ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ; ಮೊಬೈಲ್, ಹಾರ್ಡ್ವೇರ್ ಮಳಿಗೆಗಳು ಸುಟ್ಟು ಭಸ್ಮ!
ಉಡುಪಿಯ ಖಾದರ್ ಕಮರ್ಷಿಯಲ್ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಮತ್ತು ಹಾರ್ಡ್ವೇರ್ ಮಳಿಗೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹರಡಿರಬಹುದೆಂದು ಶಂಕಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
- Prajwal Amin
- Updated on: Apr 26, 2026
- 6:38 pm
ಮಣಿಪಾಲ: ಪಬ್ಲಿಕ್ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಉಡುಪಿಯ ಮಣಿಪಾಲದಲ್ಲಿ ತಡರಾತ್ರಿ ಯುವಜೋಡಿಯೊಂದು ಸಾರ್ವಜನಿಕವಾಗಿ ರಸ್ತೆಯಲ್ಲೇ ಅಸಭ್ಯವಾಗಿ ವರ್ತಿಸಿ ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗಿದೆ. ಸಾರ್ವಜನಿಕವಾಗಿ ಪೇಟೆ ಮಧ್ಯದಲ್ಲೇ ಸರಸ ಸಲ್ಲಾಪದಲ್ಲಿ ತೊಡಗಿದ್ದ ಜೋಡಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಮೊದಲಿಗೆ ಎದುರಾಡಿದ ಜೋಡಿ ನಂತರ ಅಲ್ಲಿಂದ ಕಾಲ್ಕಿತ್ತಿದೆ.
- Prajwal Amin
- Updated on: Apr 25, 2026
- 9:53 am
ಉಡುಪಿ ಜಿಲ್ಲೆಯಲ್ಲಿ ಜೀವ ಜಲಕ್ಕೆ ಹಾಹಾಕಾರ: ಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅತ್ತಿಕೋಣೆಯಲ್ಲಿ 75ಕ್ಕೂ ಹೆಚ್ಚು ಮನೆಗಳು ಕುಡಿಯುವ ನೀರಿಗಾಗಿ ಪರದಾಡುತ್ತಿವೆ. ಸೌಪರ್ಣಿಕಾ ನದಿ ದಾಟಿ ದೋಣಿಯ ಮೂಲಕ ನೀರು ತರುವುದು ಇಲ್ಲಿನ ಜನರ ದೈನಂದಿನ ಕಾರ್ಯವಾಗಿದೆ. 20 ವರ್ಷಗಳಿಂದ ಈ ಸಮಸ್ಯೆ ಇದ್ದರೂ, ಜನಪ್ರತಿನಿಧಿಗಳಿಂದ ಯಾವುದೇ ಶಾಶ್ವತ ಸ್ಪಂದನೆ ದೊರೆತಿಲ್ಲ.
- Prajwal Amin
- Updated on: Apr 22, 2026
- 12:48 pm
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್ ಟೀಚರ್ ಪಾಠ: ವಿದ್ಯಾರ್ಥಿಗಳ ಪ್ರಶ್ನೆಗೆ ನೀಡ್ತಾರೆ ಫಟಾಫಟ್ ಉತ್ತರ!
ತಂತ್ರಜ್ಞಾನ ಅಭಿವೃದ್ಧಿ ಹಿನ್ನೆಲೆ ವರ್ಷದಿಂದ ವರ್ಷಕ್ಕೆ ಶಿಕ್ಷಣ ಕ್ಷೇತ್ರದಲ್ಲಿಯೂ ಭಾರಿ ಸುಧಾರಣೆಗಳು ಕಂಡುಬರುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ 111 ವರ್ಷಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ವಂಡ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರೇಟಿವ್ ಎಐ ಶಿಕ್ಷಕ ರೋಬೋಟ್ ಪರಿಚಯಿಸಲಾಗಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ರೋಬೋಟ್ ಶಿಕ್ಷಕರಂತಹ ವಿನೂತನ ಪ್ರಯೋಗ ಇದೇ ಮೊದಲಾಗಿದೆ.
- Prajwal Amin
- Updated on: Apr 13, 2026
- 5:41 pm
ಪ್ರಾಕೃತಿಕ ಸಂಪತ್ತಿನಿಂದ ಖ್ಯಾತಿ ಪಡೆದ ಉಡುಪಿಗೆ ಇದೆಂಥಾ ಸ್ಥಿತಿ? ಜಿಲ್ಲೆಯ ಜನರಲ್ಲಿ ಶುರುವಾದ ಆತಂಕವೇನು?
ಪ್ರಕೃತಿ ಸಿರಿಯ ಮಧ್ಯೆ ಇರುವ ಉಡುಪಿಯಲ್ಲಿ ವಾಯು ಗುಣಮಟ್ಟ ಹದಗೆಡುತ್ತಿದೆ. PM2.5, ಕಾರ್ಬನ್ ಮೋನಾಕ್ಸೈಡ್ ಮತ್ತು ಸಲ್ಫರ್ ಮಟ್ಟಗಳು ಹೆಚ್ಚಾಗಿದ್ದು, ಗಡಿ ಪ್ರದೇಶದ ಕಲ್ಲಿದ್ದಲು ವಿದ್ಯುತ್ ಸ್ಥಾವರಗಳು ಕಾರಣ ಎನ್ನಲಾಗುತ್ತಿದೆ. ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಅಪಾಯಕಾರಿ ಆಗಿದೆ. ಇನ್ನು ಈ ಬಗ್ಗೆ ತಜ್ಞರು ಹೇಳುವುದೇನು? ಇದಕ್ಕೆ ಪರಿಹಾರ ಏನು ಎಂಬ ಮಾಹಿತಿ ಇಲ್ಲಿದೆ.
- Prajwal Amin
- Updated on: Apr 12, 2026
- 6:55 pm
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!
ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಸೌಮ್ಯ ಮೇಲಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Prajwal Amin
- Updated on: Apr 12, 2026
- 12:04 pm
ಬಾವಿಗೆ ಬಿದ್ದು 3 ದಿನ ಬಳಿಕ ಬದುಕಿ ಬಂದ ವೃದ್ಧ: ಗ್ಯಾಸ್ ಸಿಲಿಂಡರ್ OTP ವ್ಯಕ್ತಿಯ ಜೀವ ಉಳಿಸಿದ್ಹೇಗೆ ಗೊತ್ತಾ?
ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿಬಂದ ಘಟನೆ ಉಡುಪಿಯ ಕಂಬಳಕಟ್ಟೆಯಲ್ಲಿ ನಡೆದಿದೆ. ಕಂಬಳಕಟ್ಟೆಯ ನಿವಾಸಿ 62 ವರ್ಷದ ಶ್ರೀನಿವಾಸ ಆಚಾರ್ಯ, 20 ಅಡಿ ಆಳದ ನೀರಿರುವ ಬಾವಿಗೆ ಬಿದ್ದು ಮೂರು ದಿನ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಗೆದ್ದುಬಂದಿದ್ದಾರೆ. ಹೌದು.. ಗ್ಯಾಸ್ ಸಿಲಿಂಡರ್ ಓಟಿಪಿಯಿಂದ ಬಡಜೀವ ಬದುಕಿ ಬಂದಿದೆ. ಇದು ಅಚ್ಚರಿ ಅನ್ನಿಸಿದರೂ ಸತ್ಯ.
- Prajwal Amin
- Updated on: Apr 6, 2026
- 5:39 pm
ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ
ರಾಜ್ಯದಲ್ಲಿ ಎಲ್ಪಿಜಿ ಅಭಾವದಿಂದ ಜನರು ಹೈರಾಣಾಗಿದ್ದಾರೆ. ಆದರೆ ಇದೇ ಗ್ಯಾಸ್ ಸಿಲಿಂಡರ್ ಓರ್ವ ವೃದ್ಧನ ಜೀವ ಉಳಿಸಿದೆ ಅಂದರೆ ನೀವು ನಂಬಲೇಬೇಕು. ಇಂತಹದೊಂದು ಅಪರೂಪದ ಘಟನೆ ಉಡುಪಿ ನಗರದ ಕೊಡವೂರು ವಾರ್ಡ್ ಕಂಬ್ಳಕಟ್ಟದಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ನಿಂದ ವೃದ್ಧನ ಜೀವ ಉಳಿದಿದ್ದು ಹೇಗೆ ಎಂದು ತಿಳಿದರೆ ಶಾಕ್ ಆಗುತ್ತೀರಿ.
- Prajwal Amin
- Updated on: Apr 6, 2026
- 5:24 pm
ಸುದೀಪ್ ಆತ್ಮಹತ್ಯೆ ಪ್ರಕರಣ: ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ಉದ್ಯಮಿ ಪತ್ನಿ ಸೌಮ್ಯಾ
ಪುತ್ತೂರಿನ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಪತ್ನಿ ಸೌಮ್ಯಾ ಶೆಟ್ಟಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಪತಿಯ ಸಾವಿಗೆ ಅತ್ತೆ-ಮಾವನ ಕಿರುಕುಳ ಮತ್ತು ವೇಣು ಶೆಟ್ಟಿಯ ಪ್ರಚೋದನೆಯೇ ಕಾರಣ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ನೆಲ್ಯಾಡಿಯಲ್ಲಿ ಯಾವುದೇ ಗಲಾಟೆ ಮಾಡಿಲ್ಲ, ಬೇಕಿದ್ದರೆ ಸಿಸಿಟಿವಿ ಪರಿಶೀಲಿಸಿ ಎಂದಿರುವ ಸೌಮ್ಯಾ, ಸುದೀಪ್ ಪೋಷಕರು ಹಾಗೂ ವೇಣು ಶೆಟ್ಟಿ ವಿರುದ್ಧ ಕಾರ್ಕಳ ಠಾಣೆಯಲ್ಲಿ ದೂರು ದಾಖಲಿಸಿರೋದಾಗಿ ತಿಳಿಸಿದ್ದಾರೆ.
- Prajwal Amin
- Updated on: Apr 2, 2026
- 4:48 pm
ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್ನ ವಿವಾಹವಾಗಿದ್ದ ಉದ್ಯಮಿ ದುರಂತ ಸಾವು
ಉದ್ಯಮಿಯೊಬ್ಬರು ಒಂದು ತಿಂಗಳ ಹಿಂದಷ್ಟೇ ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ನನ್ನು ಮದುವೆಯಾಗಿದ್ದರು. ಆದ್ರೆ, ದುರಂತ ಅಂದ್ರೆ ವಿವಾಹವಾದ ಒಂದೇ ತಿಂಗಳಲ್ಲಿ ಇನ್ನೂ ಹನಿಮೂನ್ ಹೊಸ್ತಿಲಲ್ಲೇ ಉದ್ಯಮಿ ಸಾವಿನ ಮನೆ ಸೇರಿದ್ದಾರೆ. ಇದೀಗ ಉದ್ಯಮಿ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಅಷ್ಟಕ್ಕೂ ದಂಪತಿ ನಡುವೆ ಆಗಿದ್ದೇನು? ಉದ್ಯಮಿಗೆ ಏನಾಗಿತ್ತು ಎನ್ನುವ ವಿವರ ಈ ಕೆಳಗಿನಂತಿದೆ.
- Prajwal Amin
- Updated on: Mar 30, 2026
- 9:45 pm
ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು; ಮೂವರ ಸ್ಥಿತಿ ಗಂಭೀರ
ಉಡುಪಿ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ ಹೊಡೆದು ಬೆಂಗಳೂರು ಮೂಲದ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಟುಂಬದ ಇತರೆ ಸದಸ್ಯರು ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇದೇ ವೇಳೆ, ಚಿತ್ರದುರ್ಗದಲ್ಲಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
- Prajwal Amin
- Updated on: Mar 29, 2026
- 8:22 am
ರಘುಪತಿ ಭಟ್ v/s ಯಶ್ ಪಾಲ್ ಸುವರ್ಣ: ಉಡುಪಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾರ್
ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ತಮ್ಮ ರೆಸಾರ್ಟ್ ಯೋಜನೆಗೆ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ರಾಜಕೀಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಡಾನಿಡಿಯೂರಿನಲ್ಲಿ ರೆಸಾರ್ಟ್ ಅನುಮತಿ ಎರಡು ವರ್ಷಗಳಿಂದ ವಿಳಂಬವಾಗಿದ್ದು, ಇದು ವೈಯಕ್ತಿಕ ಹಕ್ಕುಗಳ ಹೋರಾಟ ಎಂದು ಭಟ್ ಹೇಳಿದ್ದಾರೆ. ಸೋಮವಾರದಿಂದ ನಗರಾಭಿವೃದ್ಧಿ ಪ್ರಾಧಿಕಾರದ ಮುಂದೆ ನಿರಂತರ ಧರಣಿ ನಡೆಸುವುದಾಗಿ ಭಟ್ ಘೋಷಿಸಿದ್ದು, ತಾವು ಬೆಂಬಲಿಸಿದ ಸುವರ್ಣರಿಂದಲೇ ತೊಂದರೆ ಎದುರಿಸುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.
- Prajwal Amin
- Updated on: Mar 22, 2026
- 1:07 pm