ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಈ ಹೂವು ಇಲ್ಲದೆ ಜಾತ್ರೆಯೇ ಇಲ್ಲ: ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನಿಗೆ ಈ ಹೂ ಸಮರ್ಪಣೆ ಮಾಡಿದ್ರೆ ಕಷ್ಟ ದೂರ
ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಜಾತ್ರೆಯಲ್ಲಿ ಸೇವಂತಿಗೆ ಹೂವಿಗೆ ವಿಶೇಷ ಸ್ಥಾನ. ಬ್ರಹ್ಮಲಿಂಗೇಶ್ವರನಿಗೆ ಅತ್ಯಂತ ಪ್ರಿಯವಾದ ಹೂವೆಂದು ನಂಬಲಾಗಿದ್ದು, ಭಕ್ತರು ಹರಕೆಯಾಗಿ ಸಮರ್ಪಿಸುತ್ತಾರೆ. ಹೆಮ್ಮಾಡಿ ಭಾಗದಲ್ಲಿ ಭತ್ತದ ಕಟಾವಿನ ನಂತರ ಸೇವಂತಿಗೆ ಕೃಷಿ ನಡೆಯುತ್ತದೆ. ಆದರೆ, ಹವಾಮಾನ ವೈಪರೀತ್ಯ ಮತ್ತು ಕಾರ್ಮಿಕರ ಕೊರತೆಯಿಂದ ರೈತರು ನಷ್ಟ ಅನುಭವಿಸಿ, ಕೃಷಿಯಿಂದ ವಿಮುಖರಾಗುತ್ತಿದ್ದಾರೆ.
- Prajwal Amin
- Updated on: Jan 12, 2026
- 3:16 pm
ಪರಶುರಾಮ ಥೀಮ್ ಪಾರ್ಕ್ನ ತಾಮ್ರ ಹೊದಿಕೆ ಕದ್ದಿದ್ದ ಕಳ್ಳರಿಬ್ಬರು ಸೆರೆ: ಕದ್ದವರು ಕಾಂಗ್ರೆಸ್ ಬ್ರದರ್ಸ್ ಎಂದ ಶಾಸಕ
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 45 ಸಾವಿರ ರೂ ಮೌಲ್ಯದ 51ಕೆಜಿ ತಾಮ್ರ ಮತ್ತು ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
- Prajwal Amin
- Updated on: Jan 11, 2026
- 3:13 pm
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಅಭಿಮಾನಿಗಳ ದೂರು. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ ಇದು.
- Prajwal Amin
- Updated on: Jan 11, 2026
- 11:37 am
ಕುಂದಾಪುರದಲ್ಲಿ 5 ಕೋತಿಗಳ ಸಾವು: ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ
ಕುಂದಾಪುರದ ಹೊಸಂಗಡಿ ಭಾಗದಲ್ಲಿ ಐದು ಮಂಗಗಳ ನಿಗೂಢ ಸಾವು ಸ್ಥಳೀಯರಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಿಸಿದೆ. ಆರೋಗ್ಯ ಇಲಾಖೆ ಸ್ಯಾಂಪಲ್ ಸಂಗ್ರಹಿಸಿದ್ದರೂ ಸಾವಿಗೆ ನಿಖರ ಕಾರಣ ತಿಳಿಸಿಲ್ಲ. 2019ರಲ್ಲಿ ಭೀಕರವಾಗಿ ಕಾಡಿದ ಕಾಯಿಲೆ ಮತ್ತೆ ಕಾಣಿಸಿಕೊಳ್ಳುವ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳಿಗೆ ಒತ್ತಾಯಿಸಲಾಗಿದೆ.
- Prajwal Amin
- Updated on: Jan 8, 2026
- 8:11 pm
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಉಡುಪಿ ಶ್ರೀ ಕೃಷ್ಣ ಮಠಕ್ಕೆ 2 ಕೋಟಿ ರೂ ವೆಚ್ಚದ ಚಿನ್ನದ ಭಗವದ್ಗೀತೆ ಅರ್ಪಣೆಗೆ ಭಕ್ತರೊಬ್ಬರು ಮುಂದಾಗಿದ್ದಾರೆ. ಜನವರಿ 8ರಂದು ವಿಶ್ವಗೀತಾ ಪರ್ಯಾಯ ಸಮಾರೋಪದ ಅಂಗವಾಗಿ ದೆಹಲಿಯ ಭಕ್ತರೊಬ್ಬರು 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಗಳಲ್ಲಿ ಮುದ್ರಿಸಿ ಈ ಭಗವದ್ಗೀತೆಯನ್ನು ಸಮರ್ಪಿಸಲಿದ್ದಾರೆ.
- Prajwal Amin
- Updated on: Jan 5, 2026
- 5:05 pm
Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್ನ ತಾಮ್ರದ ತಗಡಿಗೆ ಕನ್ನ
ಉಡುಪಿ ಜಿಲ್ಲೆಯ ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್ನ ಕಟ್ಟಡದಿಂದ ಕಳ್ಳರು ತಾಮ್ರದ ತಗಡುಗಳನ್ನು ಕದ್ದೊಯ್ದಿದ್ದಾರೆ. ಅನುದಾನವಿಲ್ಲದೆ ಪಾಳುಬಿದ್ದಿರುವ ಈ ಪಾರ್ಕ್, ಕಳ್ಳಕಾಕರ ತಾಣವಾಗಿ ಪರಿಣಮಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನಿಲ್ ಕುಮಾರ್, ಕಳ್ಳತನಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡಿ, ಪಾರ್ಕ್ ಸಾರ್ವಜನಿಕರ ಭೇಟಿಗೆ ತೆರೆಯುವಂತೆ ಆಗ್ರಹಿಸಿದ್ದಾರೆ.
- Prajwal Amin
- Updated on: Jan 5, 2026
- 4:16 pm
Udupi: ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದ ಕಾರು ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಿವರ್ಸ್ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕ ಮತ್ತು ಪಾದಚಾರಿ ಸಣ್ಣಪುಟ್ಟ ಗಾಗಳೊಂದಿಗೆ ಪಾರಾಗಿದ್ದಾರೆ.
- Prajwal Amin
- Updated on: Jan 2, 2026
- 5:38 pm
ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ ಆರೋಪ ಕೇಳಿಬಂದಿದೆ. ಕೃಷಿ ಮತ್ತು ಅರಣ್ಯ ಅಧಿಕಾರಿಗಳ ಶಾಮೀಲಿನ ಶಂಕೆ ವ್ಯಕ್ತವಾಗಿದೆ. ಗೇರು, ಮಾವು ಸೇರಿ ನೂರಾರು ಮರಗಳನ್ನು ಕಟಾವು ಮಾಡಲಾಗಿದ್ದು, ಸರ್ಕಾರಿ ಆಸ್ತಿ ಕಬಳಿಕೆಯ ಹಗರಣದ ಬಗ್ಗೆ ತನಿಖೆಗೆ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ.
- Prajwal Amin
- Updated on: Dec 29, 2025
- 10:34 pm
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ: ದೃಶ್ಯ ನೋಡಿದ್ರೆ ಎದೆ ಝಲ್ ಎನ್ನುತ್ತೆ!
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್ ಮಗುಚಿ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿಗೆ ಕ್ಯಾಂಟರ್ ಗುದ್ದಿ ಪಲ್ಟಿಯಾಗಿದೆ. ಹಿಂದೆ ಇದ್ದ ಮತ್ತೊಂದು ಕಾರು ಕೂಡ ಘಟನೆಯಲ್ಲಿ ಜಖಂ ಆಗಿದ್ದು, ಘಟನೆ ವಿಡಿಯೋ ವೈರಲ್ ಆಗಿದೆ.
- Prajwal Amin
- Updated on: Dec 29, 2025
- 4:19 pm
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ
ಉಡುಪಿ ಕೃಷ್ಣನಿಗೆ ಚೆಂದದ ಚಿನ್ನದ ರಥ ಸಮರ್ಪಣೆ ಯಾಗುತ್ತಿದೆ. ಪರ್ಯಾಯ ಪುತ್ತಿಗೆ ಶ್ರೀಗಳು ತಮ್ಮ ಸನ್ಯಾಸ ಜೀವನದ 50 ವರ್ಷ ಪೂರ್ಣಗೊಂಡ ಕಾರಣಕ್ಕೆ ಇಷ್ಟದೇವರಾದ ಕಡಗೋಲು ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಅರ್ಪಿಸುತ್ತಿದ್ದಾರೆ. ಈ ರಥ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
- Prajwal Amin
- Updated on: Dec 26, 2025
- 11:41 am
Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದೆ. ಕಮಲ ಎಂಬುವವರ 2 ಲಕ್ಷ ಮೌಲ್ಯದ ಬಂಗಾರದ ಸರವನ್ನು ಮೂವರು ಮಹಿಳಾ ಕಳ್ಳಿಯರು ಗಂಟೆ ಬಾರಿಸುವ ನೆಪದಲ್ಲಿ ಚಾಣಾಕ್ಷವಾಗಿ ಕದ್ದಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಪಡುಬಿದ್ರಿ ಪೊಲೀಸರು ಸದ್ಯ ಕಳ್ಳಿಯರ ಪತ್ತೆಗಾಗಿ ಬಲೆ ಬೀಸಿದ್ದಾರೆ.
- Prajwal Amin
- Updated on: Dec 26, 2025
- 10:29 am
ಉಡುಪಿ ಬೀಚ್ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ
ಉಡುಪಿಯ ಮಲ್ಪೆ ಕಡಲತೀರದಲ್ಲಿ ತೇಲಿ ಬಂದ ವಿಗ್ರಹ ಕೃಷ್ಣ ಪವಾಡ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ವಾಸ್ತವವಾಗಿ ಇದರ ಅಸಲಿ ಕಥೆ ಬೇರೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಇದು ಕೃಷ್ಣನ ಪವಾಡದಿಂದ ಸಿಕ್ಕ ವಿಗ್ರಹ ಎಂದು ಹೇಳಲಾಗಿತ್ತು. ಈ ವಿಗ್ರಹವನ್ನು ಇಸ್ಕಾನ್ ಭಕ್ತರು ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಈ ವಿಗ್ರಹದ ಹಿಂದೆ ಬೇರೆಯೇ ಸತ್ಯ ಇದೆ. ಅದೇನು ಎಂಬುದು ಇಲ್ಲಿದೆ.
- Prajwal Amin
- Updated on: Dec 23, 2025
- 1:49 pm