ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.
ಉಡುಪಿ ಶ್ರೀ ಕಡಗೋಲು ಕೃಷ್ಣ ಮಠದಲ್ಲಿ ಪಾತ್ರೆ ತೊಳೆದು ಸರಳತೆ ಮೆರೆದ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಶ್ರೀ ಕಡಗೋಲು ಕೃಷ್ಣ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾನ್ಯ ಭಕ್ತೆಯಂತೆ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಪುತ್ತಿಗೆ ಮಠದಿಂದ ಅವರಿಗೆ "ಭಾರತ ಲಕ್ಷ್ಮಿ" ಎಂಬ ಬಿರುದನ್ನು ನೀಡಲಾಯಿತು. ದೇಶದ ಸವಾಲುಗಳನ್ನು ಎದುರಿಸಲು ಕೃಷ್ಣನ ಅನುಗ್ರಹದ ಅಗತ್ಯವಿದೆ ಎಂದು ಅವರು ಹೇಳಿದರು. ಸಚಿವರ ಸರಳತೆ ಎಲ್ಲರ ಗಮನ ಸೆಳೆಯಿತು.
- Prajwal Amin
- Updated on: Aug 9, 2025
- 9:26 pm
ಕರಾವಳಿಯಲ್ಲಿ ಮತ್ತೆ ಮೀನುಗಾರಿಕೆ ಆರಂಭ: ಸಮುದ್ರ ರಾಜನಿಗೆ ಹಾಲೆರೆದು ಕಡಲ ಮಕ್ಕಳಿಂದ ಪೂಜೆ
ಉಡುಪಿಯಲ್ಲಿ ಎರಡು ತಿಂಗಳ ಮೀನುಗಾರಿಕೆ ನಿಷೇಧದ ನಂತರ ಮೀನುಗಾರರು ಮತ್ತೆ ಸಮುದ್ರಕ್ಕೆ ಇಳಿದಿದ್ದಾರೆ. ಸುರಕ್ಷಿತ ಮೀನುಗಾರಿಕೆಗಾಗಿ ಸಮುದ್ರ ರಾಜನಿಗೆ ಪೂಜೆ ಸಲ್ಲಿಸಲಾಗಿದೆ. ಸಾವಿರಾರು ಬೋಟ್ಗಳು ಆಳಸಮುದ್ರ ಮೀನುಗಾರಿಕೆಯಲ್ಲಿ ತೊಡಗಿಕೊಳ್ಳಲಿವೆ. ಹೇರಳವಾದ ಮೀನು ಸಿಗಲೆಂದು ಮೀನುಗಾರರು ಪ್ರಾರ್ಥಿಸಿದ್ದಾರೆ. ಪ್ರತಿಕ್ಷಣ ಅಪಾಯದಲ್ಲಿರುವ ಈ ಕಡಲ ಮಕ್ಕಳು ತಮ್ಮ ಧೈರ್ಯ ಮತ್ತು ಸಾಹಸಕ್ಕೆ ಹೆಸರುವಾಸಿಯಾಗಿದ್ದಾರೆ.
- Prajwal Amin
- Updated on: Aug 9, 2025
- 4:14 pm
‘ಕಾಂತಾರ’ ಚಿತ್ರದ ಕಂಬಳ ದೃಶ್ಯದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು
ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ ಚಿತ್ರದ ಯಶಸ್ಸಿನಲ್ಲಿ ಅಪ್ಪು ಕೋಣದ ಪಾತ್ರ ಮಹತ್ವದ್ದಾಗಿತ್ತು.
- Prajwal Amin
- Updated on: Aug 9, 2025
- 10:52 am
ಸಿಎಂ ಸಿದ್ದರಾಮಯ್ಯ ವಿರಾಟ್ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕೆಂದ ಮಾಜಿ ಡಿವೈಎಸ್ಪಿ: ಕಾರಣ ಇಲ್ಲಿದೆ
ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪೊಲೀಸ್ ಇಲಾಖೆಯ ರಾಜಕೀಯವೇ ಕಾರಣ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದು, ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ನೆರವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಗೊಂದಲ ಸೃಷ್ಟಿಸಲಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಹುನ್ನಾರ ಮಾಡಲಾಗಿದೆ ಎಂದು ಆರೋಪಿಸಿದ್ದು, ಅವರಾಡಿರುವ ಮಾತಿನ ವಿವರಗಳು ಇಲ್ಲಿವೆ.
- Prajwal Amin
- Updated on: Jul 19, 2025
- 5:42 pm
ಮಹಿಳಾ ಹಾಸ್ಟೆಲ್ನಲ್ಲಿ ದ್ವೇಷ ಹರಡುವ ಬರಹ: ಮತ್ತೊಮ್ಮೆ ಬರೆಯಿಸಿದಾಗ ಫಾತೀಮಾಳ ಕೃತ್ಯ ಬಯಲು
ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದಲ್ಲಿ ಸಮುದಾಯದ ನಡುವೆ ದ್ವೇಷ ಹರಡುವ ರೀತಿ ಬರಹ ಬರೆದ ಆರೋಪದ ಮೇಲೆ ಕೇರಳ ಮೂಲದ ಫಾತಿಮಾ ಶಬ್ದಾ ಎಂಬ ವಿದ್ಯಾರ್ಥಿನಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಕೈಬರಹ ತಜ್ಞರ ಸಹಾಯದಿಂದ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ನ್ಯಾಯಾಲಯವು ಆಕೆಗೆ ಜಾಮೀನು ಮಂಜೂರು ಮಾಡಿದೆ.
- Prajwal Amin
- Updated on: Jul 18, 2025
- 3:12 pm
ಪರಶುರಾಮ ಪ್ರತಿಮೆ ಫೈಬರ್ ಅಲ್ಲ ಹಿತ್ತಾಳೆಯದು! ಪೊಲೀಸ್ ಚಾರ್ಜ್ ಶೀಟ್ನಲ್ಲಿ ಉಲ್ಲೇಖ
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ನಲ್ಲಿನ ಪರಶುರಾಮ ಪ್ರತಿಮೆ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ತನಿಖೆಯಿಂದ ಪ್ರತಿಮೆಯನ್ನು ಹಿತ್ತಾಳೆಯಿಂದ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ, ಆದರೆ ಒಪ್ಪಂದದ ಪ್ರಕಾರ ಅದು ಕಂಚಿನಿಂದ ಇರಬೇಕಿತ್ತು. ಶಿಲ್ಪಿ ಕೃಷ್ಣ ನಾಯ್ಕ, ಅರುಣ್ ಕುಮಾರ್ ಮತ್ತು ಸಚಿನ್ ವೈ ಕುಮಾರ್ ಅವರ ವಿರುದ್ಧ ಹಲವು ಆರೋಪ ಕೇಳಿಬಂದಿವೆ.
- Prajwal Amin
- Updated on: Jul 14, 2025
- 9:27 pm
ಉಡುಪಿ: ಕಾರ್ಕಳದ ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ
ಕಾರ್ಕಳ ತಾಲೂಕಿನ ಮಲೆಬೆಟ್ಟು ಬಳಿ ಹಸುವಿನ ತಲೆ ಮತ್ತು ಇತರ ದೇಹದ ಭಾಗಗಳು ಪತ್ತೆಯಾಗಿವೆ. ಸ್ವರ್ಣಾ ನದಿಯಲ್ಲಿ ಹಸುವಿನ ಅಂಗಾಂಗಗಳು ತೇಲಿ ಬಂದಿರಬಹುದು ಎಂದು ಅನುಮಾನಿಸಲಾಗಿದೆ. ಹಿಂದೂಪರ ಸಂಘಟನೆಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಶಂಕೆ ವ್ಯಕ್ತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Prajwal Amin
- Updated on: Jul 14, 2025
- 4:00 pm
ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಭೂಗತ ಪಾತಕಿ ಎಂಟ್ರಿ!
ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ ರಾವ್ ಓರ್ವ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಪ್ರಕರಣಕ್ಕೆ ಈಗ ಭೂಗತ ಪಾತಕಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬನ ಎಂಟ್ರಿಯಾಗಿದೆ. ‘ಟಿವಿ9’ ಪ್ರತಿನಿಧಿಗೆ ಭೂಗತ ಪಾತಕಿ ಕಲಿ ಯೋಗೇಶ್ ಎಂಬ ಹೆಸರಿನಲ್ಲಿ ವ್ಯಕ್ತಿಯೋರ್ವ ಕರೆ ಮಾಡಿ, ಯುವತಿ ಜತೆ ಆರೋಪಿಯ ಮದುವೆ ಮಾಡಿಸಿದ್ದರೆ ಆತ ಜೈಲಿನಿಂದ ಹೊರಬಂದಾಗ ಗುಂಡು ಹಾರಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.
- Prajwal Amin
- Updated on: Jul 11, 2025
- 2:38 pm
ಉಡುಪಿಯಿಂದಲೇ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ: 8 ಜನರ ಬಂಧನ
ಉಡುಪಿಯಿಂದಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ ವ್ಯಕ್ತವಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಕಾಲ್ ಸೆಂಟರ್ನಂತೆ ಕಾರ್ಯನಿರ್ವಹಿಸುತ್ತಿದ್ದ ಈ ಜಾಲವು ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳಿಗೆ ಮಾದಕವಸ್ತು ಪೂರೈಸುತ್ತಿತ್ತು ಎಂದು ಶಂಕಿಸಲಾಗಿದೆ. ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಶಂಕೆ ವ್ಯಕ್ತವಾಗಿದೆ.
- Prajwal Amin
- Updated on: Jul 3, 2025
- 11:54 am
ಉಡುಪಿಯ ಆಯುಷ್ ಶೆಟ್ಟಿ ಯುಎಸ್ ಚಾಂಪಿಯನ್ ಶಿಪ್ನಲ್ಲಿ ಅದ್ವಿತೀಯ ಸಾಧನೆ
ಉಡುಪಿಯ ಅಯುಷ್ ಶೆಟ್ಟಿ ಅವರು ಅಮೆರಿಕದಲ್ಲಿ ನಡೆದ US ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಗೆಲುವು ಸಾಧಿಸಿದ್ದಾರೆ. 2023 ರ ನಂತರದ ಈ ಮೊದಲ ವಿದೇಶಿ ಪ್ರಶಸ್ತಿಯು ಅವರ ಕಠಿಣ ಪರಿಶ್ರಮ ಮತ್ತು ತರಬೇತಿಯ ಫಲಿತಾಂಶವಾಗಿದೆ. ಅವರು ಬಾಲ್ಯದಿಂದಲೂ ಬ್ಯಾಡ್ಮಿಂಟನ್ನಲ್ಲಿ ತೋರಿಸಿದ ಆಸಕ್ತಿ ಮತ್ತು ಪೋಷಕರ ಬೆಂಬಲವು ಅವರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅವರ ಗೆಲುವು ರಾಷ್ಟ್ರವ್ಯಾಪಿ ಸಂಭ್ರಮಕ್ಕೆ ಕಾರಣವಾಗಿದೆ.
- Prajwal Amin
- Updated on: Jul 1, 2025
- 9:51 pm
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ
ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಪೊಲೀಸರು 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ರಾಮಣ್ಣ ಹಾಗೂ ಇತರರು ಹಸುವನ್ನು ಕೊಂದು ಮಾಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಊಹಾಪೋಹಗಳನ್ನು ಪೋಸ್ಟ್ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
- Prajwal Amin
- Updated on: Jun 30, 2025
- 8:41 pm
25 ವರ್ಷದ ಹಳೆಯ ವಾಹನದಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್ ಗಿಫ್ಟ್
ಉಡುಪಿಯ ಪ್ರಜ್ವಲ್ ಶೆಣೈ ಅವರು ತಮ್ಮ 25 ವರ್ಷದ ಹಳೆಯ ಹೀರೋ ಹೊಂಡಾ ಬೈಕ್ನಲ್ಲಿ ತಂದೆಯೊಂದಿಗೆ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅವರು ಈ ಬೈಕ್ನಲ್ಲಿ ಅನೇಕ ಪ್ರಯಾಣಗಳನ್ನು ಮಾಡಿದ್ದಾರೆ. ಈ ಲಾಂಗ್ ಡ್ರೈವ್ ನಂತರ ಹೀರೋ ಕಂಪನಿಯಿಂದ ಹೊಸ ಬೈಕ್ನ್ನು ಬಹುಮಾನವಾಗಿ ಪಡೆದರು. ಅವರ ಕನ್ನಡಾಭಿಮಾನ ಹಾಗೂ ಸಾಹಸ ಪ್ರವೃತ್ತಿಯನ್ನು ಹೀರೋ ಕಂಪನಿ ಗೌರವಿಸಿದೆ.
- Prajwal Amin
- Updated on: Jun 28, 2025
- 6:21 pm