ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಕರಾವಳಿ ಕಂಬಳ ಆಯೋಜಕರಿಗೆ ಸರ್ಕಾರ ಗುಡ್ನ್ಯೂಸ್! 1.15 ಕೋಟಿ ರೂ ಅನುದಾನ ಘೋಷಣೆ
1.15 crore grant for Kambala: ವಿವಾದಗಳ ನಡುವೆಯೇ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್ ಸಿಕ್ಕಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಒಟ್ಟು 23 ಕಂಬಳಗಳಿಗೆ ತಲಾ 5 ಲಕ್ಷ ರೂಪಾಯಿಯಂತೆ ಒಟ್ಟು 1 ಕೋಟಿ 15 ಲಕ್ಷ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.
- Prajwal Amin
- Updated on: Jul 17, 2026
- 3:54 pm
ಬೈಂದೂರು ಅರೆಗುಂಡಿ ಜನರ ಗೋಳು ಕೇಳೋರಿಲ್ಲ: 20 ವರ್ಷಗಳಿಂದ ಜೀವದ ಹಂಗು ತೊರೆದು ಮುರಿದ ಕಾಲುಸಂಕ ದಾಟುವ ಗ್ರಾಮಸ್ಥರು
Udupi News: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಪ್ಪಾಡಿ ಅರೆಗುಂಡಿ ಗ್ರಾಮದಲ್ಲಿ ಕಳೆದ ಎರಡು ದಶಕಗಳಿಂದ ಮುರಿದ ಕಾಲುಸಂಕವನ್ನೇ ಗ್ರಾಮಸ್ಥರು ಬಳಸುತ್ತಿದ್ದಾರೆ. ಆದರೂ ಜನಪ್ರತಿನಿಧಿಗಳು ಇತ್ತ ಗಮನಹರಿಸುತ್ತಿಲ್ಲ. ಮಳೆಗಾಲದಲ್ಲಿ ಜೀವಭಯದ ನಡುವೆಯೇ ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ಶಾಶ್ವತ ಸೇತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.
- Prajwal Amin
- Updated on: Jul 14, 2026
- 1:59 pm
ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಹರಿಕಥೆ ಕಲಾವಿದೆ ವಿಡಿಯೋ ಮೂಲಕ ಸಾರ್ವಜನಿಕ ಕ್ಷಮೆಯಾಚನೆ ಮಾಡಿದ್ದಾರೆ. ಇದೇ ವೇಳೆ ಪರ್ಯಾಯ ಶಿರೂರು ಮಠವೂ ಘಟನೆಗೆ ವಿಷಾದ ವ್ಯಕ್ತಪಡಿಸಿ ಅಧಿಕೃತ ಸ್ಪಷ್ಟನೆ ನೀಡಿದೆ.
- Prajwal Amin
- Updated on: Jul 14, 2026
- 10:01 am
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಆರೋಪ: ವಿಡಿಯೋ ವೈರಲ್
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯುವತಿಯರು ಶಂಕರಾಚಾರ್ಯರನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಆಚಾರ್ಯ ಶಂಕರರ ಅನುಯಾಯಿಗಳು ಹಾಗೂ ನೆಟ್ಟಿಗರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ. ಕಾನೂನು ಹೋರಾಟದ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.
- Prajwal Amin
- Updated on: Jul 13, 2026
- 8:14 pm
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ
Kerala CM VD Satheesan Visits Kollur Mookambika Temple: ಇತ್ತೀಚೆಗೆಷ್ಟೇ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು. ಇದೀಗ ಕೇರಳ ನೂತನ ಸಿಎಂ ವಿಡಿ ಸತೀಶನ್ ಸಹ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
- Prajwal Amin
- Updated on: Jul 11, 2026
- 9:21 am
ಉಡುಪಿಯ ಬೈಂದೂರಿನಲ್ಲಿ ಸುಂಟರಗಾಳಿಗೆ 150 ಅಡಿಕೆ ಮರಗಳು ಧರಾಶಾಹಿ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಎಡಮಳ್ಳಿ, ಹಕ್ಕಲುಮನೆ ಪ್ರದೇಶದಲ್ಲಿ ಬೀಸಿದ ಸುಂಟರುಗಾಳಿಗೆ 150ಕ್ಕೂ ಹೆಚ್ಚು ಅಡಿಕೆ ಮರಗಳು ಧರಾಶಾಹಿಯಾಗಿವೆ. ಹಲವು ವರ್ಷಗಳಿಂದ ಬೆಳೆದ ಬೆಳೆ ಕಳೆದುಕೊಂಡ ರೈತರು ಅತಂತ್ರರಾಗಿದ್ದಾರೆ. ವಿದ್ಯುತ್ ಕಂಬಗಳು ಸಹ ಹಾನಿಗೊಂಡಿದ್ದು, ಸರ್ಕಾರದಿಂದ ತಕ್ಷಣದ ಪರಿಹಾರಕ್ಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.
- Prajwal Amin
- Updated on: Jul 10, 2026
- 7:29 pm
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್: ಎಂಟು ಮಕ್ಕಳಿಗೆ ಗಾಯ
School Bus Accident in Udupi: ಉಡುಪಿಯ ಮಣಿಪಾಲ ಸಮೀಪದ ಕೊಡಂಗೆಯಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಘಟನೆ ಸಂಭವಿಸಿದೆ. ಮಣಿಪಾಲದ ಕ್ರಸ್ಟ್ ಸ್ಕೂಲ್ಗೆ ಸೇರಿದ ಬಸ್ ಇದಾಗಿದ್ದು, ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಓರ್ವ ಮಗುವಿಗೆ ಗಂಭೀರ ಪೆಟ್ಟಾಗಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
- Prajwal Amin
- Updated on: Jul 10, 2026
- 2:31 pm
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ, ಪ್ರವಾಸಿಗರಿಗೆ ನಿಷೇಧ
ಜುಲೈ ಆರಂಭದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಇದರಿಂದ ಉಡುಪಿಯ ಪ್ರಸಿದ್ಧ ಫಾಲ್ಸ್ ತುಂಬಿ ಹರಿಯುತ್ತಿದೆ. ಹೌದು...ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಕೂಡ್ಲು ಫಾಲ್ಸ್ 150-ಅಡಿ ಕಲ್ಲಿನ ಬಂಡೆಯ ಕೆಳಗೆ ದುಮ್ಮಿಕ್ಕಿ ಹರಿಯುತ್ತಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ಫಾಲ್ಸ್ ಪ್ರವೇಶ ನಿಷೇಧಿಸಲಾಗಿದೆ
- Prajwal Amin
- Updated on: Jul 5, 2026
- 3:03 pm
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಉಡುಪಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುವ ಆಗುಂಬೆ ಘಾಟ್ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ, ಘನ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಸೆಪ್ಟೆಂಬರ್ 30ರವರೆಗೆ ಲಘು ವಾಹನಗಳಿಗೆ ಮಾತ್ರ ಅವಕಾಶವಿದ್ದು, ಮಳೆಗಾಲದಲ್ಲಿ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
- Prajwal Amin
- Updated on: Jul 4, 2026
- 5:02 pm
ಕಸ ತಿಂದು ‘ಚಿನ್ನ’ ಕೊಡುವ ಪುಟ್ಟ ಕಾರ್ಮಿಕರು! ಉಡುಪಿಯ ವಂಡ್ಸೆಯಲ್ಲಿ ಕೀಟಗಳ ನೆರವಿನಿಂದ ಕಸ ಮುಕ್ತ ಕ್ರಾಂತಿ
ಉಡುಪಿ ಜಿಲ್ಲೆಯ ವಂಡ್ಸೆ ಗ್ರಾಮ ಪಂಚಾಯಿತಿಯು ಬ್ಲಾಕ್ ಸೋಲ್ಜರ್ ಫ್ಲೈ (Black Soldier Fly) ಎಂಬ ವಿಶೇಷ ಕೀಟಗಳ ಮೂಲಕ ಹಸಿ ಕಸವನ್ನು ಅತ್ಯಂತ ಪರಿಣಾಮಕಾರಿಯಾಗಿ ಜೈವಿಕ ಗೊಬ್ಬರವನ್ನಾಗಿ ಪರಿವರ್ತಿಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದುರ್ವಾಸನೆ ಇಲ್ಲದೆ, ಒಂದೇ ರಾತ್ರಿಯಲ್ಲಿ ಕಸವನ್ನು ಗೊಬ್ಬರವಾಗಿಸುತ್ತಿರುವ ಈ ಪುಟ್ಟ ಕೀಟಗಳು ಗ್ರಾಮೀಣ ಆರ್ಥಿಕತೆಗೆ ಹೊಸ ಶಕ್ತಿ ತುಂಬುತ್ತಿವೆ.
- Prajwal Amin
- Updated on: Jul 4, 2026
- 3:09 pm
ಉಡುಪಿ: ಮಳೆಗಾಲ ಬಂದ್ರೆ ಕಡ್ಕೆ ಗ್ರಾಮಸ್ಥರಿಗೆ ‘ಜೀವಭಯ’; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನ
ಬೈಂದೂರು ಸಮೀಪದ ಕಡ್ಕೆ ಗ್ರಾಮದ ಜನ ಮಳೆಗಾಲದಲ್ಲಿ ಜೀವ ಕೈಯಲ್ಲಿ ಹಿಡಿದು ಬದುಕುತ್ತಿದ್ದಾರೆ. ಮಳೆ ರಭಸಕ್ಕೆ ತಾತ್ಕಾಲಿಕ ಮರದ ಸಂಕಗಳು ಕೊಚ್ಚಿಹೋಗಿ ಸಂಪರ್ಕ ಕಡಿತಗೊಳ್ಳುತ್ತದೆ. ವಿದ್ಯಾರ್ಥಿಗಳು ಹಾಗೂ ನಾಗರಿಕರು ಜೀವಭಯದಿಂದ ಅಪಾಯಕಾರಿ ಹಾದಿಗಳಲ್ಲಿ ಸಂಚರಿಸುತ್ತಿದ್ದಾರೆ. ದಶಕಗಳಿಂದ ಶಾಶ್ವತ ಸೇತುವೆಗಾಗಿ ಆಗ್ರಹಿಸಿದರೂ ರಾಜಕೀಯ ನಿರ್ಲಕ್ಷ್ಯ ಮುಂದುವರಿದಿದ್ದು, ಕೂಡಲೇ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
- Prajwal Amin
- Updated on: Jul 2, 2026
- 8:20 am
ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್ ಅಂಬಾನಿ
ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬದ ಗುರೂಜಿ ಜೊತೆ ಆಗಮಿಸಿದ್ದ ಅವರು, ಮೊದಲು ಕೊಲ್ಲೂರಿಗೆ ಭೇಟಿ ನೀಡಿದ್ದು, ಬಳಿಕ ಕೃಷ್ಣ ಮಠಕ್ಕೂ ತೆರಳಿ ದೇವರ ದರ್ಶನ ಪಡೆದಿದ್ದಾರೆ. ದೇಗುಲದ ವತಿಯಿಂದ ಅನಂತ್ ಅಂಬಾನಿ ಅವರನ್ನು ಸ್ವಾಗತಿಸಲಾಗಿದೆ.
- Prajwal Amin
- Updated on: Jun 15, 2026
- 6:47 am