ ಇಂಡಿಯಾ ಲಿಮಿಟೆಡ್ ಕಂಪನಿ ಮೇಲೆ ದಾಳಿ ಮಾಡಿ ಕೋಟ್ಯಂತರ ರೂ ನಗದು, ಆಸ್ತಿ ಜಪ್ತಿ ಮಾಡಿದ್ದ ಇ.ಡಿ ತಂಡ ಇದೀಗ ನಿರ್ದೇಶಕನನ್ನು ಬಂಧಿಸಿದೆ. ಸದ್ಯ ನಿರ್ದೇಶಕನನ್ನು 10 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
- Pradeep Chikkati
- Updated on: Jun 4, 2026
- 7:43 pm
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಮತ್ತು ಜಿಟಿ ತಂಡಗಳ ನಡುವಿನ ಪಂದ್ಯ ಹಿನ್ನೆಲೆ, ಬೆಂಗಳೂರು ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಭಿಮಾನಿಗಳು ಸಂಭ್ರಮಾಚರಣೆ ಮಾಡದಂತೆ ಎಂ.ಜಿ. ರೋಡ್ ಮತ್ತು ಚರ್ಚ್ಸ್ಟ್ರೀಟ್ ಸೇರಿ ಹಲವೆಡೆ ಗಸ್ತು ತಿರುಗುತ್ತಿದ್ದಾರೆ. ನಿಯಮ ಮೀರಿ ಸಂಭ್ರಮಾಚರಣೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
- Pradeep Chikkati
- Updated on: May 31, 2026
- 10:51 pm
ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತಕ್ಕೆ ಬಂದಿದೆ ಎನ್ನಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಸಿಬ್ಬಂದಿಯಿಂದ ಭಾವುಕ ವಿದಾಯ ಪಡೆದು ಕಚೇರಿ ಖಾಲಿ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಅಲ್ಲದೆ, ರಾಜ್ಯಪಾಲರ ಭೇಟಿಗೆ ಇಂದು ಸಮಯವನ್ನೂ ಕೇಳಿದ್ದಾರೆ. ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ರಾತ್ರಿ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.
- Pradeep Chikkati
- Updated on: May 28, 2026
- 6:49 am
ಇದೆಂಥಾ ದುರ್ದೈವ! ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದು ಆಟಗಾರ ಸಾವು
KSCA ಲೀಗ್ ಪಂದ್ಯದ ವೇಳೆಯೇ ಕ್ರಿಕೆಟಿಗ ಹೃದಯಾಘಾತವಾಗಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೊಮ್ಮಸಂದ್ರದ ಎಸ್ಎಲ್ಎಸ್ ಮೈದಾನದಲ್ಲಿ ನಡೆದಿದೆ. ನೀರು ಕುಡಿಯುತ್ತಿದ್ದಾಗ ಸ್ಥಳದಲ್ಲೇ ಕುಸಿದುಬಿದ್ದಿದ್ದ ಕ್ರಿಕೆಟಿಗ ನನ್ನು ಆಸ್ಪತ್ರೆಗೆ ಸಾಗಿಸುವಾಗಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕ್ರಿಕೆಟಿಗ ರಣಜಿ ಪಂದ್ಯಗಳನ್ನು ಆಡಿದ ಅನುಭವ ಕೂಡ ಹೊಂದಿದ್ದರು.
- Pradeep Chikkati
- Updated on: May 24, 2026
- 7:14 pm