ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು
ಬೆಂಗಳೂರಿನ ಯಲಹಂಕ ನ್ಯೂಟೌನ್ನ ಬೃಂದಾವನ ಲೇಔಟ್ನಲ್ಲಿ 24 ವರ್ಷದ ವಿವಾಹಿತ ಮಹಿಳೆ ಹೆಣವಾಗಿರುವಂತಹ ಘಟನೆ ನಡೆದಿದೆ. ಮದುವೆಯಾಗಿ ಒಂದುವರೆ ವರ್ಷದಲ್ಲೇ ಮಹಿಳೆ ಸಾವನ್ನಪ್ಪಿರುವುದು ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಮೃತ ಮಹಿಳೆಯ ಪೋಷಕರು ಇದು ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 15, 2026
- 3:42 pm
ಬೆಂಗಳೂರು: ಯುವತಿಗೆ ಕಿರುಕುಳ ಕೊಟ್ಟು ಹಲ್ಲೆಗೆ ಯತ್ನ, ಸಿಸಿಟಿವಿಲಿ ಸೆರೆಯಾಯ್ತು ಯುವಕನ ಅಟ್ಟಹಾಸದ ವಿಡಿಯೋ
ಬೆಂಗಳೂರಿನ ದೊಮ್ಮಲೂರು ಹಾಸ್ಟೆಲ್ ಒಂದರಲ್ಲಿ ವಾಸಿಸುತ್ತಿರುವ ಯುವರಿಗೆ ಯುವಕನೊಬ್ಬ ಕಿರುಕುಳ ನೀಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೆ ಯತ್ನಿಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 15, 2026
- 8:28 am
ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ಡಿಜಿಟಲ್ ಅರೆಸ್ಟ್ಗೆ ಯತ್ನ: ಸೈಬರ್ ಕ್ರೈಂ ಪೊಲೀಸರಿಗೆ ದೂರು
ಸಿಬಿಐ ಆಯ್ತು, ಮುಂಬೈ ಪೊಲೀಸರ ಹೆಸರೂ ಬಳಸಿದ್ದಾಯ್ತು. ಈಗ ಖದೀಮರು ಬೆಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ಸ್ಕೆಚ್ ಹಾಕಿದ್ದಾರೆ. ಖುದ್ದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಕಲಿ ಸೀಲ್ ಮತ್ತು ಸಿಗ್ನೇಚರ್ ಬಳಸಿ ಮಹಿಳೆಯೊಬ್ಬರನ್ನ ಡಿಜಿಟಲ್ ಅರೆಸ್ಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ. ಆದರೆ ಎಚ್ಚೆತ್ತ ಮಹಿಳೆ ಆರೋಪಿಗಳ ಬಲೆಗೆ ಬೀಳದೆ, ಈ ಬಗ್ಗೆ ದೂರು ದಾಖಲಿಸಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 13, 2026
- 6:34 pm
ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ತನಿಖೆ ವೇಳೆ ಸಿಸಿಟಿವಿ ರಹಸ್ಯ ಬಯಲು
ಅಮೃತಹಳ್ಳಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪ್ರಮುಖ ಮಾಹಿತಿ ಬಯಲಾಗಿದೆ. ಆರೋಪಿಗಳು ಪಾರ್ಟಿ ನಡೆಸಿದ್ದ ವಿಲ್ಲಾದ ಸಿಸಿಟಿವಿ ದೃಶ್ಯಗಳು ಪತ್ತೆಯಾಗಿವೆ. ಗೋವಾದಿಂದ ತಂದ ಮಾದಕ ವಸ್ತುಗಳನ್ನು (ಎಕ್ಸ್ಟೆಸಿ ಮಾತ್ರೆಗಳು) ಕಾಲೇಜು ಯುವತಿಯರಿಗೆ ನೀಡಿ, ಅರೆ ಪ್ರಜ್ಞಾ ಸ್ಥಿತಿಯಲ್ಲಿ ಅತ್ಯಾಚಾರ ಎಸಗುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ವೈದ್ಯಕೀಯ ವರದಿಯಲ್ಲೂ ಡ್ರಗ್ಸ್ ಬಳಕೆ ದೃಢವಾಗಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 11, 2026
- 4:01 pm
ಸಿಗರೇಟ್ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಖಾಕಿ
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಸಾರ್ವಜನಿಕವಾಗಿ ಗಾಂಜಾ ಸೇದುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಸಿಗರೇಟ್ನಲ್ಲಿ ಗಾಂಜಾ ಪುಡಿ ತುಂಬಿ ಸೇದುತ್ತಿದ್ದ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಕಲಂ 27ಬಿ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಗಾಂಜಾ ಮೂಲ ಹಾಗೂ ಪೆಡ್ಲರ್ಗಳ ಬಗ್ಗೆ ತನಿಖೆ ಮುಂದುವರಿದಿದೆ. ರಾಜ್ಯದಲ್ಲಿ ಡ್ರಗ್ಸ್ ಹಾವಳಿಯ ತೀವ್ರತೆಗೆ ಈ ಘಟನೆ ನಿದರ್ಶನವಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 9, 2026
- 2:57 pm
ಬೆಂಗಳೂರಿನಲ್ಲಿ IPL ಪಂದ್ಯ ನಡೆಸಲು ಕೆಲ ಷರತ್ತು ಹಾಕಿ ಅನುಮತಿ ನೀಡಿದ ಸರ್ಕಾರ: ಏನವು ಕಂಡಿಷನ್ಸ್?
ಐಪಿಎಲ್ನ ಹಾಲಿ ಚಾಂಪಿಯನ್ಸ್ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (ಆರ್ಸಿಬಿ) ತಂಡವು ತನ್ನ 5 ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಇದಕ್ಕೆ ಇದೀಗ ರಾಜ್ಯ ಸರ್ಕಾರವೂ ಸಹ ಕೆಲ ಷರತ್ತುಗಳೊಂದಿಗೆ ಅನುಮತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಹಾಗಾದ್ರೆ, ಆದೇಶದಲ್ಲೇನಿದೆ? ಕಂಡಿಷನ್ಸ್ ಏನು ಎನ್ನುವ ವಿವರ ಇಲ್ಲಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 4, 2026
- 2:56 pm
ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು
ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರು ಪರೀಕ್ಷಾ ಭಯದಿಂದ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಜನವರಿ 31ರಂದು ವಿದ್ಯಾರಣ್ಯಪುರದಲ್ಲಿ ಈ ವಿದ್ಯಾರ್ಥಿನಿರು ಕಾಣೆಯಾಗಿದ್ದು, ಕುಟುಂಬಸ್ಥರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಪೋಲೀಸರು ತೀವ್ರ ಶೋಧ ನಡೆಸುತ್ತಿದ್ದು, ವಿದ್ಯಾರ್ಥಿನಿಯರು ಸುರಕ್ಷಿತವಾಗಿ ಮರಳಲು ಕುಟುಂಬಸ್ಥರು ಮನವಿ ಮಾಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 4, 2026
- 11:12 am
ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ಗೆ ಹುಸಿ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು ತೀವ್ರ ಶೋಧ ನಡೆಸಿದರು. ಯಾವುದೇ ಸ್ಫೋಟಕಗಳು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದೆ. ಅಪರಾಧಿಗಳನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Mar 3, 2026
- 7:05 pm
ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಬೆಚ್ಚಿಬಿದ್ದ ಖಾಕಿ: ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡಿದ್ದ ಮಾದಕ ಜಾಲ ಬಯಲು
ಬೆಂಗಳೂರಿನಲ್ಲಿ ಕಾಲೇಜು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಡ್ರಗ್ಸ್ ಮತ್ತು ಬ್ಲಾಕ್ಮೇಲ್ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಪ್ರಮುಖ ಆರೋಪಿಗಳಾಗಿದ್ದು, ಇನ್ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಬಲೆಗೆ ಕೆಡವಿ, ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಇವರು ಬ್ಲಾಕ್ಮೇಲ್ ಮಾಡುತ್ತಿದ್ದರು. ಹೊರ ರಾಜ್ಯದ ವಿದ್ಯಾರ್ಥಿಗಳೇ ಇವರ ಪ್ರಮುಖ ಟಾರ್ಗೆಟ್ ಆಗಿತ್ತು ಎನ್ನಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 27, 2026
- 10:07 pm
ನಿರ್ದೇಶಕನ ಕಿಡ್ನಾಪ್, ಹಲ್ಲೆ: ‘ಭೀಮ’ ಚಿತ್ರ ನಟಿ ಸೇರಿ 11 ಜನ ಜೈಲುಪಾಲು
ಸಿನಿಮಾ ನಿರ್ದೇಶಕನೊಬ್ಬನನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ಮಾಡಿ ಆತನ ಬಳಿ ಇದ್ದ ಚಿನ್ನಾಭರಣ, ಹಣ ದೋಚಿದ್ದ ಹನ್ನೊಂದು ಜನರ ಗ್ಯಾಂಗ್ ಅನ್ನು ಆಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದುನಿಯಾ ವಿಜಯ್ ಅಭಿನಯದ ‘ಭೀಮ’ ಸಿನಿಮಾದಲ್ಲಿ ನಟಿಸಿದ್ದ ಐಶ್ವರ್ಯಾ ಸೇರಿ ಹನ್ನೊಂದು ಜನರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 26, 2026
- 6:32 pm
GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ
ಬೆಂಗಳೂರಿನಲ್ಲಿ ಜಿಎಸ್ಟಿ ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಗೆ ವಂಚನೆ ನಡೆದಿದೆ. ಜಿಎಸ್ಟಿ ಕಚೇರಿಯ ಹೊರಗುತ್ತಿಗೆ ಹೌಸ್ಕೀಪಿಂಗ್ ಸಿಬ್ಬಂದಿಯಾಗಿದ್ದ ದಾದಾಪೀರ್ ಮತ್ತು ನಾಗರಾಜ್ ನಕಲಿ ಗುರುತಿನ ಚೀಟಿ ಬಳಸಿ 5 ಲಕ್ಷ ರೂ. ಸುಲಿಗೆ ಮಾಡಿದ್ದಾರೆ. ಬನಶಂಕರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಸಾರ್ವಜನಿಕರು ಇಂತಹ ಬೆದರಿಕೆಗಳಿಗೆ ಜಗ್ಗದಂತೆ ಪೊಲೀಸರು ಮನವಿ ಮಾಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 26, 2026
- 7:49 am
ಬೆಂಗಳೂರಿನ ಚಿಕ್ಕಪೇಟೆಯ ಹಾರ್ಡ್ವೇರ್ ಗೋಡೌನ್ಗೆ ಬೆಂಕಿ!
ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ಕುಂಬಾರಪೇಟೆ ಪ್ರದೇಶದ ಕಿರಿದಾದ ರಸ್ತೆಗಳಿಂದಾಗಿ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಸವಾಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 25, 2026
- 12:38 pm