2017 ಜೂನ್ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.
ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 70 ಅಪರಾಧ ಪ್ರಕರಣ ಭೇದಿಸಿ 94 ಖದೀಮರ ಬಂಧನ!
ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ 70 ಅಪರಾಧ ಪ್ರಕರಣಗಳನ್ನು ಭೇದಿಸಿದ್ದಾರೆ. ಒಟ್ಟು 94 ಕಳ್ಳರು, ದರೋಡೆಕೋರರನ್ನು ಬಂಧಿಸಿ, ಅವರಿಂದ ಬರೋಬ್ಬರಿ 4.91 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಾಹನಗಳು, ನಗದು ಹಾಗೂ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಯಲ್ಲಿ ಜಪ್ತಿ ಮಾಡಲಾದ ಈ ವಸ್ತುಗಳನ್ನು ನಗರ ಪೊಲೀಸ್ ಆಯುಕ್ತರು ಇಂದು ಮೂಲ ವಾರಸುದಾರರಿಗೆ ಅಧಿಕೃತವಾಗಿ ಹಸ್ತಾಂತರಿಸಲಿದ್ದಾರೆ.
- Prajwal Kumar NY
- Updated on: Jul 17, 2026
- 2:48 pm
ನಿರುದ್ಯೋಗಿಗಳೇ ಇವರ ಟಾರ್ಗೆಟ್: MNC ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ
Bengaluru Job Scam: ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಉದ್ಯೋಗ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಎಂಎನ್ಸಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಸಾವಿರಾರು ನಿರುದ್ಯೋಗಿಗಳಿಂದ ಹಣ ಪಡೆದು ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನಡೆದಿದೆ. ಸದ್ಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ.
- Prajwal Kumar NY
- Updated on: Jul 15, 2026
- 7:13 pm
ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್
ಬೆಂಗಳೂರು: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪಿಎಸ್ಐ ಭೈರಪ್ಪ, ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಕೆಂಗೇರಿ ಪೊಲೀಸರು ಮಚ್ಚಿನಿಂದ ಹಲ್ಲೆ ಯತ್ನ ಪ್ರಕರಣದಲ್ಲಿ ಇವರನ್ನು ಬಂಧಿಸಿದ್ದು, ಕೊಲೆ ಯತ್ನ, ವರದಕ್ಷಿಣೆ ಕಿರುಕುಳ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕಠಿಣ ಮೊಕದ್ದಮೆ ದಾಖಲಿಸಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ.
- Prajwal Kumar NY
- Updated on: Jul 14, 2026
- 3:00 pm
ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು!
ಬೆಂಗಳೂರಿನ ಕೆಂಗೇರಿ ಹೋಬಳಿಯಲ್ಲಿ ಆದಿಚುಂಚನಗಿರಿ ಮಠಕ್ಕೆ ಸೇರಿದ 120 ಕೋಟಿ ರೂ. ಮೌಲ್ಯದ 6 ಎಕರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ಭೀಕರ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಸ್ಮಶಾನದಲ್ಲಿ ಸಮಾಧಿ ಹುಡುಕಿ, ನಕಲಿ ವಂಶವೃಕ್ಷ ತಯಾರಿಸಿ ವಂಚಿಸಿದ್ದ ಪ್ರಕರಣದಲ್ಲಿ 6 ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿ 11 ಮಂದಿಯನ್ನು ಬಂಧಿಸಲಾಗಿದೆ.
- Prajwal Kumar NY
- Updated on: Jul 14, 2026
- 2:24 pm
‘ಕರಾವಳಿ’ ಸಿನಿಮಾ ಟ್ರೇಲರ್ ಗಲಾಟೆ: ಪ್ರಜ್ವಲ್ ದೇವರಾಜ್ ಸಹಾಯಕರ ವಿರುದ್ಧವೇ ಎಫ್ಐಆರ್
Karavali Movie Trailer Controversy: ಕರಾವಳಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಾಕಿ ಸಂಭಾವನೆ ವಿಚಾರವಾಗಿ ನಟನ ಪ್ರಚೋದನೆಯಿಂದಲೇ ಈ ರಾದ್ಧಾಂತ ನಡೆದಿದೆ ಎಂದು ಆರೋಪಿಸಲಾಗಿದ್ದು, ಉಪ್ಪಾರಪೇಟೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
- Prajwal Kumar NY
- Updated on: Jul 10, 2026
- 10:23 am
ಬೆಂಗಳೂರು ಡೇ ಕೇರ್ ಕ್ರೌರ್ಯ: ಸಿಸಿಟಿವಿ ದೃಶ್ಯ ಆಧರಿಸಿ ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿ ಇಬ್ಬರು ಅರೆಸ್ಟ್!
ಬೆಂಗಳೂರು ಡೇ ಕೇರ್ ದೌರ್ಜನ್ಯ: ಬೆಂಗಳೂರಿನ ಬ್ರೂಕ್ಫೀಲ್ಡ್ನ ಸೊಸೈಟಿ ಜನರಲ್ ಬೇಬಿ ಡೇ ಕೇರ್ ಸೆಂಟರ್ನಲ್ಲಿ ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಪೊಲೀಸರು ಪ್ರಮುಖ ಆರೋಪಿ ವಿಜಯಲಕ್ಷ್ಮೀಯನ್ನು ಬಂಧಿಸಿದ್ದಾರೆ. ಸಿಸಿಟಿವಿ ವಿಡಿಯೋ ಆಧಾರದ ಮೇಲೆ ಜುವೆನೈಲ್ ಜಸ್ಟೀಸ್ (JJ Act) ಕಾಯ್ದೆಯಡಿ ಕೇಸ್ ದಾಖಲಾಗಿದೆ.
- Prajwal Kumar NY
- Updated on: Jul 3, 2026
- 11:47 am
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ನಗರದ ಕಾಟನ್ ಪೇಟೆಯಲ್ಲಿರುವ ಸುಮಾರು 50 ವರ್ಷಗಳ ಹಳೆಯ 2 ಅಂತಸ್ತಿನ ಕಟ್ಟಡವೊಂದು ಒಂದು ಬದಿ ವಾಲಿದ್ದು , ಅದರಲ್ಲಿ ಸಿಲುಕಿದ್ದವರು ಹಾಗೂ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದಾರೆ. ವಿಷಯ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಕಾಟನ್ಪೇಟೆ ಪೊಲೀಸರು ದೌಡಾಯಿಸಿ ವಾಲಿದ್ದ ಕಟ್ಟಡದೊಳಗೆ ಸಿಲುಕಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ವಾಲಿದ ಕಟ್ಟಡದಲ್ಲಿ ನಟೇಶ್ ಕ್ಲಿನಿಕ್, ಜನ ವಾಸಮಾಡುತ್ತಿದ್ದರು. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.20X30 ವಿಸ್ತೀರ್ಣದಲ್ಲಿದ್ದ 50 ವರ್ಷಗಳ ಹಿಂದೆ ನಿರ್ಮಿಸಿದ್ದು, ಸ್ಥಳದಲ್ಲೇ ಜಿಬಿಎ ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿ 2 ಜೆಸಿಬಿ ಮೂಲಕ ಕಟ್ಟಡ ತೆರವು ಮಾಡಿಸುತ್ತಿದ್ದಾರೆ.
- Prajwal Kumar NY
- Updated on: Jul 2, 2026
- 6:09 pm
ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, 17 ಪೆಡ್ಲರ್ಗಳ ಬಂಧನ
ಬೆಂಗಳೂರು ಸಿಸಿಬಿ ಮತ್ತು ನಗರ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 3 ವಿದೇಶೀಯರು ಸೇರಿದಂತೆ ಒಟ್ಟು 17 ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದ್ದು, ಲಗೇಜ್ ಬ್ಯಾಗ್ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಆಫ್ರಿಕನ್ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
- Prajwal Kumar NY
- Updated on: Jun 29, 2026
- 5:33 pm
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ; ಬೆಂಗಳೂರಿನ ಆರ್ ಆರ್ ನಗರದಲ್ಲಿ ಘಟನೆ
ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ರಾಜರಾಜೇಶ್ವರಿ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ. ಆತ್ಮಹತ್ಯೆಗೂ ಮುನ್ನ ಕೃಷಿ ತಾಪಂಡಗೆ ಕರೆ ಮಾಡಿ ತಿಳಿಸಿದ್ದ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆಯಾಗಿದೆ.
- Prajwal Kumar NY
- Updated on: Jun 25, 2026
- 11:44 am
ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ: ಹುಡುಗನ ಜೊತೆಗೆ ಹುಡುಗ ಡೇಟಿಂಗ್ ಮಾಡಲು ಕರೆಸಿ ಕಿಡ್ನಾಪ್
ಇವತ್ತಿನ ದಿನದಲ್ಲಿ ಹುಡುಗ ಹುಡುಗಿಯರ ಡೇಟಿಂಗ್ ಮಾಡಲು ಕೆಲ ಆ್ಯಪ್ಗಳು ಇವೆ. ಕೇವಲ ಯುವತಿ-ಯುವಕರಿಗೆ ಮಾತ್ರವಲ್ಲ, ಹುಡುಗನ ಜೊತೆಗೆ ಹುಡುಗ ಹಾಗೂ ಹುಡುಗಿ ಜೊತೆಗೆ ಹುಡುಗಿಯರ ಡೇಟಿಂಗ್ ಆ್ಯಪ್ಗಳು ಸಹ ಇವೆ. ಇದೇ ಒಂದು ಆ್ಯಪ್ನಲ್ಲಿ ಪರಿಚಯ ಆಗಿದ್ದವನ ಡೇಟ್ ಮಾಡಲು ಹೋಗಿ ಕಿಡ್ನಾಪ್ ಆಗಿದ್ದಾನೆ. ಬೆಂಗಳೂರಿನಲ್ಲೇ ಇಂತಹದೊಂದು ವಿಚಿತ್ರ ಘಟನೆ ನಡೆದಿದೆ.
- Prajwal Kumar NY
- Updated on: Jun 22, 2026
- 10:12 pm
ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್! ಬಡವರ ಅಕ್ಕಿ ಲೂಟಿ ಮಾಡಿದ ಅಧಿಕಾರಿಗಳ ಕಳ್ಳಾಟ ಬಯಲು
ಬೆಂಗಳೂರಿನ 27 ಆಹಾರ ಗೋದಾಮುಗಳ ಮೇಲೆ ಲೋಕಾಯುಕ್ತ ಪೊಲೀಸರು ಭಾರಿ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಶಾಂತಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಸಾವಿರಾರು ಮೂಟೆ ಪಡಿತರ ಅಕ್ಕಿ ಮತ್ತು ರಾಗಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳ ಗೈರುಹಾಜರಿ, ನಗದು ಅಕ್ರಮ ಹಾಗೂ ಹಮಾಲಿ ಕಾರ್ಮಿಕರಿಗೆ ಜೀವ ವಿಮೆ, ಇಎಸ್ಐ ನೀಡದೆ ವಂಚಿಸುತ್ತಿದ್ದ ಗಂಭೀರ ಕರ್ತವ್ಯಲೋಪವನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
- Prajwal Kumar NY
- Updated on: Jun 13, 2026
- 11:42 am
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಶಬ್ರಾಜ್ (28) ಮತ್ತು ಶಬ್ರೀನ್ (24) ಎಂಬ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 11:50ರ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕ ಬ್ರೇಕ್ ಫೇಲ್ ಆದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾನೆ.
- Prajwal Kumar NY
- Updated on: Jun 11, 2026
- 9:22 pm