ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಕಸ್ತೂರಿರಂಗನ್ ವರದಿ: ಜನರ ಸಮಸ್ಯೆ ಆಲಿಸಿದ ಸಿಎಂ; ಪಕ್ಷಭೇದ ಮರೆತು ಬೆಂಬಲ ಎಂದ ವಿಪಕ್ಷ ನಾಯಕರು!
ಉಡುಪಿ ಜಿಲ್ಲೆಯ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಿಎಂ ಡಿಕೆ ಶಿವಕುಮಾರ್ ಸಾರ್ವಜನಿಕರೊಂದಿಗೆ ನೇರವಾಗಿ ಸಭೆ ಮಾಡಿದರು. ಈ ವೇಳೆ ಕಸ್ತೂರಿ ರಂಗನ್ ವರದಿಯ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿದರು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prajwal Amin
- Updated on: Sep 18, 2026
- 8:41 pm
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್: ಯತ್ನಾಳ್ ಕುಣಿತ ಹೇಗಿದೆ ನೋಡಿ
ಬ್ರಹ್ಮಾವರದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ನಡೆದ ಹುಲಿವೇಷದ ಊದು ಪೂಜೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗಿಯಾಗಿದ್ದಾರೆ. ಹುಲಿ ವೇಷಧಾರಿಗಳ ಕುಣಿತಕ್ಕೆ ಮನಸೋತ ಅವರು, ತಾಸೆಯ ಪೆಟ್ಟಿಗೆಗೆ ಭರ್ಜರಿ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಯತ್ನಾಳ್ ಹುಲಿವೇಷ ಕುಣಿತದ ವಿಡಿಯೋ ಈಗ ವೈರಲ್ ಆಗುತ್ತಿದೆ.
- Prajwal Amin
- Updated on: Sep 18, 2026
- 8:50 am
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಉಡುಪಿ ಜಿಲ್ಲೆಯ ಬಹುನಿರೀಕ್ಷಿತ 250 ಹಾಸಿಗೆಗಳ ಸರ್ಕಾರಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿ ವರ್ಷಗಳೇ ಕಳೆದಿದ್ದರೂ ಇಂದಿಗೂ ಉದ್ಘಾಟನೆ ಭಾಗ್ಯ ದೊರೆತಿಲ್ಲ. ₹140 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಆಸ್ಪತ್ರೆಗೆ, ಅಗತ್ಯ ಸಿಬ್ಬಂದಿ ಹಾಗೂ ಉಪಕರಣಗಳಿಗೆ ಇನ್ನೂ ₹40 ಕೋಟಿ ಅನುದಾನದ ಅಗತ್ಯವಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ವೈದ್ಯಕೀಯ ಸೇವೆ ದೊರೆಯದೆ ತೀವ್ರ ತೊಂದರೆಯಾಗುತ್ತಿದೆ.
- Prajwal Amin
- Updated on: Sep 11, 2026
- 5:33 pm
ದೇವರನ್ನೂ ಬಿಡದ ಖದೀಮರು: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ವಂಚನೆ
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ಕಿಡಿಗೇಡಿಗಳು ಭಕ್ತರಿಂದ ಹಣ ಪಡೆದು ವಂಚಿಸಿರುವಂತಹ ಘಟನೆ ನಡೆದಿದೆ. ಸದ್ಯ ಈ ಕುರಿತಾಗಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿಯ ಘಟನೆ ಹಿಂದೊಮ್ಮೆ ನಡೆದಿತ್ತು.
- Prajwal Amin
- Updated on: Sep 10, 2026
- 4:05 pm
ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ಕಟ್ಟಿದ ಗಂಗೊಳ್ಳಿ ಪೊಲೀಸರು: ನಡೆದಿದ್ದೇನು?
ಉಡುಪಿಯ ಗಂಗೊಳ್ಳಿ ಪೊಲೀಸರು ಅಮಾಯಕ ಆಟೋ ಚಾಲಕನ ಮೇಲೆ ಕಳ್ಳತನದ ಸುಳ್ಳು ಆರೋಪ ಹೊರಿಸಿ ಕಾನೂನು ದುರ್ಬಳಕೆ ಮಾಡಿದ್ದರು. ಪೊಲೀಸರ ಒತ್ತಾಯಕ್ಕೆ ಸಹಿ ಹಾಕಿ ಕ್ರಿಮಿನಲ್ ಪ್ರಕರಣದಲ್ಲಿ ಸಿಲುಕಿದ ಚಾಲಕ ಮಾನವ ಹಕ್ಕುಗಳ ಪ್ರತಿಷ್ಠಾನದ ನೆರವಿನೊಂದಿಗೆ ಕಾನೂನು ಹೋರಾಟ ನಡೆಸಿ ಇದೀಗ ದೋಷಮುಕ್ತರಾಗಿದ್ದಾರೆ. ಪೊಲೀಸರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಾಲಕ ಮುಂದಾಗಿದ್ದಾರೆ.
- Prajwal Amin
- Updated on: Sep 8, 2026
- 6:51 pm
11.32 ಕೋಟಿ ರೂ. ವೆಚ್ಚದಲ್ಲಿ ಹೊಸ ರೂಪ ಪಡೆದ ಬೈಂದೂರಿನ ಸೋಮೇಶ್ವರ ಬೀಚ್: ಪ್ರವಾಸಿಗರನ್ನು ಸೆಳೆಯುತ್ತಿದೆ ‘ಪ್ರಕೃತಿ-ಆಧುನಿಕತೆಯ’ ಸಂಗಮ
ಬೈಂದೂರು ಸೋಮೇಶ್ವರ ಬೀಚ್ 11.32 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡು ಪ್ರವಾಸಿಗರನ್ನು ಆಕರ್ಷಿಸಲು ಸಿದ್ಧವಾಗಿದೆ. ಸುಂದರ ಪಾದಚಾರಿ ಮಾರ್ಗ, ವಿಶಾಲ ವಾಹನ ನಿಲುಗಡೆ, ನೈರ್ಮಲ್ಯ ಶೌಚಾಲಯ ಸೇರಿ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅರಬ್ಬೀ ಸಮುದ್ರ, ಒತ್ತಿನೆಣೆ ಗುಡ್ಡದ ರಮಣೀಯ ದೃಶ್ಯಗಳನ್ನು ಹೊಂದಿರುವ ಈ ಕಡಲತೀರವು ಕರಾವಳಿ ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕತೆಗೆ ಭಾರಿ ಉತ್ತೇಜನ ನೀಡಲಿದೆ. ಕುಟುಂಬ ಸಮೇತ ಭೇಟಿ ನೀಡಲು ಇದು ಸೂಕ್ತ ತಾಣ.
- Prajwal Amin
- Updated on: Sep 7, 2026
- 5:36 pm
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ, ಮಥುರಾವರೆಗೂ ಭಕ್ತಿ-ಸಂಭ್ರಮದ ಆಚರಣೆ
ಗೋಪೀ ನಂದನ ಶ್ರೀಕೃಷ್ಣನ ಜನ್ಮಾಷ್ಟಮಿ 2026 ಅನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಮಧ್ಯರಾತ್ರಿ ಅರ್ಘ್ಯ ಪ್ರದಾನ, ಮಥುರಾದಲ್ಲಿ ವಿಶೇಷ ಅಲಂಕಾರಗಳು, ಮತ್ತು ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಭಜನೆ, ಕೀರ್ತನೆಗಳು ನಡೆದವು. ವಿವಿಧ ನಗರಗಳಲ್ಲಿ ಭಕ್ತರು ಕೃಷ್ಣ ಲೀಲೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
- Prajwal Amin
- Updated on: Sep 5, 2026
- 7:23 am
ಕೃಷ್ಣನೂರಿನಲ್ಲಿ ಕಳೆಗಟ್ಟಿದ ಅಷ್ಟಮಿ ಸಂಭ್ರಮ: ಹುಲಿವೇಷ, ಮೊಸರುಕುಡಿಕೆ ಕಲರವ; ಬಿಗಿ ಪೊಲೀಸ್ ಕಾವಲು
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗಿದ್ದು, ಶೀರೂರು ಮಠದ ಆಶ್ರಯದಲ್ಲಿ ಆಗಸ್ಟ್ 29ರಿಂದ ಸೆಪ್ಟೆಂಬರ್ 6ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ಸೆಪ್ಟೆಂಬರ್ 4ರಂದು ಅರ್ಘ್ಯ ಪ್ರದಾನ, ಸೆಪ್ಟೆಂಬರ್ 5ರಂದು ವಿಟ್ಲಪಿಂಡಿ, ಹುಲಿವೇಷ, ಮತ್ತು ಮೊದಲ ಬಾರಿಗೆ ಮಲ್ಲಯುದ್ಧ ಪ್ರದರ್ಶನ ಆಕರ್ಷಣೆಯಾಗಿದೆ. ಭಕ್ತರ ಸುರಕ್ಷತೆಗೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
- Prajwal Amin
- Updated on: Sep 3, 2026
- 10:29 pm
ಕಾರ್ಕಳದಲ್ಲಿ ಬಿಸಿ ಏರಿಸಿದ ‘ಪರಶುರಾಮ ಥೀಮ್ ಪಾರ್ಕ್’ ಸಮರ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಬೀದಿಗೆ
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಭಾರಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದೆ. ಶಾಸಕ ವಿ. ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ, ಬಿಜೆಪಿ ಕಾರ್ಯಕರ್ತರು ಪ್ರತಿದಾಳಿ ನಡೆಸಿದ್ದಾರೆ. ಇದರಿಂದ ಕಾರ್ಕಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಭದ್ರತೆ ವಹಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
- Prajwal Amin
- Updated on: Sep 2, 2026
- 6:34 pm
ಮತ್ತೆ ಸದ್ದು ಮಾಡಿದ ಸತ್ತಿದ್ದಾನೆಂದು ತಿಳಿದಿದ್ದ ಭೂಗತ ಪಾತಕಿ ಹೆಸರು: ಯಾರು ಈ ಹೇಮಂತ್ ಪೂಜಾರಿ?
2013ರಲ್ಲಿ ಕಣ್ಮರೆಯಾಗಿ ಸತ್ತಿದ್ದಾನೆ ಎಂದೇ ಭಾವಿಸಲಾಗಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರು ಮುದರಂಗಡಿ ಉದ್ಯಮಿ ಡೇವಿಡ್ ಶೂಟೌಟ್ ಪ್ರಕರಣದ ತನಿಖೆ ವೇಳೆ ಮತ್ತೆ ಸದ್ದು ಮಾಡಿದ್ದು, ಆತ ಬದುಕಿರುವ ಶಂಕೆ ವ್ಯಕ್ತವಾಗಿದೆ. ಬಾಂಬೆಯ ಘಾಟ್ಗೋಪರ್ನಲ್ಲಿ ಹೋಟೆಲ್ನಲ್ಲಿ ಸಪ್ಲೈಯರ್ ಕೆಲಸ ಮಾಡುತ್ತಿದ್ದ ಹೇಮಂತ್ ಪೂಜಾರಿ 1999ರಿಂದ ಭೂಗತ ಲೋಕಕ್ಕೆ ಕಾಲಿಟ್ಟಿದ್ದ ಈತ ಛೋಟಾ ರಾಜನ್ ಗ್ಯಾಂಗಿನ ಪ್ರಮುಖ ಶೂಟರ್ ಆಗಿದ್ದ.
- Prajwal Amin
- Updated on: Aug 25, 2026
- 6:46 pm
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ಉಡುಪಿ ಜಿಲ್ಲೆಯಲ್ಲಿ ರಾಸಾಯನಿಕ ಬಳಸಿ ಬಾಳೆಹಣ್ಣು ಪಕ್ವಗೊಳಿಸುವ ದಂಧೆಯ ವಿರುದ್ಧ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುಂದಾಪುರ ಎಸಿ ರಶ್ಮಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 5,000 ಕೆಜಿ ರಾಸಾಯನಿಕ ಮಿಶ್ರಿತ ಬಾಳೆಹಣ್ಣು ವಶಪಡಿಸಿಕೊಳ್ಳಲಾಗಿದೆ. ನೈಸರ್ಗಿಕವಾಗಿ ಬಾಳೆಹಣ್ಣು ಪಕ್ವಗೊಳಿಸುವ ವಿಧಾನ ಹಾಗೂ ರಾಸಾಯನಿಕ ಬಳಸಿ ತ್ವರಿತವಾಗಿ ಪಕ್ವಗೊಳಿಸುವ ಅಕ್ರಮ ವಿಧಾನದ ನಡುವಿನ ವ್ಯತ್ಯಾಸವನ್ನು ಈ ವರದಿ ವಿವರಿಸುತ್ತದೆ.
- Prajwal Amin
- Updated on: Aug 21, 2026
- 7:52 pm
ಉಡುಪಿ: ಹಾನಿಕಾರಕ ರಾಸಾಯನಿಕ ಬಳಸಿ ಬಾಳೆಕಾಯಿ ಹಣ್ಣಾಗಿಸುವ ಜಾಲ ಪತ್ತೆ, 10890 ಕೆಜಿ ಹಣ್ಣು ನಾಶ
Udupi News: ಉಡುಪಿಯ ಅಲೆವೂರು ಗ್ರಾಮದ ಕೆಮ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಲಿ ಪರಿಸರದಲ್ಲಿನ ಬಾಳೆಹಣ್ಣು ವ್ಯಾಪಾರಿಗಳ ಮೂರು ಗೋದಾಮುಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಸಿ ಹಣ್ಣಾಗಿಸಲಾಗುತ್ತಿದ್ದ 10,890 ಕೆಜಿ ಬಾಳೆಹಣ್ಣು ವಶಪಡಿಸಿಕೊಂಡು ನಾಶಪಡಿಸಲಾಗಿದೆ.
- Prajwal Amin
- Updated on: Aug 21, 2026
- 9:42 am