ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು, ತಾಯಿ ರಕ್ಷಣೆ
ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೊಳ್ಳಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೌದು, ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ತಾಯಿಯನ್ನ ರಕ್ಷಣೆ ಮಾಡಲಾಗಿದೆ.
- Prajwal Amin
- Updated on: Jun 29, 2024
- 9:12 pm
ಉಡುಪಿಯಲ್ಲಿ ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದ್ದು, ಉಡುಪಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಈ ಹಿನ್ನಲೆ ಕಾಪು, ಮಲ್ಪೆ, ಪಡುಕೆರೆ ಕಡಲ ಕಿನಾರೆ ಪ್ರಕ್ಷುಬ್ಧವಾಗಿದೆ. ಇನ್ನು ಮಲ್ಪೆ ಬೀಚ್ನಲ್ಲಿಯೂ ರಕ್ಕಸ ಗಾತ್ರದ ಅಲೆಗಳು ಅಬ್ಬರಿಸುತ್ತಿರುವ ಹಿನ್ನಲೆ ಕಡಲಿನ ಹತ್ತಿರ ತೆರಳದಂತೆ ಬೀಚ್ ಸಿಬ್ಬಂದಿಗಳು ತಡೆಯುತ್ತಿದ್ದು, ಸಮುದ್ರದ ಕಡೆಗೆ ಪ್ರವೇಶಿಸದಂತೆ ಬೀಚ್ ಸಮಿತಿ ತಡೆಬೇಲಿ ನಿರ್ಮಿಸಿದ್ದಾರೆ.
- Prajwal Amin
- Updated on: Jun 26, 2024
- 4:30 pm
ಮೀನುಗಾರಿಕೆ ವಿಚಾರದಲ್ಲಿ ಗಲಾಟೆ; ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ
ಸಮುದ್ರ ಮತ್ತು ನದಿಯಲ್ಲಿ ಕಸುಬು ಮಾಡುವ ಸಾಹಸಿಗಳ ನಡುವೆ ವೈಷಮ್ಯ ಏರ್ಪಟ್ಟಿದೆ. ಕರಾವಳಿಯ ಮೊಗವೀರ ಮತ್ತು ಮಲೆನಾಡ ಅಲೆಮಾರಿ ಬೆಸ್ತರು ನಡುವೆ ಕಲಹ ನಡೆದಿದೆ. ಮಾತಿಗೆ ಮಾತು ಬೆಳೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಮಗೆ ಕೂಲಿ ಮಾಡಲು ಅವಕಾಶ ಕೊಟ್ಟು ಬದುಕಲು ಬಿಡಿ ಎಂದು ಉಡುಪಿ ಜಿಲ್ಲಾಡಳಿತದ ಮುಂದೆ ಶಿಳ್ಳೆಕ್ಯಾತರು ಬೇಡಿಕೆಯಿಟ್ಟಿದ್ದಾರೆ. ಏನಾಗಿದೆ ಅಂತೀರಾ? ಈ ಸ್ಟೋರಿ ಓದಿ.
- Prajwal Amin
- Updated on: Jun 20, 2024
- 6:03 pm
ಉಡುಪಿಯಲ್ಲಿ ನಡೆಯಿತು ಮತ್ತೊಂದು ಗ್ಯಾಂಗ್ ವಾರ್: ಪುಂಡರ ಅಟ್ಟಹಾಸಕ್ಕೆ ಭಯಭೀತರಾದ ಜನ
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಜನರು ಮರೆಯುವ ಮುನ್ನೆವೇ ಮತ್ತೊಂದು ಗ್ಯಾಂಗ್ ವಾರ್ ನಡೆದಿದೆ. ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಜೂನ್ 15 ರಂದು ಗ್ಯಾಂಗ್ ವಾರ್ ನಡೆದಿದ್ದು, ಜನರು ಭಯಭೀತರಾಗಿದ್ದಾರೆ.
- Prajwal Amin
- Updated on: Jun 18, 2024
- 9:49 am
ನಾಗರ ಪಂಚಮಿಯಂದು ಇಲ್ಲಿ ನಡೆಯಲ್ಲ ಪೂಜೆ; ಮುಗ್ಗೇರ ಜನಾಂಗ ಆರಾಧಿಸುವ ಈ ನಾಗಾರಾಧನೆಯಲ್ಲಿದೆ ವಿಶಿಷ್ಟ ಹರಕೆ
ಕರಾವಳಿ ಜಿಲ್ಲೆಗಳಲ್ಲಿ ನಾಗಾರಾಧನೆಗೆ ಮಹತ್ವದ ಸ್ಥಾನವಿದೆ. ಇಲ್ಲಿನ ಎಲ್ಲಾ ಕುಟುಂಬಗಳಿಗೂ ಮೂಲನಾಗ ದೇವರ ಆರಾಧನೆ ಖಡ್ಡಾಯ. ವೈದಿಕರ ಮೂಲಕ ನಾಗನ ಪೂಜೆ ಮಾಡಿಸೋದು ಪದ್ದತಿ. ಆದರೆ, ಉಡುಪಿ ಜಿಲ್ಲೆಯ ಕುತ್ಯಾರಿನಲ್ಲಿ ಹಿಂದುಳಿದ ಮುಗ್ಗೇರ ಜನಾಂಗದವರೇ ನಡೆಸುವ ಒಂದು ನಾಗಾರಾಧನೆ ಇದೆ. ತುಳುನಾಡಿನ ಮೂಲಜನಾಂಗದವರಾದ ಇವರು ನಡೆಸುವ ಈ ಜನಪದೀಯ ನಾಗಪೂಜೆ ವಿಶಿಷ್ಟವಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.
- Prajwal Amin
- Updated on: Jun 11, 2024
- 10:28 pm
ಇಂದು ನರೇಂದ್ರ ಮೋದಿ ಪದಗ್ರಹಣ; ಉಡುಪಿ ಪೇಜಾವರಶ್ರೀ, ಡಾ.ನಸೀರ್ ಅಹ್ಮದ್ಗೆ ಆಹ್ವಾನ
ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪೇಜಾವರಶ್ರೀಗಳಿಗೂ ಆಹ್ವಾನ ನೀಡಲಾಗಿದ್ದು ಇಂದು ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಏರ್ಪೋರ್ಟ್ನಿಂದ ದೆಹಲಿಗೆ ತೆರಳಲಿದ್ದಾರೆ.
- Prajwal Amin
- Updated on: Jun 9, 2024
- 9:51 am
ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್, ಜನರಿಗೆ ಗ್ಯಾರಂಟಿ ತಲುಪಿದೆ, ಎಲ್ಲಾ ಯೋಜನೆ ಅನುಷ್ಠಾನ ಆಗಿದೆ. ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ, ಅದು ರಾಜಕೀಯ ಉದ್ದೇಶಕ್ಕಲ್ಲ. ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಅವಶ್ಯಕತೆ ಇದೆಯೋ ಇಲ್ವೋ ಗೊತ್ತಿಲ್ಲ. ಈ ಬಗ್ಗೆ ಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಾನು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.
- Prajwal Amin
- Updated on: Jun 8, 2024
- 4:22 pm
Raghupati Bhat: ಗೆದ್ದು ಬಿಜೆಪಿಗೆ ಬರುವೆ ಎಂದಿದ್ದ ರಘುಪತಿ ಭಟ್ ಮುಂದಿನ ನಡೆ ಏನು?
ಪರಿಷತ್ ಚುನಾವಣೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ರಘುಪತಿ ಭಟ್ ಪದವೀಧರ ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಸೋತಿದ್ದಾರೆ. ಗೆದ್ದು ಬಿಜೆಪಿಗೆ ಬರುವುದಾಗಿ ಎಂದು ಹೇಳಿದ್ದ ರಘುಪತಿ ಭಟ್ ರವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ರಾಜಕೀಯ ವಲದಲ್ಲಿ ಚರ್ಚೆಗೆ ಕಾರಣವಾಗಿದೆ.
- Prajwal Amin
- Updated on: Jun 7, 2024
- 2:53 pm
ಉತ್ತರಾಖಂಡ ಚಾರಣ: ಕುಂದಾಪುರ ಮೂಲದ ಚಾರಣಿಗ ಸಾವು
ಉತ್ತರಾಖಂಡದ ಸಹಸ್ರ ತಾಲ್ ಶಿಖರಕ್ಕೆ ಚಾರಣಕ್ಕೆ ತೆರಳಿದ್ದ ರಾಜ್ಯದ 22 ಜನರಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಬದುಕಿದವರ ರಕ್ಷಣೆ ಮಾಡಲಾಗಿದ್ದು, ಮೃತದೇಹಗಳನ್ನು ತರುವ ಕಾರ್ಯ ಪ್ರಗತಿಯಲ್ಲಿದೆ. ಇನ್ನು, ಮೃತಪಟ್ಟವರಲ್ಲಿ ಕುಂದಾಪುರ ಮೂಲದ ಓರ್ವ ವ್ಯಕ್ತಿಯೂ ಇದ್ದಾರೆ.
- Prajwal Amin
- Updated on: Jun 7, 2024
- 10:55 am
ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್: ಸಚಿವ ಪರಮೇಶ್ವರ ಅಚ್ಚರಿಯ ಹೇಳಿಕೆ
ಲೋಕಸಭೆ ಚುನಾವಣೆ ಸೋಲಿನ ಬಳಿಕ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದರು. ಈ ಬಗ್ಗೆ ಇದೀಗ ಉಡುಪಿ ಭೇಟಿಯಲ್ಲಿರುವ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ವಿವರಗಳಿಗೆ ಮುಂದೆ ಓದಿ.
- Prajwal Amin
- Updated on: Jun 6, 2024
- 1:06 pm
ಶಾಲಾ ಬಸ್ ಚಲಿಸುತ್ತಿರುವಾಗಲೇ ಹೃದಯಘಾತ: ಚಾಲಕನ ಸಮಯಪ್ರಜ್ಞೆಯಿಂದ ಉಳಿತು ವಿದ್ಯಾರ್ಥಿಗಳ ಜೀವ
ಬ್ರಹ್ಮಾವರದ ಖಾಸಗಿ ಶಾಲೆಯಿಂದ ಹೊರಟ ಶಾಲಾ ಬಸ್ ದಾರಿ ಮಧ್ಯೆ ಚಾಲಕ ಮೇಲ್ವಿನ್ಗೆ ಹೃದಯಾಘಾತ ಕಾಣಿಸಿಕೊಂಡಿದೆ. ಈ ವೇಳೆ ತಮ್ಮ ಸಮಯ ಪ್ರಜ್ಞೆಯಿಂದ ಎದುರಲ್ಲಿದ್ದ ಮರವನ್ನು ತಪ್ಪಿಸಿ ರಸ್ತೆಯ ಬದಿಗೆ ಬಸ್ಸನ್ನು ಕೊಂಡೊಯ್ದಿದ್ದಾರೆ. ಇದರಿಂದ ನಾಲ್ಕೈದು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Prajwal Amin
- Updated on: Jun 5, 2024
- 10:18 pm
ದೇವರ ನಾಡು ಉಡುಪಿಯಲ್ಲಿಯೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕುಕೃತ್ಯವೆಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪರಾರಿ
ಉಡುಪಿಯ ಕುಂದಾಪುರ ತಾಲೂಕಿನ ಅಮಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಆತ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಬ್ಲಾಕ್ ಮೈಲ್ ಮಾಡುತ್ತಿದ್ದ.
- Prajwal Amin
- Updated on: Jun 3, 2024
- 11:52 am