Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಅಮೀನ್​, ಉಡುಪಿ

Author - TV9 Kannada

prajwal.vasu@tv9.com

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
BJP Janakrosh Yatra: ಚುನಾವಣೆ ಹತ್ತಿರದಲ್ಲಿಲ್ಲ, ಹೋರಾಟದ ಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ ವಾಗ್ದಾಳಿ

BJP Janakrosh Yatra: ಚುನಾವಣೆ ಹತ್ತಿರದಲ್ಲಿಲ್ಲ, ಹೋರಾಟದ ಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಜನಾಕ್ರೋಶ ಯಾತ್ರೆ: ಬೆಲೆ ಏರಿಕೆ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಗುರುವಾರ ಉಡುಪಿಯಲ್ಲಿ ನಡೆಯಿತು. ಯಾತ್ರೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ.

ಉಡುಪಿ ಕೃಷ್ಣ ಮಠ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೊಶೂಟ್ ನಿಷೇಧ

ಉಡುಪಿ ಕೃಷ್ಣ ಮಠ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೊಶೂಟ್ ನಿಷೇಧ

ವೆಡ್ಡಿಂಗ್ ಫೋಟೋಗ್ರಾಫಿ, ಅದರಲ್ಲೂ ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಕ್ರೇಜ್ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಸಮಯ, ಸಂದರ್ಭ, ಸ್ಥಳದ ಪರಿವೆ ಇಲ್ಲದೆ ಜೋಡಿಗಳು ಫೋಟೋ ಶೂಟ್‌ನಲ್ಲಿ ನಿರತವಾಗಿರುವುದು ಅಲ್ಲಲ್ಲಿ ಕಾಣಿಸುತ್ತಿವೆ. ಇದೀಗ ಉಡುಪಿ ಕೃಷ್ಣ ಮಠದ ರಥ ಬೀದಿಯಲ್ಲಿ ಇಂಥ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ.

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ತೀರ್ಮಾನ: ಪ್ರಯಾಣಿಕರಿಗೆ ಮತ್ತೊಂದು ಶಾಕ್

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ತೀರ್ಮಾನ: ಪ್ರಯಾಣಿಕರಿಗೆ ಮತ್ತೊಂದು ಶಾಕ್

Private Bus Ticket Price hike; ರಾಜ್ಯದ ಜನತೆ ಇದೀಗ ಮತ್ತೊಂದು ದರ ಏರಿಕೆಯ ಭಾರ ಹೊರಲು ಸಿದ್ಧವಾಗಬೇಕಿದೆ. ಬೆಲೆ ಏರಿಕೆ ಜಮಾನದಲ್ಲಿ ಇದೀಗ ಮತ್ತೊಂದು ಹೊಡೆತ ಬೀಳಲಿದೆ. ಕರ್ನಾಟಕದಾದ್ಯಂತ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ತೀರ್ಮಾನಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ

ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಲಿ ಗ್ರಾಮದಲ್ಲಿ ನಡೆದ ಮುಗೇರಕಲ ದೈವೋತ್ಸವದಲ್ಲಿ 11 ವರ್ಷದ ಸಮರ್ಥ್ ಎಂಬ ಬಾಲಕ ತನಿಮಾನಿಗ ದೈವ ನರ್ತನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಬಾಲಕನ ಅಜ್ಜ ಮತ್ತು ತಂದೆ ಕೂಡ ದೈವ ನರ್ತಕರಾಗಿದ್ದರು. ಮೂರು ತಲೆಮಾರುಗಳಿಂದ ಮುಂದುವರಿಯುತ್ತಿರುವ ಈ ಪರಂಪರೆ ಸಮರ್ಥನಿಂದ ಮುಂದುವರಿಯುತ್ತಿದೆ. ದೈವ ಭಕ್ತರು ಈ ಬಾಲಕನ ಅಪರೂಪದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಡುಪಿ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್: ನನ್ನನ್ನು ಯಾರೂ ಅಪಹರಿಸಿಲ್ಲ ಎಂದ ಯುವತಿ

ಉಡುಪಿ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್: ನನ್ನನ್ನು ಯಾರೂ ಅಪಹರಿಸಿಲ್ಲ ಎಂದ ಯುವತಿ

ಉಡುಪಿ ಕರಾವಳಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವತಿ ನ್ಯಾಯಾಲಯಕ್ಕೆ ಹಾಜರಾಗಿ, ಯುವಕನ ಜೊತೆ ಸ್ವಯಂಪ್ರೇರಿತವಾಗಿ ಹೋಗಿದ್ದಾಗಿ ಹೇಳಿಕೆ ನೀಡಿದ್ದಾರೆ. ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಪೋಷಕರು ದೂರು ನೀಡಿದ್ದರು. ಆದರೆ ಯುವತಿಯ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ

ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ

ನನ್ನ ಮಗಳನ್ನು ಓರ್ವ ಮುಸ್ಲಿಂ ಯುವಕ ಅಪಹರಿಸಿ, ವಿವಾಹವಾಗಲು ಮುಂದಾಗಿದ್ದಾನೆ ಎಂದು ಯುವತಿ ತಂದೆ ಆರೋಪಿಸಿದ್ದಾರೆ. ಯುವತಿಯ ತಂದೆ ಗಾಡ್ವಿನ್ ದೇವದಾಸ್ ಅವರು ಇದು ಲವ್ ಜಿಹಾದ್ ಷಡ್ಯಂತ್ರ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಮೊಹಮ್ಮದ್ ಅಕ್ರಮ್ ಈ ಹಿಂದೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವೂ ಇದೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕವಾಗಿ ಕಟ್ಟಿ ಹಲ್ಲೆ ಮಾಡಿದ್ರೂ ಆರೋಪಿಗಳಿಗಾಗಿ ಮಿಡಿದ ಸಂತ್ರಸ್ತೆ ಹೃದಯ

ಸಾರ್ವಜನಿಕವಾಗಿ ಕಟ್ಟಿ ಹಲ್ಲೆ ಮಾಡಿದ್ರೂ ಆರೋಪಿಗಳಿಗಾಗಿ ಮಿಡಿದ ಸಂತ್ರಸ್ತೆ ಹೃದಯ

ಕೇವಲ ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಾಕಿ ಹೊಡೆದ ಪ್ರಕರಣ ನಡೆದಿತ್ತು. ಉಡುಪಿಯಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜಾತಿ ನಿಂದನೆ ಪ್ರಕರಣದಲ್ಲಿ ಮೀನುಗಾರ ಮಹಿಳೆಯರ ಬಂಧನವಾಗಿತ್ತು. ಸಾರ್ವಜನಿಕವಾಗಿ ಹಲ್ಲೆ ಮಾಡಿದ್ರೂ ಆರೋಪಿಗಳಿಗಾಗಿ ಸಂತ್ರಸ್ತೆ ಹೃದಯ ಮಿಡಿದಿದ್ದು, ಜಾತಿ ನಿಂದನೆ ಪ್ರಕರಣ ವಾಪಸ್ ಪಡೆಯಲು ಡಿಸಿಗೆ ಮನವಿ ಮಾಡಿದ್ದಾರೆ.

ಉಡುಪಿಯಲ್ಲೊಂದು ಹೇಯ ಕೃತ್ಯ: ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಲ್ಲೆ

ಉಡುಪಿಯಲ್ಲೊಂದು ಹೇಯ ಕೃತ್ಯ: ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ ತಾಲೂಕಿನ ಮಲ್ಪೆಯಲ್ಲಿ ಮೀನು ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಡಿಸಿ ಮತ್ತು ಎಸ್ಪಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

TV9 ಸುದ್ದಿ ಪ್ರಸಾರ ಬೆನ್ನಲ್ಲೇ ಲೈಟ್ ಫಿಶಿಂಗ್ ವಿರುದ್ಧ ಕಾರ್ಯಾಚರಣೆಗೆ ಇಳಿದ ಮೀನುಗಾರಿಕೆ ಇಲಾಖೆ

TV9 ಸುದ್ದಿ ಪ್ರಸಾರ ಬೆನ್ನಲ್ಲೇ ಲೈಟ್ ಫಿಶಿಂಗ್ ವಿರುದ್ಧ ಕಾರ್ಯಾಚರಣೆಗೆ ಇಳಿದ ಮೀನುಗಾರಿಕೆ ಇಲಾಖೆ

ಉಡುಪಿಯಲ್ಲಿ ಮೀನುಗಾರಿಕೆಯಲ್ಲಿ ತೀವ್ರ ಇಳಿಕೆ ಕಂಡುಬಂದಿದ್ದು, ಟಿವಿ9 ವರದಿ ಬಳಿಕ ಅಕ್ರಮ "ಲೈಟ್ ಫಿಶಿಂಗ್" ವಿರುದ್ಧ ಮೀನುಗಾರಿಕಾ ಇಲಾಖೆ ಮತ್ತು ಕರಾವಳಿ ಕಾವಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಹಲವು ದೋಣಿಗಳಿಗೆ ದಂಡ ವಿಧಿಸಲಾಗಿದೆ ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳನ್ನು ತಡೆಯಲು ಜಂಟಿ ತಂಡ ರಚಿಸಲಾಗಿದೆ.

ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗಿನ ಇಸಾಕ್​ಗೆ ಗುಂಡೇಟು ಕೊಟ್ಟು ಹಿಡಿದ ಪೊಲೀಸ್ರು

ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗಿನ ಇಸಾಕ್​ಗೆ ಗುಂಡೇಟು ಕೊಟ್ಟು ಹಿಡಿದ ಪೊಲೀಸ್ರು

ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ​ ಪೊಲೀಸರು ಫೈರಿಂಗ್ ಮಾಡಿರುವಂತಹ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಇನ್ಸ್​​ಪೆಕ್ಟರ್ ದೇವರಾಜ್​ರಿಂದ ಫೈರಿಂಗ್ ಮಾಡಿದ್ದು, ಸದ್ಯ ಇಸಾಕ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾ.4ರಂದು ಬಂಧಿಸಲು ಹೋದಾಗ ಎಸ್ಕೇಪ್ ಆಗಿದ್ದ.

ಸಮುದ್ರದ ಆಳದಲ್ಲಿ ಅಕ್ರಮ ಶಿಕಾರಿ: ನಿಷೇಧದ ನಡುವೆಯೂ ನಡೆಯುತ್ತಿದೆ ಮತ್ಸ್ಯ ಬೇಟೆ

ಸಮುದ್ರದ ಆಳದಲ್ಲಿ ಅಕ್ರಮ ಶಿಕಾರಿ: ನಿಷೇಧದ ನಡುವೆಯೂ ನಡೆಯುತ್ತಿದೆ ಮತ್ಸ್ಯ ಬೇಟೆ

ಕರ್ನಾಟಕದ ಕರಾವಳಿಯಲ್ಲಿ ಅಕ್ರಮ ಮೀನುಗಾರಿಕೆಯಿಂದ ಮೀನು ಸಂಕುಲದಲ್ಲಿ ಭಾರಿ ಇಳಿಕೆಯಾಗುತ್ತಿರುವುದು ಬಹಿರಂಗವಾಗಿದೆ. ಬಲೆಗಳಿಗೆ ಬದಲಾಗಿ ಹೆಚ್ಚಿನ ವೋಲ್ಟೇಜ್‌ನ ಲೈಟ್‌ಗಳನ್ನು ಬಳಸಿ ಮೀನು ಹಿಡಿಯುವ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಸಾವಿರಕ್ಕೂ ಹೆಚ್ಚು ಬೋಟ್‌ಗಳು ಈ ಅಕ್ರಮದಲ್ಲಿ ತೊಡಗಿಕೊಂಡಿವೆ ಎಂದು ತಿಳಿದುಬಂದಿದೆ. ಸರ್ಕಾರ ಮತ್ತು ಮೀನುಗಾರಿಕಾ ಇಲಾಖೆಯ ನಿರ್ಲಕ್ಷ್ಯದಿಂದ ಈ ಸಮಸ್ಯೆ ಉಲ್ಬಣಗೊಳ್ಳುತ್ತಿದೆ ಎನ್ನಲಾಗುತ್ತಿದೆ.

ಮಣಿಪಾಲ: ಸಿನಿಮಾ ಸ್ಟೈಲ್​ನಲ್ಲಿ ಪೊಲೀಸರ ರೋಚಕ ಚೇಸಿಂಗ್, ಗರುಡ ಗ್ಯಾಂಗ್​ನ ಕ್ರಿಮಿನಲ್ ಅರೆಸ್ಟ್

ಮಣಿಪಾಲ: ಸಿನಿಮಾ ಸ್ಟೈಲ್​ನಲ್ಲಿ ಪೊಲೀಸರ ರೋಚಕ ಚೇಸಿಂಗ್, ಗರುಡ ಗ್ಯಾಂಗ್​ನ ಕ್ರಿಮಿನಲ್ ಅರೆಸ್ಟ್

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದ ರೋಚಕ ಪೊಲೀಸ್ ಕಾರ್ಯಾಚರಣೆಯಲ್ಲಿ ಗರುಡ ಗ್ಯಾಂಗ್‌ನ ಕುಖ್ಯಾತ ಕ್ರಿಮಿನಲ್​ ಇಸ್ಸಾಕ್​ನ ಬಂಧನವಾಗಿದೆ. ಪೊಲೀಸರು ಹಿಂಬಾಲಿಸುತ್ತಿದ್ದಾಗ, ಇಸ್ಸಾಕ್ ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಇಸ್ಸಾಕ್​ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಆದರೆ, ಚುರುಕುತನದಿಂದ ಮಣಿಪಾಲ ಪೊಲೀಸರು ಇಸ್ಸಾಕ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಮಣಿಪಾಲದಲ್ಲಿ ಸಂಚಲನ ಸೃಷ್ಟಿಸಿದೆ.