ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಮೊದಲ ದಿನ ನವದಂಪತಿ ಜಾತ್ರೆ: 7 ದಿನ ನಡೆಯುವ ಕೊಡಿ ಹಬ್ಬ ಜಾತ್ರೆಯ ವಿಶೇಷತೆ ಏನು?
ಸಪ್ತ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಅನಾದಿಕಾಲದಿಂದಲೂ ಕೊಡಿ ಹಬ್ಬವೆಂದೇ ಪ್ರಸಿದ್ಧಿ. ಇದೀಗ ಈ ಕೊಡಿ ಹಬ್ಬ ಆರಂಭವಾಗಿದ್ದು, 7 ದಿನಗಳ ಕಾಲ ಬಹಳ ಅದ್ಧೂರಿಯಿಂದ ನಡೆಯುತ್ತದೆ. ಈ ಹಬ್ಬಕ್ಕೆ ಹೆಚ್ಚಾಗಿ ನವದಂಪತಿ ಆಗಮಿಸಿ ಕೋಟಿಲಿಂಗೇಶ್ವರನ ದರ್ಶನ ಪಡೆದುಕೊಳ್ಳುತ್ತಾರೆ.
- Prajwal Amin
- Updated on: Dec 4, 2025
- 8:44 pm
ಶಾಲೆ ರಸ್ತೆ ಸರಿ ಇಲ್ಲ, ರಿಪೇರಿ ಮಾಡಿಸಿ ಸರ್: ಆಯುಕ್ತರಿಗೆ ಪುಟಾಣಿ ವಿದ್ಯಾರ್ಥಿ ಮನವಿಯ ವಿಡಿಯೋ ನೋಡಿ
ಉಡುಪಿ ನಗರ ವ್ಯಾಪ್ತಿಯ ಬಹುತೇಕ ರಸ್ತೆಗಳು ಹಾಳಾಗಿದ್ದು, ದುರಸ್ತಿಗೆ ಬಂದಿವೆ. ಅದರಲ್ಲಿ ತನ್ನ ಶಾಲೆಯ ರಸ್ತೆ ಸರಿಯಿಲ್ಲ, ರಿಪೇರಿ ಮಾಡಿಸಿ ಎಂದು ಪುಟಾಣಿ ವಿದ್ಯಾರ್ಥಿ ಖುದ್ದು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾನೆ. ಉಡುಪಿ ನಗರದಲ್ಲಿರುವ ಮುಕುಂದ ಕೃಪ ಶಾಲೆಯ ವಿದ್ಯಾರ್ಥಿ ನಗರಸಭೆ ಆಯುಕ್ತರ ಕಚೇರಿಗೆ ಭೇಟಿ ನೀಡಿ ರಸ್ತೆ ಹಾಳಾದ ಬಗ್ಗೆ ದೂರು ನೀಡಿದ್ದಾನೆ.
- Prajwal Amin
- Updated on: Dec 4, 2025
- 2:54 pm
ಶಾಲಾ ವಾಹನಗಳನ್ನ ಟಾರ್ಗೆಟ್ ಮಾಡಿದ ಖದೀಮರು: ಅಪಘಾತವಾದ್ರೆ ದೇವರೇ ಗತಿ!
ಶಾಲೆಗಳ ವಾಹನಗಳಿಗೆ ವಿಮೆ ಮಾಡಿಸಿಕೊಡುತ್ತೇವೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯೊಂದರ ವಾಹನದ ವಿಮೆಯ ಹಣ ಕ್ಲೇಮ್ ಮಾಡಲು ಮುಂದಾದಾಗ, ಈ ನಕಲಿ ಜಾಲ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
- Prajwal Amin
- Updated on: Dec 3, 2025
- 5:26 pm
ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ: ಗೊಂದಲಗಳಿಗೆ ಪ್ರಮೋದ್ ಮಧ್ವರಾಜ್ ತೆರೆ
ಶ್ರೀಕೃಷ್ಣ ಮಠದ ಕನಕನ ಕಿಂಡಿ ಸ್ವರ್ಣ ಕವಚವನ್ನು ಪ್ರಧಾನಿ ಮೋದಿ ಉದ್ಘಾಟಿಸಿದಾಗ, ದಾನಿ ಪ್ರಮೋದ್ ಮಧ್ವರಾಜ್ಗೆ ಆಹ್ವಾನವಿರಲಿಲ್ಲ. ಇದೇ ವಿಚಾರವೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಆದರೆ, ಕಡೆಗಣನೆ ಆರೋಪಗಳನ್ನು ತಳ್ಳಿಹಾಕಿದ ಮಧ್ವರಾಜ್, ಪ್ರಧಾನಿ ಉದ್ಘಾಟಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರೂ ಪ್ರಮೋದ್ ಮಧ್ವರಾಜ್ ಅವರಿಗೆ ಆಹ್ವಾನ ಇಲ್ಲದಿದ್ಧ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದಾರೆ.
- Prajwal Amin
- Updated on: Dec 1, 2025
- 5:12 pm
ಉಡುಪಿಯಲ್ಲಿ ಭೀಕರ ಅಪಘಾತ: ಐವರು ಕಾರ್ಮಿಕರು ದುರಂತ ಸಾವು
ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ಉರುಳಿಬಿದ್ದಿದ್ದು, ಹೊಟ್ಟೆಪಾಡಿಗಾಗಿ ದೂರದ ಊರಿನಿಂದ ಬಂದಿದ್ದ ಕಾರ್ಮಿಕರು ದುರಂತ ಅಂತ್ಯಕಂಡಿದ್ದಾರೆ.
- Prajwal Amin
- Updated on: Nov 30, 2025
- 8:30 pm
Narendra Modi Udupi Visit: ಕೃಷ್ಣನೂರು ಉಡುಪಿಗೆ ಇಂದು ಮೋದಿ: ಎಲ್ಲೆಡೆ ಅಲರ್ಟ್, ಎಷ್ಟೊತ್ತಿಗೆ ಏನು ಕಾರ್ಯಕ್ರಮ? ಇಲ್ಲಿದೆ ವಿವರ
PM Modi in Udui: ರಸ್ತೆಯುದ್ದಕ್ಕೂ ಕೇಸರಿ ಧ್ವಜಗಳ ಹಾರಾಟ. ಒಂದೆಡೆ ಪೊಲೀಸರು ಭದ್ರತೆ ಪರಿಶೀಲಿಸುತ್ತಿದ್ದರೆ, ಮತ್ತೊಂದೆಡೆ ಬೆಂಗಾವಲು ಪಡೆಯಿಂದ ತಾಲೀಮು. ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಕೃಷ್ಣನೂರು ಉಡುಪಿ ಸಜ್ಜಾಗಿ ನಿಂತಿದೆ. ಇಂದು ಮೋದಿ ಅವರದ್ದು ಎಷ್ಟೊತ್ತಿಗೆ ಏನು ಕಾರ್ಯಕ್ರಮ ಎಂಬ ವಿವರ ಇಲ್ಲಿದೆ.
- Prajwal Amin
- Updated on: Nov 28, 2025
- 9:59 am
ಕೃಷ್ಣ ಮಠ ಭೇಟಿಗೂ ಮುನ್ನ ಉಡುಪಿಯಲ್ಲಿ ಮೋದಿ ರೋಡ್ ಶೋ; ಸಿದ್ಧತೆ ಹೇಗಿದೆ ಗೊತ್ತಾ?
ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದು, ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಆದಿ ಉಡುಪಿಯಿಂದ ನಾರಾಯಣ ಗುರು ಸರ್ಕಲ್ವರೆಗೆ ಭವ್ಯ ರೋಡ್ಶೋ ನಡೆಸಲಿದ್ದು, ಅದಕ್ಕಾಗಿ ಪಟ್ಟಣದಲ್ಲಿ ವ್ಯಾಪಕ ಸಿದ್ಧತೆಗಳು ನಡೆದಿವೆ. ಕೃಷ್ಣಮಠ ಮತ್ತು ರೋಡ್ಶೋ ಮಾರ್ಗದಲ್ಲಿ ವಿಶೇಷ ಅಲಂಕಾರ, ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಮೋದಿ ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.
- Prajwal Amin
- Updated on: Nov 27, 2025
- 10:17 am
ಕೃಷ್ಣ ಮಠದ ಸುತ್ತಮುತ್ತ ಬಿಗಿ ಭದ್ರತೆ: ಪ್ರಧಾನಿ ಮೋದಿ ಸ್ವಾಗತಕ್ಕೆ ಉಡುಪಿ ಹೇಗೆ ಸಜ್ಜಾಗಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಗೆ ನಗರ ಸಂಪೂರ್ಣ ಸಜ್ಜಾಗಿದೆ. ಶ್ರೀ ಕೃಷ್ಣ ಮಠಕ್ಕೆ ಮೋದಿ ಭೇಟಿ ನೀಡುವ ಹಿನ್ನೆಲೆಯಲ್ಲಿ, ಬನ್ನಂಜೆಯಿಂದ ಕಲ್ಸಂಕದವರೆಗೆ 20 ನಿಮಿಷಗಳ ರೋಡ್ ಶೋ ಆಯೋಜಿಸಲಾಗಿದೆ. 3000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಉಡುಪಿಯನ್ನು ಕೇಸರಿಮಯಗೊಳಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಇದು ಪ್ರಧಾನಿ ಆದ ನಂತರ ಮಠಕ್ಕೆ ಮೋದಿ ಅವರ ಮೊದಲ ಭೇಟಿಯಾಗಿದೆ.
- Prajwal Amin
- Updated on: Nov 27, 2025
- 9:54 am
ಪ್ರಧಾನಿ ಮೋದಿ ಉಡುಪಿ ಭೇಟಿ: ಶ್ರೀ ಕೃಷ್ಣ ಮಠ ಸುತ್ತ ಬಿಗಿ ಬಂದೋಬಸ್ತ್, ದೇಗುಲಕ್ಕೆ ಬರುವವರು ಈ ಮಾರ್ಗಸೂಚಿ ಪಾಲಿಸಿ
PM Modi Udupi visit: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ನಿಮಿತ್ತ ಜಿಲ್ಲಾಡಳಿತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಡ್ರೋನ್ ಹಾರಾಟ ನಿಷೇಧಿಸಿದೆ. ಅಂಗಡಿ ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಿದೆ. ಸಾರ್ವಜನಿಕರಿಗೂ ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ವಿವರಗಳು ಇಲ್ಲಿವೆ.
- Prajwal Amin
- Updated on: Nov 26, 2025
- 8:56 am
ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ: ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ
ನವೆಂಬರ್ 28ರಂದು ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸುತ್ತಿದ್ದಾರೆ. ಮೂರು ದಶಕಗಳ ಬಳಿಕ ಪ್ರಧಾನಿ ಮೋದಿ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಈ ಸಂದರ್ಭದಲ್ಲಿ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಡಿಸಿಗೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.
- Prajwal Amin
- Updated on: Nov 24, 2025
- 3:11 pm
ಉಡುಪಿ: ಕೊಚ್ಚಿನ್ ಶಿಪ್ ಯಾರ್ಡ್ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಉತ್ತರ ಪ್ರದೇಶದ ಇಬ್ಬರ ಬಂಧನ
ಉಡುಪಿಯ ಮಲ್ಪೆಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಕೊಚ್ಚಿನ್ ಶಿಪ್ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ, ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ ರಹಸ್ಯ ತಾಂತ್ರಿಕ ಮಾಹಿತಿ ರವಾನಿಸುತ್ತಿದ್ದರು. ಈ ಘಟನೆ ದೇಶ ಭದ್ರತೆ ದೃಷ್ಟಿಯಿಂದ ಗಂಭೀರ ಕಳವಳಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Prajwal Amin
- Updated on: Nov 21, 2025
- 12:46 pm
ಉಡುಪಿ: ಅಂತೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಚುರುಕು ಪಡೆಯಲು ಪ್ರಧಾನಿ ಮೋದಿಯೇ ಬರಬೇಕಾಯ್ತು!
ಪ್ರಧಾನಿ ಮೋದಿ ನವೆಂಬರ್ 28 ರಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಗರದ ರಸ್ತೆ ದುರಸ್ತಿ ಕಾರ್ಯ ವೇಗ ಪಡೆದಿದೆ. ಮಲ್ಪೆ-ಮೊಳಕಾಲ್ಮೂರು ಹೆದ್ದಾರಿ ಕಾಮಗಾರಿಯೂ ಚುರುಕುಗೊಂಡಿದೆ. ಆದರೆ, ಗಣ್ಯರ ಭೇಟಿಗಾಗಿ ಮಾತ್ರ ರಸ್ತೆ ದುರಸ್ತಿ ಮಾಡುವುದನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಮಳೆಯಿಂದ ಹದಗೆಟ್ಟ ಗ್ರಾಮೀಣ ರಸ್ತೆಗಳ ಬಗ್ಗೆ ಜಿಲ್ಲಾಡಳಿತದ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
- Prajwal Amin
- Updated on: Nov 14, 2025
- 12:31 pm