ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ: ಶಾರ್ಪ್ ಶೂಟರ್ಸ್ಗಳ ಭಯಾನಕ ಕ್ರೈಂ ಡೈರಿ ತೆರೆದಿಟ್ಟ ಎಸ್ಪಿ
ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗಿದ್ದ. ಸದ್ಯ ಪೊಲೀಸರು ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಹಂತಕರ ಕ್ರೈಂ ಡೈರಿಯನ್ನು ಸಹ ಉಡುಪಿ ಎಸ್ಪಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
- Prajwal Amin
- Updated on: Aug 8, 2026
- 7:27 pm
ಉಡುಪಿಯಲ್ಲಿ ಕೈ ಮುಖಂಡ ಶೂಟೌಟ್: ಯುಪಿ ಮೂಲದ ಶೂಟರ್ಸ್ ಖಾಕಿ ಬಲೆಗೆ ಬಿದ್ದಿದ್ಹೇಗೆ?
Udupi David D'Souza Shootout: ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗಿದ್ದ. ಸದ್ಯ ಪೊಲೀಸರು ಉತ್ತರ ಭಾರತ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟಕ್ಕೂ ಈ ಡೇವಿಡ್ ಡಿಸೋಜಾ ಯಾರು, ಈತನ ಹಿನ್ನೆಲೆ ಏನು, ಕೊಲೆ ನಡೆದಿದ್ದೇಕೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Prajwal Amin
- Updated on: Aug 8, 2026
- 5:38 pm
ಉಡುಪಿಯಲ್ಲಿ ಮತ್ತೊಂದು ಶೂಟೌಟ್; ಗುಂಡಿಕ್ಕಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
Udupi Businessman Shot Dead: ಇತ್ತೀಚೆಗೆ ಉಡುಪಿಯಲ್ಲಿ ಓರ್ವ ಉದ್ಯಮಯನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ ನಡೆದಿದ್ದು, ಉದ್ಯಮಿ, ಕಾಂಗ್ರೆಸ್ ಮುಖಂಡನ ಹತ್ಯೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.
- Prajwal Amin
- Updated on: Aug 7, 2026
- 6:01 pm
ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು
Udupi News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲದಲ್ಲಿ ಕೊಟ್ಟ ಸಾಲದ ಹಣ ವಾಪಸ್ ಕೇಳಲು ಹೋದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಅಮಾನವೀಯವಾಗಿ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿಹಾಕಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರುಗಳು ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
- Prajwal Amin
- Updated on: Aug 7, 2026
- 1:07 pm
ಉಡುಪಿ: ಕಾರ್ಕಳದ ರೇಂಜಾಳದಲ್ಲಿ ಭಾರೀ ಭೂಕುಸಿತದ ಆತಂಕ, ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ
Udupi Landslide News: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೇಂಜಾಳ ಗ್ರಾಮದ ಹೆಡ್ಮೆ ಪರಿಸರದಲ್ಲಿ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಭೂಕುಸಿತದ ಆತಂಕ ಎದುರಾಗಿದೆ. ಸುಮಾರು ಎರಡು ಎಕರೆ ಗುಡ್ಡ ಕುಸಿಯುವ ಭೀತಿ ಮೂಡಿದ್ದು, ಅಡಿಭಾಗದ ಮೂರು ಮನೆಗಳ ನಿವಾಸಿಗಳ ಸ್ಥಳಾಂತರಕ್ಕೆ ಸೂಚಿಸಲಾಗಿದೆ.
- Prajwal Amin
- Updated on: Aug 6, 2026
- 1:53 pm
120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್ಪಿನ್ ನರೇಶ್ ಗೌಡ
ಬೆಂಗಳೂರು ಕಂಬೀಪುರದ ಶ್ರೀ ಆದಿಚುಂಚನಗಿರಿ ಮಠದ ₹120 ಕೋಟಿ ಮೌಲ್ಯದ 6 ಎಕರೆ ಜಮೀನು ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಯತ್ನ ಪ್ರಕರಣದ ಕಿಂಗ್ಪಿನ್ ನರೇಶ್ ಗೌಡ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾನೆ. ನಿರೀಕ್ಷಣಾ ಜಾಮೀನು ಪಡೆದಿದ್ದ ಆತ, ತನಗೇನೂ ಸಂಬಂಧವಿಲ್ಲವೆಂದು ಹೇಳಿಕೆ ನೀಡಿದ್ದಾನೆ. ಸತ್ತ ವ್ಯಕ್ತಿಯ ಹೆಸರಲ್ಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಯತ್ನಿಸಿದ್ದು, ಸರ್ಕಾರಿ ಅಧಿಕಾರಿಗಳೂ ಇದರಲ್ಲಿ ಭಾಗಿಯಾಗಿದ್ದಾರೆ. ತನಿಖೆ ತೀವ್ರಗೊಂಡಿದೆ.
- Prajwal Amin
- Updated on: Aug 5, 2026
- 8:53 pm
ಶಾಂತವಾಗಿದ್ದ ಕರಾವಳಿಯಲ್ಲಿ ಗುಂಡಿನ ಸದ್ದು: ಹರಿಯಿತು ಉದ್ಯಮಿಯ ನೆತ್ತರ ಕೋಡಿ
Kundapura Shooting: ಕುಂದಾಪುರದ ಹೋಲಿ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದ ಶೂಟೌಟ್ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದೆ. ಹಣಕಾಸಿನ ವಿಚಾರವಾಗಿ ಉದ್ಯಮಿ ಗುಂಡೇಟಿಗೆ ಬಲಿಯಾಗಿದ್ದಾನೆ. ಸದ್ಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
- Prajwal Amin
- Updated on: Jul 31, 2026
- 6:57 pm
ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್ ಎಂದಿದ್ದ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಬಿಎನ್ಎಸ್ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿದೆ. ಶಾಸಕರು, ಬಾಬ್ರಿ ಮಸೀದಿ ಧ್ವಂಸ ವಿಚಾರ ಪ್ರಸ್ತಾಪಿಸಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪವೂ ಇದೆ.
- Prajwal Amin
- Updated on: Jul 29, 2026
- 10:55 am
ಸೂರ್ಯಾಸ್ತದ ಸುಂದರ ತಾಣಕ್ಕೀಗ ಕತ್ತಲ ಛಾಯೆ: ಕ್ಷಿತಿಜ ನೇಸರಧಾಮಕ್ಕೆ ಬೇಕಿದೆ ತುರ್ತು ಕಾಯಕಲ್ಪ
kshitija nesara dhama: ಅರಬ್ಬಿ ಸಮುದ್ರದ ಸುಂದರ ನೋಟದ ಬೈಂದೂರು ನೇಸರಧಾಮವು ಮೂಲಸೌಕರ್ಯ ಕೊರತೆ ಮತ್ತು ನಿರ್ವಹಣೆಯಿಲ್ಲದೆ ತನ್ನ ವೈಭವ ಕಳೆದುಕೊಳ್ಳುತ್ತಿದೆ. ಶಿಥಿಲಗೊಂಡ ಕಟ್ಟಡಗಳು, ಕಳೆಗುಂದಿದ ಉದ್ಯಾನಗಳು, ಸುರಕ್ಷತೆಯಿಲ್ಲದ ಸೂರ್ಯಾಸ್ತ ವೀಕ್ಷಣಾ ಸ್ಥಳ ಪ್ರವಾಸಿಗರನ್ನು ವಿಮುಖಗೊಳಿಸುತ್ತಿವೆ. ನೈತಿಕ ಪೊಲೀಸ್ಗಿರಿ ಕೂಡ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಿದೆ.
- Prajwal Amin
- Updated on: Jul 24, 2026
- 7:03 pm
ಗದ್ದೆಯಲ್ಲಿ ಅರಳಿದ ಅದೃಷ್ಟದ ತಾವರೆ! ಕೃಷಿಯಲ್ಲಿ ಹೊಸ ಕ್ರಾಂತಿ ಮಾಡಿ ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸುತ್ತಿದ್ದಾರೆ ಮನೋಹರ ಶೆಟ್ಟಿ
ಉಡುಪಿಯ ರೈತ ಮನೋಹರ ಶೆಟ್ಟಿ ತಮ್ಮ ಭತ್ತದ ಗದ್ದೆಯನ್ನು ವಾಣಿಜ್ಯ ತಾವರೆ ಕೊಳವನ್ನಾಗಿ ಪರಿವರ್ತಿಸಿ ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಮಳೆ ಮತ್ತು ಕಾರ್ಮಿಕರ ಕೊರತೆಯಿಂದ ನಷ್ಟ ಅನುಭವಿಸಿದ್ದ ಅವರು, ಸಾವಯವ ಪದ್ಧತಿಯಲ್ಲಿ ಪಿಂಕ್ ಹಾಗೂ ಬಿಳಿ ತಾವರೆ ಹೂಗಳನ್ನು ಬೆಳೆಸಿ ದೇವಸ್ಥಾನಗಳಿಗೆ ಮತ್ತು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದು ಕರಾವಳಿಯ ರೈತರಿಗೆ ಹೊಸ ಆಶಾದಾಯಕ ಆದಾಯ ಮಾರ್ಗವನ್ನು ತೋರಿಸಿದೆ.
- Prajwal Amin
- Updated on: Jul 23, 2026
- 10:24 am
ಸಂಶೋಧಕರ ಹೆಜ್ಜೆಸದ್ದು ಕೇಳ್ಬೇಕಿದ್ದ ಜಾಗದಲ್ಲಿ ಅನೈತಿಕ ಚಟುವಟಿಕೆ: ಬೆಳಪು ಗ್ರಾಮೀಣ ವಿದ್ಯಾರ್ಥಿಗಳ ಕನಸು ಭಗ್ನ
ಉಡುಪಿಯ ಕಾಪು ತಾಲೂಕಿನ ಬೆಳಪಿನಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ 10 ವರ್ಷವಾದರೂ ಅಪೂರ್ಣವಾಗಿದೆ. ಕೋಟಿಗಟ್ಟಲೆ ಹಣ ವ್ಯರ್ಥವಾಗಿದ್ದು, ಕಟ್ಟಡಗಳು ಪಾಳುಬೀಳುತ್ತಿವೆ. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ನಿರ್ಮಿಸಿದ ಈ ಮಹತ್ವಾಕಾಂಕ್ಷಿ ಯೋಜನೆ ಆಡಳಿತಗಾರರ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿ ಪರಿಣಮಿಸಿದೆ. ತುರ್ತಾಗಿ ಪೂರ್ಣಗೊಳಿಸಿ ಸದ್ಬಳಕೆ ಮಾಡಬೇಕಿದೆ.
- Prajwal Amin
- Updated on: Jul 21, 2026
- 5:25 pm
ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ, ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ, ಡೆಂಗ್ಯೂ, H1N1 ವೈರಸ್ ಭೀತಿ ಎದುರಾಗಿದ್ದು, ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ವಹಿಸುವಂತೆ ಕರೆ ನೀಡಿದ್ದಾರೆ. ಆತಂಕಪಡದೆ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು, ಸ್ವಚ್ಛತೆ ಕಾಪಾಡಲು, ಸೊಳ್ಳೆ ಉತ್ಪತ್ತಿ ತಡೆಯಲು ಹಾಗೂ ಜ್ವರ ಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಲು ಸಚಿವರು ಸೂಚಿಸಿದ್ದಾರೆ. ಡೆಂಗ್ಯೂ ಲಸಿಕೆ ಸಂಶೋಧನೆ ಹಾಗೂ ಹೆಚ್ಪಿವಿ ಲಸಿಕೆ ಕಾರ್ಯಕ್ರಮದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
- Prajwal Amin
- Updated on: Jul 21, 2026
- 4:25 pm