AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಅಮೀನ್​, ಉಡುಪಿ

Author - TV9 Kannada

prajwal.vasu@tv9.com

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​

ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​

ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಮದ್ಯ ಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಪುಂಡಾಟ ನಡೆಸಿದೆ. ಎರಡು ಬಸ್ಸುಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳ ಈ ಹುಚ್ಚಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಸಿಸಿ ಕ್ಯಾಮರಾದಲ್ಲಿ ಎದೆ ಝಲ್​​ ಎನಿಸುವ ದೃಶ್ಯ ಸೆರೆ

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಸಿಸಿ ಕ್ಯಾಮರಾದಲ್ಲಿ ಎದೆ ಝಲ್​​ ಎನಿಸುವ ದೃಶ್ಯ ಸೆರೆ

ಉಡುಪಿ ತಾಲೂಕಿನ ಮಣಿಪಾಲದ ಸಮೀಪದ ಹಿರಿಯಡ್ಕದಲ್ಲಿ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ ಸ್ಕೂಟರ್​ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ವೇಗವಾಗಿ ಬಂದ ಕಾರು ಸ್ಕೂಟರ್​​ ಮತ್ತು ಆಟೋಗೆ ಗುದ್ದಿದ್ದು, ಸ್ಕೂಟರ್​ ಮತ್ತೊಂದು ಬೈಕ್​​ಗೆ ಡಿಕ್ಕಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎದೆ ಝಲ್​​ ಎನಿಸುವಂತಿದೆ.

ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ

ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ

ಶಾಂತವಾಗಿದ್ದ ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವ ಕಾಂಗ್ರೆಸ್​​ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. 5-6 ಜನ ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ.

ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು

ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು

ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ವಿಡಿಯೋ ಶೇರ್​ ಮಾಡಿದ ಆರೋಪ ಹಿನ್ನೆಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸಮುದಾಯಗಳ ನಡುವೆ ದ್ವೇಷ ಹರಡುವ ಆರೋಪದ ಮೇಲೆ ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನ ವಿಧಿಸಿದೆ.

ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ, ಕೃತಜ್ಞತೆ ವ್ಯಕ್ತಪಡಿಸಿ ಯೋಧ

ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ, ಕೃತಜ್ಞತೆ ವ್ಯಕ್ತಪಡಿಸಿ ಯೋಧ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಟೋಲ್ ಗೇಟ್‌ನಲ್ಲಿ ನಡೆದ ಮಾಜಿ ಸೈನಿಕನಿಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವಮಾನಕ್ಕೊಳಗಾದ ಯೋಧ ಕಾಸರಗೋಡಿನ ಶ್ಯಾಮರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಟೋಲ್ ಸಿಬ್ಬಂದಿಗಳು ತನ್ನಿಂದ ಬಹಿರಂಗವಾಗಿ ಕ್ಷಮೆ ಯಾಚಿಸಿರುವುದಾಗಿ ಶ್ಯಾಮರಾಜ್ ತಿಳಿಸಿದ್ದಾರೆ.ನನಗೆ ಅವಮಾನ ಮತ್ತು ಬೇಸರವಾಗಿದ್ದು ನಿಜ. ಆದರೆ ಅವರು ಕ್ಷಮೆ ಕೇಳಿದ್ದಾರೆ. ನಾನು ಅವರನ್ನು ಕ್ಷಮಿಸದೆ ಮತ್ತಾರು ಕ್ಷಮಿಸುತ್ತಾರೆ ಎಂದಿದ್ದಾರೆ. ತಮ್ಮ ಪರವಾಗಿ ಧ್ವನಿಗೂಡಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಶ್ಯಾಮರಾಜ್, ನ್ಯಾಯ ಒದಗಿಸಲು ಸಾಕಷ್ಟು ಪ್ರಯತ್ನಿಸಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಉಡುಪಿ ಡಿಸಿ, ಉಸ್ತುವಾರಿ ಸಚಿವರಿಂದಲೇ ಜಿಲ್ಲಾಡಳಿತದ ಸೂಚನೆ ಉಲ್ಲಂಘನೆ? ಆಗಿದ್ದೇನು?

ಉಡುಪಿ ಡಿಸಿ, ಉಸ್ತುವಾರಿ ಸಚಿವರಿಂದಲೇ ಜಿಲ್ಲಾಡಳಿತದ ಸೂಚನೆ ಉಲ್ಲಂಘನೆ? ಆಗಿದ್ದೇನು?

ಕೋಡಿಬೆಂಗ್ರೆ ಬೋಟ್​​ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ದಿನವೇ ಡಿಸಿ, ಉಸ್ತುವಾರಿ ಸಚಿವರು ಸೇರಿ ಅಧಿಕಾರಿಗಳು ಲೈಫ್​​ ಜಾಕೆಟ್​​ ಧರಿಸದೆ ಬೋಟ್​​ನಲ್ಲಿ ಪ್ರಯಾಣಿಸಿರುವ ವಿಡಿಯೋ ವೈರಲ್​​ ಆಗಿದೆ. ದುರಂತದ ಬಳಿಕ ಲೈಫ್​​ ಜಾಕೆಟ್​​ ಕಡ್ಡಾಯಗೊಳಿಸಿ ಡಿಸಿ ಆದೇಶಿಸಿದ್ದರೂ ಈ ಬಗ್ಗೆ ಹಿಂದಿನಿಂದಲೂ ಜಿಲ್ಲಾಡಳಿತದ ಸೂಚನೆ ಇದೆ. ಅಧಿಕಾರಿಗಳೇ ಹೀಗೆ ನಡೆದುಕೊಂಡರೆ ಹೇಗೆ ಎಂಬ ಪ್ರಶ್ನೆ ಕೇಳಿಬಂದಿದೆ.

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ

ಉಡುಪಿಯ ಡೆಲ್ಟಾ ಬೀಚ್ ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ ಮೈಸೂರಿನ ಮತ್ತೋರ್ವ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆ ಮೂಲಕ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಮೈಸೂರು ಬಿಪಿಒ ಕಾಲ್‌ಸೆಂಟರ್‌ನ 28 ಉದ್ಯೋಗಿಗಳು 2 ಬೋಟ್‌ಗಳಲ್ಲಿ ತೆರಳಿದ್ದಾಗ ಒಂದು ಬೋಟ್ ಸಮುದ್ರಪಾಲಾಗಿತ್ತು.

ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ

ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ

ಉಡುಪಿಯ ಮಲ್ಪೆ ಬಂದರಿನಲ್ಲಿ ಅಚ್ಚರಿಯ, ವಿಲಕ್ಷಣ ಘಟನೆಯೊಂದು ನಡೆದಿದೆ. ಗ್ರಾಹಕರಿಗೆ ನೀಡಲೆಂದು ತುಂಡು ಮಾಡಿದ ಮೀನು ಮತ್ತೂ ಜೀವಂತವಾಗಿದ್ದು, ತುಂಬಾ ಹೊತ್ತು ಚಡಪಡಿಸಿದೆ. ಮೀನು ಇಷ್ಟೊಂದು ಹೊತ್ತು ಜೀವಂತವಾಗಿರುವುದು ಹೇಗೆ ಎಂಬ ಪ್ರಶ್ನೆ ಈಗ ಹಲವರಲ್ಲಿ ಮೂಡಿದ್ದು, ಈ ಘಟನೆ ಮಲ್ಪೆ ಬಂದರಿನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಘಟನೆಯ ವೈರಲ್ ವಿಡಿಯೋ ಇಲ್ಲಿದೆ.

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್!  ಇಬ್ಬರು ಸಾವು

ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ಇಬ್ಬರು ಸಾವು

ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದ್ದು, ಮೈಸೂರಿನ 28 ಬಿಪಿಒ ಉದ್ಯೋಗಿಗಳ ಪೈಕಿ ನಾಲ್ವರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಆ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಲೈಫ್ ಜಾಕೆಟ್‌ಗಳ ಕೊರತೆ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯಿಂದಲೇ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಹೇಳಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ

ಉಡುಪಿ ಶೀರೂರು ಮಠದ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ್ದಕ್ಕೆ ಕಾಂಗ್ರೆಸ್​​ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತಿರುವ ಲಕ್ಷ್ಮೀ ಹೆಬ್ಬಾಳ್ಕರ್, ಇಂಥ ವಿಚಾರದಲ್ಲಿ ರಾಜಕೀಯ ಸಲ್ಲ ಎಂದಿದ್ದಾರೆ. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ.

ಉಡುಪಿ ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ

ಉಡುಪಿ ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ

ಉಡುಪಿ ಶ್ರೀಕೃಷ್ಣಮಠದಲ್ಲಿ ಹೊಸ ವಸ್ತ್ರಸಂಹಿತೆ ಜಾರಿಗೆ ಬಂದಿದ್ದು, ಭಕ್ತಾದಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ಬರಬೇಕೆಂದು ಸೂಚಿಸಲಾಗಿದೆ. ಪುರುಷರಿಗೆ ಅಂಗಿ-ಬನಿಯನ್, ಬರ್ಮುಡಾ ನಿಷಿದ್ಧ. ಮಹಿಳೆಯರು ವೆಸ್ಟರ್ನ್ ಬಟ್ಟೆಗಳ ಬದಲು ಸೀರೆ, ಸಲ್ವಾರ್‌ನಂತಹ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಬೇಕು. ಧಾರ್ಮಿಕ ಪಾವಿತ್ರ್ಯತೆ ಕಾಪಾಡಲು ಈ ನಿಯಮಗಳನ್ನು ಜಾರಿಗೆ ತಂದಿರೋದಾಗಿ ಆಡಳಿತ ಮಂಡಳಿ ತಿಳಿಸಿದೆ.