ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ
ಉಡುಪಿ ಕೃಷ್ಣನಿಗೆ ಚೆಂದದ ಚಿನ್ನದ ರಥ ಸಮರ್ಪಣೆ ಯಾಗುತ್ತಿದೆ. ಪರ್ಯಾಯ ಪುತ್ತಿಗೆ ಶ್ರೀಗಳು ತಮ್ಮ ಸನ್ಯಾಸ ಜೀವನದ 50 ವರ್ಷ ಪೂರ್ಣಗೊಂಡ ಕಾರಣಕ್ಕೆ ಇಷ್ಟದೇವರಾದ ಕಡಗೋಲು ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಅರ್ಪಿಸುತ್ತಿದ್ದಾರೆ. ಈ ರಥ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
- Prajwal Amin
- Updated on: Dec 26, 2025
- 11:41 am
Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದೆ. ಕಮಲ ಎಂಬುವವರ 2 ಲಕ್ಷ ಮೌಲ್ಯದ ಬಂಗಾರದ ಸರವನ್ನು ಮೂವರು ಮಹಿಳಾ ಕಳ್ಳಿಯರು ಗಂಟೆ ಬಾರಿಸುವ ನೆಪದಲ್ಲಿ ಚಾಣಾಕ್ಷವಾಗಿ ಕದ್ದಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಪಡುಬಿದ್ರಿ ಪೊಲೀಸರು ಸದ್ಯ ಕಳ್ಳಿಯರ ಪತ್ತೆಗಾಗಿ ಬಲೆ ಬೀಸಿದ್ದಾರೆ.
- Prajwal Amin
- Updated on: Dec 26, 2025
- 10:29 am
ಉಡುಪಿ ಬೀಚ್ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ
ಉಡುಪಿಯ ಮಲ್ಪೆ ಕಡಲತೀರದಲ್ಲಿ ತೇಲಿ ಬಂದ ವಿಗ್ರಹ ಕೃಷ್ಣ ಪವಾಡ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ವಾಸ್ತವವಾಗಿ ಇದರ ಅಸಲಿ ಕಥೆ ಬೇರೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಇದು ಕೃಷ್ಣನ ಪವಾಡದಿಂದ ಸಿಕ್ಕ ವಿಗ್ರಹ ಎಂದು ಹೇಳಲಾಗಿತ್ತು. ಈ ವಿಗ್ರಹವನ್ನು ಇಸ್ಕಾನ್ ಭಕ್ತರು ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಈ ವಿಗ್ರಹದ ಹಿಂದೆ ಬೇರೆಯೇ ಸತ್ಯ ಇದೆ. ಅದೇನು ಎಂಬುದು ಇಲ್ಲಿದೆ.
- Prajwal Amin
- Updated on: Dec 23, 2025
- 1:49 pm
ಕೊಲ್ಲೂರು ದೇಗುಲ ಹೆಸರಲ್ಲಿ ನಕಲಿ ವೆಬ್ಸೈಟ್ ತೆರೆದು ವಂಚಿಸ್ತಿದ್ದವ ಅರೆಸ್ಟ್: ಆಸಾಮಿಯ ತಂತ್ರಗಾರಿಕೆಗೆ ಪೊಲೀಸರೇ ದಂಗು!
ದೇಶದ ಪ್ರಸಿದ್ಧ ಶಕ್ತಿ ಪೀಠಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ಸೈಟ್ ತೆರೆದು ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸಿರ್ ಎಂಬಾತನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಕ್ತರ ಹಣ ದೋಚಲು ಈತ ಯೋಜಿಸಿದ ತಂತ್ರಗಾರಿಕೆ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
- Prajwal Amin
- Updated on: Dec 23, 2025
- 10:28 am
ಕೊಚ್ಚಿನ್ ಶಿಪ್ ಯಾರ್ಡ್ನಿಂದ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ: ಉಡುಪಿಯಲ್ಲಿ ಮತ್ತೊಬ್ಬ ಆರೋಪಿಯ ಬಂಧನ
ಉಡುಪಿಯ ಮಲ್ಪೆ ಪೊಲೀಸರು ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್ಯಾರ್ಡ್ ಗುತ್ತಿಗೆ ನೌಕರರಾದ ರೋಹಿತ್ ಮತ್ತು ಸಂತ್ರಿ ಎಂಬವರು ಹಿರೇಂದ್ರ ಒದಗಿಸಿದ ಸಿಮ್ಗಳಿಂದ ಪಾಕಿಸ್ತಾನದವರಿಗೆ ಹಡಗುಗಳ ಚಲನವಲನಗಳ ಮಾಹಿತಿ ನೀಡುತ್ತಿದ್ದರು.
- Prajwal Amin
- Updated on: Dec 22, 2025
- 10:12 am
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ
ಚೈತ್ರಾ ಕುಂದಾಪುರ ಅವರ ಕುಟುಂಬದಲ್ಲಿನ ಬಿರುಕು ದೊಡ್ಡದಾಗಿದೆ. ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಅವರು ಅನೇಕ ಆರೋಪಗಳನ್ನು ಮಾಡಿದ್ದಾರೆ. ಪತಿ ಶ್ರೀಕಾಂತ್ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಹೇಳಿದ ಮಾತುಗಳು ಸುಳ್ಳು ಎಂದು ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ..
- Prajwal Amin
- Updated on: Dec 19, 2025
- 10:10 pm
ಚೈತ್ರಾ ಡಿಬಾರ್ ಆಗಿದ್ದಳು: ಮಗಳ ಕಿರುಕುಳಕ್ಕೆ ನೊಂದು ಎಲ್ಲ ವಿಷಯ ಹೇಳಿದ ಬಾಲಕೃಷ್ಣ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ನ್ಯಾಯಾಲಯ ಆದೇಶ ನೀಡಿದೆ. ತಂದೆ ಬಾಲಕೃಷ್ಣ ನಾಯ್ಕ್ ಅವರು ಚೈತ್ರಾ ಮೇಲೆ ಕೇಸ್ ಹಾಕಿದ್ದರು. ಕೋರ್ಟ್ ಆದೇಶದ ಬಳಿಕ ಬಾಲಕೃಷ್ಣ ನಾಯ್ಕ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
- Prajwal Amin
- Updated on: Dec 19, 2025
- 9:02 pm
ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್?
‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ಸ್ವತಃ ತಂದೆಯೇ ದೂರು ನೀಡಿದ್ದರು. ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ವಿರುದ್ಧ ಕೋರ್ಟ್ ಆದೇಶ ನೀಡಿದೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
- Prajwal Amin
- Updated on: Dec 19, 2025
- 7:50 pm
ಯುವತಿ ಮೇಲೆ ಪೊಲೀಸರಿಂದ ಹಲ್ಲೆ ಆರೋಪ: ಉಡುಪಿಯಲ್ಲಿ ಸಿಡಿದೆದ್ದ ಬಿಲ್ಲವ ಸಮುದಾಯ, ಏನಿದು ಕೇಸ್?
ಉಡುಪಿಯ ಬ್ರಹ್ಮಾವರದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಅಕ್ಷತಾ ಪೂಜಾರಿ ಎಂಬ ಯುವತಿ ಬಲಿಯಾಗಿದ್ದಾರೆ. ಆಶಿಕ್ ಎಂಬಾತನ ಶೋಧಕ್ಕೆ ಬಂದ ಪೊಲೀಸರು ಮನೆಯಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ರಾಜ್ಯದ ಜನರಲ್ಲಿ ಆತಂಕ ಮೂಡಿದ್ದು, ಬಿಲ್ಲವ ಸಮುದಾಯ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಕ್ಷತಾಗೆ ನ್ಯಾಯ ದೊರಕಿಸಿಕೊಡುವಂತೆ ಸಮುದಾಯದ ಮುಖಂಡರು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ.
- Prajwal Amin
- Updated on: Dec 16, 2025
- 9:36 pm
ಶಬರಿಮಲೆ ಯಾತ್ರೆ ಮುಗಿಸಿ ಬಂದು ಭರ್ಜರಿ ಪಾರ್ಟಿ: ಬಿರಿಯಾನಿ ಸೇವಿಸುವ ವೇಳೆ ಬಿತ್ತು ಹೆಣ
ಅವರು ಒಟ್ಟಿಗೆ ಇರುವ ಕುಚುಕು ಗೆಳೆಯರ ಬಳಗದವರು. ಯಾವುದೇ ಕಾರ್ಯಕ್ರಮವಿರಲಿ, ಸಭೆ ಸಮಾರಂಭವಿರಲಿ, ಊರಿನ ವಿಶೇಷವಿರಲಿ, ಯಾತ್ರೆ ಇರಲಿ ಎಲ್ಲಾ ಕಡೆಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಸ್ನೇಹಿತರ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಭಾನುವಾರ ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿಕೊಂಡು ಬಿರಿಯಾನಿ ಪಾರ್ಸೆಲ್ ತಂದು ಮಾಮೂಲಿ ಜಾಗದಲ್ಲಿ ಕುಳಿತಿದ್ದ ಸ್ನೇಹಿತರ ನಡುವೇ ಜಗಳ ತಾರಕಕ್ಕೇರಿದೆ. ವಾಗ್ವಾದ ಮಿತಿ ಮೀರಿ ಹೊಡೆದಾಟ ನಡೆದು ಓರ್ವ ಸ್ನೇಹಿತನ ಪ್ರಾಣ ಪಕ್ಷಿ ಹಾರಿ ಹೋಗಿದೆ.
- Prajwal Amin
- Updated on: Dec 15, 2025
- 8:50 pm
Udupi: ಅನಾಥ ಮಕ್ಕಳ ಅದ್ಧೂರಿ ವಿವಾಹ; ಜಿಲ್ಲಾಧಿಕಾರಿಯೇ ಮಾಡಿದ್ರು ಕನ್ಯಾದಾನ
ಉಡುಪಿ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಅನಾಥ ಹೆಣ್ಣುಮಕ್ಕಳ ಅದ್ಧೂರಿ ವಿವಾಹ ನೆರವೇರಿತು. ಜಿಲ್ಲಾಧಿಕಾರಿ ಸ್ವತಃ ಕನ್ಯಾದಾನ ಮಾಡಿ, ನವ ವಿವಾಹಿತರಿಗೆ ಆರತಿ ಬೆಳಗಿದರು. ಈ ಮದಿವೆ ಸಮಾರಂಭಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸಾಕ್ಷಿಯಾಗಿದ್ದು, ಇದು ಸ್ವರ್ಗದಲ್ಲಿ ನಿಶ್ಚಯವಾದ ಮದುವೆ ಎಂದು ನೆರೆದಿದ್ದವರು ಹೇಳಿದ್ರು.
- Prajwal Amin
- Updated on: Dec 12, 2025
- 3:09 pm
10 ಬಾಂಗ್ಲಾ ಅಕ್ರಮ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್
ಅಕ್ರಮವಾಗಿ ಬಂದಿದ್ದ ಬಾಂಗ್ಲಾದೇಶಿಗರು ಉಡುಪಿಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ್ದ್ದಾರೆ. ನಕಲಿ ಆಧಾರ್ ಸೃಷ್ಟಿಸಿಕೊಂಡು ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದರು. ಅನುಮಾಸ್ಪದ ಮೇಲೆ ಪೊಲೀಸರು, ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಬಂಧಿಸಿದ್ದು, ಅ ವೇಳೆ ಅಕ್ರಮ ಬಾಂಗ್ಲಾ ಪ್ರಜೆಗಳು ಎನ್ನುವುದು ಗೊತ್ತಾಗಿದ್ದು, ಇದೀಗ ಒಂದು ವರ್ಷದ ಬಳಿಕ ಬಂಧಿತರಿಗೆ ಜಿಲ್ಲಾ ಕೋರ್ಟ್ ಶಿಕ್ಷಿ ವಿಧಿಸಿದೆ.
- Prajwal Amin
- Updated on: Dec 9, 2025
- 9:28 pm