2017 ಜೂನ್ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.
ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಿಂದ ಬಾಲಕನ ಕಿಡ್ನ್ಯಾಪ್, ಕೊಲೆ ರಹಸ್ಯ ಬಯಲು
ಬೆಂಗಳೂರಿನಲ್ಲಿ ಬಾಲಕನನ್ನು ಅಪಹರಿಸಿ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮೂಲದ ಓರ್ವ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಮತ್ತೋರ್ವನಿಗಾಗಿ ಬಲೆ ಬೀಸಿದ್ದಾರೆ. ಕಾರಿನಲ್ಲಿ ಮೃತದೇಹ ಕಂಡು ಪೊಲೀಸರೇ ಶಾಕ್ ಆಗಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಮಿಥುನ್ ಕುಮಾರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
- Prajwal Kumar NY
- Updated on: Sep 18, 2026
- 6:00 pm
ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭ: ಸಾರ್ವಜನಿಕ ಸ್ಥಳಗಳಲ್ಲಿ ಉತ್ವನ್ನಗಳ ಮಾರಾಕ್ಕೆ ನಿರ್ಧಾರ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುನರ್ವಸತಿ ಹಾಗೂ ಕೌಶಲ್ಯಾಭಿವೃದ್ಧಿಗಾಗಿ 'ನವ ಸಂಕಲ್ಪ ಬೇಕರಿ' ಮತ್ತು 'ಬೇಕರಿ ಆನ್ ವೀಲ್ಸ್' ಸೇವೆಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಚಾಲನೆ ನೀಡಿದ್ದಾರೆ. ಬೆಂಗಳೂರು ವಿವಿಧ ನ್ಯಾಯಾಲಯಗಳ ಆವರಣ, ಬಸ್ ನಿಲ್ದಾಣಗಳಲ್ಲಿ ಬೇಕರಿ ಆನ್ ವೀಲ್ಸ್ ಮೂಲಕ ಬೇಕರಿ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಆ ಮೂಲಕ ಆದಾಯ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.
- Prajwal Kumar NY
- Updated on: Sep 18, 2026
- 1:45 pm
8 ಲಕ್ಷ ರೂ. ಲಂಚ ಪಡೆಯುವಾಗಲೇ ಬೆಂಗಳೂರಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
ಕಬ್ಬಿಣದ ಅಂಗಡಿ ಮಾಲೀಕನಿಂದ 8 ಲಕ್ಷ ರೂ. ಲಂಚ ಪಡೆಯುತ್ತಿದ್ದ ಜಿಎಸ್ಟಿ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತೀ ಹೆಚ್ಚು ಆರೋಪಗಳು ಕೇಳಿಬಂದ ಹಿನ್ನೆಲೆ ಬನ್ನೇರುಘಟ್ಟ ಮತ್ತು ಮಂಟಪ ಪಂಚಾಯತ್ ಸಿಬ್ಬಂದಿಗೂ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದರೆ, ಮತ್ತೊಂದೆಡೆ ನಿನ್ನೆ 50 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದೆ.
- Prajwal Kumar NY
- Updated on: Sep 17, 2026
- 3:55 pm
‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಎಂದಿದ್ದ ಬಿಕೆ ಹರಿಪ್ರಸಾದ್ ವಿರುದ್ಧ ದೂರು ದಾಖಲು
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿರುದ್ಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಉಮರ್ ಖಾಲಿದ್ ರಾಷ್ಟ್ರೀಯವಾದಿ ಎಂದಿರುವ ಹರಿಪ್ರಸಾದ್, ಎಬಿವಿಪಿ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದರು. ಈ ಹೇಳಿಕೆಗಳು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿವೆ ಎಂದು ಆರೋಪಿಸಿ ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಲು ಮನವಿ ಮಾಡಲಾಗಿದೆ.
- Prajwal Kumar NY
- Updated on: Sep 16, 2026
- 5:14 pm
ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು: ಕೆ.ಆರ್.ಮಾರ್ಕೆಟ್ನಲ್ಲಿ ಜನ ಸಾಗರ; ಟ್ರಾಫಿಕ್ ಜಾಮ್
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಖರೀದಿಗೆ ಜನಸಂದಣಿ ಹೆಚ್ಚಾಗಿದೆ. ಬೆಳಿಗ್ಗೆ 3 ಗಂಟೆಯಿಂದಲೇ ವ್ಯಾಪಾರ ಭರಾಟೆ ಶುರುವಾಗಿದ್ದು, ಬೆಲೆಗಳು ದುಪ್ಪಟ್ಟಾಗಿದ್ದರೂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಜನರು ಉತ್ಸುಕರಾಗಿದ್ದಾರೆ. ಪೊಲೀಸರು ಜನಸಂದಣಿಯನ್ನು ನಿಯಂತ್ರಿಸುತ್ತಿದ್ದಾರೆ. ಈ ಬಾರಿ ಗೌರಿ ಮತ್ತು ಗಣೇಶ ಹಬ್ಬಗಳು ಒಂದೇ ದಿನ ಬಂದಿರುವುದು ಮತ್ತು ಭಾನುವಾರವೂ ಆಗಿರುವುದು ಜನಸಂದಣಿಗೆ ಮತ್ತಷ್ಟು ಕಾರಣವಾಗಿದೆ.
- Prajwal Kumar NY
- Updated on: Sep 13, 2026
- 7:10 am
ಕರ್ನಾಟಕದಾದ್ಯಂತ ವಿಶೇಷ ಕಾರ್ಯಾಚರಣೆ: ಬರೋಬ್ಬರಿ 800 ಮಂದಿ ಬಾಲ ಕಾರ್ಮಿಕರ ರಕ್ಷಣೆ
ಕರ್ನಾಟಕ ಪೊಲೀಸರು ರಾಜ್ಯಾದ್ಯಂತ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ 16,951 ಕೇಂದ್ರಗಳ ಮೇಲೆ ದಾಳಿ ನಡೆಸಿ 800 ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದ್ದು, ಇದರಲ್ಲಿ ಬೆಂಗಳೂರು ಒಂದರಲ್ಲೇ 503 ಮಕ್ಕಳನ್ನು ರಕ್ಷಿಸಲಾಗಿದೆ. ಇನ್ನು ರಕ್ಷಣೆ ಮಾಡಲಾದ ಮಕ್ಕಳನ್ನು ಕಳುಹಿಸಿ ಎಂದು ಬೆಂಗಳೂರಿನ ಡೈರಿ ಸರ್ಕಲ್ ಬಳಿಯಿರುವ ಬಾಲ ಮಂದಿರದ ಎದುರು ಪೋಷಕರ ಪಟ್ಟು ಹಿಡಿದ ಪ್ರಸಂಗವೂ ನಡೆದಿದೆ.
- Prajwal Kumar NY
- Updated on: Sep 13, 2026
- 6:55 am
ವೈಟ್ಫೀಲ್ಡ್ನಲ್ಲಿ ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ ಆರೋಪ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಕಸದ ಕಪ್ ರಸ್ತೆಬದಿಗೆ ಎಸೆಯಬೇಡಿ ಎಂದು ಹೇಳಿದ್ದಕ್ಕೆ ಜಿಬಿಎ ಪೌರಕಾರ್ಮಿಕನ ಮೇಲೆ ಯುವತಿ ಒಬ್ಬರು ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಪೌರಕಾರ್ಮಿಕ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿರುವ ವೈಟ್ಫೀಲ್ಡ್ ಪೊಲೀಸರು ಯುವಕ ಹಾಗೂ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ.
- Prajwal Kumar NY
- Updated on: Sep 11, 2026
- 7:32 am
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ: ಇಂದೂ ಮುಂದುವರಿದ ತಪಾಸಣೆ
ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮತ್ತು ಕಚೇರಿ ಸೇರಿದಂತೆ 18 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿದೆ. ವಿದೇಶದಲ್ಲಿ ಹಣ ಹೂಡಿಕೆ ಸಂಬಂಧ ಫೆಮಾ ಕಾಯ್ದೆ ಅಡಿ ಈ ತನಿಖೆ ನಡೆಯುತ್ತಿದೆ. 19 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಲಾಗಿದ್ದು, ಹಲವು ಕಡತಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಜಾರಕಿಹೊಳಿ ನಿವಾಸದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇಂದೂ ಸಹ ದಾಳಿ ಮುಂದುವರಿದಿದೆ.
- Prajwal Kumar NY
- Updated on: Sep 10, 2026
- 8:02 am
ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ 3 ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಎಫ್ಐಆರ್: ಇಲ್ಲಿದೆ ಕೇಸಿನ ವಿವರ
ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳೆ ನೀಡಿದ್ದ ದೂರಿನ ಮೇರೆಗೆ ದಾಖಲಾಗಿರುವ ಈ ಎಫ್ಐಆರ್ನಲ್ಲಿ ಮೂವರು ಪೊಲೀಸ್ ಇನ್ಸ್ಪೆಕ್ಟರ್ಗಳ ಹೆಸರು ಇರುವುದು ಸಂಚಲನ ಮೂಡಿಸಿದೆ. ಹಾಗಾದ್ರೆ, ಎಫ್ಐಆರ್ನಲ್ಲಿ ಯಾರ್ಯಾರ ಹೆಸರು ಇದೆ? ಏನಿದು ಪ್ರಕರಣ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Prajwal Kumar NY
- Updated on: Sep 9, 2026
- 10:17 pm
ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಾಕೆ ಗರ್ಭಿಣಿ!
ಬೆಂಗಳೂರಿನ ವಿದ್ಯಾರಣ್ಯಪುರದಿಂದ ಕಳೆದ ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿಯರನ್ನು ಸಿಐಡಿ ಪೊಲೀಸರು ಕನಕಪುರದಲ್ಲಿ ಪತ್ತೆಹಚ್ಚಿದ್ದಾರೆ. ಆಧಾರ್ ಕಾರ್ಡ್ ಬಳಸಿ ಹೊಸ ಸಿಮ್ ಖರೀದಿಸಿದಾಗ ಪೊಲೀಸರಿಗೆ ಮಹತ್ವದ ಸುಳಿವು ದೊರೆತ್ತಿದ್ದು, ಇದರ ಆಧಾರದ ಮೇಲೆ ಇಬ್ಬರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಈ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
- Prajwal Kumar NY
- Updated on: Sep 9, 2026
- 9:52 pm
ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ: ಸಿನಿಮಾ ಕಥೆಯನ್ನೂ ಮೀರಿಸುವಂತಿದೆ ಈ ಘಟನೆ!
ಸಿಲಿಕಾನ್ ಸಿಟಿಯ ವಿದ್ಯಾರಣ್ಯಪುರದಿಂದ ಜನವರಿ 31ರಂದು ನಾಪತ್ತೆಯಾಗಿದ್ದ ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಪಿಯುಸಿ ವಿದ್ಯಾರ್ಥಿನಿಯರನ್ನು ಪತ್ತೆಹಚ್ಚುವಲ್ಲಿ ಕೊನೆಗೂ ಸಿಐಡಿ ಯಶಸ್ವಿಯಾಗಿದೆ. ಎಂಟು ತಿಂಗಳ ಬಳಿಕ ಯುವತಿಯರು ಪತ್ತೆಯಾಗಿದ್ದಾರೆ. ಆದರೆ, ಈ 8 ತಿಂಗಳ ಅವಧಿಯಲ್ಲಿ ನಡೆದ ಘಟನಾವಳಿಗಳು ಸಿನಿಮಾ ಕಥೆಯನ್ನೂ ಮೀರಿಸುವಂತಿದೆ! ವಿವರಗಳಿಗೆ ಮುಂದೆ ಓದಿ.
- Prajwal Kumar NY
- Updated on: Sep 9, 2026
- 6:47 am
ಡಿಕೆಶಿ ಸರ್, ಕಾಫಿ ಕುಡಿದಿದ್ದಕ್ಕೆ ದುಡ್ಡು ಕೊಡಬೇಡಿ ನಾವು ಕೊಡ್ತೀವಿ ಎಂದ ಮಹಿಳೆ!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು. ವಸತಿ, ಮಾರುಕಟ್ಟೆ ಸ್ಥಳಾಂತರದ ಬಗ್ಗೆ ಮನವಿ ಆಲಿಸಿದ ಸಿಎಂ, ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಕ್ರಮಕ್ಕೆ ಆದೇಶಿಸಿದರು. ಈ ಭೇಟಿ ಕಾರ್ಮಿಕರಲ್ಲಿ ಭರವಸೆ ಮೂಡಿಸಿತು.
- Prajwal Kumar NY
- Updated on: Sep 8, 2026
- 12:18 pm