2017 ಜೂನ್ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.
ಒಂದೇ ಬಾರಿಗೆ ಬರೋಬ್ಬರಿ 15 IPS ಅಧಿಕಾರಿಗಳ ವರ್ಗಾವಣೆ: ಎಲ್ಲಿಗೆ-ಯಾರು?
ಕರ್ನಾಟಕ ಸರ್ಕಾರವು ಒಂದೇ ಬಾರಿಗೆ ಬರೋಬ್ಬರಿ 15 ಐಪಿಎಸ್ ಅಧಿಕಾರಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ಅವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಹಾಗಾದ್ರೆ, ಯಾರು ಎಲ್ಲಿಗೆ ವರ್ಗಾವಣೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Prajwal Kumar NY
- Updated on: Aug 29, 2026
- 5:46 pm
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್: ಕಮಾಂಡೋ, ಗರುಡಾ ಪಡೆಗೆ ಶೇ. 50 ಹೆಚ್ಚುವರಿ ಭತ್ಯೆ ಘೋಷಿಸಿದ ಸಿಎಂ
ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಗ್ರೌಂಡ್ನಲ್ಲಿ NSG ಅಣುಕು ಪ್ರದರ್ಶನ ನಡೆಯಿತು. ರಾಜ್ಯ ಪೊಲೀಸ್ ಪಡೆಯನ್ನು ಬಲಪಡಿಸಲು ಮುಂದಾದ ಸರ್ಕಾರ 500 ಪೊಲೀಸರಿಗೆ ಒಂದು ತಿಂಗಳ NSG ಕಮಾಂಡೋ ತರಬೇತಿ ನೀಡಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಮಾಂಡೋ ಹಾಗೂ ವಿಶೇಷ ಪಡೆಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ 50% ಹೆಚ್ಚುವರಿ ಭತ್ಯೆ ಘೋಷಿಸಿ, ಬಹುಕಾಲದ ಬೇಡಿಕೆ ಈಡೇರಿಸಿದರು.
- Prajwal Kumar NY
- Updated on: Aug 28, 2026
- 10:48 pm
ಲೋಕಾಯುಕ್ತ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ ಮಲ್ಲಿಕಾರ್ಜುನ!
ವಿಶೇಷ ಭೂ ಸ್ವಾಧೀನ ಅಧಿಕಾರಿ ಮಲ್ಲಿಕಾರ್ಜುನ್ ಲೋಕಾಯುಕ್ತ ದಾಳಿಗೆ ಹೆದರಿ ರಾಜೀನಾಮೆ ನೀಡಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. 2021ರಿಂದ ಆಸ್ತಿ ಘೋಷಿಸದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆಗಸ್ಟ್ 19ರಂದು ನಡೆದ ಲೋಕಾಯುಕ್ತ ದಾಳಿಯಲ್ಲಿ 11 ಕಡೆಗಳಲ್ಲಿ ಶೋಧ ನಡೆಸಲಾಗಿದ್ದು, ಒಟ್ಟು 18.32 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಇದರಲ್ಲಿ 2.53 ಕೋಟಿ ರೂ. ನಗದೂ ಸೇರಿದೆ.
- Prajwal Kumar NY
- Updated on: Aug 28, 2026
- 11:23 am
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಚೆನ್ನೈ ಮೂಲದ ಆರೋಪಿ ಬಂಧನ
Bengaluru News: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆದಿದೆ. ಮೊಬೈಲ್ ಕಳೆದುಹೋಗಿದೆ ಎಂದು ದೂರು ನೀಡಲು ಬಂದ ಗಜೇಂದ್ರ ಎಂಬಾತ ಈ ಕೃತ್ಯ ಎಸಗಿದ್ದು, ಘಠನೆಯಲ್ಲಿ ಕಾನ್ಸ್ಟೇಬಲ್ ತಲೆ ಪೆಟ್ಟು ಬಿದ್ದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.
- Prajwal Kumar NY
- Updated on: Aug 27, 2026
- 1:45 pm
ಪಶು ವೈದ್ಯಾಧಿಕಾರಿ ಅಕ್ರಮ ನೇಮಕಾತಿ ಹಗರಣ: ಕೆಪಿಎಸ್ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪಶು ವೈದ್ಯಾಧಿಕಾರಿ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ, ಸಿಐಡಿ ಅಧಿಕಾರಿಗಳು ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ಕೆಪಿಎಸ್ಸಿ ಕಚೇರಿ ಮೇಲೆ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ಚುರುಕುಗೊಂಡಿದೆ. ಮತ್ತೊಂದೆಡೆ, ಜಾರಿ ನಿರ್ದೇಶನಾಲಯ (ಇಡಿ) ಆರ್ಥಿಕ ಅಕ್ರಮಗಳ ಕುರಿತು ಪ್ರತ್ಯೇಕ ತನಿಖೆ ನಡೆಸುತ್ತಿದೆ.
- Prajwal Kumar NY
- Updated on: Aug 25, 2026
- 12:36 pm
IAS ಅಧಿಕಾರಿ ಜ್ಞಾನೇಂದ್ರಕುಮಾರ್ ಲಖನೌ ನಿವಾಸದ ಮೇಲೂ ಇಡಿ ದಾಳಿ: ಅಲ್ಲಿಂದಲೂ ಅಧಿಕಾರಿ ನಾಪತ್ತೆ!
ಕೆಪಿಎಸ್ಸಿ ಪಶುವೈದ್ಯರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಲಖನೌ ನಿವಾಸದ ಮೇಲೆಯೂ ಇಡಿ ದಾಳಿ ನಡೆಸಿದ್ದು, ಅಧಿಕಾರಿ ಅಲ್ಲಿಂದಲೂ ನಾಪತ್ತೆಯಾಗಿದ್ದಾರೆ. ಇಡಿ ದಾಳಿ ಸುಳಿವಿನ ಮೇಲೆ ಪರಾರಿಯಾದ್ರಾ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಹೀಗಾಗಿಯೇ ತರಾತುರಿಯಲ್ಲಿ ಕಳೆದ ವಾರ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ.
- Prajwal Kumar NY
- Updated on: Aug 24, 2026
- 2:51 pm
KPSC ಎಕ್ಸಾಂ ಕಂಟ್ರೋಲರ್ ಮನೆ ಮೇಲೆ ಇಡಿ ದಾಳಿ, ಇಡಿಗೆ ಹೆದರಿ ಬೆಂಗಳೂರು ತೊರೆದ್ರಾ IAS ಅಧಿಕಾರಿ?
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭರ್ಜರಿ ಎಂಟ್ರಿ ಕೊಟ್ಟಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೆಪಿಎಸ್ಸಿ ಕೇಂದ್ರ ಕಚೇರಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳ ಬರೋಬ್ಬರಿ 20 ಸ್ಥಳಗಳ ಮೇಲೆ ಈಗಾಗಲೇ ಏಕಕಾಲದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ IAS ಅಧಿಕಾರಿ ಜ್ಞಾನೇಂದ್ರಕುಮಾರ್ ಮನೆ ಮೇಲೆ ದಾಳಿ ಮಾಡಿದೆ.
- Prajwal Kumar NY
- Updated on: Aug 23, 2026
- 5:00 pm
KPSC ಕರ್ಮಕಾಂಡ: ಇಡಿ ತನಿಖೆ ವೇಳೆ ಬಯಲಾಯ್ತು ಮತ್ತಷ್ಟು ಸ್ಫೋಟಕ ವಿಚಾರ
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿ ವೇಳೆ ಬೃಹತ್ ಅಕ್ರಮ ಬಯಲಾಗಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಅಭ್ಯರ್ಥಿಗಳಿಗೆ ರೆಸಾರ್ಟ್ನಲ್ಲಿ ತರಬೇತಿ ನೀಡಿದ್ದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳಿಂದ 70-80 ಲಕ್ಷ ಲಂಚ ಪಡೆದಿರೋ ಆರೋಪ ಕೇಳಿಬಂದಿತ್ತು. ಮಧ್ಯವರ್ತಿಗಳ ಲಂಚದ ಬೇಡಿಕೆ ಕುರಿತು 4 FIR ಕೂಡ ದಾಖಲಾಗಿತ್ತು. ಈ ಸಂಬಂಧ ಇಡಿ ನಡೆಸಿದ್ದ ದಾಳಿಯ ವೇಳೆ ಮತ್ತಷ್ಟು ವಿಚಾರಗಳು ಬಯಲಾಗಿವೆ.
- Prajwal Kumar NY
- Updated on: Aug 20, 2026
- 12:55 pm
ಆಪರೇಷನ್ ಮುಕ್ತ: ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಿನಲ್ಲಿ ಆಪರೇಷನ್ ಮುಕ್ತ ಕಾರ್ಯಾಚರಣೆ ನಡೆಸಿ, 105 ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ವೈಟ್ಫೀಲ್ಡ್ ವಿಭಾಗಗಳಲ್ಲಿ 58 ತಂಡಗಳು 58 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದವು. ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. ಪತ್ತೆಯಾದ ಎಲ್ಲಾ ಅಕ್ರಮ ವಲಸಿಗರ ಬಗ್ಗೆ ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಓ) ಗೆ ಮಾಹಿತಿ ನೀಡಲಾಗಿದೆ. ಪ್ರಸ್ತುತ, ಈ ವಲಸಿಗರನ್ನು ವಲಸಿಗರ ಕೇಂದ್ರಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.
- Prajwal Kumar NY
- Updated on: Aug 10, 2026
- 2:17 pm
ನೀವು ಭಯೋತ್ಪಾದಕರಾ ಎಂದು ಪ್ರಶ್ನಿಸಿ ಟೆಕ್ಕಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ
ಬೆಂಗಳೂರಿನ ಹೆಚ್ಎಎಲ್ (HAL) ಪೊಲೀಸ್ ಠಾಣಾ ವ್ಯಾಪ್ತಿಯ ಎಇಸಿಎಸ್ ಲೇಔಟ್ನಲ್ಲಿ ಆಗಸ್ಟ್ 6ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಇಬ್ಬರು ಸಾಫ್ಟ್ವೇರ್ ಉದ್ಯೋಗಿಗಳ ಮೇಲೆ ದುಷ್ಕರ್ಮಿಯೊಬ್ಬ 'ನೀವು ಭಯೋತ್ಪಾದಕರಾ?' ಎಂದು ಪ್ರಚೋದನಾಕಾರಿಯಾಗಿ ಪ್ರಶ್ನಿಸಿ, ಬೇಸ್ಬಾಲ್ ಬ್ಯಾಟ್ನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ಹೆಚ್ಎಎಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
- Prajwal Kumar NY
- Updated on: Aug 9, 2026
- 10:10 am
ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಡಿಸಿಪಿ ಎಂ.ನಾರಾಯಣ್ ನೇತೃತ್ವದಲ್ಲಿ 23 ಪೊಲೀಸರ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, 29 ಸ್ಥಳಗಳಲ್ಲಿ 1909 ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಪೈಕಿ 15 ಮಂದಿ ಬಾಂಗ್ಲಾ ವಲಸಿಗರು ಎಂಬುವುದು ದೃಢಪಟ್ಟಿದ್ದು, ಬಾಂಗ್ಲಾದ ಬಾಗೇರಹತ್ನ ಖುಲ್ನಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇವರ ಬಳಿ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, 1,894 ಅಕ್ರಮ ವಲಸಿಗರ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.
- Prajwal Kumar NY
- Updated on: Aug 8, 2026
- 5:18 pm
ದುಷ್ಮನ್ ಕಿದರ ಹೈ ಅಂದ್ರೆ ಬಗಲ್ ಮೇ ಹೈ: ಅಕ್ಕಪಕ್ಕದವರ ಮನೆಯವರ ವಾಹನಗಳ ವಿರುದ್ಧ ದೂರು
abandoned vehicles Bangaluru: ಬೆಂಗಳೂರಿನಲ್ಲಿ ಪುಟ್ಪಾತ್ ಮತ್ತು ರಸ್ತೆ ಬದಿ ನಿಲ್ಲಿಸಿದ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ನಡೆದಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಬೇರೆಯವರ ವಾಹನಗಳ ಫೋಟೋ ತೆಗೆದು ಪಬ್ಲಿಕ್ ಐ ಆ್ಯಪ್ನಲ್ಲಿ ಅಪ್ಲೋಡ್ ಮಾಡಿರುವುದು ಪತ್ತೆಯಾಗಿದೆ. ವಾಹನಗಳ ಪರಿಶೀಲನೆ ವೇಳೆ ಪೊಲೀಸರೇ ಶಾಕ್ ಆಗಿದ್ದಾರೆ.
- Prajwal Kumar NY
- Updated on: Aug 8, 2026
- 3:21 pm