ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್ ಅಂಬಾನಿ
ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬದ ಗುರೂಜಿ ಜೊತೆ ಆಗಮಿಸಿದ್ದ ಅವರು, ಮೊದಲು ಕೊಲ್ಲೂರಿಗೆ ಭೇಟಿ ನೀಡಿದ್ದು, ಬಳಿಕ ಕೃಷ್ಣ ಮಠಕ್ಕೂ ತೆರಳಿ ದೇವರ ದರ್ಶನ ಪಡೆದಿದ್ದಾರೆ. ದೇಗುಲದ ವತಿಯಿಂದ ಅನಂತ್ ಅಂಬಾನಿ ಅವರನ್ನು ಸ್ವಾಗತಿಸಲಾಗಿದೆ.
- Prajwal Amin
- Updated on: Jun 15, 2026
- 6:47 am
ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ಅನಂತ್ ಅಂಬಾನಿ ಅವರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಉದ್ಯಮಿ ಮುಕೇಶ್ ಅಂಬಾನಿಯವರ ಪುತ್ರ ಅನಂತ್, ತಮ್ಮ ಕುಟುಂಬದ ಗುರೂಜಿಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ದೇಗುಲದ ವತಿಯಿಂದ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಭಕ್ತಿಯಿಂದ ಗಣಪತಿ ಪ್ರಾರ್ಥನೆಯೊಂದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು.
- Prajwal Amin
- Updated on: Jun 14, 2026
- 9:54 pm
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು, ದೇವಸ್ಥಾನದ ಆಡಳಿತ ಮಂಡಳಿಯವರೊಂದಿಗೆ ಸಮಾಲೋಚನೆ ನಡೆಸಿದರು. ದೇಶದ ಅಭಿವೃದ್ಧಿ ಹಾಗೂ ಜನರ ಒಳಿತಿಗಾಗಿ ಪ್ರಾರ್ಥಿಸಿ, ತಾಯಿಯ ಆಶೀರ್ವಾದ ಪಡೆದರು.
- Prajwal Amin
- Updated on: Jun 13, 2026
- 12:57 pm
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಚಿವರಿಗೆ ಗೌರವಾರ್ಪಣೆ ಮಾಡಿ ಆಶೀರ್ವದಿಸಿದರು.
- Prajwal Amin
- Updated on: Jun 13, 2026
- 12:36 pm
ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ಬೆಳ್ಳಿ ಖಡ್ಗವನ್ನು ಸಮರ್ಪಿಸಿದರು. ಹಿಂದಿನ ಸಿಎಂಗಳಾದ ಎಂಜಿಆರ್ ಅವರಂತೆ, ವಿಜಯ್ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಿ, ದೇವಿಯ ದರ್ಶನ ಪಡೆದು ಭಕ್ತಿ ಮೆರೆದರು. ಇದು ತಮಿಳುನಾಡು ರಾಜಕೀಯ ನಾಯಕರ ದೀರ್ಘಕಾಲದ ಸಂಪ್ರದಾಯವನ್ನು ಮುಂದುವರಿಸಿದೆ.
- Prajwal Amin
- Updated on: Jun 12, 2026
- 5:58 pm
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ವಿಜಯ್
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ್ ಅವರನ್ನು ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ, ಮುಖ್ಯಮಂತ್ರಿ ವಿಜಯ್ ಅವರು ಸಂಕಲ್ಪ ಮಾಡಿ, ಧಾರ್ಮಿಕ ವಿಧಿವಿಧಾನಗಳ ಪ್ರಕಾರ ವಿಶೇಷ ಪೂಜೆಗಳಲ್ಲಿ ಭಾಗಿಯಾಗಿದ್ದಾರೆ.
- Prajwal Amin
- Updated on: Jun 12, 2026
- 4:19 pm
ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಮಧ್ಯಾಹ್ನ 3:00 ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿಎಂ ಭೇಟಿಗೆ ಪ್ರೋಟೋಕಾಲ್ ಪ್ರಕಾರ ಪೂರ್ಣಕುಂಭ ಸ್ವಾಗತ ಕೋರಲಾಗುತ್ತದೆಯಾದರೂ, ದೇವಸ್ಥಾನದ ಸಂಪ್ರದಾಯದಂತೆ ಅವರಿಗೆ ಯಾವುದೇ ವಿಶೇಷ ಪೂಜೆ ಅಥವಾ ಪ್ರತ್ಯೇಕ ಮಂಗಳಾರತಿ ಇರುವುದಿಲ್ಲ ಎಂದು ಅರ್ಚಕ ನಿತ್ಯಾನಂದ ಅಡಿಗ ತಿಳಿಸಿದ್ದಾರೆ.
- Prajwal Amin
- Updated on: Jun 12, 2026
- 10:42 am
ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣ: ತಮಿಳುನಾಡಿನ ಗಣ್ಯರಿಗೂ ಮೂಕಾಂಬಿಕೆಗೂ ಇದೆ ಅವಿನಾಭಾವ ನಂಟು!
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಸಿಎಂ ಆದ ಬಳಿಕ ಮೊದಲ ಕರ್ನಾಟಕ ಭೇಟಿಯಲ್ಲಿ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಸಿಎಂ ಆದ ಬಳಿಕ ಹಲವು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದ ವಿಜಯ್, ಈಗ ಪ್ರಸಿದ್ಧ ಮೂಕಾಂಬಿಕೆ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಕೊಲ್ಲೂರಿಗೂ ತಮಿಳುನಾಡಿನ ಗಣ್ಯರಿಗೂ ಇರುವ ಅವಿನಾಭಾವ ನಂಟಿನ ಕುರಿತಾದ ಆಸಕ್ತಿದಾಯಕ ಮಾಹಿತಿ ಇಲ್ಲಿದೆ.
- Prajwal Amin
- Updated on: Jun 12, 2026
- 8:11 am
ಭಕ್ತರೇ ಗಮನಿಸಿ, ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ: ನಾಳೆ ಈ ಸಮಯದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಇರುವುದಿಲ್ಲ
ಜೂನ್ 12 ರಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನದಲ್ಲಿ ಬದಲಾವಣೆ ಇರಲಿದೆ ಎಂದು ಪೊಲೀಸ್ ಇಲಾಖೆ ಸೂಚಿಸಿದೆ. ಭದ್ರತೆಯ ಕಾರಣದಿಂದ ಅನಾನುಕೂಲ ತಪ್ಪಿಸಲು ಭಕ್ತಾದಿಗಳು ತಮ್ಮ ದರ್ಶನ ಸಮಯವನ್ನು ಯೋಜಿಸಿಕೊಳ್ಳಬೇಕು ಮತ್ತು ಪೊಲೀಸರೊಂದಿಗೆ ಸಹಕರಿಸಬೇಕು.
- Prajwal Amin
- Updated on: Jun 11, 2026
- 9:33 pm
ಸಾವು ಹೀಗೂ ಬರಬಹುದು: ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು
ಉಡುಪಿಯ ಬ್ರಹ್ಮಾವರ ತಾಲೂಕಿನ ಚಾಂತಾರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿಯ ಮಡಿಲಿನಲ್ಲಿದ್ದ ಒಂದೂವರೆ ವರ್ಷದ ದಕ್ಷ ಮಗುವಿನ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು ಮೃತಪಟ್ಟಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ. ಈ ದುರಂತ ಇಡೀ ಗ್ರಾಮವನ್ನು ಶೋಕಸಾಗರದಲ್ಲಿ ಮುಳುಗಿಸಿದ್ದು, ಕುಟುಂಬದ ರೋದನ ಮುಗಿಲುಮುಟ್ಟಿದೆ.
- Prajwal Amin
- Updated on: Jun 11, 2026
- 3:36 pm
ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇದು ವಿಜಯ್ ಅವರ ಮೂಕಾಂಬಿಕೆ ಕ್ಷೇತ್ರಕ್ಕೆ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಿ, 3 ಗಂಟೆಗೆ ಮೂಕಾಂಬಿಕೆ ಸನ್ನಿಧಿಗೆ ತೆರಳಲಿದ್ದಾರೆ. ದರ್ಶನದ ನಂತರ ಸಂಜೆ ಮಂಗಳೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸ್ಸಾಗಲಿದ್ದಾರೆ.
- Prajwal Amin
- Updated on: Jun 10, 2026
- 5:29 pm
ಉಡುಪಿ ಕೃಷ್ಣ ಮಠದ ಪಾರ್ಕಿಂಗ್ನಲ್ಲಿ ಮಾರಾಮಾರಿ: ಆಂಧ್ರದ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಗಲಾಟೆ!
ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ನಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಹೈದರಾಬಾದ್ನ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿ ಸುಪ್ರೀತ್ ನಡುವೆ ತಡರಾತ್ರಿ ಮಾರಾಮಾರಿ ನಡೆದಿದೆ. ಕಾರು ಹಾಯಿಸಲು ಯತ್ನ ಹಾಗೂ ಕಂಬಳದ ಕೋಲಿನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಇಬ್ಬರ ದೂರಿನ ಮೇರೆಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Prajwal Amin
- Updated on: Jun 10, 2026
- 10:31 am