ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ
ಉಡುಪಿಯಲ್ಲಿ ಮಾರ್ಚ್ 20-22 ರಂದು ನಡೆಯಲಿರುವ ಸಮಾಧಾನ ಮಹೋತ್ಸವ ಮತಾಂತರದ ಷಡ್ಯಂತ್ರ ಎಂದು ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ ಮಾಡಿದೆ. ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ ನಡೆಸಲಿರುವ ಈ ಕಾರ್ಯಕ್ರಮಕ್ಕೆ ತಕ್ಷಣ ತಡೆ ನೀಡಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
- Prajwal Amin
- Updated on: Mar 18, 2026
- 4:05 pm
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಎಲ್ಪಿಜಿ ಗ್ಯಾಸ್ ಕೊರತೆಯ ಸಂಕಷ್ಟ ಒಂದೆಡೆಯಾದರೆ ಇದೇ ಹೊತ್ತಿನಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66 ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್, ಸಾವು-ನೋವು ಹಾಗೂ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ.
- Prajwal Amin
- Updated on: Mar 16, 2026
- 10:30 am
ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಉಡುಪಿಯ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 8.69 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿಗಳು ಪತ್ತೆಯಾಗಿವೆ. 11 ನಿವೇಶನಗಳು, 6 ಮನೆಗಳು, 31 ಎಕರೆ ಕೃಷಿ ಭೂಮಿ ಹಾಗೂ ಚಿನ್ನಾಭರಣ, ನಗದು ಜಪ್ತಿ ಮಾಡಲಾಗಿದೆ. ಶ್ರೀನಿವಾಸ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಅಮಾನತು ಆದೇಶದ ಸಾಧ್ಯತೆ ಇದೆ.
- Prajwal Amin
- Updated on: Mar 14, 2026
- 7:05 am
ಸೂರ್ಯಕುಮಾರ್ ಯಾದವ್ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ
ಭಾರತ ಟಿ20 ವಿಶ್ವಕಪ್ ಗೆಲುವಿನ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿ ಕುಟುಂಬಕ್ಕೂ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನಕ್ಕೂ ವಿಶೇಷ ನಂಟಿದೆ. SKY ಕ್ರಿಕೆಟ್ ಯಶಸ್ಸಿಗೆ ದೇವಿಯ ಅಶೀರ್ವಾದವೇ ಕಾರಣವೆಂದು ಹೇಳಲಾಗ್ತಿದ್ದು, ಇದಕ್ಕೆ ಪೂರಕವೆಂಬಂತೆ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರವೇ ಸೂರ್ಯಕುಮಾರ್ಗೆ ನಾಯಕತ್ವ ಲಭಿಸಿತ್ತು. ಈಗ ಅವರ ನೇತೃತ್ವದಲ್ಲಿಯೇ ಭಾರತ ತಂಡ ಟಿ20 ವಿಶ್ವಕಪ್ ಗೆದ್ದಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆದಿದೆ.
- Prajwal Amin
- Updated on: Mar 10, 2026
- 11:57 am
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ Vs ಮಾಜಿ ಶಾಸಕರ ವಾರ್: ದೇವರ ಅಂಗಳ ತಲುಪಿದ ರಾಜಕೀಯ ಕಚ್ಚಾಟ
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಕಚ್ಚಾಟ ತೀವ್ರಗೊಂಡಿದೆ. ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಂಗ್ರೆಸ್ನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ವೈಯಕ್ತಿಕ ದಾಳಿ ಮತ್ತು ಆರೋಪಗಳ ವಿರುದ್ಧ ಬೇಸರಗೊಂಡು, ದೇವರು ಮತ್ತು ದೈವದ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ, ಅನಿವಾರ್ಯವೂ ಅಲ್ಲ. ಆದರೆ ಜನರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಶಾಸಕರು ಇದೇ ವೇಳೆ ತಿಳಿಸಿದ್ದಾರೆ.
- Prajwal Amin
- Updated on: Mar 9, 2026
- 2:39 pm
ಜನ ಪೋಸ್ಟ್ ಮ್ಯಾನ್ಗೆ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.
- Prajwal Amin
- Updated on: Mar 5, 2026
- 4:17 pm
ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ
ಉಡುಪಿಯ ಮಲ್ಪೆ ಬೀಚ್ನಲ್ಲಿ ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಗಲಾಟೆ ಸಂಭವಿಸಿ, ಸ್ಥಳೀಯ ಮುಖಂಡ ಮಂಜು ಕೊಳ ಸೇರಿದಂತೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಲಾಟೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಹಲ್ಲೆ ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಲ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Prajwal Amin
- Updated on: Mar 5, 2026
- 3:40 pm
ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ!
ಉಡುಪಿಯಲ್ಲಿ ಮರಾಠಿ ಸಮುದಾಯ ತಮ್ಮ ಮೂಲ ಸಂಪ್ರದಾಯಗಳನ್ನು ಉಳಿಸಿಕೊಂಡು ವೈಭವದ ಹೋಳಿ ಆಚರಿಸಿದೆ. ಕೇವಲ ಬಣ್ಣ ಎರಚಾಟವಲ್ಲದೆ, ದುರ್ಗೆ-ತುಳಜಾ ಭವಾನಿ ಆರಾಧನೆ, ಕಾಮದಹನ ಹಾಗೂ ಜಾನಪದ ನೃತ್ಯಗಳೊಂದಿಗೆ ಸಾಂಸ್ಕೃತಿಕ ಶ್ರೀಮಂತಿಕೆ ಸಾರಿದೆ. ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಆಚರಣೆ ತುಳುನಾಡಿನ ಸಂಸ್ಕೃತಿಗೆ ಹೊಸ ಮೆರುಗು ನೀಡಿದೆ, ನೂರಾರು ವರ್ಷಗಳ ಇತಿಹಾಸ ಹೊಂದಿದೆ.
- Prajwal Amin
- Updated on: Mar 4, 2026
- 7:09 pm
ಉಡುಪಿ: ಕರಾವಳಿಯಲ್ಲಿ ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ನಿರ್ವಹಣೆಯೇ ಸವಾಲು
ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾದರೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಿಂಡಿ ಅಣೆಕಟ್ಟುಗಳ ಸಮರ್ಪಕ ನಿರ್ವಹಣೆ ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣ. ಕಡಲಿಗೆ ಸಮೀಪದ ಅಣೆಕಟ್ಟುಗಳಲ್ಲಿ ಉಪ್ಪು ನೀರು ಮಿಶ್ರಣವಾಗಿ ಸಿಹಿ ನೀರು ವ್ಯರ್ಥವಾಗುತ್ತಿದೆ. ಆಧುನಿಕ ತಂತ್ರಜ್ಞಾನ ಮತ್ತು ಸಮುದಾಯ ಆಧಾರಿತ ನಿರ್ವಹಣಾ ವ್ಯವಸ್ಥೆಗಳ ಅಳವಡಿಕೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬಲ್ಲದು.
- Prajwal Amin
- Updated on: Feb 26, 2026
- 6:01 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ
ಪಾಕಿಸ್ತಾನದಲ್ಲಿರುವವರಿಗೆ ಬಾರತೀಯ ನೌಕಾಪಡೆಗೆ ಸಂಬಂಧಿಸಿದ ಗೋಪ್ಯ ಮಾಹಿತಿ ಹಂಚಿಕೊಂಡ ಆರೋಪದಲ್ಲಿ ಉಡುಪಿಯಲ್ಲಿ ಮತ್ತೊಬ್ಬನ ಬಂಧನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತ ಆಲಿಫ್ ಇಸ್ಲಾಂ ಬಾಂಗ್ಲೇದೇಶ ಮೂಲದವನೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Prajwal Amin
- Updated on: Feb 18, 2026
- 9:19 am
ರಾಜ್ಯ ರಾಜಕಾರಣಕ್ಕೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ? ಯತ್ನಾಳ್ ಸ್ಫೋಟಕ ಹೇಳಿಕೆ
ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ವದಂತಿಗಳಿವೆ. ಲೋಕಸಭಾ ಚುನಾವಣೆ ಸಮಯದಿಂದಲೇ ಪಾಲಿಟಿಕ್ಸ್ನಿಂದ ದೂರ ಉಳಿದಿರುವ ಅವರು, ಉದ್ಯಮದಲ್ಲಿ ಬ್ಯುಸಿ ಆಗಿದ್ದಾರೆ. ಆದ್ರೆ ಮಾಜಿ ಸಂಸದನ ಬಗ್ಗೆ ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿ, ಬಿಜೆಪಿಯೊಳಗಿನ ಕುಟುಂಬ ರಾಜಕಾರಣ ಹಾಗೂ ನಾಯಕತ್ವದ ಕೊರತೆಯನ್ನು ಟೀಕಿಸಿದ್ದಾರೆ.
- Prajwal Amin
- Updated on: Feb 13, 2026
- 4:20 pm
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಉದ್ಯಮಿಗೆ ಕೋಟಿ ಕೋಟಿ ದೋಖಾ! ಶೆಟ್ಟಿ ದಂಪತಿ ಮೇಲೆ ಕೇಸ್
ಹರಾಜಿಗೆ ಬಂದ ಫ್ಲ್ಯಾಟ್, ಚಿನ್ನ ಖರೀದಿಸುವ ನೆಪದಲ್ಲಿ ಮುಂಬೈ ಉದ್ಯಮಿಗೆ ಸುಮಾರು 4 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿದ್ದು, ಉಡುಪಿ ಮೂಲದ ದಂಪತಿ ವಿರುದ್ಧ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯದಿಂದ ಸ್ಟೇ ಪಡೆದಿದ್ದ ಪ್ರಕರಣವನ್ನು ಇದೀಗ ಮಂಗಳೂರು ಪೊಲೀಸ್ ಆಯುಕ್ತರು ಮರು ತನಿಖೆಗೆ ಆದೇಶಿಸಿದ್ದಾರೆ.
- Prajwal Amin
- Updated on: Feb 11, 2026
- 10:17 am