ಬೆಂಗಳೂರಿನ ಹೋಟೆಲ್ ಸಪ್ಲೈಯರ್ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆ: ಸ್ಫೋಟಕ್ಕೆ ನಡೆದಿತ್ತಾ ಸಂಚು..?
ಬೆಂಗಳೂರಿನ ಹೋಟೆಲ್ವೊಂದರ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದರಿಂದ ಆತಂಕಗೊಂಡ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲಿಸಿದಾಗ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ಸಪ್ಲೈಯರ್ನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಿಸಿದ್ದಾರೆ. ಹಾಗಾದ್ರೆ, ಯಾರು ಆ ಸಪ್ಲೈಯರ್? ಹೋಟೆಲ್ ಸಿಬ್ಬಂದಿ ಗ್ರನೇಡ್ ಪತ್ತೆ ಮಾಡಿದ್ಹೇಗೆ ಎನ್ನುವ ವಿವರ ಈ ಕೆಳಗಿನಂತಿದೆ.
- Prajwal Kumar NY
- Updated on: Mar 21, 2025
- 9:46 pm
ಬೆಂಗಳೂರು: ಬಿಇಎಲ್ನಿಂದ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬಂಧನ
ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆ, ಕೇಂದ್ರ ಗುಪ್ತಚರ ದಳ ಹಾಗೂ ಸೇನಾ ಗುಪ್ತಚರ ವಿಭಾಗ ನಡೆಸಿದ ಬೆಂಗಳೂರಿನಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಗೂಢಚಾರನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯು, ಬಿಇಎಲ್ನಿಂದ ರಕ್ಷಣಾ ಮಾಹಿತಿಯನ್ನು ನೆರೆ ರಾಷ್ಟ್ರಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.
- Prajwal Kumar NY
- Updated on: Mar 20, 2025
- 12:44 pm
ಸ್ಮಗ್ಲಿಂಗ್ ಅಡ್ಡೆಯಾದ ಕೆಂಪೇಗೌಡ ವಿಮಾನ ನಿಲ್ದಾಣ: 3 ಪ್ರಕರಣಗಳಲ್ಲಿ 130 ಕೋಟಿ ರೂ. ಮೌಲ್ಯದ ಕಳ್ಳಸಾಗಾಣಿಕೆ
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಬಳಿಕ ಸುದ್ದಿಯಲ್ಲಿರುವ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಸ್ಮಗ್ಲಿಂಗ್ ಅಡ್ಡೆಯಾಗುತ್ತಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಮಾರ್ಚ್ ತಿಂಗಳಲ್ಲಿ ಈವರೆಗೆ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸುಮಾರು 130 ಕೋಟಿ ರೂ. ಮೌಲ್ಯದ ಕಳ್ಳಸಾಗಾಣಿಕೆ ಬೆಳಕಿಗೆ ಬಂದಿದೆ.
- Prajwal Kumar NY
- Updated on: Mar 20, 2025
- 9:58 am
ಚಿನ್ನ ಬೆನ್ನಲ್ಲೇ ಡಿಆರ್ಐ ಅಧಿಕಾರಿಗಳ ಮತ್ತೊಂದು ಕಾರ್ಯಾಚರಣೆ: 38.4 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು 3.2 ಕೆಜಿ ಕೊಕೇನ್ ಅನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ 38.4 ಕೋಟಿ ರೂಪಾಯಿಗಳು. ಘಾನಾ ಮೂಲದ ಜೆನ್ನಿಫರ್ ಅಬ್ಬೇ ಎಂಬ ಮಹಿಳೆಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಕತಾರ್ನಿಂದ ಬೆಂಗಳೂರಿಗೆ ಬಂದಿದ್ದರು. ಇದು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಬೆನ್ನಲ್ಲೇ ನಡೆದಿದೆ.
- Prajwal Kumar NY
- Updated on: Mar 19, 2025
- 9:48 am
Ranya Rao Gold Smuggling: ರನ್ಯಾ ರಾವ್ ಜಾಮೀನು ಅರ್ಜಿ ವಜಾ, ಚಿನ್ನದ ರಾಣಿಗೆ ಜೈಲೇ ಗತಿ
ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನವಾಗಿದ್ದು, ಈ ಪ್ರಕರಣದಲ್ಲಿ ಈಗಾಗಲೇ ದಿನ ಡಿಆರ್ಐ, ಸಿಬಿಐ ತನಿಖೆ ನಡೆಸುತ್ತಿವೆ. ಇದರ ಮಧ್ಯ ಇದೀಗ ಇಡಿ ಸಹ ಈ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು ನಿನ್ನೆ(ಮಾರ್ಚ್ 13) ರನ್ಯಾ ರಾವ್ ಫ್ಲ್ಯಾಟ್ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಮತ್ತೊಂದೆಡೆ ರನ್ಯಾ ರಾವ್ ಜಾಮೀನು ಅರ್ಜಿ ಸಹ ತಿರಸ್ಕೃತವಾಗಿದೆ.
- Prajwal Kumar NY
- Updated on: Mar 14, 2025
- 6:09 pm
ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉದ್ಯಮಿ ಪುತ್ರ ತರುಣ್ ರಾಜು ಬಂಧನ
ಡಿಆರ್ಐ ಅಧಿಕಾರಿಗಳು ನಟಿ ರನ್ಯಾ ರಾವ್ ಮತ್ತು ಉದ್ಯಮಿ ಪುತ್ರ ತರುಣ್ ರಾಜು ಅವರನ್ನ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇಬ್ಬರೂ ವರ್ಷಗಳಿಂದ ಸ್ನೇಹಿತರಾಗಿದ್ದು, ತರುಣ್ ರಾಜು, ರನ್ಯಾ ರಾವ್ ಅವರಿಂದ ಚಿನ್ನ ತರಿಸಿಕೊಳ್ಳುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಹೆಸರು ಕೂಡ ಕೇಳಿಬರುತ್ತಿದೆ.
- Prajwal Kumar NY
- Updated on: Mar 10, 2025
- 3:10 pm
ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ವಂಚನೆ: ಗರ್ಲ್ ಫ್ರೆಂಡ್ಗೂ ಪಂಗನಾಮ ಹಾಕಿದ್ದ ಆರೋಪಿ ಅಂದರ್
‘‘ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿರುವ ಹಣವನ್ನು ಬಿಡಿಸಿಕೊಳ್ಳಲು ಸ್ವಲ್ಪ ನಗದು ಬೇಕಾಗಿದೆ. ಹೈಕೋರ್ಟ್ ಆದೇಶ ಕೂಡ ನಮ್ಮ ಪರ ಇದೆ’’ ಎಂದು ಹೈಕೋರ್ಟ್ ಆದೇಶದ ಪ್ರತಿಯನ್ನೇ ಹೋಲು ನಕಲಿ ಆದೇಶ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಿದವರು ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಯೊಬ್ಬನಂತೂ ತನ್ನ ಗರ್ಲ್ಫ್ರೆಂಡ್ಗೆ ಕೂಡ ವಂಚನೆ ಎಸಗಿದ್ದಾನಂತೆ!
- Prajwal Kumar NY
- Updated on: Mar 6, 2025
- 11:16 am
ಬೆಂಗಳೂರಿನಲ್ಲಿ ವೈಟ್ ಆ್ಯಂಡ್ ಬ್ಲಾಕ್ ದಂಧೆ ಹೆಸರಿನಲ್ಲಿ ಕೋಟ್ಯಂತರ ರೂ ದರೋಡೆ: ಮೂವರ ಬಂಧನ
ಬೆಂಗಳೂರಿನಲ್ಲಿ ನಡೆದ ಒಂದು ಕೋಟಿ ರೂ. ದರೋಡೆಯಲ್ಲಿ ಮೂವರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ವೈಟ್ ಆ್ಯಂಡ್ ಬ್ಲಾಕ್ ಹೆಸರಿನಲ್ಲಿ ವಂಚಿಸಿ ಒಂದು ಕೋಟಿ ರೂ ದರೋಡೆ ಮಾಡಲಾಗಿತ್ತು. ಆದರೆ ಒಬ್ಬ ಆರೋಪಿಯನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- Prajwal Kumar NY
- Updated on: Mar 5, 2025
- 9:26 pm
ವಿದೇಶಿಗರಿಗೆ ಮನೆ ಬಾಡಿಗೆ ನೀಡಿದ್ದ ಮಾಲೀಕನಿಗೆ ದಂಡ! ಕಾರಣವೇನು? ಇಲ್ಲಿದೆ ವಿವರ
ನಿಯಮ ಉಲ್ಲಂಘಿಸಿ ವಿದೇಶಿಗರಿಗೆ ಮನೆ ಬಾಡಿಗೆ ನೀಡಿದ್ದ ಮಾಲೀಕನಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಹಾಗಿದ್ದರೆ ವಿದೇಶಿಗರಿಗೆ ಮನೆ ಬಾಡಿಗೆಗೆ ನೀಡುವಾಗ ಪಾಲಿಸಬೇಕಾದ ನಿಯಮಗಳೇನು? ಇಲ್ಲಿ ವಿದ್ಯಾಭ್ಯಾಸಕ್ಕೆ ಅಥವಾ ದೀರ್ಘಾವಧಿ ವಾಸಿಸಲು ಬಂದ ವಿದೇಶಿಗರಿಗೆ ಬಾಡಿಗೆ ಮನೆ ಅಥವಾ ಅಪಾರ್ಟ್ಮೆಂಟ್ ನೀಡುವ ಮುನ್ನ ಮಾಲೀಕರು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳೇನು? ಇಲ್ಲಿದೆ ವಿವರ
- Prajwal Kumar NY
- Updated on: Mar 4, 2025
- 1:35 pm
ಬೆಂಗಳೂರಿನಲ್ಲಿ 17 ಲಕ್ಷ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶಿಗರ ಬಂಧನ
ಬೆಂಗಳೂರಿನ ಸಿಸಿಬಿ ಪೊಲೀಸರು 17 ಲಕ್ಷ ರೂ. ಮೌಲ್ಯದ 108 ಗ್ರಾಂ ಎಂಡಿಎಂಎ ಜಪ್ತಿ ಮಾಡಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಮುಂಬೈನಿಂದ ಮಾದಕವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಇವರಿಬ್ಬರೂ ಈ ಹಿಂದೆ ಕೂಡ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.
- Prajwal Kumar NY
- Updated on: Mar 4, 2025
- 12:45 pm
ಐಪಿಎಸ್ ಡಿ ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ಗೆ ವರ್ಗಾವಣೆ ಭಾಗ್ಯ!
ಕರ್ನಾಟಕದ ಐಜಿಪಿ ಡಿ.ರೂಪಾ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಗಲಾಟೆ ಬಳಿಕ ಕಳೆದ ಕೆಲವು ತಿಂಗಳುಗಳಿಂದ ಸೈಲಂಟ್ ಆಗಿದ್ದ ಅವರು ಇದೀಗ ಮತ್ತೆ ಗಂಭೀರ ಆರೋಪದ ಸುಳಿಯೊಂದಲ್ಲಿ ಸಿಲುಕಿಕೊಂಡಿದ್ದಾರೆ. ಹಾಗಾದ್ರೆ ಏನದು ಪ್ರಕರಣ ಹಾಗೂ ಆರೋಪ ಮಾಡಿದವರು ಯಾರು ಎನ್ನುವ ಮಾಹಿತಿ ಇಲ್ಲಿದೆ.
- Prajwal Kumar NY
- Updated on: Mar 3, 2025
- 4:04 pm
ಕಾಂಗ್ರೆಸ್ ಶಾಸಕ ಆಪ್ತನ ಕೊಲೆಗೆ ಬಿಬಿಎಂಪಿ ಎಲೆಕ್ಷನ್ ಕಾರಣವಾಯ್ತಾ? ಹತ್ಯೆ ಹಿಂದಿನ ಸಿಕ್ರೇಟ್
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮುಖಂಡ ಹೈದರ್ ಅಲಿಯನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಆದರೀಗ ರೌಡಿಶೀಟರ್ ಹೈದರ್ ಅಲಿ ಮರ್ಡರ್ ಮಿಸ್ಟರಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಕೊಲೆ ಹಿಂದೆ ಬಿಬಿಎಂಪಿ ಚುನಾವಣೆ ವಾಸನೆ ಕೇಳಿ ಬಂದಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡನ ತನಿಖೆ ನಡೆಸುವಂತೆ ಒತ್ತಾಯ ಕೇಳಿ ಬಂದಿದೆ. ರೌಡಿಶೀಟರ್ ಹೈದರ್ ಅಲಿ ಕೊಲೆ ಹಿಂದಿನ ಸಿಕ್ರೇಟ್ ಕಹಾನಿ ಇಲ್ಲಿದೆ.
- Prajwal Kumar NY
- Updated on: Mar 2, 2025
- 11:58 am